ಬಸ್ – ಟಾಟಾ ಸುಮೋ ಡಿಕ್ಕಿ: ಸ್ಥಳದಲ್ಲೇ ಐವರು ಸಾವು, ನಾಲ್ವರಿಗೆ ಗಂಭೀರ ಗಾಯ

ಗದಗ: ಸಾರಿಗೆ ಸಂಸ್ಥೆ ಬಸ್ ಹಾಗೂ ಟಾಟಾ ಸುಮೋ ವಾಹನದ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್‌ ಪಟ್ಟದ ಸಮೀಪ ನಿಡಗುಂದಿಕೊಪ್ಪ ಕ್ರಾಸ್ ಬಳಿ‌ ಸೋಮವಾರ ನಡೆದಿದೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಕಲಬುರಗಿಯ ಆಳಂದ ತಾಲೂಕಿನ … Continued

ಯಲ್ಲಾಪುರ: ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು

ಯಲ್ಲಾಪುರ: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಮೃತಪಟ್ಟಿದ್ದು, ಮತ್ತೊಬ್ಬ ಸವಾರ ಗಂಭೀರವಾಗಿ ಗಾಯಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ತಟಗಾರ ಕ್ರಾಸ್ ಬಳಿ ಭಾನುವಾರ ಸಂಜೆ ನಡೆದಿದೆ. ಗಾಯಾಳುವನ್ನು ಹುಬ್ಬಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ಮೃತರನ್ನು ಮೃತರನ್ನು ತಾಲೂಕಿನ ಹುಣಸೆಕೊಪ್ಪದ ರಾಜು (16) ಮತ್ತು ರಾಮನಕೊಪ್ಪದ ದರ್ಶನ (16) ಎಂದು ಗುರುತಿಸಲಾಗಿದೆ. ಜಬೀರ್ (18) ಗಂಭೀರವಾಗಿ … Continued

ಕಂಟೈನರ್‌ ಗೆ ಮಿನಿ ಬಸ್ ಡಿಕ್ಕಿ : 12 ಮಂದಿ ಸಾವು, 23 ಮಂದಿಗೆ ಗಾಯ

ಮುಂಬೈ: ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಸಮೃದ್ಧಿ ಎಕ್ಸ್‌ಪ್ರೆಸ್‌ವೇಯಲ್ಲಿ ಭಾನುವಾರ ಮುಂಜಾನೆ ಮಿನಿ ಬಸ್ ಕಂಟೈನರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 12 ಜನರು ಸಾವಿಗೀಡಾಗಿದ್ದಾರೆ ಮತ್ತು 23 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಖಾಸಗಿ ಬಸ್‌ನಲ್ಲಿ 35 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮುಂಬೈನಿಂದ ಸುಮಾರು 350 ಕಿಮೀ ದೂರದಲ್ಲಿರುವ ಜಿಲ್ಲೆಯ … Continued

ಹೊಸಪೇಟೆ ಬಳಿ ಭೀಕರ ಅಪಘಾತ ; 7 ಜನರು ಸಾವು

ಹೊಸಪೇಟೆ : ಹೊಸಪೇಟೆ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 7 ಜನ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿದ್ದು, ಅವರನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ನಗರದ ಹೊರವಲಯದ ಸುರಂಗದ ಸಮೀಪ ಎರಡು ಮೈನಿಂಗ್‌ ಟಿಪ್ಪರ್ ಲಾರಿಗಳು ಹಾಗೂ ಕ್ರೂಸರ್‌ ನಡುವೆ ಅಪಘಾತ ಸಂಭವಿಸಿದೆ. ಒಂದು ಮೈನಿಂಗ್‌ ಟಿಪ್ಪರ್‌ ಲಾರಿ ಹೆದ್ದಾರಿ ಪಕ್ಕದ … Continued

ಮಧುಗಿರಿ ಬಳಿ ಭೀಕರ ಅಪಘಾತ : ಸ್ಥಳದಲ್ಲೇ ಮೂವರು ಸಾವು

ತುಮಕೂರು : ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವಿಗೀಡಾದ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನ ಆಕಾಶ (20), ಹೇಮಂತ(28) ಹಾಗೂ ಶಿವಕುಮಾರ ಎಂದು ಗುರುತಿಸಲಾಗಿದೆ. ಮತ್ತೋರ್ವ ಉಜ್ವಲ್ ಕೃಷ್ಣ ಎಂಬಾತ ಗಾಯಗೊಂಡಿದ್ದು, ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಬೆಂಗಳೂರಿನಿಂದ ಪಾವಗಡ ಕಡೆ, … Continued

ಭಾರತದ ವಿದ್ಯಾರ್ಥಿನಿ ಅಪಘಾತದಲ್ಲಿ ಸಾವಿಗೀಡಾದ ನಂತರ ನಕ್ಕು ಅಪಹಾಸ್ಯ : ಅಮೆರಿಕ ಪೊಲೀಸ್ ಅಧಿಕಾರಿ ವೀಡಿಯೊ ಬಹಿರಂಗ, ತನಿಖೆ ಆರಂಭ

