ಕನ್ನಡ ಸಿನೆಮಾ-ಕಿರುತೆರೆಯ ಖ್ಯಾತ ನಟ ದಿಲೀಪ ರಾಜ ನಿಧನ

ಬೆಂಗಳೂರು : ಕನ್ನಡ ಸಿನೆಮಾ ಹಾಗೂ ಕಿರುತೆರೆಯ ಖ್ಯಾತ ನಟ, ನಿರ್ಮಾಪಕ, ಕಂಠದಾನ ಕಲಾವಿದ ದಿಲೀಪ ರಾಜ (48) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ನಾಯಕ ನಟ, ಪೋಷಕ ನಟ, ನಿರ್ಮಾಪಕ ಹೀಗೆ ವಿವಿಧ ರಂಗಗಳಲ್ಲಿ ಗುರುತಿಸಿಕೊಂಡಿದ್ದ ಅವರು ಸಿನೆಮಾ ಹಾಗೂ ಕಿರುತೆರೆ ಎರಡರಲ್ಲೂ ತೊಡಗಿಸಿಕೊಂಡಿದ್ದರು. ರಾತ್ರಿ ಮಲಗಿದ್ದ ದಿಲೀಪರಾಜ ((Dilip Raj) ಅವರಿಗೆ ಹೃದಯಾಘಾತವಾಗಿದೆ. ತಕ್ಷಣ … Continued

ನಾಗ್ಪುರ : ಆರ್‌ಎಸ್‌ಎಸ್ ಸ್ಥಾಪಕ ಹೆಡ್ಗೇವಾರ ಸ್ಮೃತಿ ಮಂದಿರಕ್ಕೆ ಭೇಟಿ ನೀಡಿದ ಬಾಲಿವುಡ್‌ ನಟ ರಣವೀರ ಸಿಂಗ್

ನಾಗ್ಪುರ: ಬಾಲಿವುಡ್‌ನ ಖ್ಯಾತ ನಟ ರಣವೀರ ಸಿಂಗ್ ಅವರು ಶುಕ್ರವಾರ ನಾಗ್ಪುರದ ರೇಶಿಂಬಾಗ್‌ನಲ್ಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ಪ್ರಮುಖ ಸ್ಥಳವಾದ ಹೆಡ್ಗೆವಾರ್ ಸ್ಮೃತಿ ಮಂದಿರಕ್ಕೆ ಭೇಟಿ ನೀಡಿದ್ದಾರೆ. ತಮ್ಮ ಇತ್ತೀಚಿನ ಚಿತ್ರ ‘ಧುರಂಧರ್: ದಿ ರಿವೆಂಜ್’ (Dhurandhar: The Revenge) ಭರ್ಜರಿ ಯಶಸ್ಸು ಕಂಡ ಬೆನ್ನಲ್ಲೇ ರಣವೀರ್ ಅವರ ಈ ಭೇಟಿ ಕುತೂಹಲ … Continued

ಧಾರವಾಹಿ ಶೂಟಿಂಗ್‌ ವೇಳೆ ಸಮುದ್ರದಲ್ಲಿ ಮುಳುಗಿ ಖ್ಯಾತ ನಟ ಸಾವು

ಬಂಗಾಳಿ ಚಿತ್ರರಂಗದ ಜನಪ್ರಿಯ ನಟ ರಾಹುಲ್ ಅರುಣೋದಯ ಬ್ಯಾನರ್ಜಿ (43) ಅವರು ಮಾರ್ಚ್ 29 ರಂದು ಒಡಿಶಾ-ಪಶ್ಚಿಮ ಬಂಗಾಳ ಗಡಿಯ ಬಳಿಯ ದಿಘಾದ ತಲ್ಸಾರಿಯಲ್ಲಿ ದಿಘಾ ಸಮೀಪದ ತಾಲ್ಸರಿ ಬೀಚ್‌ನಲ್ಲಿ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಅವರಿಗೆ 43 ವರ್ಷ ವಯಸ್ಸಾಗಿತ್ತು. ‘ಭೋಲೆ ಬಾಬಾ ಪಾರ್ ಕರೇಗಾ’ ಎಂಬ ಬಂಗಾಳಿ ಕಿರುತೆರೆ ಸರಣಿಯ ಚಿತ್ರೀಕರಣಕ್ಕಾಗಿ ರಾಹುಲ್ … Continued

