ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ ನಾಮಪತ್ರ ಸಲ್ಲಿಕೆ ; ಆಸ್ತಿ ವಿವರ ಘೋಷಣೆ : ಪತ್ನಿಯೇ ಶ್ರೀಮಂತೆ…

ಬೆಂಗಳೂರು: ಡಾ. ಸಿಎನ್ ಮಂಜುನಾಥ್ ಅವರು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಗುರುವಾರ ಅವರು ರಾಮನಗರದಲ್ಲಿ ನಾಮಪತ್ರ ಸಲ್ಲಿಸಿದರು. ನಗರದ ಚಾಮುಂಡೇಶ್ವರಿ ದೇವಾಲಯಕ್ಕೆ ಪತಿಯೊಂದಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು,. ಅವರ ಜೊತೆ ಪತ್ನಿ ಎಚ್.ಡಿ. ಅನುಸೂಯ ಹಾಗೂ ಬೆಂಬಲಿಗರು ಇದ್ದರು. ನಾಮಪತ್ರ ಸಲ್ಲಿಸುವುದಕ್ಕಿಂತ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ಡಿ. ಅನುಸೂಯ ಅವರು, ವೈದ್ಯಕೀಯ … Continued

ಮಂಡ್ಯದಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ : ಅವರ ಒಟ್ಟು ಆಸ್ತಿ ಮೌಲ್ಯ ಎಷ್ಟು ಗೊತ್ತಾ?

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಬಿಜೆಪಿ-ಜೆಡಿಎಸ್​ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಗುರುವಾರ (ಏಪ್ರಿಲ್ 04) ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಮಂಡ್ಯದಲ್ಲಿ ಬೃಹತ್​ ರೋಡ್​ಶೋ ನಡೆಸಿದ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್, ಮೈಸೂರು-ಕೊಡಗು ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ … Continued

ಟಿವಿ, ಸಿನಿಮಾದಲ್ಲಿ ತಂಬಾಕು ವಿರೋಧಿ ಎಚ್ಚರಿಕೆ ಸಂದೇಶ ಪ್ರಶ್ನಿಸಿ ಅರ್ಜಿ : ವಿಷಾದ ಸೂಚಿಸಿ ಅಫಿಡವಿಟ್ ಸಲ್ಲಿಸಲು ವಕೀಲನಿಗೆ ದೆಹಲಿ ಹೈಕೋರ್ಟ್ ಸೂಚನೆ

ನವದೆಹಲಿ: ಚಲನಚಿತ್ರಗಳು ಮತ್ತು ಟಿವಿ ಕಾರ್ಯಕ್ರಮಗಳಲ್ಲಿ ತಂಬಾಕು ವಿರೋಧಿ ಎಚ್ಚರಿಕೆ ಸಂದೇಶ ಪ್ರದರ್ಶಿಸುವುದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದ ವಕೀಲರೊಬ್ಬರನ್ನು ದೆಹಲಿ ಹೈಕೋರ್ಟ್ ಮಂಗಳವಾರ ತರಾಟೆಗೆ ತೆಗೆದುಕೊಂಡಿದ್ದು ಎರಡು ದಿನಗಳಲ್ಲಿ ವಿಷಾದ ಸೂಚಿಸಿ ಅಫಿಡವಿಟ್ ಸಲ್ಲಿಸುವಂತೆ ಸೂಚಿಸಿದೆ. ಎರಡು ದಿನಗಳಲ್ಲಿ, ಕ್ಷಮೆಯಾಚಿಸಿರುವ ಪ್ರಮಾಣಪತ್ರ ಸಲ್ಲಿಸುವಂತೆ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ಮಿನಿ ಪುಷ್ಕರ್ಣ ಅವರಿದ್ದ … Continued

ಎರಡನೇ ಪತ್ನಿ, ಪುತ್ರಿಯ ಮಾಹಿತಿ ಮುಚ್ಚಿಟ್ಟ ಆರೋಪ: ಎಚ್‌ಡಿ ಕುಮಾರಸ್ವಾಮಿ ವಿರುದ್ಧದ ದೂರು ವಜಾಗೊಳಿಸಿದ ಕೋರ್ಟ್

