ಎಐಎಡಿಎಂಕೆಗೆ ಮತ್ತೆ ಆಘಾತ ; ಟಿವಿಕೆ ಸೇರಿದ 4 ಮಾಜಿ ಸಚಿವರು, 6 ಮಾಜಿ ಶಾಸಕರು

ಚೆನ್ನೈ: ತಮಿಳುನಾಡಿನಲ್ಲಿ ಎಐಎಡಿಎಂಕೆ ಪಕ್ಷದಲ್ಲಿನ ಬಿಕ್ಕಟ್ಟು ಮುಂದುವರಿದಿದೆ. ಎಐಎಡಿಎಂಕೆಗೆ (AIADMK) ಶನಿವಾರ ಮತ್ತೊಂದು ಭಾರಿ ಆಘಾತ ಎದುರಾಗಿದ್ದು, ಪಕ್ಷದ ನಾಲ್ವರು ಪ್ರಭಾವಿ ಮಾಜಿ ಸಚಿವರು ಹಾಗೂ ಮಾಜಿ ಶಾಸಕರು ಸೇರಿದಂತೆ 300ಕ್ಕೂ ಹೆಚ್ಚು ಪ್ರಮುಖ ಪದಾಧಿಕಾರಿಗಳು ಆಡಳಿತಾರೂಢ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಇದು ಎಐಎಡಿಎಂಕೆಯ ಸಾಂಸ್ಥಿಕ ಬಲವನ್ನು ಮತ್ತಷ್ಟು ಕುಗ್ಗಿಸಿದೆ. … Continued

ಎಐಎಡಿಎಂಕೆಗೆ ಮತ್ತೊಂದು ಆಘಾತ : ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಆಡಳಿತಾರೂ ಟಿವಿಕೆ ಪಕ್ಷ ಸೇರಿದ ಮೂವರು ಶಾಸಕರು !

 ಚೆನ್ನೈ: ಇತ್ತೀಚಿನ ಚುನಾವಣಾ ಸೋಲಿನ ಬೆನ್ನಲ್ಲೇ ತೀವ್ರ ಆಂತರಿಕ ಕಲಹಕ್ಕೆ ಸಿಲುಕಿರುವ ಎಐಎಡಿಎಂಕೆಗೆ (AIADMK) ಸೋಮವಾರ ಮತ್ತೊಂದು ಭಾರಿ ಆಘಾತ ಎದುರಾಗಿದೆ. ಪಕ್ಷದ ಮೂವರು ಶಾಸಕರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ತದನಂತರ ಮುಖ್ಯಮಂತ್ರಿ ವಿಜಯ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಶಾಸಕರಾದ ಮರಗತಂ ಕುಮಾರವೇಲು, ಜಯಕುಮಾರ ಮತ್ತು … Continued

ವಿಜಯ ಸರ್ಕಾರದ ಪರ ಮತ ; ಎಐಎಡಿಎಂಕೆ 25 ಶಾಸಕರನ್ನು ಪಕ್ಷದ ಹುದ್ದೆಗಳಿಂದ ಕಿತ್ತೊಗೆದ ಪಳನಿಸ್ವಾಮಿ !

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಬುಧವಾರ ನಡೆದ ನಾಟಕೀಯ ಬೆಳವಣಿಗೆಯಲ್ಲಿ, ಮುಖ್ಯಮಂತ್ರಿ ವಿಜಯ ನೇತೃತ್ವದ ಟಿವಿಕೆ (TVK) ಸರ್ಕಾರವು ವಿಧಾನಸಭೆಯಲ್ಲಿ ವಿಶ್ವಾಸಮತವನ್ನು ಭರ್ಜರಿಯಾಗಿ ಗೆದ್ದುಕೊಂಡಿದೆ. ಈ ಬೆನ್ನಲ್ಲೇ ಪ್ರತಿಪಕ್ಷ ಎಐಎಡಿಎಂಕೆಯಲ್ಲಿ (AIADMK) ಬಂಡಾಯದ ಸ್ಫೋಟಗೊಂಡಿದ್ದು, ಪಕ್ಷದ ಹಿರಿಯ ನಾಯಕರ ವಿರುದ್ಧ ಇಪಿಎಸ್ ಕಠಿಣ ಕ್ರಮ ಕೈಗೊಂಡಿದ್ದಾರೆ. ಪಕ್ಷದ ಹೈಕಮಾಂಡ್ ಸೂಚನೆಯನ್ನು ಧಿಕ್ಕರಿಸಿ ವಿಜಯ ಸರ್ಕಾರದ ಪರವಾಗಿ ಮತ … Continued

ತಮಿಳುನಾಡು : ವಿಶ್ವಾಸ ಮತ ಗೆದ್ದ ಸಿಎಂ ವಿಜಯ ; ಎಐಡಿಎಂಕೆ ಛಿದ್ರ…! 25 ಶಾಸಕರಿಂದ ವಿಜಯ ಪರ ಅಡ್ಡಮತದಾನ !!

 ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ದಶಕಗಳಿಂದ ಬೇರೂರಿದ್ದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಪಕ್ಷಗಳ 62 ವರ್ಷಗಳ ಅಧಿಪತ್ಯಕ್ಕೆ ತೆರೆಬಿದ್ದಿದೆ. ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ನಾಯಕ, ನಟ ‘ದಳಪತಿ’ ವಿಜಯ ಬುಧವಾರ ನಡೆದ ಹೈಡ್ರಾಮಾದಿಂದ ಕೂಡಿದ್ದ ವಿಶ್ವಾಸ ಮತಯಾಚನೆಯಲ್ಲಿ ಜಯಗಳಿಸುವ ಮೂಲಕ ತಮಿಳುನಾಡಿನ ವಿಧಾನಸಭೆಯಲ್ಲಿ ವಿಶ್ವಾಸಮತವನ್ನು ಗೆದ್ದಿದ್ದಾರೆ. ತಮಿಳುನಾಡು ವಿಧಾನಸಭೆಯಲ್ಲಿ ವಿಜಯ ಪರವಾಗಿ … Continued

ಎಐಎಡಿಎಂಕೆಯಲ್ಲಿ ಭುಗಿಲೆದ್ದ ಬಂಡಾಯ: ಇಪಿಎಸ್‌ ವಿರುದ್ಧ ಷಣ್ಮುಗಂ ಕಿಡಿ ; ವಿಜಯ ಸರ್ಕಾರಕ್ಕೆ ಬೆಂಬಲ ಘೋಷಣೆ !

ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಭಾರಿ ಸಂಚಲನ ಉಂಟಾಗಿದ್ದು, ಎಐಎಡಿಎಂಕೆ (AIADMK) ಪಕ್ಷದ ಒಳಗಿನ ಬಿಕ್ಕಟ್ಟು ಮಂಗಳವಾರ ತಾರಕಕ್ಕೇರಿದೆ. ಪಕ್ಷದ ಹಿರಿಯ ನಾಯಕ ಸಿ.ವಿ. ಷಣ್ಮುಗಂ ಅವರು ಎಡಪ್ಪಾಡಿ ಕೆ. ಪಳನಿಸ್ವಾಮಿ (EPS) ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದು, ನಟ ವಿಜಯ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಸರ್ಕಾರಕ್ಕೆ ಬೆಂಬಲ ಘೋಷಿಸಿದ್ದಾರೆ. ಬಂಡಾಯ ಶಾಸಕರೊಂದಿಗೆ ಸಮಾಲೋಚನಾ … Continued

ತಮಿಳುನಾಡಲ್ಲಿ ಮುಗಿಯದ ಗೊಂದಲ : ಡಿಎಂಕೆ-ಎಐಎಡಿಎಂಕೆ ಸರ್ಕಾರ ರಚನೆಗೆ ಮುಂದಾದ್ರೆ ಟಿವಿಕೆಯ 107 ಶಾಸಕರಿಂದ ರಾಜೀನಾಮೆ..?!

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ ಅತಂತ್ರ ವಿಧಾನಸಭೆ ಹಿನ್ನೆಯಲ್ಲಿ ಸರ್ಕಾರ ರಚನೆಯಲ್ಲಿ ಉಂಟಾಗಿರುವ ಬಿಕ್ಕಟ್ಟು ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ.  ಒಂದು ವೇಳೆ ಡಿಎಂಕೆ ಅಥವಾ ಎಐಎಡಿಎಂಕೆ ಅಡ್ಡಹಾದಿಯ ಮೂಲಕ ಸರ್ಕಾರ ರಚಿಸಲು ಮುಂದಾದರೆ ತನ್ನೆಲ್ಲಾ 107 ಶಾಸಕರು ಸಾಮೂಹಿಕ ರಾಜೀನಾಮೆ ನೀಡಲಿದ್ದಾರೆ ಎಂದು ರಾಜ್ಯದ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ನಟ … Continued

ರಾಜ್ಯಪಾಲರಿಗೆ ಮನವರಿಕೆಯಾಗದ ಟಿವಿಕೆ ಸಂಖ್ಯಾ ಬಲ ; ಅಧಿಕಾರಕ್ಕಾಗಿ ತಮಿಳುನಾಡಿನಲ್ಲಿ ಮುಂದುವರಿದ ಕಸರತ್ತು

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ರಾಜಕಾರಣದಲ್ಲಿ ಅನಿರೀಕ್ಷಿತ ತಿರುವುಗಳು ಕಂಡುಬರುತ್ತಿವೆ. ಚಿತ್ರರಂಗದಿಂದ ರಾಜಕೀಯಕ್ಕೆ ಪದಾರ್ಪಣೆ ಮಾಡಿ ಮೊದಲ ಚುನಾವಣೆಯಲ್ಲೇ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ನಟ ವಿಜಯ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ)ಪಕ್ಷವು ಸರಳ ಬಹುಮತದ ಸಮೀಪ ಬಂದಿದ್ದರೂ ಸರ್ಕಾರ ರಚಿಸಲು ಅಗತ್ಯವಿರುವ ಮ್ಯಾಜಿಕ್ ನಂಬರ್ ತಲುಪಲು ಹೆಣಗಾಡುತ್ತಿದೆ. ಏಪ್ರಿಲ್ … Continued

