ಗೂಡ್ಸ್​​ ವಾಹನ ಪಲ್ಟಿ : 25ಕ್ಕೂ ಹೆಚ್ಚು ನರೇಗಾ ಕೂಲಿ ಕಾರ್ಮಿಕರಿಗೆ ಗಾಯ

ಬೆಳಗಾವಿ: ನರೇಗಾ ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ಗೂಡ್ಸ್‌ ಪಲ್ಟಿಯಾಗಿ 25 ಕ್ಕೂ ಅಧಿಕ ಕೆಲಸಗಾರರು ಗಾಯಗೊಂಡ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹೊಸೂರ ಗ್ರಾಮದ ಹೊರವಲಯದ ರಾಜ್ಯ ಹೆದ್ದಾರಿಯಲ್ಲಿ ಗುರುವಾರ ನಡೆದಿದೆ ಎಂದು ವರದಿಯಾಗಿದೆ. ಯಮಕನಮರಡಿ ಗ್ರಾಮದಿಂದ ಹಿಡಕಲ್ ಡ್ಯಾಂಗೆ ನರೇಗಾ ಕೆಲಸಕ್ಕೆಂದು ಕೂಲಿ ಕಾರ್ಮಿಕರು ಗೂಡ್ಸ್‌ ವಾಹನದಲ್ಲಿ ಹೊರಟಿದ್ದರು. ಈ ವೇಳೆ ಅಡ್ಡ … Continued

ಯಲ್ಲಾಪುರ | ಅಪಘಾತದಲ್ಲಿ 11 ಮಂದಿ ಸಾವಿಗೆ ಪ್ರಧಾನಿ ಮೋದಿ ಸಂತಾಪ ; ಕೇಂದ್ರದಿಂದ 2 ಲಕ್ಷ ಪರಿಹಾರ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಳಿ ತರಕಾರಿ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ 11 ಮಂದಿ ಮೃತಪಟ್ಟಿರುವುದಕ್ಕೆ (accident) ಪ್ರಧಾನಿ ನರೇಂದ್ರ ಮೋದಿ ಅಲ್ಲದೇ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತಪಟ್ಟವರ ಕುಟುಂಬದವರಿಗೆ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಪ್ರಧಾನಿ ಮೋದಿ ಪ್ರಕಟಿಸಿದ್ದಾರೆ. ಈ ಘಟನೆ ಬಗ್ಗೆ ಪ್ರಧಾನಿ ಮೋದಿ ಅವರು … Continued

ಯಲ್ಲಾಪುರ | ಗುಳ್ಳಾಪುರದಲ್ಲಿ ತರಕಾರಿ ತುಂಬಿದ ಲಾರಿ ಪಲ್ಟಿ ;10 ಮಂದಿ ಸಾವು

ಯಲ್ಲಾಪುರ : ಬುಧವಾರ ಬೆಳ್ಳಂಬೆಳಗ್ಗೆ ತರಕಾರಿ ತುಂಬಿದ್ದ ಲಾರಿ ಪಲ್ಟಿಯಾಗಿ10 ಜನರು ಸಾವಿಗೀಡಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಗುಳ್ಳಾಪುರದ ಬಳಿ ಈ ಅಪಘಾತ ಸಂಭವಿಸಿದ್ದು 15ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಮೃತಪಟ್ಟವರನ್ನು ಫಯಾಜ್‌ ಜಮಖಂಡಿ (45), ವಾಸಿಮ್‌ ಮುಡಿಗೇರಿ (25), ಇಜಾಜ್‌ … Continued

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಸಚಿವೆಗೆ ಗಾಯ, ಆಸ್ಪತ್ರೆಗೆ ದಾಖಲು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಅಂಬಡಗಟ್ಟಿಯ ಸಮೀಪ ಕಾರು ಅಪಘಾತಕ್ಕೀಡಾಗಿದ್ದು, ಅವರು ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಸಮೀಪ ಸಚಿವರು ಕಾರಿನಲ್ಲಿ ತೆರಳುತ್ತಿದ್ದಾಗ ಘಟನೆ ನಡೆದಿದೆ. ಕಾರಿ ನಲ್ಲಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ಸೋದರ, ವಿಧಾನ ಪರಿಷತ್ ಸದಸ್ಯ … Continued

