ಚಿನ್ನ ಕಳ್ಳ ಸಾಗಣೆ ಪ್ರಕರಣ: ನಟಿ ರನ್ಯಾ ರಾವ್‌ ಜಾಮೀನು ಅರ್ಜಿ ವಜಾ

ಬೆಂಗಳೂರು : ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್‌ ಜಾಮೀನು ಅರ್ಜಿಯನ್ನು ಆರ್ಥಿಕ ಅಪರಾಧಗಳ ಕುರಿತಾದ ವಿಶೇಷ ನ್ಯಾಯಾಲಯವು ಶುಕ್ರವಾರ ತಿರಸ್ಕರಿಸಿದೆ. ನಟಿ ರನ್ಯಾ ರಾವ್‌ ಜಾಮೀನು ಅರ್ಜಿಯ ಕಾಯ್ದಿರಿಸಿದ್ದ ಆದೇಶವನ್ನು ವಿಶೇಷ ನ್ಯಾಯಾಧೀಶರಾದ ವಿಶ್ವನಾಥ ಗೌಡರ ಶುಕ್ರವಾರ ಪ್ರಕಟಿಸಿದರು. ರನ್ಯಾ ಪ್ರತಿನಿಧಿಸಿದ್ದ ಹಿರಿಯ ವಕೀಲ ಕಿರಣ ಜವಳಿ ಅವರು “ಕಸ್ಟಮ್ಸ್‌ … Continued

ಚಿನ್ನ ಕಳ್ಳ ಸಾಗಣೆ ಪ್ರಕರಣ: ನಟಿ ರನ್ಯಾ ರಾವ್‌ ಜಾಮೀನು ಆದೇಶ ಮಾರ್ಚ್‌ 14ಕ್ಕೆ ಪ್ರಕಟ

ಬೆಂಗಳೂರು : ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್‌ ಜಾಮೀನು ಅರ್ಜಿಯ ಆದೇಶವನ್ನು ಮಾರ್ಚ್‌ 14ಕ್ಕೆ ಪ್ರಕಟಿಸುವುದಾಗಿ ಆರ್ಥಿಕ ಅಪರಾಧಗಳ ಕುರಿತಾದ ವಿಶೇಷ ನ್ಯಾಯಾಲಯವು ಬುಧವಾರ ಹೇಳಿದೆ. ನಟಿ ರನ್ಯಾ ರಾವ್‌ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ವಿಶೇಷ ನ್ಯಾಯಾಧೀಶರಾದ ವಿಶ್ವನಾಥ ಗೌಡರ ಅವರು ನಡೆಸಿದರು. ರನ್ಯಾ ಪ್ರತಿನಿಧಿಸಿದ್ದ ಹಿರಿಯ ವಕೀಲ … Continued

ಚಿನ್ನ ಕಳ್ಳ ಸಾಗಣೆ ಪ್ರಕರಣ | 15 ದಿನದಲ್ಲಿ ದುಬೈಗೆ 4 ಸಲ ಭೇಟಿ ; ಅದೇ ಬಟ್ಟೆ ಧರಿಸಿದ್ದ ನಟಿ ; ರನ್ಯಾ ರಾವ್ ಸಿಕ್ಕಿಬಿದ್ದಿದ್ದು ಹೇಗೆ…?

 ಬೆಂಗಳೂರು : ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳ್ಳ ಸಾಗಣೆ ಮಾಡುತ್ತಿದ್ದ 14.8 ಕೆಜಿ ಚಿನ್ನಾಭರಣವನ್ನು ಪತ್ತೆ ಮಾಡಿದ ನಂತರ ನಟಿ ಮತ್ತು ಹಿರಿಯ ಐಪಿಎಸ್ ಅಧಿಕಾರಿಯ ಮಲ ಪುತ್ರಿ ರನ್ಯಾ ರಾವ್ ಅವಳನ್ನು ಕಂದಾಯ ಗುಪ್ತಚರ ನಿರ್ದೇಶನಾಲಯವು ಬಂಧಿಸಿದೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅತಿದೊಡ್ಡ ಪ್ರಮಾಣದ ಚಿನ್ನಾಭರಣದ ಪ್ರಮುಖ ಕಳ್ಳಸಾಗಣೆ ದಂಧೆಯನ್ನು ಡಿಆರ್‌ಐ ಭೇದಿಸಿದ್ದಾರೆ. … Continued

