ʼಕನ್ನಡತಿʼ ಧಾರಾವಾಹಿಯ ನಟ ಕಿರಣ ರಾಜ್‌ ಕಾರು ಅಪಘಾತ

ಬೆಂಗಳೂರು: ರಾನಿ ಚಿತ್ರದ ನಾಯಕ ಹಾಗೂ ಕನ್ನಡತಿ ಧಾರಾವಾಹಿಯ ನಟ ಕಿರಣ ರಾಜ (Kiran Raj) ಪ್ರಯಾಣಿಸುತ್ತಿದ್ದ ಕಾರು ಕೆಂಗೇರಿ ಬಳಿ ಅಪಘಾತಕ್ಕೀಡಾಗಿದ್ದು, ಗಂಭೀರವಾಗಿ ಗಾಯಗೊಂಡ ನಟನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಗುಟ್ಟಯ್ಯನ ಪಾಳ್ಯದ ಸಿದ್ದೇಶ್ವರ ವೃದ್ಧಾಶ್ರಮಕ್ಕೆ ಹೋಗಿ ಬರುತ್ತಿದ್ದಾಗ ಅಪಘಾತ (Accident) ಸಂಭವಿಸಿದೆ ಎಂದು ಹೇಳಲಾಗಿದೆ. ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಗಿರೀಶ ಕಾರು ಚಾಲನೆ … Continued

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ತೆಲುಗಿನ ಸೂಪರ್‌ ಸ್ಟಾರ್‌ ಜೂ. ಎನ್‌ ಟಿ ಆರ್

ಉಡುಪಿ: ಇಲ್ಲಿನ ಶ್ರೀಕೃಷ್ಣ ಮಠಕ್ಕೆ ತೆಲುಗು ಚಿತ್ರರಂಗದ ಸೂಪರ್‌ ಸ್ಟಾರ್‌ ಜೂನಿಯರ್ ಎನ್‌ಟಿಆರ್ (Jr NTR) ಶ್ರಾವಣಮಾಸ ಶನಿವಾರ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು. ನಟ ರಿಷಬ್ ಶೆಟ್ಟಿ ಹಾಗೂ ನಿರ್ದೇಶಕ ಪ್ರಶಾಂತ್ ನೀಲ್ ಜೊತೆ ಉಡುಪಿ ಕೃಷ್ಣ ಮಠಕ್ಕೆ ಆಗಮಿಸಿದ ಜೂನಿಯರ್‌ ಎನ್ ಟಿಆರ್ ಕನಕನ ಕಿಂಡಿಯಲ್ಲಿ ಶ್ರೀಕೃಷ್ಣನ ದರ್ಶನ ಪಡೆದರು. ಬಳಿಕ … Continued

ಕನ್ನಡ ಸಿನಿಮಾ ನಟಿ, ಕಾಂಗ್ರೆಸ್ ನಾಯಕಿಯ ಭೀಕರ ಹತ್ಯೆ ; ಪತಿಯೇ ಕೊಲೆ ಆರೋಪಿ

ಮೈಸೂರು: ಕೌಟುಂಬಿಕ ಕಲಹದಿಂದ ಸ್ಯಾಂಡಲ್‌ ವುಡ್‌ ಸಿನಿಮಾ ನಟಿ, ಕಾಂಗ್ರೆಸ್‌ ನಾಯಕಿಯನ್ನು ಭೀಕರವಾಗಿ ಹತ್ಯೆಗೈದ ಘಟನೆ ಮೈಸೂರು ಜಿಲ್ಲೆಯ ಬನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಆಕೆಯ ಪತಿಯೇ ಅವರನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಆತ ಪರಾರಿಯಾಗಿದ್ದಾನೆ. ಕೊಲೆಯಾದ ನಟಿಯನ್ನು ವಿದ್ಯಾ ನಂದೀಶ ಎಂದು ಗುರುತಿಸಲಾಗಿದೆ. ಸೋಮವಾರ ತಡರಾತ್ರಿ ವಿದ್ಯಾ ಬನ್ನೂರಿನ … Continued