ಬೆಂಗಳೂರು: ಎರಡನೇ ಪತ್ನಿ ರಾಧಿಕಾ, ಪುತ್ರಿ ಶಮಿಕಾ ಮಾಹಿತಿ ಮುಚ್ಚಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧದ ದೂರನ್ನು ಬೆಂಗಳೂರು ಕೋರ್ಟ್ ವಜಾಗೊಳಿಸಿದೆ. ಎಚ್‌ ಡಿ ಕುಮಾರಸ್ವಾಮಿ ಅವರು ತಮ್ಮ ಉಮೇದುವಾರಿಕೆಯ ಜೊತೆ ತಪ್ಪು ಅಫಿಡವಿಟ್‌ ಸಲ್ಲಿಸಿದ್ದು, ಎರಡನೇ ಪತ್ನಿ ರಾಧಿಕಾ ಹಾಗೂ ಪುತ್ರ ನಿಖಿಲ್‌ ಕುಮಾರಸ್ವಾಮಿ ಹಾಗೂ ಪುತ್ರಿ ಶಮಿಕಾ … Continued

ದರ್ಶನ್ ಹೀರಾನಂದಾನಿಗೆ ಅಫಿಡವಿಟ್ ಸಹಿ ಹಾಕುವಂತೆ ಪಿಎಂಒ ಒತ್ತಡ : ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಆರೋಪ

ನವದೆಹಲಿ: ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು ಎರಡು ಪುಟಗಳ ಪತ್ರಿಕಾ ಪ್ರಕಟಣೆಯಲ್ಲಿ ಉದ್ಯಮಿ ದರ್ಶನ್ ಹಿರಾನಂದಾನಿ ಅವರ ಸ್ಫೋಟಕ ಅಫಿಡವಿಟ್‌ಗೆ ಉತ್ತರಿಸಿದ್ದಾರೆ. ಪ್ರಧಾನಿ ಕಾರ್ಯಾಲಯವು ಈಗ “ಮಾಧ್ಯಮಗಳಿಗೆ ಸೋರಿಕೆಯಾದ” ಪತ್ರಕ್ಕೆ ಸಹಿ ಹಾಕುವಂತೆ ಹಿರಾನಂದಾನಿ ಅವರನ್ನು ಒತ್ತಾಯಿಸಿದೆ ಎಂದು ಅವರು ಆರೋಪಿಸಿದ್ದಾರೆ. ತಮ್ಮ ಹೇಳಿಕೆಯಲ್ಲಿ, ಮಹುವಾ ಮೊಯಿತ್ರಾ ಅವರು ಸಂಸತ್ತಿನ ನೈತಿಕ ಸಮಿತಿ … Continued

ಚಿನ್ನ ಕಳ್ಳಸಾಗಣೆ ಪ್ರಕರಣ: ಕಸ್ಟಮ್ಸ್‌ ಅಧಿಕಾರಿಗಳ ಅಫಿಡ್‌ವಿಟ್‌ನಲ್ಲಿ ಸಿಎಂ ಪಿಣರಾಯಿ ವಿಜಯನ್‌, ಸ್ಪೀಕರ್‌ ಹೆಸರು

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಹಿಂದಿನ ಯುನೈಟೆಡ್ ಅರಬ್ ಎಮಿರೇಟ್ಸ್ ಕಾನ್ಸುಲ್ ಜನರಲ್ (ಯುಎಇ) ಯೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು ಮತ್ತು ಅಕ್ರಮ ವಿತ್ತೀಯ ವಹಿವಾಟು ನಡೆಸಿದ್ದಾರೆ ಎಂದು ಚಿನ್ನದ ಕಳ್ಳಸಾಗಣೆ ಪ್ರಕರಣದ ಪ್ರಧಾನ ಆರೋಪಿ ಸ್ವಪ್ನಾ ಸುರೇಶ್ ಹೇಳಿದ್ದಾರೆ ಎಂದು ಕಸ್ಟಮ್ಸ್ ಇಲಾಖೆ ಕೇರಳ ಹೈಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಹೇಳಿದೆ. ಆಕೆಯ ಹೇಳಿಕೆ … Continued