ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು : ಅಪಘಾತಕ್ಕೆ ನಾನೇ ಕಾರಣವೆಂದು ಮನನೊಂದು ಮತ್ತೊಬ್ಬ ಬೈಕ್‌ ಸವಾರ ಆತ್ಮಹತ್ಯೆ..

ಮಡಿಕೇರಿ : ಮಡಿಕೇರಿಯಲ್ಲಿ ಶುಕ್ರವಾರ ನಡೆದ ಎರಡು ಬೈಕ್‌ಗಳ ನಡುವಿನ ಅಪಘಾತದಲ್ಲಿ ಪದವೀಧರ ವಿದ್ಯಾರ್ಥಿ ಮೃತಪಟ್ಟ ನಂತರ ಈ ಅಪಘಾತಕ್ಕೆ ತಾನೇ ಕಾರಣ, ನನ್ನಿಂದಾಗಿ ಒಂದು ಜೀವ ಹೋಯಿತು ಎಂದು ಮನನೊಂದ ಮತ್ತೊಬ್ಬ ಬೈಕ್ ಸವಾರ ಆತ್ಮಹತ್ಯೆಗೆ ಶರಣಾದ ಘಟನೆ ವರದಿಯಾಗಿದೆ. ಮಮನೊಂದು ಆತ್ಮಹತ್ಯೆ ಮಾಡಿಕೊಂಡ ಬೈಕ್‌ ಸವಾರನನ್ನು ಹೆರವನಾಡಿನ ತಮ್ಮಯ್ಯ (57) ಎಂದು ಗುರುತಿಸಲಾಗಿದೆ. … Continued

ರಾಣಿಪೂಲ್ ಮೇಳದಲ್ಲಿ ಮೂರು ಕಾರುಗಳಿಗೆ ಡಿಕ್ಕಿ ಹೊಡೆದ ಹಾಲಿನ ಟ್ಯಾಂಕರ್ : ಕನಿಷ್ಠ 3 ಸಾವು, 20 ಮಂದಿಗೆ ಗಾಯ ; ಭೀಕರ ದೃಶ್ಯ ಸಿಸಿಟಿಯಲ್ಲಿ ಸೆರೆ

ಸಿಕ್ಕಿಂ: ಸಿಕ್ಕಿಂನ ರಾಣಿಪೂಲ್‌ನಲ್ಲಿ ದಾರುಣ ಘಟನೆ ಸಂಭವಿಸಿದ್ದು, ಜಾತ್ರೆಯ ಮೈದಾನದ ಬಳಿ ನಿಂತಿದ್ದ ಮೂರು ಕಾರುಗಳಿಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಮೂವರು ಸಾವಿಗೀಡಾಗಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ. ಶನಿವಾರ ನಡೆದ ಈ ಭಯಾನಕ ಘಟನೆ ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಿಂತಿದ್ದ ಕಾರುಗಳಿಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ … Continued

ಮಂಡ್ಯ | ರಸ್ತೆ ಬದಿಯ ಹಳ್ಳಕ್ಕೆ ಬಿದ್ದ ಕಾರು : ಮೂವರು ಸಾವು

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಹಳ್ಳಕ್ಕೆ ಬಿದ್ದು, ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಅಕ್ಕಿ ಹೆಬ್ಬಾಳು ಬಳಿ ಶನಿವಾರ ತಡರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಕೆ.ಆ‌ರ್.ಪೇಟೆ ನಿವಾಸಿಗಳಾದ ಅನಿಕೇತನ(30), ಪವನ್‌ ಶೆಟ್ಟಿ(32) ಹಾಗೂ ಚಿರಂಜೀವಿ (32) ಘಟನೆಯಲ್ಲಿ ಮೃತಪಟ್ಟಿದ್ದು, ತೀವ್ರವಾಗಿ ಗಾಯಗೊಂಡಿರುವ ಸಾಗರ ಎಂಬ … Continued