ರಸ್ತೆ ಅಪಘಾತದಲ್ಲಿ ಕನ್ನಡ ಕಿರುತೆರೆಯ ಜನಪ್ರಿಯ ನಟಿ ಪವಿತ್ರ ಜಯರಾಂ ಸಾವು

ಬೆಂಗಳೂರು : ಕನ್ನಡ ಕಿರುತೆರೆಯ ಜನಪ್ರಿಯ ನಟಿ ಪವಿತ್ರಾ ಜಯರಾಂ (Pavithra Jayaram)ಆಂಧ್ರಪ್ರದೇಶದ ಕರ್ನೂಲು ಸಮೀಪ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಪವಿತ್ರಾ ಅವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಬಸ್ ನಡುವೆ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ. ನಟಿ ಪವಿತ್ರಾ ಅವರು ಪ್ರಯಾಣಿಸುತ್ತಿದ್ದ ಕಾರು ಇಂದು, ಭಾನುವಾರ ಬೆಳಿಗ್ಗೆ ಆಂಧ್ರ ಪ್ರದೇಶದ … Continued

‘ತಾರಕ್ ಮೆಹ್ತಾ’ ನಟ ಗುರುಚರಣ್ ಸಿಂಗ್ ಐದು ದಿನಗಳಿಂದ ನಾಪತ್ತೆ ; ಸಿಸಿಟಿವಿಯಲ್ಲಿ ರಸ್ತೆ ದಾಟುತ್ತಿರುವುದು ಸೆರೆ

ನವದೆಹಲಿ : ಅತ್ಯಂತ ಜನಪ್ರಿಯ ಭಾರತೀಯ ಸಿಟ್‌ಕಾಂನಲ್ಲಿ ರೋಷನ್ ಸಿಂಗ್ ಸೋಧಿ ಪಾತ್ರವನ್ನು ನಿರ್ವಹಿಸಿದ್ದ ‘ತಾರಕ್ ಮೆಹ್ತಾ ಕಾ ಊಲ್ಟಾ ಚಶ್ಮಾ’ ಖ್ಯಾತಿಯ ನಟ ಗುರುಚರಣ್ ಸಿಂಗ್ ಐದು ದಿನಗಳಿಂದ ನಾಪತ್ತೆಯಾಗಿದ್ದಾರೆ. ಗುರುಚರಣ್ ಸಿಂಗ್ ಅವರ ತಂದೆ ನೀಡಿದ ದೂರಿನ ಆಧಾರದ ಮೇಲೆ ದೆಹಲಿ ಪೊಲೀಸರು ಇದೀಗ ಅಪಹರಣ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ನಟನ ತಂದೆ, ತಮ್ಮ … Continued

ಕನ್ನಡ ಚಿತ್ರರಂಗದ ಹಿರಿಯ ನಟ ದ್ವಾರಕೀಶ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ (Dwarakish) ಅವರು ಮಂಗಳವಾರ ನಿಧನರಾದರು. ಅವರಿಗೆ 81 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಸ್ವಗೃಹದಲ್ಲಿ ಮಂಗಳವಾರ ಬೆಳಿಗ್ಗೆ ನಿಧನರಾದರು. “ರಾತ್ರಿ ಹೊಟ್ಟೆ ನೋವು ಆಗ್ತಾ ಇದೆ ಹೇಳ್ತಾ ಇದ್ದರು. ಅವರಿಗೆ ಲೂಸ್‌ ಮೋಷನ್‌ ಆಗಿತ್ತು. ರಾತ್ರಿ ಸರಿಯಾಗಿ ನಿದ್ದೆ … Continued

ನಟಿ ಸಿದ್ಧಾರ್ಥ- ನಟಿ ಅದಿತಿ ರಾವ್ ಮದುವೆ ಆಗಿಲ್ಲ : ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ; ಸ್ಪಷ್ಟನೆ ನೀಡಿದ ಅದಿತಿ

ಹೈದರಾಬಾದ್: ಖ್ಯಾತ ನಟ ಸಿದ್ಧಾರ್ಥ ಮತ್ತು ನಟಿ ಅದಿತಿ ರಾವ್ ಹೈದರಿ ಗೌಪ್ಯವಾಗಿ ದೇವಸ್ಥಾನವೊಂದರಲ್ಲಿ ಮದುವೆಯಾಗಿದ್ದಾರೆ ಎನ್ನುವ ಸುದ್ದಿ ಎಲ್ಲೆಡೆ ವೈರಲ್‌ ಆಗಿತ್ತು. ಆದರೆ ಇದೀಗ ಅವರು ತಾವಿಬ್ಬರು ಮದುವೆಯಾಗಿಲ್ಲ, ನಿಶ್ಚಿತಾರ್ಥ ಮಾಡಿಕೊಂಡಿದ್ದೇವೆ ಎಂದು ಸ್ಪಷ್ಟನೆ ನೀಡಿದ್ದಾರೆ. ತಾವಿಬ್ಬರು ಮದುವೆಯಾಗಿಲ್ಲ, ಎಂಗೇಜ್‌ ಮೆಂಟ್‌ ಆಗಿದ್ದೇವೆ ಎಂದು ಸೋಶಿಯಲ್‌ ಮೀಡಿಯಾದಲ್ಲಿ ಇಬ್ಬರು ಫೋಟೋ ಹಂಚಿಕೊಂಡಿದ್ದಾರೆ. ನಿಶ್ಚಿತಾರ್ಥದ ರಿಂಗ್‌ … Continued

