ಹಾಸನ ಶಾಲಾ ಶಿಕ್ಷಕಿ ಕಿಡ್ನಾಪ್ ಪ್ರಕರಣ ಸುಖಾಂತ್ಯ: ನೆಲ್ಯಾಡಿ ಬಳಿ ಅಪಹರಣಕಾರರ ಬಂಧನ

ಹಾಸನ : ಹಾಸನದ ಬಿಟ್ಟಗೌಡನಹಳ್ಳಿ ಬಳಿ ನಡೆದಿದ್ದ ಶಾಲಾ ಶಿಕ್ಷಕಿ ಕಿಡ್ನಾಪ್ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಅಪಹರಣಕಾರರನ್ನು ಬಂಧಿಸಿದ್ದಾರೆ. ದಕ್ಷಿಣ ಕನ್ನಡದ ನೆಲ್ಯಾಡಿ ಬಳಿ ಅಪಹರಣಕಾರರನ್ನು ಪತ್ತೆ ಹಚ್ಚಿದ ಹಾಸನ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಕಿಡ್ನಾಪ್ ಆಗಿದ್ದ ಶಾಲಾ ಶಿಕ್ಷಕಿಯನ್ನು ರಕ್ಷಿಸಿದ್ದಾರೆ. ಪೊಲೀಸರು ಸಂಜೆ ಐದು ಗಂಟೆ ಸುಮಾರಿಗೆ ದಕ್ಷಿಣ ಕನ್ನಡದ ನೆಲ್ಯಾಡಿ ಬಳಿ … Continued

ಅಪ್ರಾಪ್ತಳ ಮೇಲೆ ಆಸಿಡ್‌ ದಾಳಿ: ಆರೋಪಿ ಬಂಧನ

ರಾಮನಗರ: ಜಿಲ್ಲೆಯ ಕನಕಪುರದ ಅಪ್ರಾಪ್ತ ವಯಸ್ಸಿನ ಯುವತಿ ಮೇಲೆ ಆಸಿಡ್‌ ದಾಳಿ ನಡೆಸಿದ 22 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಅಪ್ರಾಪ್ತ ಯುವತಿ ಪ್ರೀತಿ ನಿರಾಕರಿಸಿದ್ದರಿಂದ ಆರೋಪಿ ಈ ದುಷ್ಕೃತ್ಯ ಎಸಗಿದ್ದಾನೆ ಎಂದು ಹೇಳಲಾಗುತ್ತಿದೆ. ಆಸಿಡ್‌ ದಾಳಿಯಿಂದ ಯುವತಿಯ ಎಡ ಕಣ್ಣಿಗೆ ಗಂಭೀರ ಗಾಯಗೊಂಡಿದ್ದು, ಬೆಂಗಳೂರಿನ ಮಿಂಟೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕನಕಪುರ ಬೈಪಾಸ್‌ ರಸ್ತೆ … Continued

ಜೊಯಿಡಾ : ತೂಗು ಸೇತುವೆ ಮೇಲೆ ಕಾರು ಚಲಾಯಿಸಿ ಹುಚ್ಚಾಟ ಮಾಡಿದ್ದ ಯುವಕನ ಬಂಧನ

ಕಾರವಾರ: ಯಲ್ಲಾಪುರ ಹಾಗೂ ಜೋಯಿಡಾ ತಾಲೂಕಿನ ಗಡಿಯ ಶಿವಪುರ ಗ್ರಾಮದಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ತೂಗು ಸೇತುವೆಯ ಮೇಲೆ ಕಾರನ್ನು ಚಲಾಯಿಸಿಕೊಂಡು ಹೋಗಿ ಹುಚ್ಚಾಟ ಮಾಡಿದ್ದ ಯುವಕನನ್ನು ಬಂಧಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಜೊಯಿಡಾ ತಾಲೂಕಿನ ಉಳವಿ ಗ್ರಾಮದ ನಿವಾಸಿ ಮುಜಾಹಿದ್ ಆಜಾದ್ ಸಯ್ಯದ್(25) ಬಂಧಿತ ಎಂದು ತಿಳಿದುಬಂದಿದೆ. ಈ ಘಟನೆಯ ವೀಡಿಯೊ ಸಾಮಾಜಿಕ … Continued

