ಹೊನ್ನಾವರ : ಶಾಲಾ ಪ್ರವಾಸಿ ಬಸ್ ಪಲ್ಟಿ : ಓರ್ವ ಸಾವು, 40ಕ್ಕೂ ಮಂದಿಗೆ ಗಾಯ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ (Uttara Kannada) ಹೊನ್ನಾವರ (Honnavar) ತಾಲೂಕಿನ ಗೇರುಸೊಪ್ಪ ಸಮೀಪದ ಸುಳೆ ಮುರ್ಕಿ ಬಳಿ ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್ ಪಲ್ಟಿಯಾಗಿದ್ದು, ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಹಾಗೂ 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅದರಲ್ಲಿ ಮೂರ್ನಾಲ್ಕು ಜನರನ್ನು … Continued

ವೀಡಿಯೊ…| ಆಘಾತಕಾರಿ ಘಟನೆ : ಅಭ್ಯಾಸದ ವೇಳೆ ಬಾಸ್ಕೆಟ್‌ ಬಾಲ್‌ ಕಂಬ ಮುರಿದುಬಿದ್ದು ರಾಷ್ಟ್ರಮಟ್ಟದ ಆಟಗಾರ ಸಾವು

ರೋಹ್ಟಕ್: ಹರ್ಯಾಣದ ರೋಹ್ಟಕ್ ನಲ್ಲಿ ಮಂಗಳವಾರ ನಡೆದ ಭೀಕರ ಘಟನೆಯಲ್ಲಿ, 16 ವರ್ಷದ ರಾಷ್ಟ್ರಮಟ್ಟದ ಬಾಸ್ಕೆಟ್‌ಬಾಲ್ ಆಟಗಾರ ತರಬೇತಿ ಪಡೆಯುತ್ತಿದ್ದಾಗ ಕಬ್ಬಿಣದ ಬಾಸ್ಕೆಟ್‌ಬಾಲ್ ಕಂಬ ಕುಸಿದು ಬಿದ್ದು ಸಾವಿಗೀಡಾಗಿದ್ದಾರೆ. ಎನ್‌ಡಿಟಿವಿ ವರದಿಯ ಪ್ರಕಾರ, ಈ ಘಟನೆ ರೋಹ್ಟಕ್‌ನ ಲಖನ್ ಮಜ್ರಾದ ಕೋರ್ಟ್‌ನಲ್ಲಿ ನಡೆದಿದೆ. ಬಾಸ್ಕೆಟ್‌ಬಾಲ್ ಆಟಗಾರ ಹಾರ್ದಿಕ್ ಅವರು ಅಭ್ಯಾಸ ಮಾಡುತ್ತಿದ್ದಾಗ ಬಾಸ್ಕೆಟ್‌ಬಾಲ್ ಕಂಬವು ಮುರಿದು … Continued

ಕಾರು ಅಪಘಾತ: ಐಎಎಸ್‌ ಅಧಿಕಾರಿ ಸೇರಿ ಮೂವರು ಸಾವು

ಕಲಬುರಗಿ: ಇನ್ನೋವಾ ಕಾರು ಅಪಘಾತದಲ್ಲಿ ಐಎಎಸ್‌ ಅಧಿಕಾರಿ ಸೇರಿ ಮೂವರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಜಿಲ್ಲೆಯ ಜೇವರ್ಗಿಯ ಗೌನಳ್ಳಿ ಕ್ರಾಸ್ ಬಳಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಮಹಾಂತೇಶ ಬೀಳಗಿ (51) ಹಾಗೂ ಇವರ ಸಹೋದರ ಸಂಬಂಧಿಗಳಾದ ಶಂಕರ ಬೀಳಗಿ (55) ಹಾಗೂ ಈರಣ್ಣ (53) … Continued

ಅಪಘಾತದಿಂದಾಗಿ ನೆನಪು ಕಳೆದುಕೊಂಡು ಮನೆಯಿಂದ ದೂರಾಗಿ 45 ವರ್ಷಗಳ ನಂತ್ರ ಮತ್ತೊಂದು ಅಪಘಾತ…ಮರುಕಳಿಸಿದ ನೆನಪು..ಮನೆಗೆ ಬಂದ ವ್ಯಕ್ತಿ..!

