ಮಾಗಡಿ | ಮರಕ್ಕೆ ಡಿಕ್ಕಿ ಹೊಡೆದ ಕಾರು ; ಒಂದೇ ಕುಟುಂಬದ ಐವರು ಸಾವು

ರಾಮನಗರ:  ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಸಾವಿಗೀಡಾದ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಭದ್ರಾಪುರ ಗ್ರಾಮದ ಸಮೀಪ ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಮಂಗಳವಾರ (ಸೆ.17) ನಡೆದಿದೆ ಎಂದು ವರದಿಯಾಗಿದೆ. ಮಾಗಡಿಯಿಂದ ಬೆಂಗಳೂರಿಗೆ ಪ್ರಯಾಣ ಮಾಡುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡದಿದೆ ಎನ್ನಲಾಗಿದ್ದು, ಘಟನೆಯಲ್ಲಿ ಮಾಗಡಿ … Continued

ನಿಪ್ಪಾಣಿ | ಸರಣಿ ಅಪಘಾತ : ಇಬ್ಬರು ಸಾವು

ಬೆಳಗಾವಿ : ಜಿಲ್ಲೆಯ ನಿಪ್ಪಾಣಿ ನಗರದ ಹೊರವಲಯದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ತವನಿಧಿ ಘಟ್ಟದ ಕೆಳಗೆ ಭಾನುವಾರ ಸಂಜೆ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಗಾಯಗೊಂಡ 6 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥವನಿಧಿ ಘಾಟ್ ಬಳಿ‌ 8 ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ, ಕಾರಿನಲ್ಲಿದ್ದ … Continued

ʼಕನ್ನಡತಿʼ ಧಾರಾವಾಹಿಯ ನಟ ಕಿರಣ ರಾಜ್‌ ಕಾರು ಅಪಘಾತ

ಬೆಂಗಳೂರು: ರಾನಿ ಚಿತ್ರದ ನಾಯಕ ಹಾಗೂ ಕನ್ನಡತಿ ಧಾರಾವಾಹಿಯ ನಟ ಕಿರಣ ರಾಜ (Kiran Raj) ಪ್ರಯಾಣಿಸುತ್ತಿದ್ದ ಕಾರು ಕೆಂಗೇರಿ ಬಳಿ ಅಪಘಾತಕ್ಕೀಡಾಗಿದ್ದು, ಗಂಭೀರವಾಗಿ ಗಾಯಗೊಂಡ ನಟನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಗುಟ್ಟಯ್ಯನ ಪಾಳ್ಯದ ಸಿದ್ದೇಶ್ವರ ವೃದ್ಧಾಶ್ರಮಕ್ಕೆ ಹೋಗಿ ಬರುತ್ತಿದ್ದಾಗ ಅಪಘಾತ (Accident) ಸಂಭವಿಸಿದೆ ಎಂದು ಹೇಳಲಾಗಿದೆ. ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಗಿರೀಶ ಕಾರು ಚಾಲನೆ … Continued

ಮಧುಗಿರಿ | ಎರಡು ಕಾರುಗಳ ನಡುವೆ ಡಿಕ್ಕಿ : ಐವರು ಸಾವು

ತುಮಕೂರು: ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಐವರು ಮೃತಪಟ್ಟ ಘಟನೆ ತುಮಕೂರಿನ ಮಧುಗಿರಿ ತಾಲೂಕಿನ ಕೆರೆಗಳಪಾಳ್ಯದ ಬಳಿ ಭಾನುವಾರ ರಾತ್ರಿ 7ರ ಸುಮಾರಿಗೆ ನಡೆದಿದೆ ಎಂದು ವರದಿಯಾಗಿದೆ. ಒಂದು ಕಾರಿನಲ್ಲಿದ್ದ ನಾಲ್ವರು ಹಾಗೂ ಮತ್ತೊಂದು ಕಾರಿನಲ್ಲಿ ಓರ್ವ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಮೃತರನ್ನು ಪಾವಗಡ ತಾಲೂಕಿನ ಎತ್ತಿನಹಳ್ಳಿ ಗ್ರಾಮದ ಒಂದೇ ಕುಟುಂಬದ ನಾಲ್ವರು … Continued

ಬಂಟ್ವಾಳ: ಭೀಕರ ರಸ್ತೆ ಅಪಘಾತದಲ್ಲಿ ಎರಡು ದಿನದ ಹಿಂದಷ್ಟೇ ಮದುವೆಯಾಗಿದ್ದ ಯುವತಿ ಸಾವು, ಪತಿ ಸ್ಥಿತಿ ಗಂಭೀರ

ಮಂಗಳೂರು : ನವ ದಂಪತಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿ ನವವಿವಾಹಿತೆ ಮೃತಪಟ್ಟಿದ್ದು, ಪತಿ ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಬಂಟ್ವಾಳದ ತಲಪಾಡಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಸಂಭವಿಸಿದೆ ಎಂದು ವರದಿಯಾಗಿದೆ. ಇವರು ಎರಡು ದಿನಗಳ ಹಿಂದಷ್ಟೇ ವಿವಾಹವಾಗಿದ್ದರು ಎಂದು ಹೇಳಲಾಗಿದೆ. ಮೃತ ನವವಿವಾಹಿತೆಯನ್ನು ಮಾನಸ ಎಂದು ಗುರುತಿಸಲಾಗಿದೆ. ಪತಿ, ಪೆರ್ನೆ ಸಮೀಪದ ಒಡ್ಯದಗಯ … Continued

