ರೇಣುಕಾಸ್ವಾಮಿ ಕೊಲೆ ಪ್ರಕರಣ: ಜಾಮೀನು ಕೋರಿ ಹೈಕೋರ್ಟ್‌ ಗೆ ಅರ್ಜಿ ಸಲ್ಲಿಸಿದ ನಟ ದರ್ಶನ್‌

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್‌ ಅವರು ಜಾಮೀನು ಕೋರಿ ಕರ್ನಾಟಕ ಹೈಕೋರ್ಟ್‌ಗೆ ಮಂಗಳವಾರ ಅರ್ಜಿ ಸಲ್ಲಿಸಿದ್ದಾರೆ. ವಿಚಾರಣಾಧೀನ ನ್ಯಾಯಾಲಯವು ಸೋಮವಾರ ದರ್ಶನ್‌ಗೆ ಜಾಮೀನು ನಿರಾಕರಿಸಿತ್ತು. ದರ್ಶನ್‌ಗೆ ಜಾಮೀನು ಕೋರಿ ಅವರ ಪರವಾಗಿ ಅರ್ಜಿ ಸಲ್ಲಿಸಿರುವುದಾಗಿ ವಕೀಲ ಎಸ್‌ ಸುನಿಲಕುಮಾರ ತಿಳಿಸಿದ್ದಾರೆ. ದರ್ಶನ್‌ ಅವರು ಪ್ರಭಾವಿಯಾಗಿದ್ದು, ಸಾಮಾಜಿಕವಾಗಿ ಸಾಕಷ್ಟು … Continued

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಜಾಮೀನು ನಿರಾಕರಿಸಿದ ನ್ಯಾಯಾಲಯ

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ನಟ ದರ್ಶನ್‌ ಅವರಿಗೆ ಬೆಂಗಳೂರಿನ ಸತ್ರ ನ್ಯಾಯಾಲಯವು ಸೋಮವಾರ ಜಾಮೀನು ನಿರಾಕರಿಸಿದೆ. ಅಲ್ಲದೆ, ಪವಿತ್ರಾ ಗೌಡ, ಆರ್‌. ನಾಗರಾಜು, ಎಂ ಲಕ್ಷ್ಮಣಗೂ ಜಾಮೀನು ನಿರಾಕರಿಸಿದೆ. ಇವರ ಕಾಯ್ದಿರಿಸಿದ್ದ ಜಾಮೀನು ಅರ್ಜಿಗಳ ಆದೇಶವನ್ನು ಬೆಂಗಳೂರಿನ 57ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಧೀಶ ಜೈಶಂಕರ … Continued

ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್‌-ಸಹಚರರ ಕ್ರೌರ್ಯ ಅನಾವರಣ ; ರೇಣುಕಾಸ್ವಾಮಿ ಅಂಗಲಾಚುತ್ತಿರುವ ಫೋಟೋ ವೈರಲ್

ಬೆಂಗಳೂರು : ನಟ ದರ್ಶನ್ ತೂಗುದೀಪ ಅವರ ಆಜ್ಞೆಯ ಮೇರೆಗೆ ಕೊಲೆಯಾದ 33 ವರ್ಷದ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಸಾಯುವ ಕೆಲವೇ ಕ್ಷಣಗಳ ಮೊದಲಿನ ಹೊಸ ಫೋಟೋಗಳು ಹೊರಬಂದಿವೆ. ಹೊರಬಂದ ಎರಡು ಫೋಟೊಗಳ ಪೈಕಿ ಒಂದರಲ್ಲಿ ರೇಣುಕಾಸ್ವಾಮಿ ಪ್ರಾಣಭಯದಿಂದ ಬೇಡಿಕೊಳ್ಳುತ್ತಿರುವುದು ಕಾಣುತ್ತದೆ. ಎರಡೂ ಚಿತ್ರಗಳಲ್ಲಿ ರೇಣುಕಾಸ್ವಾಮಿ ಶರ್ಟ್ ಧರಿಸಿಲ್ಲ, ಹಿನ್ನಲೆಯಲ್ಲಿ ಟ್ರಕ್‌ಗಳು ನಿಂತಿವೆ. ಅವರ ದೇಹದ ಮೇಲೆ … Continued

ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್ ಗ್ಯಾಂಗ್ ವಿರುದ್ಧ ಕೋರ್ಟ್​ಗೆ ದೋಷಾರೋಪ ಪಟ್ಟಿ ಸಲ್ಲಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಮತ್ತು ಅವರ ಗ್ಯಾಂಗ್ ವಿರುದ್ಧ 3,991 ಪುಟಗಳ ದೋಷಾರೋಪ ಪಟ್ಟಿಯನ್ನು ಪೊಲೀಸರು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್‌ಗೆ ಬುಧವಾರ ಸಲ್ಲಿಸಿದ್ದಾರೆ. ಈ ದೋಷಾರೋಪಣಾ ಪಟ್ಟಿಯಲ್ಲಿ ಒಟ್ಟು 231 ಸಾಕ್ಷಿಗಳನ್ನು ನಮೂದಿಸಲಾಗಿದೆ. ಒಟ್ಟು 3,991 ಪುಟ ಇರುವ ಈ ಆರೋಪ ಪಟ್ಟಿಯಲ್ಲಿ ಒಟ್ಟು 7 ಸಂಪುಟಗಳಿವೆ. 10 … Continued