ಅಮೆರಿಕದ ಸಿಯಾಟಲ್‌ ನಲ್ಲಿ ಈ ವರ್ಷದ ಜನವರಿಯಲ್ಲಿ ಪೊಲೀಸ್ ಗಸ್ತು ವಾಹನ ಡಿಕ್ಕಿ ಹೊಡೆದು ಭಾರತೀಯ ಮೂಲದ ಯುವತಿ ಮೃತಪಟ್ಟಿದ್ದರು. ಯುವತಿ ಸಾವಿನ ಬಗ್ಗೆ ಪೊಲೀಸ್‌ ಅಧಿಕಾರಿಯೊಬ್ಬರು ಅಪಹಾಸ್ಯ ಮಾಡಿರುವುದು ಬೆಳಕಿಗೆ ಬಂದಿದೆ. ಅಧಿಕಾರಿ, 23 ವರ್ಷದ ಸ್ನಾತಕೋತ್ತರ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಸಾವಿನ ಬಗ್ಗೆ ಅಪಹಾಸ್ಯ ಮಾಡಿರುವುದು ಬಾಡಿ- ವೋರ್ನ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಇದು … Continued

ಲಾರಿ-ಕಾರು-ಬೈಕ್ ನಡುವೆ ಸರಣಿ ಅಪಘಾತ: ದಂಪತಿ ಸಾವು, ಪುಟ್ಟ ಮಗು ಸ್ಥಿತಿ ಗಂಭೀರ

ಚಿಕ್ಕಮಗಳೂರು: ತಾಲೂಕಿನ ಕಡೂರು- ಮೂಡಿಗೆರೆ ಹೆದ್ದಾರಿಯ ಹಿರೇಗೌಜ ಬಳಿ ಟಿಪ್ಪರ್ ಲಾರಿ, ಕಾರು ಮತ್ತು ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿ ಬೈಕಿನಲ್ಲಿದ್ದ ದಂಪತಿ ಮೃತಪಟ್ಟಿದ್ದು, 14 ತಿಂಗಳ ಮಗುವಿನ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಕಾರು, ಟಿಪ್ಪರ್ ಲಾರಿ, ಬೈಕ್ ನಡುವೆ ಸರಣಿ ಅಪಘಾತ ನಡೆದಿದ್ದು, ಬೈಕ್‌ನಲ್ಲಿದ್ದ ದಂಪತಿ ಶಿವಮೊಗ್ಗ ಮೂಲದ ಸಯ್ಯದ್ ಆಸೀಫ್ … Continued

ಚಿತ್ರದುರ್ಗ: ಭೀಕರ ಅಪಘಾತ, ನಾಲ್ವರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ತಾಲೂಕಿನ ಮಲ್ಲಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ-13ರಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ವೇಗವಾಗಿ ಬಂದ ಕಾರು, ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇದರಿಂದ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಕಾರಿನಲ್ಲಿದ್ದ ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ … Continued

ಕುಮಟಾ: ಸ್ವಾತಂತ್ರ್ಯೋತ್ಸವ ಧ್ವಜಾರೋಹಣಕ್ಕೆ ಹೊರಟ ಶಿಕ್ಷಕ ಅಪಘಾತದಲ್ಲಿ ಸಾವು

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ತಾಲೂಕಿನ ಗುಡೆ ಅಂಗಡಿಯ ಪ್ರಾಥಮಿಕ ಶಾಲಾ ಶಿಕ್ಷಕ ಗೋಪಾಲ ಪಟಗಾರ (50) ಅಪಘಾತದಲ್ಲಿ ನಿಧನರಾಗಿದ್ದಾರೆ. ಆಗಸ್ಟ್‌ ೧೫ರಂದು ಮುಂಜಾನೆ 7 ಗಂಟೆಗೆ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕಾಗಿ ಗುಡೆ ಅಂಗಡಿ ಶಾಲೆಗೆ ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಅಘನಾಶನಿ ರಸ್ತೆಯ ಹಳಕಾರ ತಿರುವಿನ ಸಮೀಪ ಬೊಲೆರೊ ವಾಹನ ದ್ವಿಚಕ್ರ ವಾಹನಕ್ಕೆ … Continued

ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ 158.81 ಕೋಟಿ ರೂ.ಗಳ ವೆಚ್ಚದಲ್ಲಿ ಸುರಕ್ಷತಾ ಕಾಮಗಾರಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ 158.81 ಕೋಟಿ ರೂ.ಗಳ ವೆಚ್ಚದಲ್ಲಿ ಹೆಚ್ಚುವರಿ ಕಾಮಗಾರಿಗಳನ್ನು ಕೈಗೊಳ್ಳಲಿದ್ದು, ನವೆಂಬರ್ ನಂತರ ಕೆಲಸ ಆರಂಭವಾಗಲಿದೆ ಎಂದರು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶನಿವಾರ ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಕ್ಸ್ ಪ್ರೆಸ್ ವೇ ನಲ್ಲಿ ಕೆಲವು ಸುರಕ್ಷಾ ಕ್ರಮಗಳನ್ನು ಕೈಗೊಳ್ಳಬೇಕಿದ್ದು … Continued