ಉಜಿರೆ : ಬಸ್ಸಿಗಾಗಿ ಕಾಯುತ್ತಿದ್ದವರ ಮೇಲೆ ನುಗ್ಗಿದ ಲಾರಿ ; ಇಬ್ಬರು ಸ್ಥಳದಲ್ಲೇ ಸಾವು

ಬೆಳ್ತಂಗಡಿ: ರಸ್ತೆ ಬದಿಯಲ್ಲಿ ಬಸ್ಸಿಗಾಗಿ ಕಾಯುತ್ತಿದ್ದವರಿಗೆ ಲಾರಿಯೊಂದು ಢಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಉಜಿರೆ ಸಮೀಪ ಭಾನುವಾರ ಮಧ್ಯಾಹ್ನ ನಡೆದಿದೆ ಎಂದು ವರದಿಯಾಗಿದೆ. ಮೃತರು ಒಬ್ಬರು ಪುರುಷನಾದರೆ ಮತ್ತೊಬ್ಬರು ಮಹಿಳೆಯಾಗಿದ್ದಾರೆ. ಉಜಿರೆ ಸಮೀಪದ ಗಾಂಧಿನಗರ ಕಕ್ಕೆಜಾಲು ನಿವಾಸಿ ಕೃಷ್ಣಪ್ಪ (52), ಕುಂಟಿನಿ ನಿವಾಸಿ ಮೋಹಿನಿ (56) ಮೃತಪಟ್ಟವರು. ಉಜಿರೆ ಸಮೀಪದ ಗಾಂಧಿ ನಗರ … Continued

ಕಾಗವಾಡ : ಟ್ರ್ಯಾಕ್ಟರ್‌ ಟೇಲರ್‌ ಪಲ್ಟಿ ; ನಾಲ್ವರು ಪಾದಚಾರಿ ಮಹಿಳೆಯರು ಸಾವು

ಬೆಳಗಾವಿ : ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದ ಬಳಿ ಭಾನುವಾರ ಕಬ್ಬು ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್‌ ಟೇಲರ್ ಪಲ್ಟಿಯಾಗಿ ಅದರಡಿ ಸಿಲುಕಿ ನಾಲ್ವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು, ಮತ್ತೊಬ್ಬರು ಆಸ್ಪತ್ರೆ ಒಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಮೃತರನ್ನು ಮಾಲಾಬಾಯಿ ರವಸಾಬ್ ಐನಾಪುರೆ (61), ಚಂಪಾ ಲಕ್ಕಪ್ಪ ತಳಕಟ್ಟಿ … Continued

ಜೀಪ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ಸ್ಥಳದಲ್ಲೇ ಇಬ್ಬರು ಸಾವು

ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲೂಕಿನ ಗರ್ಲಗುಂಜಿ ರಸ್ತೆಯಲ್ಲಿ ಸಣ್ಣ ಹೊಸೂರ ಬಳಿ ಜೀಪ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೃತರನ್ನು ಬೇಕವಾಡ ಗ್ರಾಮದ ರಾಮಲಿಂಗ ಮುತಗೇಕರ ಮತ್ತು ಹನುಮಂತ ಪಾಟೀಲ (19) ಎಂದು ಗುರುತಿಸಲಾಗಿದೆ. ನಂದಿಹಾಳ ಗ್ರಾಮಕ್ಕೆ ಸೈನಿಕ ತರಬೇತಿ ಪಡೆಯಲು ಇವರು ತೆರಳುತ್ತಿದ್ದರು … Continued

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ ; ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ ಸೊಸೆ ಸಾವು, ಪುತ್ರ-ಮೊಮ್ಮಗನಿಗೆ ಗಾಯ

