ವೀಡಿಯೊ..| ಬೆಂಗಳೂರಲ್ಲಿ ಬಸ್ ಓಡಿಸುವಾಗಲೇ ಚಾಲಕನಿಗೆ ಮೂರ್ಛೆ ; 9 ವಾಹನಗಳಿಗೆ ಬಸ್‌ ಡಿಕ್ಕಿ

ಬೆಂಗಳೂರು : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಬಸ್ ಚಾಲಕನಿಗೆ ಚಾಲನೆ ಮಾಡುವಾಗ ತೀವ್ರವಾದ  ಮೂರ್ಛೆ ರೋಗ (seizure) ಕಾಣಿಸಿಕೊಂಡ ಪರಿಣಾಮವಾಗಿ, ನಿಯಂತ್ರಣ ಕಳೆದುಕೊಂಡ ಬಸ್ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಒಂಬತ್ತು ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಈ ಭೀಕರ ಅಪಘಾತವು ಶನಿವಾರ ಸಂಭವಿಸಿದ್ದು, ಈ ಘಟನೆಯಲ್ಲಿ ಮೂರು ಆಟೋರಿಕ್ಷಾಗಳು, … Continued

ಅಂಕೋಲಾ | ಟ್ಯಾಂಕರ್‌-ಬಸ್‌ ಡಿಕ್ಕಿ ; ಇಬ್ಬರು ಸಾವು

ಅಂಕೋಲಾ : ಟ್ಯಾಂಕರ್ ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಸಂಜೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಾಳೇಗುಳಿ – ಯಲ್ಲಾಪುರ ಮಧ್ಯೆ ಬರುವ ಕಂಚಿನಬಾಗಿಲು ಎಂಬಲ್ಲಿ ನಡೆದಿದೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದ್ದು. ಬಸ್ಸಿಲ್ಲಿದ್ದ ಹತ್ತು ಜನ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. … Continued

ಹಾಸನದಲ್ಲಿ ಘೋರ ದುರಂತ : ಗಣೇಶ ಮೂರ್ತಿ ಮೆರವಣಿಗೆ ಮೇಲೆ ನುಗ್ಗಿದ ಟ್ರಕ್ ; 8 ಮಂದಿ ಸಾವು, ಹಲವರಿಗೆ ಗಾಯ

ಹಾಸನ: ಗಣೇಶ ಮೂರ್ತಿ ಮೆರವಣಿಗೆ ವೇಳೆ ಜನಸಂದಣಿಯತ್ತ ಟ್ರಕ್ ನುಗ್ಗಿದ ಕಾರಣ ಎಂಟು ಮಂದಿ ಮೃತಪಟ್ಟ ದಾರುಣ ಘಟನೆ ಹಾಸನದ ಮೊಸಳೆಹೊಸಳ್ಳಿ ಬಳಿ ಭೀಕರ ಅಪಘಾತ ನಡೆದಿದೆ. ನಡೆದಿದೆ ಎಂದು ವರದಿಯಾಗಿದೆ. ಹಾಸನ ತಾಲೂಕಿನ ಹೊಳೇನರಸೀಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಮೊಸಳೆ ಹೊಸಳ್ಳಿ ಬಳಿ ದುರಂತ ಸಂಭವಿಸಿದೆ. ಗಣಪತಿ ಮೂರ್ತಿ ವಿಸರ್ಜನೆಗಾಗಿ ಮೆರವಣಿಗೆ ಮೂಲಕ … Continued