ದುಬೈನಿಂದ ಚಿನ್ನ ಕಳ್ಳ ಸಾಗಾಟ ಪ್ರಕರಣ ; ಕನ್ನಡ ನಟಿ ರನ್ಯಾ ರಾವ್ ಬಂಧನ

ಬೆಂಗಳೂರು: ದುಬೈನಿಂದ ಬೆಂಗಳೂರಿಗೆ ಅಕ್ರಮ ಚಿನ್ನತಂದ ಆರೋಪದಲ್ಲಿ ಸಿನಿಮಾ ನಟಿ ರನ್ಯಾ ರಾವ್‌ ಅವರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ರನ್ಯಾ ಅವರು ದುಬೈನಿಂದ ಬೆಂಗಳೂರಿಗೆ ಮಾರ್ಚ್ 3ರ ಮಧ್ಯರಾತ್ರಿ ಆಗಮಿಸಿದ್ದರು. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಡಿಆರ್‌ಐ ಅಧಿಕಾರಿಗಳು ಮಾರ್ಚ್‌4ರಂದು ರಾತ್ರಿ ನಟಿ ರನ್ಯಾ ಅವರನ್ನು ವಶಕ್ಕೆ … Continued

ಹಿಂದಿ ಹೇರಿಕೆ ಗದ್ದಲ | ನಟಿ ರಂಜನಾ ನಾಚ್ಚಿಯಾರ್ ಬಿಜೆಪಿಗೆ ರಾಜೀನಾಮೆ ; ನಟ ವಿಜಯ ಟಿವಿಕೆ ಪಕ್ಷಕ್ಕೆ ಸೇರ್ಪಡೆ

ಚೆನ್ನೈ: ತಮಿಳುನಾಡಿನಲ್ಲಿ ಪ್ರಮುಖ ರಾಜಕೀಯ ಬದಲಾವಣೆಯಲ್ಲಿ, ನಟಿ-ರಾಜಕಾರಣಿ ರಂಜನಾ ನಾಚಿಯಾರ್ ಅವರು ಮಂಗಳವಾರ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ರಾಜೀನಾಮೆ ನೀಡಿದ್ದಾರೆ. ಹಿಂದಿ ಹೇರಿಕೆ ವಿಚಾರ ಮತ್ತು ತಮಿಳುನಾಡಿನ ಹಿತಾಸಕ್ತಿಗಳ ನಿರ್ಲಕ್ಷ್ಯ ಸೇರಿದಂತೆ ಬಿಜೆಪಿ ನೀತಿಗಳ ಬಗ್ಗೆ ಅಸಮಾಧಾನವನ್ನು ಉಲ್ಲೇಖಿಸಿ ರಾಜೀನಾಮೆ ನೀಡಿದ ಒಂದು ದಿನದ ನಂತರ, ಅವರು ಅಧಿಕೃತವಾಗಿ ತಮಿಳು ನಟ ವಿಜಯ ಅವರ … Continued

ನಟಿ ಸನ್ನಿ ಲಿಯೋನ್‌ ಹೆಸರಿನಲ್ಲಿ ಸರ್ಕಾರಿ ಯೋಜನೆಯಿಂದ ಪ್ರತಿ ತಿಂಗಳು 1000 ರೂ. ಪಡೆಯುತ್ತಿದ್ದ ವ್ಯಕ್ತಿ…!

ರಾಯಪುರ: ಛತ್ತೀಸ್‌ಗಢದಲ್ಲಿ ವಂಚಕನೊಬ್ಬ ನಟಿ ಸನ್ನಿ ಲಿಯೋನ್ ಹೆಸರಿನಲ್ಲಿ ಆನ್‌ಲೈನ್ ಖಾತೆ ತೆರೆದು ಸರ್ಕಾರದ ಯೋಜನೆಯಡಿ ಪ್ರತಿ ತಿಂಗಳು 1,000 ರೂ. ಹಣ ಪಡೆಯುವಲ್ಲಿ ಯಶಸ್ವಿಯಾಗಿದ್ದಾನೆ. ಛತ್ತೀಸ್‌ಗಢ ಸರ್ಕಾರವು ಮಹತಾರಿ ವಂದನ್ ಯೋಜನೆಯಡಿಯಲ್ಲಿ ರಾಜ್ಯದ ವಿವಾಹಿತ ಮಹಿಳೆಯರಿಗೆ ಪ್ರತಿ ತಿಂಗಳು 1,000 ರೂ. ಸಹಾಯಧನ ನೀಡುತ್ತದೆ. ಇದನ್ನು ನಟಿ ಸನ್ನಿಲಿಯೋನ್‌ ಹೆಸರಿನಲ್ಲಿ ನಕಲಿ ಖಾತೆ ತೆರದು … Continued