ವೀಡಿಯೊ.. | ಖ್ಯಾತ ನಟ ಅಜಿತ್ 180 ಕಿಮೀ ವೇಗದಲ್ಲಿ ಚಲಾಯಿಸುತ್ತಿದ್ದ ರೇಸ್‌ ಕಾರು ಅಪಘಾತ…ಕೂದಲೆಳೆ ಅಂತರದಲ್ಲಿ ಪಾರು…

ಮುಂಬರುವ 24H ದುಬೈ 2025 ಕಾರ್‌ ಗ್ರ್ಯಾಂಡ್‌ ಪ್ರಿಕ್ಸ್‌ ರೇಸ್‌ನ ಅಭ್ಯಾಸದ ವೇಳೆ ದಕ್ಷಿಣ ಭಾರತದ ಖ್ಯಾತ ನಟ (ಬಹುತೇಕ ತಮಿಳು) ಅಜಿತ ಅವರ ಕಾರು ಅಪಘಾತಕ್ಕೀಡಾಗಿದೆ. ವೀಡಿಯೊದಲ್ಲಿ ವೇಗವಾಗಿ ಬರುತ್ತಿದ್ದ ಅಜಿತ ಅವರ ಕಾರು ನಿಲುಗಡೆಗೆ ಮೊದಲು ನಿಯಂತ್ರಣ ಕಳೆದುಕೊಂಡು ಗೋಡೆಗೆ ಡಿಕ್ಕಿ ಹೊಡೆದಿದೆ. ನಟ ಅಜಿತ ಅವರು ಅಪಾಯದಿಂದ ಪಾರಾಗಿದ್ದಾರೆ. 180 ಕಿಮೀ … Continued

ಹೊನ್ನಾವರ | ಗೇರುಸೊಪ್ಪ ಬಳಿ ಲಾರಿ ಪಲ್ಟಿ ; ಇಬ್ಬರು ಸಾವು

ಹೊನ್ನಾವರ: ಲಾರಿಯೊಂದು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 69ರ ಹೊನ್ನಾವರ – ಸಾಗರ ರಸ್ತೆಯ ಸುಳಿಮುರ್ಖಿ ತಿರುವಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕಬ್ಬಿಣದ ಆಟದ ಸಾಮಾನುಗಳನ್ನು ತುಂಬಿಕೊಂಡು ಸಾಗರ ಕಡೆಯಿಂದ ಹೊನ್ನಾವರದತ್ತ ಬರುತ್ತಿದ್ದ ಲಾರಿ ಸೋಮವಾರ (ಜ.6) ನಸುಕಿನ ವೇಳೆ ಪಲ್ಟಿಯಾಗಿದೆ ಎನ್ನಲಾಗಿದೆ. ಘಟನೆಯಲ್ಲಿ … Continued

ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರು ಸಾವು

ಬೆಂಗಳೂರು : ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಬೆಂಗಳೂರಿನ ಥಣಿಸಂದ್ರ ಮುಖ್ಯರಸ್ತೆಯ ಸಾರಾಯಿಪಾಳ್ಯ ಬಳಿ ಶನಿವಾರ ನಡೆದಿದೆ ಎಂದು ವರದಿಯಾಗಿದೆ. ಮೃತ ಸಹೋದರಿಯರನ್ನು ಗೋವಿಂದಪುರದ ನಾಜಿಯಾ ಸುಲ್ತಾನ (30), ನಾಜಿಯಾ ಇರ್ಫಾನ (32) ಎಂದು ಗುರುತಿಸಲಾಗಿದೆ. ಇಂದು ಶನಿವಾರ ಮಧ್ಯಾಹ್ನ ಥಣಿಸಂದ್ರ ಮುಖ್ಯ ರಸ್ತೆಯ ಸರಾಯಿಪಾಳ್ಯದ ಬಳಿ ಬಿಬಿಎಂಪಿ … Continued