ಕಾರು-ಬೈಕ್‌ ಡಿಕ್ಕಿ ; ಮದುವೆ ನಿಶ್ಚಯವಾಗಿದ್ದ ಇಬ್ಬರು ಸಾವು

ಶಿವಮೊಗ್ಗ: ಸದ್ಯದಲ್ಲಿಯೇ ಮದುವೆಯಾಗಬೇಕಿದ್ದ ಜೋಡಿ ಕಾರು ಹಾಗೂ ಬೈಕ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಮದುವೆ ನಿಶ್ಚಯವಾಗಿದ್ದ ಜೋಡಿ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ (Shivamogga) ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ ಕ್ರಾಸ್ ಬಳಿ ಸಂಭವಿಸಿದೆ ಎಂದು ವರದಿಯಾಗಿದೆ. ಶಿಕಾರಿಪುರ ತಾಲೂಕಿನ ಮಟ್ಟಿಕೊಪ್ಪ ಗ್ರಾಮದ ರೇಖಾ (20) ಹಾಗೂ ಗಂಗೊಳ್ಳಿ ಗ್ರಾಮದ ಬಸವನಗೌಡ ದ್ಯಾಮನಗೌಡ (25) ಎಂಬವರು ಅಪಘಾತದಲ್ಲಿ … Continued

ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಹಿಳೆ ; ಪರಾರಿಯಾಗಿದ್ದ ಚಾಲಕ, ಲಾರಿ ಪತ್ತೆ ಹಚ್ಚಿದ ಎಐ….!

ನಾಗ್ಪುರ : ತನ್ನ ಪತ್ನಿಗೆ ಡಿಕ್ಕಿ ಹೊಡೆದ ಟ್ರಕ್ ಯಾವುದೆಂದು ಆ ವ್ಯಕ್ತಿಗೆ ನಿರ್ದಿಷ್ಟವಾಗಿ ಮಾಹಿತಿ ಇರಲಿಲ್ಲ. ಆದರೆ ಅದರ ಮೇಲೆ ಕೆಂಪು ಗುರುತುಗಳಿದ್ದವು ಎಂಬುದು ಮಾತ್ರ ಆತನಿಗೆ ತಿಳಿದಿತ್ತು. ಟ್ರಕ್‌ ಹೇಗಿತ್ತು, ಅದರ ನಂಬರ್‌ ಪ್ಲೇಟ್‌ ಅಥವಾ ಯಾವ ಕಂಪನಿಯ ಟ್ರಕ್‌ ಎಂಬುದೂ ಆ ವ್ಯಕ್ತಿಗೆ ಗೊತ್ತಿರಲಿಲ್ಲ. ಹೆಚ್ಚಿನ ಯಾವ ಮಾಹಿತಿಯೂ ಇರಲಿಲ್ಲ. ಆದರೂ … Continued

ಯಲ್ಲಾಪುರ | ನಿಂತಿದ್ದ ಲಾರಿಗೆ ಬಸ್‌ ಡಿಕ್ಕಿ ; ಸ್ಥಳದಲ್ಲೇ ಮೂವರು ಸಾವು, 7 ಜನರಿಗೆ ಗಂಭೀರ ಗಾಯ

ಯಲ್ಲಾಪುರ : ನಿಂತಿದ್ದ ಲಾರಿಗೆ ಕೆಎಸ್​​ಆರ್​​ಟಿಸಿ ಬಸ್ (KSRTC bus) ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವಿಗೀಡಾಗಿ, 7 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಳ್ಳಿ ಕ್ರಾಸ್​ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಶುಕ್ರವಾರ (ಆ.15) ಮಧ್ಯರಾತ್ರಿ ಈ ಅಪಘಾತ ನಡೆದಿದೆ ಎನ್ನಲಾಗಿದ್ದು, ಓವರ್​ಟೇಕ್​ ಮಾಡುವ ಸಂದರ್ಭದಲ್ಲಿ ಬಸ್ … Continued

ಕಾರವಾರ | ನಿಂತಿದ್ದ ಬಸ್ಸಿಗೆ ಬೈಕ್ ಡಿಕ್ಕಿ ; ಬೈಕಿಗೆ ಪಿಕ್‌ಅಪ್‌ ಡಿಕ್ಕಿ ; ಬೈಕ್‌ ಸವಾರ ಸಾವು