ನವದೆಹಲಿ: ಒಂದು ವಿಚಿತ್ರ, ಆದರೆ ಹೃದಯಸ್ಪರ್ಶಿ ಘಟನೆಯಲ್ಲಿ, ಅಪಘಾತದಿಂದ ನೆನಪಿನ ಶಕ್ತಿಯನ್ನು ಕಳೆದುಕೊಂಡು 45 ವರ್ಷಗಳ ಕಾಲ ಕುಟುಂಬದಿಂದ ಸಂಪರ್ಕವಿಲ್ಲದೆ ಇದ್ದ ಹಿಮಾಚಲ ಪ್ರದೇಶದ ವ್ಯಕ್ತಿಯೊಬ್ಬರು ಇದೀಗ ಮರಳಿ ತಮ್ಮ ಮನೆ ಸೇರಿದ್ದಾರೆ. ಅಚ್ಚರಿಯೆಂದರೆ ಅವರಿಗೆ ಮತ್ತೊಂದು ಅಪಘಾತದಿಂದಾ ಕಳೆದುಹೋದ ನೆನಪು ಮರಳಿ ಬಂದಿದ್ದು, ಇಡೀ ಗ್ರಾಮವೇ ಈ ಪವಾಡವನ್ನು ಸಂಭ್ರಮಿಸುತ್ತಿದೆ. ಹಿಮಾಚಲ ಪ್ರದೇಶದ ಸಿರ್ಮೌರ್ … Continued

ಮದುವೆ ದಿನವೇ ಅಪಘಾತ, ಗಾಯಗೊಂಡ ಮದುಮಗಳಿಗೆ ಆಸ್ಪತ್ರೆಯಲ್ಲೇ ತಾಳಿ ಕಟ್ಟಿದ ಮದುಮಗ…

ಕೊಚ್ಚಿ: ಕೇರಳದ ಆಲಪ್ಪುಳದ ಥಂಪೋಲಿಯಲ್ಲಿ ಅಪರೂಪದ ವಿದ್ಯಮಾನವೊಂದರಲ್ಲಿ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಧುವಿಗೆ ಮದುವೆಯ ದಿನ ವರ ತಾಳಿ ಕಟ್ಟಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮದುವೆಗಾಗಿ ದೇವಸ್ಥಾನಕ್ಕೆ ತೆರಳುವ ಮುನ್ನ ಮೇಕಪ್ ಮಾಡಿಸಿಕೊಳ್ಳಲು ಮದುವೆ ದಿನ ಬೆಳಿಗ್ಗೆ ಮನೆಯಿಂದ ತೆರಳಿದ್ದ ವಧು ಅವನಿ ಅಪಘಾತದಿಂದ ಗಾಯಗೊಂಡರು. ಆರಂಭದಲ್ಲಿ … Continued

ದಾಂಡೇಲಿ | ಟ್ರ್ಯಾಕ್ಟರ್‌-ಸ್ಕೂಟಿ ಡಿಕ್ಕಿ ; ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಿಗೆ ಗಂಭೀರ ಗಾಯ

ಕಾರವಾರ: ಮಂಗಳವಾರ ಬೆಳಿಗ್ಗೆ ಸಂಭವಿಸಿದ ಟ್ರ್ಯಾಕ್ಟರ್‌-ಸ್ಕೂಟರ್‌ ಮುಖಾಮುಖು ಡಿಕ್ಕಿಯಲ್ಲಿ ದಾಂಡೇಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮತ್ತು ಸ್ಥಳೀಯ ನಗರ ಸಭೆ ಹಾಲಿ ಸದಸ್ಯ ಮೋಹನ ಹಲವಾಯಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ನಗರದ ಮುಖ್ಯ ಅಂಚೆ ಕಚೇರಿ ಬಳಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದ್ದು, ಪ್ರಾಥಮಿಕ ವರದಿಗಳ … Continued

ಭೀಕರ ರಸ್ತೆ ಅಪಘಾತ : ನಿಂತಿದ್ದ ಟ್ರೈಲರ್‌ ಗೆ ಟೆಂಪೋ ಟ್ರಾವೆಲರ್ ಡಿಕ್ಕಿ ; 15 ಸಾವು

 ಜೈಪುರ/ಫಲೊಡಿ: ರಾಜಸ್ಥಾನದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 15 ಜನರು ಸಾವನ್ನಪ್ಪಿದ್ದು ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಿಲ್ಲಿಸಿದ್ದ ಟ್ರೈಲರ್‌ಗೆ ಟೆಂಪೋ ಟ್ರಾವೆಲರ್ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ರಾಜಧಾನಿ ಜೈಪುರದಿಂದ ಸುಮಾರು 400 ಕಿ.ಮೀ. ದೂರದಲ್ಲಿರುವ ಫಲೊಡಿ ಜಿಲ್ಲೆಯ ಮಟೋಡಾ ಗ್ರಾಮದ ಬಳಿಯ ಭಾರತ ಮಾಲಾ ಹೆದ್ದಾರಿಯಲ್ಲಿ … Continued