ಮಾನ್ವಿ | ಶಾಲಾ ವಾಹನ-ಬಸ್‌ ಮಧ್ಯೆ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸಾವು, 17 ವಿದ್ಯಾರ್ಥಿಗಳಿಗೆ ಗಾಯ

ರಾಯಚೂರು : ಜಿಲ್ಲೆಯ ಮಾನ್ವಿ ತಾಲೂಕಿನ ‌ಕಪಗಲ್ ಗ್ರಾಮದ ಸಮೀಪ ಗುರುವಾರ ಶಾಲಾ ವಾಹನ ಹಾಗೂ ಸಾರಿಗೆ ಸಂಸ್ಥೆಯ ಬಸ್‌ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಶಾಲಾ ವಾಹನದಲ್ಲಿದ್ದ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ ಹಾಗೂ  17 ವಿದ್ಯಾರ್ಥಿಗಳು  ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಲೊಯಲ್‌ ಶಾಲೆಯ ವಿದ್ಯಾರ್ಥಿಗಳಾದ ಸಮರ್ಥ ಅಮರೇಶ (7) ಹಾಗೂ ಶ್ರೀಕಾಂತ ಮಾರೇಶ (12) … Continued

ಹುಬ್ಬಳ್ಳಿ | ರಸ್ತೆ ಅಪಘಾತ ; ಒಂದೇ ಕುಟುಂಬದ ಮೂವರು ಸಾವು, ಮೂವರಿಗೆ ಗಂಭೀರ ಗಾಯ

ಹುಬ್ಬಳ್ಳಿ: ಓಮ್ನಿ ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿ ಸಮೀಪದ ಹೆಬಸೂರ ಗ್ರಾಮದ ಬಳಿ ನಡೆದಿದೆ ಎಂದು ವರದಿಯಾಗಿದೆ. ಶುಕ್ರವಾರ ತಡ ರಾತ್ರಿ 10 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪಾರ್ಶವಾಯುಗೆ ಔಷಧಿ … Continued

ನರಗುಂದ | ಕೊಣ್ಣೂರು ಬಳಿ ಭೀಕರ ಅಪಘಾತ ; ಒಂದೇ ಕುಟುಂಬದ ನಾಲ್ವರು ಸಾವು

ಗದಗ: ಸಾರಿಗೆ ಬಸ್‌ ಹಾಗೂ ಕಾರು ನಡುವೆ ಭೀಕರ್ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಒಂದೇ ಕುಟುಂಬದ 4 ಮಂದಿ ಮೃತಪಟ್ಟ ಘಟನೆ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ. ಕುಟುಂಬದ ನಾಲ್ಕು ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೃತರನ್ನು ಹಾವೇರಿ ಮೂಲದ ರುದ್ರಪ್ಪ ಅಂಗಡಿ (55), ರಾಜೇಶ್ವರಿ (45), … Continued

ಕಾರು-ಗೂಡ್ಸ್‌ ವಾಹನ ಭೀಕರ ಅಪಘಾತ : ಇಬ್ಬರು ಸಾವು

ಬೆಳಗಾವಿ : ಚಿಕ್ಕೋಡಿ ತಾಲೂಕಿನ ನಾಗರಮುನ್ನೋಳಿ ಸನಿಹದ ಬೆಳಕೂಡ ಗೇಟ್ ಬಳಿ ನಿಪ್ಪಾಣಿ- ಮುಧೋಳ ರಾಜ್ಯ ಹೆದ್ದಾರಿಯಲ್ಲಿ ಶುಕ್ರವಾರ ರಾತ್ರಿ ಕಾರು-ಗೂಡ್ಸ್ ವಾಹನದ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೃತರನ್ನು ಮುಧೋಳದ ರಾಕೇಶ ವಾಟಕರ್ (23), ಸೌರಭ ಕುಲಕರ್ಣಿ (22) ಎಂದು ಗುರುತಿಸಲಾಗಿದೆ. ಎರಡು ವಾಹನಗಳಲ್ಲಿದ್ದ ನಾಲ್ವರಿಗೆ ಗಾಯಗಳಾಗಿವೆ. … Continued

ವಯನಾಡು ಭೂ ಕುಸಿತ ಸ್ಥಳಕ್ಕೆ ತೆರಳುತ್ತಿದ್ದ ಕೇರಳ ಆರೋಗ್ಯ ಸಚಿವರ ಕಾರು ಅಪಘಾತ

ವಯನಾಡು : ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರ ವಾಹನ ಮಲಪ್ಪುರಂ ಜಿಲ್ಲೆಯ ಮಂಜೇರಿ ಬಳಿ ಅಪಘಾತಕ್ಕೀಡಾಗಿದೆ. ಸಚಿವರು ಭೂಕುಸಿತದಿಂದ ತತ್ತರಿಸಿರುವ ವಯನಾಡ್‌ಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ. ಸಚಿವ ವೀನಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಸ್ತುತ ಮಂಜೇರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮತ್ತು … Continued