ಜೈಪುರ: ಮಂಗಳವಾರ ರಾಜಸ್ಥಾನದ ಅಲ್ವಾರ್‌ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮಾಜಿ ಕೇಂದ್ರ ಸಚಿವ ಜಸ್ವಂತ ಸಿಂಗ್‌ ಪುತ್ರ ಹಾಗೂ ಕಾಂಗ್ರೆಸ್‌ನ ಮಾಜಿ ಸಂಸದ ಮಾನವೇಂದ್ರ ಸಿಂಗ್ ಅವರ ಪತ್ನಿ ಚಿತ್ರಾ ಸಿಂಗ್ ಸಾವಿಗೀಡಾಗಿದ್ದಾರೆ. 59 ವರ್ಷದ ಮಾನವೇಂದ್ರ ಸಿಂಗ್‌ ಕೂಡ ಕಾರಿನಲ್ಲಿದ್ದು, ಅಪಘಾತದಲ್ಲಿ ಗಾಯಗೊಂಡಿದ್ದಾರೆ. ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದ ಸಮಯದಲ್ಲಿ ಮಾನವೇಂದ್ರ ಸಿಂಗ್ … Continued

ಜಮಖಂಡಿ: ಶಾಲಾ ವಾರ್ಷಿಕೋತ್ಸವ ಮುಗಿಸಿ ವಾಪಸಾಗುವ ವೇಳೆ ಅಪಘಾತ ; 4 ವಿದ್ಯಾರ್ಥಿಗಳು ಸಾವು

ಬಾಗಲಕೋಟೆ : ಶಾಲಾ ವಾಹನ ಮತ್ತು ಟ್ರ್ಯಾಕ್ಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಮಕ್ಕಳು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಆಲಗೂರ ಹಳಿ ನಡೆದಿದೆ ಎಂದು ವರದಿಯಾಗಿದೆ. ಒಬ್ಬ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದು, ಉಳಿದ ಮೂವರು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ‌. ಎಂಟಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಗಾಯ‌ವಾಗಿದೆ. ಮೃತ ವಿದ್ಯಾರ್ಥಿಗಳನ್ನು ಶ್ವೇತಾ … Continued

ಪಂಚರ್ ಹಾಕುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ : ಸ್ಥಳದಲ್ಲೇ ಇಬ್ಬರು ಸಾವು

ತುಮಕೂರು : ಪಂಚರ್ ಆಗಿದ್ದ ಕಾರನ್ನು ದುರಸ್ತಿ ಮಾಡುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಶಿರಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-4ರ ಕುಂಟೇಗೌಡನಹಳ್ಳಿ ಗೇಟ್ ಬಳಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಬೆಂಗಳೂರಿನ ಆವಲಹಳ್ಳಿ ನಿವಾಸಿಗಳಾದ ಮಹೇಶ್(40) ಮತ್ತು ವಕೀಲರ ಸಹಕಾರ ಬ್ಯಾಂಕ್ ಉದ್ಯೋಗಿ ಉಮೇಶ(40) ಎಂದು ಗುರುತಿಸಲಾಗಿದೆ. ಮಹೇಶ … Continued

ಬೊಲೆರೊ ವಾಹನ ಪಲ್ಟಿ: ಮೂವರು ಸಾವು

ದಾವಣಗೆರೆ : ಜಿಲ್ಲೆಯ ನ್ಯಾಮತಿ ತಾಲೂಕಿನ ಸವಳಂಗ ಸಮೀಪದ ಚಿನ್ನಿಕಟ್ಟಿ ಗ್ರಾಮದ ಬಳಿ ಬೊಲೆರೊ ಪಲ್ಟಿಯಾಗಿ ಮೂವರು ಮೃತಪಟ್ಟಿದ್ದಾರೆ ಹಾಗೂ ಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಶಿವಮೊಗ್ಗ-ಶಿಕಾರಿಪುರ ರಸ್ತೆಯ ಚಿನ್ನಿಕಟ್ಟೆ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಚಂದನಕೆರೆ ಗ್ರಾಮದ ಮಂಜುನಾಥ (45), ನಾಗರಾಜ (39) ಶಿವಮೊಗ್ಗ ಆಸ್ಪತ್ರೆಯಲ್ಲಿ … Continued