ಬೆಂಗಳೂರು | ಸಿಗ್ನಲ್ ಜಂಪ್‌ ಮಾಡಿ ಡಿಕ್ಕಿ ಹೊಡೆದ ಆಂಬುಲೆನ್ಸ್ ; ದಂಪತಿ ಸಾವು, ಇಬ್ಬರಿಗೆ ಗಂಭೀರ ಗಾಯ

ಬೆಂಗಳೂರು: ಜೀವ ಉಳಿಸುವ ವಾಹನ ಆಂಬುಲೆನ್ಸ್ ನಗರದಲ್ಲಿ ಮಾರಣಾಂತಿಕ ರೂಪ ತಾಳಿದ್ದು, ನಿಯಂತ್ರಣ ಕಳೆದುಕೊಂಡು ಸಿಗ್ನಲ್‌ನಲ್ಲಿ ನಿಂತಿದ್ದ ಹಲವು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಈ ಭೀಕರ ಘಟನೆಯು ಶನಿವಾರ ರಾತ್ರಿ ಸುಮಾರು 11:00 ಗಂಟೆ ಸುಮಾರಿಗೆ ನಗರದ ರಿಚ್‌ಮಂಡ್ ಸರ್ಕಲ್ ಬಳಿ ಸಂಭವಿಸಿದೆ. ಟ್ರಾಫಿಕ್‌ ಸಿಗ್ನಲ್‌ನಲ್ಲಿ … Continued

ಬೆಂಗಳೂರು : ಕಾರಿನ ಕನ್ನಡಿಗೆ ಬೈಕ್‌ ತಾಗಿದ್ದಕ್ಕೆ 2 ಕಿಮೀ ಹಿಂಬಾಲಿಸಿ ಬೈಕಿಗೆ ಗುದ್ದಿ ಸವಾರನನ್ನು ಸಾಯಿಸಿದ ದಂಪತಿ…!

ಬೆಂಗಳೂರು: ಕಾರಿನ ಕನ್ನಡಿಗೆ ಬೈಕ್‌ ಸ್ವಲ್ಪ ತಾಗಿದ್ದಕ್ಕೆ ಕಾರಿನವರು ಬೆನ್ನಟ್ಟಿ ಬೈಕ್ ಗೆ ಗುದ್ದಿ ಸವಾರನನ್ನು ಸಾಯಿಸಿರುವ ಘಟನೆ ಬೆಂಗಳೂರಿನ​ ಪುಟ್ಟೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬೆಂಗಳೂರಿನ​ ಪುಟ್ಟೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಶ್ರೀರಾಮ ಲೇಔಟ್‌ನಲ್ಲಿ ಅಕ್ಟೋಬರ್ 25ರಂದು ರಾತ್ರಿ ಈ ಘಟನೆ ನಡೆದಿದೆ. ದರ್ಶನ ಮತ್ತು ವರುಣ ಎಂಬುವರು ಬೈಕ್ … Continued

ಕಿರುತೆರೆ ನಟಿ-ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ವಿರುದ್ಧ ಹಿಟ್‌ & ರನ್‌ ಪ್ರಕರಣ

ಬೆಂಗಳೂರು: ಕಿರುತೆರೆ ನಟಿ, ಬಿಗ್‌ ಬಾಸ್‌ (Bigg boss) ಮಾಜಿ ಸ್ಪರ್ಧಿ ದಿವ್ಯಾ ಸುರೇಶ ಅವರ ವಿರುದ್ಧ ಹಿಟ್ ಆ್ಯಂಡ್ ರನ್ ಆರೋಪ ಕೇಳಿಬಂದಿದೆ. ಅತಿ ವೇಗ ಮತ್ತು ನಿರ್ಲಕ್ಷದಿಂದ ಕಾರು ಚಾಲನೆ ಮಾಡಿದ ಆರೋಪ ಕೇಳಿ ಬಂದಿದ್ದು, ಅಪಘಾತದಲ್ಲಿ ಮಹಿಳೆಯೊಬ್ಬರ ಕಾಲು ಮುರಿದಿದೆ ಎನ್ನಲಾಗಿದೆ. ಅಕ್ಟೋಬರ್ 4ರಂದು ರಾತ್ರಿ 1:30ರ ವೇಳೆಗೆ ಬೆಂಗಳೂರಿನ ಬ್ಯಾಟರಾಯನಪುರ … Continued