ಪಶ್ಚಿಮ ಬಂಗಾಳದಲ್ಲಿ ಭರ್ಜರಿ ಜಯದತ್ತ ಬಿಜೆಪಿ, ತಮಿಳುನಾಡಿನಲ್ಲಿ ವಿಜಯ ಕಮಾಲ್‌, ಕೇರಳದ ಕಾಂಗ್ರೆಸ್ಸಿಗೆ ಜೈ, ಅಸ್ಸಾಂನಲ್ಲಿ ಬಿಜೆಪಿ ಮುನ್ನಡೆ

ನವದೆಹಲಿ: ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ತಮಿಳುನಾಡು ಮತ್ತು ಪುದುಚೇರಿಯಲ್ಲಿ ನಡೆದ 2026 ರ ವಿಧಾನಸಭಾ ಚುನಾವಣೆಗಳ ಮತ ಎಣಿಕೆ ಆರಂಭವಾಗಿದೆ.  4 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶದ ರಾಜಕೀಯ ದಿಕ್ಕನ್ನು ಸೂಚಿಸುವ ಆರಂಭಿಕ ಟ್ರೆಂಡ್‌ಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯು ಆಡಳಿತಾರೂಢ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಯನ್ನು ಹಿಂದಿಕ್ಕಿ ಅಧಿಕಾರದತ್ತ ದಾಪುಗಾಲು ಇಡುತ್ತಿರುವುದು ಕಂಡುಬಂದಿದೆ.  … Continued

ಚುನಾವಣೆ : ತಮಿಳುನಾಡು, ಕೇರಳ, ಅಸ್ಸಾಂನಲ್ಲಿ ಗೆಲ್ಲುವುದು ಯಾರು..? ಎಕ್ಸಿಟ್‌ ಪೋಲ್‌ ಹೇಳುವುದೇನು..?

ನವದೆಹಲಿ: ತಮಿಳುನಾಡು, ಕೇರಳ ಮತ್ತು ಅಸ್ಸಾಂ ವಿಧಾನಸಭಾ ಚುನಾವಣೆಗಳ ಮಹಾ ಸಮರ ಮುಕ್ತಾಯಗೊಂಡಿದೆ. ಮತಯಂತ್ರಗಳಲ್ಲಿ ಭದ್ರವಾಗಿದ್ದ ಅಭ್ಯರ್ಥಿಗಳ ಭವಿಷ್ಯದ ಸುಳಿವು ನೀಡುವ ‘ಎಕ್ಸಿಟ್ ಪೋಲ್’ಗಳು (ಮತಗಟ್ಟೆ ಸಮೀಕ್ಷೆ) ಇದೀಗ ಹೊರಬಿದ್ದಿದೆ. ತಮಿಳುನಾಡಿನಲ್ಲಿ ಡಿಎಂಕೆಯ ಭದ್ರಕೋಟೆಗೆ ನಟ ವಿಜಯ ಸವಾಲಾಗಲಿದ್ದಾರೆಯೇ? ಕೇರಳದಲ್ಲಿ ದಶಕಗಳ ಕಾಲ ನಡೆದಿದ್ದ ಅಧಿಕಾರ ಬದಲಾವಣೆಯ ಸಂಪ್ರದಾಯ ಮರಳಿ ಬರಲಿದೆಯೇ?  ಅಸ್ಸಾಂನಲ್ಲಿ ಬಿಜೆಪಿಯ ಅಶ್ವಮೇಧ … Continued

ತಮಿಳುನಾಡು ಚುನಾವಣೆ 2026 : ಎನ್‌ಡಿಎ-ಡಿಎಂಕೆ ನಡುವಿನ ಜಿದ್ದಾಜಿದ್ದಿಯಲ್ಲಿ ಗೆಲ್ಲೋದು ಯಾರು ; ‘ಮ್ಯಾಟ್ರಿಜ್’ ಸಮೀಕ್ಷೆ ಹೇಳಿದ್ದೇನು ?

ಚೆನ್ನೈ: 2026ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಕಣ ಸಜ್ಜಾಗುತ್ತಿದ್ದು,  ಆಡಳಿತಾರೂಢ ಡಿಎಂಕೆ ನೇತೃತ್ವದ ‘ಇಂಡಿಯಾ’ ಮೈತ್ರಿಕೂಟ ಹಾಗೂ ಎಐಎಡಿಎಂಕೆ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ನಡುವೆ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆಯಿದೆ ಎಂದು ‘ಮ್ಯಾಟ್ರಿಜ್’ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆಯು ಮುನ್ಸೂಚನೆ ನೀಡಿದೆ. ಸೋಮವಾರ ಪ್ರಕಟವಾದ ಈ ಸಮೀಕ್ಷಾ ವರದಿಯು, ಎಐಎಡಿಎಂಕೆ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಅಲ್ಪ … Continued