ಬೆಂಗಳೂರಿಂದ ಬಳ್ಳಾರಿ ಸೆಂಟ್ರಲ್​ ಜೈಲಿಗೆ ನಟ ದರ್ಶನ್​ ಸ್ಥಳಾಂತರ

ಬಳ್ಳಾರಿ : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಅವ​ರನ್ನು ಇಂದು, ಗುರುವಾರ ಬೆಳಗ್ಗೆ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ಈವರೆಗೆ ದರ್ಶನ್​ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು ಬಿಗಿ ಭದ್ರತೆಯಲ್ಲಿ ಬಳ್ಳಾರಿಯ ಜೈಲಿಗೆ ಪೊಲೀಸ್​ ವಾಹನಗಳು ತೆರಳಿವೆ. ಬೆಳಗ್ಗಿನ ಜಾವ 4:30ಕ್ಕೆ ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಹೊರಟ ಪೊಲೀಸ್​ ವಾಹನ ಬೆಳಗ್ಗೆ ‌9:45ರ … Continued

ರೇಣುಕಾಸ್ವಾಮಿ ಕೊಲೆ ಪ್ರಕರಣ ; ನಟ ದರ್ಶನ್‌ ನ್ಯಾಯಾಂಗ ಬಂಧನ ವಿಸ್ತರಣೆ

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಇತರ ಆರೋಪಿಗಳಿಗೆ ನ್ಯಾಯಾಂಗ ಬಂಧನವನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ. ಸೆಪ್ಟೆಂಬರ್ 9 ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ 24 ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ನ್ಯಾಯಾಂಗ ಬಂಧನ ಅಂತ್ಯವಾಗಿದ್ದ ಹಿನ್ನೆಲೆಯಲ್ಲಿ ಬುಧವಾರ ವೀಡಿಯೋ ಕಾನ್ಫರೆನ್ಸ್‌ ಮೂಲಕ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. … Continued

ಜೈಲಿನಲ್ಲಿ ರಾಜಾತಿಥ್ಯಕ್ಕೆ ಬಿತ್ತು ಬ್ರೇಕ್​; ಆರೋಪಿ ದರ್ಶನ್​ ಬಳ್ಳಾರಿಗೆ ಸ್ಥಳಾಂತರ, ಉಳಿದವರು ಬೇರೆ ಬೇರೆ ಜೈಲಿಗೆ ಶಿಫ್ಟ್..

ಬೆಂಗಳೂರು : ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರದಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ನ್ಯಾಯಾಲಯ ಅನುಮತಿ ನೀಡಿದೆ. ಅಲ್ಲದೆ, ಕೊಲೆ ಪ್ರಕರಣದ ಎಲ್ಲಾ ಆರೋಪಿಗಳನ್ನು ರಾಜ್ಯದ ಇತರ ಜಿಲ್ಲಾ ನ್ಯಾಯಾಲಯಗಳಿಗೆ ಸ್ಥಳಾಂತರಿಸಲು ನ್ಯಾಯಾಲಯ ಒಪ್ಪಿಗೆ ನೀಡಿದೆ. ಆರೋಪಿ ದರ್ಶನ್​ … Continued

ನಟ ದರ್ಶನ್ -ಇತರರನ್ನು ಬೇರೆ ಜೈಲಿಗೆ ಸ್ಥಳಾಂತರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಪರಪ್ಪನ ಅಗ್ರಹಾತ ಜೈಲಿನಲ್ಲಿರುವ ನಟ ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕಾರಾಗೃಹದಲ್ಲಿರುವ ನಟ ದರ್ಶನಗೆ ರಾಜಾತಿಥ್ಯ ನೀಡಲಾಗುತ್ತಿರುವ ಫೋಟೋ ವೈರಲ್ ಆಗಿದ್ದು, ಅದು … Continued

ಪರಪ್ಪನ ಅಗ್ರಹಾರ ಜೈಲಲ್ಲಿ ನಟ ದರ್ಶನಗೆ ರಾಜಾತಿಥ್ಯ : 7 ಜೈಲು ಸಿಬ್ಬಂದಿ ಅಮಾನತು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರದಲ್ಲಿ ಬಂಧನದಲ್ಲಿರುವ ನಟ ದರ್ಶನ್‌ಗೆ ಜೈಲಿನಲ್ಲಿ ರಾಜಾತಿಥ್ಯ ಹಾಗೂ ವೀಡಿಯೋ ಕಾಲ್‌ ಸಂಭಾಷಣೆ ಮಾಡಿರುವ ಫೋಟೋಗಳು, ವಿಡಿಯೋಗಳು ವೈರಲ್ ಆದ ನಂತರ ಎಚ್ಚೆತ್ತುಕೊಂಡ ಗೃಹ ಇಲಾಖೆ 7 ಜೈಲು ಸಿಬ್ಬಂದಿಯನ್ನು ಅಮಾನತು ಮಾಡಿದೆ. ಬೆಂಗಳೂರಿನಲ್ಲಿ ಇದೇ ವಿಚಾರವಾಗಿ ಸೋಮವಾರ ಹೇಳಿಕೆ ನೀಡಿರುವ ಗೃಹ ಸಚಿವ ಡಾ. ಜಿ … Continued

ನಟ ದರ್ಶನಗೆ ಜೈಲಲ್ಲಿ ರಾಜಾತಿಥ್ಯ..?! ಫೋಟೊ ವೈರಲ್‌

ಬೆಂಗಳೂರು : ನಟ ದರ್ಶನ್‌ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆಯೇ..? ವೈರಲ್ ಆದ ಚಿತ್ರಗಳನ್ನು ನೋಡಿದರೆ ಹಾಗೆ ಅನಿಸದಿರದು…! ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಕನ್ನಡ ನಟ ದರ್ಶನ್ ತೂಗುದೀಪ ಜೈಲಿನೊಳಗೆ ವಿಐಪಿ ಆತಿಥ್ಯ ಪಡೆಯುತ್ತಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಚಿತ್ರದುರ್ಗದ ರೇಣೂಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ … Continued