ತಮಿಳು ಸೂಪರ್ ಸ್ಟಾರ್, ಟಿವಿಕೆ ಅಧ್ಯಕ್ಷ ವಿಜಯ ದಾಂಪತ್ಯದಲ್ಲಿ ಬಿರುಕು: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಪತ್ನಿ

ಚೆನ್ನೈ: ತಮಿಳು ಚಿತ್ರರಂಗದ ಸ್ಟಾರ್ ನಟ ಹಾಗೂ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷದ ಅಧ್ಯಕ್ಷ ವಿಜಯ ಅವರ ದಾಂಪತ್ಯ ಜೀವನ ಅಂತ್ಯದ ಹಂತಕ್ಕೆ ಬಂದು ನಿಂತಿದೆ. ವಿಜಯ ಅವರ ಪತ್ನಿ ಸಂಗೀತ ಅವರು ಚೆಂಗಲ್ಪಟ್ಟು ಜಿಲ್ಲಾ ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ವಿಜಯ ಮತ್ತು ಸಂಗೀತ ಅವರು ಜುಲೈ 10, 1998 ರಂದು ಯುನೈಟೆಡ್ … Continued

ಕಾಂತಾರ ಮಿಮಿಕ್ರಿ ಪ್ರಕರಣ ; ನಟ ರಣವೀರ್‌ ಸಿಂಗ್‌ ಗೆ ಕರ್ನಾಟಕ ಹೈಕೋರ್ಟ್‌ ತರಾಟೆ

ಬೆಂಗಳೂರು : ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಗೆ ಕರ್ನಾಟಕ ಹೈಕೋರ್ಟ್ ಬಂಧನದಿಂದ ತಾತ್ಕಾಲಿಕ ಸಮಾಧಾನ ನೀಡಿದೆಯಾದರೂ, ಅವರ ವರ್ತನೆಯ ಬಗ್ಗೆ ನ್ಯಾಯಾಧೀಶರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು, “ಸೆಲೆಬ್ರಿಟಿಯಾದ ತಕ್ಷಣ ಧಾರ್ಮಿಕ ನಂಬಿಕೆಗಳನ್ನು ಅಪಹಾಸ್ಯ ಮಾಡುವ ಹಕ್ಕು ಯಾರಿಗೂ ಇಲ್ಲ” ಎಂದು ಹೇಳಿದ್ದಾರೆ. ಕೋರ್ಟ್ … Continued

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ ನಟಿ ಜಯಮಾಲಾ ಆಯ್ಕೆ

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (Karnataka Film Chamber Of Commerce) ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಹಾಗೂ ಮಾಜಿ ಸಚಿವೆ ಜಯಮಾಲಾ (Actress Jayamala) ಆಯ್ಕೆಯಾಗಿದ್ದಾರೆ. ಶನಿವಾರ ನಡೆದ ಫಿಲ್ಮ್‌ ಚೇಂಬರ್‌ ಚುನಾವಣೆಯಲ್ಲಿ ನಿರ್ಮಾಪಕ ಭಾಮಾ ಹರೀಶ ವಿರುದ್ಧ ನಟಿ ಜಯಮಾಲಾ ಭರ್ಜರಿ ಗೆಲುವು ಸಾಧಿಸಿದ್ದಾರೆ.  ಅಧ್ಯಕ್ಷ ಸ್ಥಾನಕ್ಕೆ ಜಯಮಾಲಾ ಹಾಗೂ  ಭಾಮಾ … Continued