ಕಾರವಾರ: ಸರಣಿ ಅಪಘಾತದಿಂದ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ದಿವೇಕರ ಕಾಲೇಜಿನ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಭವಿಸಿದೆ ಎಂದು ವರದಿಯಾಗಿದೆ. ಸದಾಶಿವಗಡ ಮೂಲದ ಮೈಕಲ್ ಮಾರ್ಷಲ್ ನರೋನಾ (42) ಎಂಬವರು ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಅವರು ಸದಾಶಿವಗಡದಿಂದ ಕಾರವಾರಕ್ಕೆ ಬರುತ್ತಿದ್ದ ವೇಳೆ, ದಿವೇಕರ ಕಾಲೇಜಿನ ಬಳಿ … Continued

ಆಘಾತಕಾರಿ ವೀಡಿಯೊ…| ಟ್ರಕ್ ಡಿಕ್ಕಿ ಹೊಡೆದು ಮೃತಪಟ್ಟ ಪತ್ನಿ ಶವವನ್ನು ಬೈಕಿಗೆ ಕಟ್ಟಿಕೊಂಡು ಒಯ್ದ ಪತಿ….!

ನಾಗ್ಪುರ: ದಾರಿಹೋಕರು ಯಾರೂ ಸಹಾಯಕ್ಕೆ ಬಾರದ ಕಾರಣ ವ್ಯಕ್ತಿಯೊಬ್ಬ ತನ್ನ ಮೃತ ಪತ್ನಿಯ ಶವವನ್ನು ಮೋಟಾರ್ ಸೈಕಲ್‌ಗೆ ಕಟ್ಟಿ ಒಯ್ಯುತ್ತಿದ್ದ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿರುವುದು ವರದಿಯಾಗಿದೆ. ಭಾನುವಾರ ಮಧ್ಯಾಹ್ನದ ಸುಮಾರಿಗೆ ದಿಯೋಲಾಪರ್ ಪೊಲೀಸ್ ವ್ಯಾಪ್ತಿಯ ಮೊರ್ಫಾಟಾ ಬಳಿಯ ನಾಗ್ಪುರ-ಜಬಲ್‌ಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಗಯಾರ್ಸಿ ಅಮಿತ ಯಾದವ್ ಎಂದು ಗುರುತಿಸಲಾದ ಮಹಿಳೆಗೆ … Continued

ಅಂಕೋಲಾ : ಬಸ್‌ ಹಳ್ಳಕ್ಕೆ ಬಿದ್ದು ಓರ್ವ ಸಾವು, 18 ಜನರಿಗೆ ಗಾಯ

ಕಾರವಾರ : ಖಾಸಗಿ ಬಸ್ಸೊಂದು ಪಲ್ಟಿಯಾಗಿ ಸೇತುವೆಯ ಕೆಳಗೆ ಹಳ್ಳಕ್ಕೆ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಹಲವರು ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಗಸೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ನಸುಕಿನ 3 ಗಂಟೆ ಸುಮಾರಿಗೆ ಸಂಭವಿಸಿದೆ ಎಂದು ವರದಿಯಾಗಿದೆ. ಅಪಘಾತ ಸಂಭವಿಸಿದ್ದು ಇದರಲ್ಲಿ ಓರ್ವರು ಸ್ಥಳದಲ್ಲಿಯೇ … Continued

ಡಿಸಿಎಂ ಡಿಕೆ ಶಿವಕುಮಾರ ಬೆಂಗಾವಲು ವಾಹನ ಪಲ್ಟಿ

ಮಂಡ್ಯ: ಮೈಸೂರಿನಲ್ಲಿ ನಡೆದ ಕಾಂಗ್ರೆಸ್ ಸಾಧನಾ ಸಮಾವೇಶ ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಾಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾದ ಘಟನೆ ನಡೆದಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ವ್ಯಾಪ್ತಿಯ ಎಕ್ಸ್‌ಪ್ರೆಸ್ ಹೈವೇಯ ಗೌಡಹಳ್ಳಿ ಟಿಎಂ ಹೊಸೂರು ಬಳಿಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೆಯಲ್ಲಿ ಈ ಘಟನೆ ನಡೆದಿದೆ. ಮೈಸೂರಿನಲ್ಲಿ ಕಾಂಗ್ರೆಸ್‌ ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ … Continued