ನೀವು ಇಲ್ಲೇಕೆ ಬಂದಿರಿ, ಭಾರತಕ್ಕೆ ವಾಪಸ್ ಹೋಗಿ: ಅಮೆರಿಕದಲ್ಲಿ ಭಾರತೀಯ ಮೂಲದ ಮಹಿಳೆಯರಿಗೆ ಜನಾಂಗೀಯ ನಿಂದನೆ, ಹಲ್ಲೆ | ವೀಡಿಯೊವೀಕ್ಷಿಸಿ

ಟೆಕ್ಸಾಸ್: ಭಾರತದ ಮೂಲದ ನಾಲ್ವರು ಅಮೆರಿಕನ್ನರ ಗುಂಪಿನ ಮೇಲೆ ಜನಾಂಗೀಯ ನಿಂದನೆ ಮಾಡಿ, ಹಲ್ಲೆ ನಡೆಸಿದ ಆರೋಪದಲ್ಲಿ ಮೆಕ್ಸಿಕನ್- ಅಮೆರಿಕನ್ ಮಹಿಳೆಯನ್ನು ಟೆಕ್ಸಾಸ್ ಪೊಲೀಸರು ಬಂಧಿಸಿದ್ದಾರೆ. ಈ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಭಾರತೀಯ ಮೂಲದ ಅಮೆರಿಕದ ಮಹಿಳೆಯರನ್ನು ಜನಾಂಗೀಯವಾಗಿ ನಿಂದಿಸಿರುವ ಈ ಮಹಿಳೆ, ‘ಭಾರತಕ್ಕೆ ವಾಪಸ್ ಹೋಗಿ’ ಎಂದು ತಾಕೀತು ಮಾಡುವುದು … Continued

ನಾನು ಕಾಂಗ್ರೆಸ್‌ ಕಾರ್ಯಕರ್ತ, ಸಿದ್ದರಾಮಯ್ಯ ಹಿಂದೂ ವಿರೋಧಿ ಹೇಳಿಕೆಯಿಂದ ನೋವಾಗಿತ್ತು: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣದ ಬಂಧಿತ ಆರೋಪಿ

ಮಡಿಕೇರಿ: ಕೊಡಗಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಆರೋಪಿಯನ್ನು ಕುಶಾಲನಗರ ಪೊಲೀಸರು ಬಂಧಿಸಿದ್ದಾರೆ. ಈತ ತಾನು ಕಾಂಗ್ರೆಸ್‌ ಕಾರ್ಯಕರ್ತ ಎಂದು ಹೇಳಿಕೊಂಡಿದ್ದಾನೆ. ಬಂಧಿತ ಆರೋಪಿಯನ್ನು ಸೋಮವಾರಪೇಟೆಯ ಸಂಪತ್ ಎಂದು ಗುರುತಿಸಲಾಗಿದೆ. ಮೂಲತಃ ನಾನು ಜೆಡಿಎಸ್ ಪಕ್ಷದವನು. ಮಾಜಿ ಸಚಿವ ಜೀವಿಜಯ ಬೆಂಬಲಿಗನಾಗಿದ್ದು, ಜೀವಿಜಯ ಜೊತೆಯಲ್ಲಿ ಇತ್ತೀಚೆಗೆ ಕಾಂಗ್ರೆಸ್ ಸೇರ್ಪಡೆಗೊಂಡಿದ್ದೇನೆ” ಎಂದು … Continued

ಬಜ್ಪೆ :ಪ್ರೀತಿ ನಿರಾಕರಿಸಿದ ಯುವತಿ ಮೇಲೆ ಅತ್ಯಾಚಾರ -ಆರೋಪಿ ಬಂಧನ

ಮಂಗಳೂರು: ಯುವತಿ ಪ್ರೀತಿ ನಿರಾಕಣೆ ಮಾಡಿದ್ದಕ್ಕಾಗಿ, ಆಕೆಯ ಪರಿಚಯಸ್ಥ ಯುವನೇ ಅತ್ಯಾಚಾರ ಮಾಡಿದ ಘಟನೆ ಬಜ್ಪೆ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಪೊಲೀಸರು ಆರೋಪಿ ಅಬುಬಕರ್ ಸಿದ್ದಿಕ್ (21) ಎಂಬಾತನನ್ನು ಬಂಧಿಸಿದ್ದಾರೆ. 2019ರಲ್ಲಿ ಯುವತಿ ಹಾಗೂ ಅಬುಬಕರ್ ಸಿದ್ದಿಕ್ ಇಬ್ಬರೂ ಒಂದೇ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು. 2019ರಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಇಬ್ಬರು ಜತೆಯಾಗಿ ಫೋಟೋ ತೆಗೆಸಿಕೊಂಡಿದ್ದರು. … Continued