ನಟ-ಮಾಜಿ ಐಎಎಸ್​ ಅಧಿಕಾರಿ ಕೆ. ಶಿವರಾಮಗೆ ಹೃದಯಾಘಾತ : ಆಸ್ಪತ್ರೆಗೆ ದಾಖಲು

ಬೆಂಗಳೂರು : ಮಾಜಿ ಐಎಎಸ್ ಅಧಿಕಾರಿ ಹಾಗೂ ಕನ್ನಡದ ನಟ ಕೆ. ಶಿವರಾಮ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, 71 ವರ್ಷ ವಯಸ್ಸಿನ ಕೆ ಶಿವರಾಮ ಅವರಿಗೆ ಆರೋಗ್ಯ ಸಮಸ್ಯೆಯಾಗಿ ಕೆಲದಿನಗಳ ಹಿಂದೆ ರಕ್ತದೊತ್ತಡದಲ್ಲಿ ಏರುಪೇರು ಉಂಟಾಗಿತ್ತು … Continued

ಹುಲಿ ಉಗುರು ವಿಚಾರದ ಹೇಳಿಕೆ : ವೈಯಕ್ತಿಕ ತೇಜೋವಧೆ ಮಾಡಿದವರ ವಿರುದ್ಧ ಎಫ್‌‌ಐಆರ್‌ ದಾಖಲಿಸಿದ ನಟ ಜಗ್ಗೇಶ

ಬೆಂಗಳೂರು: ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ ಅವರು ಇತ್ತೀಚೆಗೆ ಹುಲಿ ಉಗುರು ಹಾಕಿಕೊಂಡ ಬಗ್ಗೆ ನೀಡಿದ್ದ ಹೇಳಿಕೆಯೊಂದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆಗೆ ಗುರಿಯಾಗಿತ್ತು. ಈಗ ಜಗ್ಗೇಶ ಈ ಬಗ್ಗೆ ಎಫ್‌‌ಐಆರ್‌ ದಾಖಲಿಸಿದ್ದಾರೆ. ಗುರುಪ್ರಸಾದ ಹಾಗೂ ಜಗ್ಗೇಶ ಅವರ ಕಾಂಬಿನೇಷನ್‌ ನಲ್ಲಿ ಬರುತ್ತಿರುವ ʼರಂಗನಾಯಕʼ ಸಿನಿಮಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಾನು ಹುಲಿ ತರ … Continued

ಮಾಜಿ ಪತ್ನಿ ವಿರುದ್ಧ ಪೊಲೀಸ್ ದೂರು ನೀಡಿದ ‘ಮಹಾಭಾರತ’ ಧಾರಾವಾಹಿಯ ಶ್ರೀಕೃಷ್ಣನ ಪಾತ್ರಧಾರಿ ನಿತೀಶ ಭಾರದ್ವಾಜ

ಭೋಪಾಲ್‌ : ಜನಪ್ರಿಯ ಟಿವಿ ಧಾರಾವಾಹಿ ‘ಮಹಾಭಾರತ’ದಲ್ಲಿ ಶ್ರೀಕೃಷ್ಣನ ಪಾತ್ರ ನಿರ್ವಹಿಸಿದ ನಟ ನಿತೀಶ ಭಾರದ್ವಾಜ ಅವರು ತಮ್ಮ ಮಾಜಿ ಪತ್ನಿ ಮಧ್ಯಪ್ರದೇಶ ಕೇಡರ್ ಐಎಎಸ್ ಅಧಿಕಾರಿ ಸ್ಮಿತಾ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ. ಸ್ಮಿತಾ ತಮಗೆ ಬಹಳ ದಿನಗಳಿಂದ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿನಲ್ಲಿ ನಟ ತಿಳಿಸಿದ್ದಾರೆ. ಭೋಪಾಲ್ ಪೊಲೀಸ್ ಆಯುಕ್ತ ಹರಿನಾರಾಯಣಚಾರಿ … Continued