ಬೆಂಗಳೂರು : ಕನ್ನಡದ ಖ್ಯಾತ ನಟನಿಂದ ಸರಣಿ ಅಪಘಾತ ; ದೂರು ದಾಖಲು

ಬೆಂಗಳೂರು: ಕನ್ನಡ ಚಿತ್ರರಂಗದ ನಟ ಮಯೂರ್ ಪಟೇಲ್ ಅವರು ಕುಡಿದ ಅಮಲಿನಲ್ಲಿ ಅತಿವೇಗವಾಗಿ ಕಾರು ಚಲಾಯಿಸಿ ಸರಣಿ ಅಪಘಾತಕ್ಕೆ ಕಾರಣರಾಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರಿನ ಹಲಸೂರು ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ ಎಂದು ವರದಿಯಾಗಿದೆ. ಹಳೆ ವಿಮಾನ ನಿಲ್ದಾಣ ರಸ್ತೆಯ ಕಮಾಂಡೋ ಆಸ್ಪತ್ರೆ ಸಿಗ್ನಲ್ ಬಳಿ … Continued

ನಟ ಉಪೇಂದ್ರ ದಂಪತಿ ಮೊಬೈಲ್ ಹ್ಯಾಕ್ ಪ್ರಕರಣ; ₹1.5 ಲಕ್ಷ ದೋಚಿದ್ದ ಬಿಹಾರದ ಸೈಬರ್ ವಂಚಕನ ಬಂಧನ

ಬೆಂಗಳೂರು : ನಟ ಉಪೇಂದ್ರ ಹಾಗೂ ಪ್ರಿಯಾಂಕಾ ಅವರ ಮೊಬೈಲ್ ಹ್ಯಾಕ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಿಹಾರ ಮೂಲದ ವಿಕಾಸಕುಮಾರ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಂಧನಕ್ಕೆಂದು ಬಿಹಾರಕ್ಕೆ ಹೋದ ಬೆಂಗಳೂರಿನ ಸದಾಶಿವನಗರ ಪೊಲೀಸರು ಈ ಸೈಬರ್ ಖದೀಮರ ಜಾಲ ನೋಡಿ ಶಾಕ್ ಆಗಿದ್ದಾರೆ. ಆರೋಪಿ ವಿಕಾಸಕುಮಾರ ಮತ್ತು ಆತನ ಸಹಚರರು ದೊಡ್ಡ ಮಟ್ಟದ … Continued

ಬಾಲಿವುಡ್ ಹಿರಿಯ ನಟ ಸತೀಶ ಶಾ ನಿಧನ

ಮುಂಬೈ : ಬಾಲಿವುಡ್‌ ಹಿರಿಯ ನಟ ಸತೀಶ ಶಾ ಶನಿವಾರ ನಿಧನರಾರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. “ಜಾನೆ ಭಿ ದೋ ಯಾರೋ”, “ಮೈ ಹೂ ನಾ” ಮತ್ತು ಯಶಸ್ವಿ ಟಿವಿ ಶೋ “ಸಾರಾಭಾಯಿ ವರ್ಸಸ್ ಸಾರಾಭಾಯಿ” ಅಭಿನಯಕ್ಕೆ ಹೆಸರುವಾಸಿಯಾದ ಹಿರಿಯ ಬಾಲಿವುಡ್ ನಟ ಸತೀಶ್ ಶಾ ಅವರು ಶನಿವಾರ (ಅಕ್ಟೋಬರ್ 25, 2025) ನಿಧನರಾದರು … Continued

ಹಿಂದಿ ಸಿನೆಮಾದ ಖ್ಯಾತ ಹಾಸ್ಯನಟ ಅಸ್ರಾನಿ ನಿಧನ

ಮುಂಬೈ: ಅಸ್ರಾನಿ ಎಂದೇ ಪ್ರೀತಿಯಿಂದ ಕರೆಯಲ್ಪಡುವ ಬಾಲಿವುಡ್‌ ಹಿರಿಯ ನಟ ಗೋವರ್ಧನ್ ಅಸ್ರಾನಿ ಸೋಮವಾರ ಸಂಜೆ (ಅಕ್ಟೋಬರ್‌ 20) ತಮ್ಮ 84 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದಾಗಿ ಐದು ದಿನಗಳ ಕಾಲ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸೋಮವಾರ ತಮ್ಮ ಅಭಿಮಾನಿಗಳಿಗೆ ಇನ್​ಸ್ಟಾಗ್ರಾಂನಲ್ಲಿ ದೀಪಾವಳಿಯ (Deepavali) ಶುಭಾಶಯಗಳನ್ನು ಕೋರಿದ್ದರು. ಅದಾದ … Continued