ಮೆಕ್ಸಿಕನ್‌ ಅಧ್ಯಾತ್ಮಿಕ ಶುದ್ಧೀಕರಣ ಆಚರಣೆ ಸಮಯದಲ್ಲಿ ಅಮೆಜಾನಿಯನ್ ಕಪ್ಪೆ ವಿಷದ ಅಂಶ ಸೇವಿಸಿದ ನಂತರ ಸಾವಿಗೀಡಾದ ನಟಿ..!

ನಂಬಿಕೆಯು ಮಹತ್ತರವಾದ ಪ್ರಾಮುಖ್ಯತೆ ಹೊಂದಿದೆ, ಆದರೆ ಅದು ತರ್ಕಬದ್ಧ ಚಿಂತನೆ ಹೊಂದಿಲ್ಲದ ಕುರುಡು ನಂಬಿಕೆಯಾದರೆ ಅದು ದುರಂತಕ್ಕೆ ಕಾರಣವಾಗಬಹುದು ಎಂಬುದಕ್ಕೆ ಈ ಘಟನೆ ಒಂದು ನಿದರ್ಶನ ಎಂದೇ ಹೇಳಬಹುದು. ಇದು ಮೆಕ್ಸಿಕನ್ ನಟಿ ಮಾರ್ಸೆಲಾ ಅಲ್ಕಾಜರ್ ರೊಡ್ರಿಗಸ್ ಅವರ ಪ್ರಕರಣವಾಗಿದೆ. ಅವರು ವಾಂತಿ ಮತ್ತು ಅತಿಸಾರದಿಂದ ಬಳಲಿದ ನಂತರ ಡಿಸೆಂಬರ್ 1 ರಂದು ತಮ್ಮ ಪ್ರಾಣವನ್ನು … Continued

ಕನ್ನಡ ಧಾರಾವಾಹಿಗಳ ಖ್ಯಾತ ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆ

ಹೈದರಾಬಾದ್ : ಕನ್ನಡದ ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ. ಅವರು ಹೈದರಾಬಾದ್‌ನ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಹಾಸನ ಮೂಲದ ಸಕಲೇಶಪುರದವರಾದ ನಟಿ ಶೋಭಿತಾ ಅವರು ಎರಡು ವರ್ಷಗಳ ಹಿಂದೆ ವಿವಾಹವಾಗಿದ್ದು, ಮದುವೆಯ ಬಳಿಕ ಹೈದರಾಬಾದ್‌ನಲ್ಲಿ ವಾಸಿಸುತ್ತಿದ್ದರು. ಶನಿವಾರ ರಾತ್ರಿ ಶೋಭಿತಾ ಅವರು ಆತ್ಮಹತ್ಯೆ … Continued

8 ತಿಂಗಳ ಗರ್ಭಿಣಿಯಾಗಿದ್ದ ನಟಿ ಹೃದಯ ಸ್ತಂಭನದಿಂದ ನಿಧನ

ಕೊಚ್ಚಿ : ಯುವ ನಟಿ ರೆಂಜೂಷಾ ಮೆನನ್ ಅವರ ಆಘಾತಕಾರಿ ಸಾವಿನ ಎರಡು ದಿನಗಳ ನಂತರ, ಮತ್ತೊಬ್ಬ ಮಲಯಾಳಂ ಕಿರುತೆರೆಯ ಯುವ ನಟಿ ಡಾ. ಪ್ರಿಯಾ ಹೃದಯ ಸ್ತಂಭನದಿಂದ ಬುಧವಾರ ನಿಧನರಾಗಿದ್ದಾರೆ. 35 ವರ್ಷದ ನಟಿ ಡಾ.ಪ್ರಿಯಾ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದಾಗ ಅವರು ಎಂಟು ತಿಂಗಳ ಗರ್ಭಿಣಿಯಾಗಿದ್ದರು. ಗಮನಾರ್ಹವಾಗಿ, ನಟಿ ಹೃದಯಾಘಾತಕ್ಕೆ ಒಳಗಾಗುವ ಮೊದಲು ಆಸ್ಪತ್ರೆಯಲ್ಲಿ … Continued