ಗದಗ | ಹೈಸ್ಕೂಲ್ ವಿದ್ಯಾರ್ಥಿಗಳು ಚಲಾಯಿಸುತ್ತಿದ್ದ ಕಾರು ಡಿವೈಡರ್ ಗೆ ಡಿಕ್ಕಿ ; ಇಬ್ಬರು ಸಾವು, ಮತ್ತಿಬ್ಬರು ಗಂಭೀರ

ಗದಗ: ಹೈಸ್ಕೂಲ್‌ ಮಕ್ಕಳು ಚಲಾಯಿಸುತ್ತಿದ್ದ ಕಾರು ಡಿವೈಡರ್‌ಗೆ ಗುದ್ದಿ (Accident) ಛಿದ್ರಛಿದ್ರವಾಗಿದ್ದು, ಇಬ್ಬರು ವಿದ್ಯಾರ್ಥಿಗಳು ಸಾವಿಗೀಡಾಗಿದ್ದು, ಮತ್ತಿಬ್ಬರು ಗಾಯಗೊಂಡ ಘಟನೆ ಗದಗ ತಾಲೂಕಿನ ಹುಲಕೋಟಿ ರೂರಲ್ ಇಂಜಿನಿಯರಿಂಗ್ ಕಾಲೇಜ್ ಬಳಿ ನಡೆದಿದೆ ಎಂದು ವರದಿಯಾಗಿದೆ. ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಮುಗಿಸಿ ತಡರಾತ್ರಿ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಮೃತರು ಹಾಗೂ ಗಾಯಾಳುಗಳು ಹುಲಕೋಟಿ ರಾಜೇಶ್ವರಿ ವಿದ್ಯಾನಿಕೇತನ … Continued

ಹೊನ್ನಾವರ | ಶರಾವತಿ ಸೇತುವೆ ಮೇಲೆ ಬಸ್‌-ಬೈಕ್‌ ಡಿಕ್ಕಿ ; ಮೂವರು ಸಾವು

ಹೊನ್ನಾವರ : ಇಂದು ಬೆಳಬೆಳಿಗ್ಗೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ (Honnavara) ಪಟ್ಟಣದ ಶರಾವತಿ ಸೇತುವೆ ಮೇಲೆ ಭೀಕರ  ಅಪಘಾತ ಸಂಭವಿಸಿದ್ದು, ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮೂವರು ಬೈಕ್ ಸವಾರರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ವಿಜಯಪುರದಿಂದ ಮಂಗಳೂರಿಗೆ ಸಾಗುತ್ತಿದ್ದ ಸಾರಿಗೆ ಸಂಸ್ಥೆ ಬಸ್ ಹಾಗೂ ಬೈಕ್‌ನಲ್ಲಿದ್ದವರು ಮಂಕಿ ಕಡೆಯಿಂದ ಹೊನ್ನಾವರ ಪಟ್ಟಣಕ್ಕೆ ಹೊರಟಿದ್ದ ಬೈಕ್ … Continued

ಹೊನ್ನಾವರ | ಖಾಸಗಿ ಬಸ್ ಪಲ್ಟಿ, ಹಲವರಿಗೆ ಗಾಯ

ಹೊನ್ನಾವರ: ಬೆಂಗಳೂರಿನಿಂದ ಗೋಕರ್ಣಕ್ಕೆ ಬರುತ್ತಿದ್ದ ಖಾಸಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಬಾಳೆಗದ್ದೆ ಬಳಿ ಸಂಭವಿಸಿದೆ ಎಂದು ವರದಿಯಾಗಿದೆ. ತಾಲೂಕಿನ ಬಾಳೆಗದ್ದೆ ತಿರುವಿನಲ್ಲಿ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಶನಿವಾರ ಬೆಳಿಗ್ಗೆ ಖಾಸಗಿ ಪ್ರವಾಸಿ ಬಸ್ ಪಲ್ಟಿಯಾಗಿದ್ದು, ಬಸ್‌ನಲ್ಲಿ ಒಟ್ಟು 20 ಮಂದಿ ಪ್ರಯಾಣಿಕರು ಇದ್ದರು ಎಂದು … Continued