ರಾಹುಲ್ ಗಾಂಧಿ ಪೌರತ್ವ ವಿವಾದ: ಅರ್ಜಿದಾರರ ನಡವಳಿಕೆಗೆ ಅಲಹಾಬಾದ್ ಹೈಕೋರ್ಟ್ ತರಾಟೆ; ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿಗಳು

ಲಕ್ನೋ: ಲೋಕಸಭೆಯ ವಿಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬ್ರಿಟಿಷ್ ಪೌರತ್ವದ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸುವಂತೆ ಕೋರಿ ಬಿಜೆಪಿ ಕಾರ್ಯಕರ್ತರೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ವೇಳೆ, ಅಲಹಾಬಾದ್ ಹೈಕೋರ್ಟ್ ಸೋಮವಾರ ಅರ್ಜಿದಾರರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನ್ಯಾಯಾಲಯದ ಕಾರ್ಯವೈಖರಿಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳನ್ನು ಹಾಕುವ ಮೂಲಕ ನ್ಯಾಯಾಲಯದ ಘನತೆಗೆ ಚ್ಯುತಿ ತರಲಾಗಿದೆ … Continued

ರಾಹುಲ್ ಗಾಂಧಿಗೆ ಸಂಕಷ್ಟ : ಬ್ರಿಟಿಷ್ ಪೌರತ್ವ ಆರೋಪ ; ಎಫ್‌ಐಆರ್ ದಾಖಲಿಸಲು ಅಲಹಾಬಾದ್ ಹೈಕೋರ್ಟ್ ಆದೇಶ

ಲಕ್ನೋ : ಲೋಕಸಭೆಯ ವಿಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ದೊಡ್ಡ ಸಂಕಷ್ಟ ಎದುರಾಗಿದೆ. ರಾಹುಲ್ ಗಾಂಧಿ ಅವರು ಬ್ರಿಟಿಷ್ ಪ್ರಜೆಯಾಗಿದ್ದು, ಬ್ರಿಟನ್ ಪಾಸ್‌ಪೋರ್ಟ್ ಹೊಂದಿದ್ದಾರೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಅಲಹಾಬಾದ್ ಹೈಕೋರ್ಟ್ ಶುಕ್ರವಾರ ಮಹತ್ವದ ಆದೇಶ ನೀಡಿದೆ. ಅಲಹಾಬಾದ್ ಹೈಕೋರ್ಟ್‌ನ ಏಕಸದಸ್ಯ ಪೀಠದ ನ್ಯಾಯಮೂರ್ತಿ … Continued

ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ ವರ್ಮಾ ರಾಜೀನಾಮೆ

ನವದೆಹಲಿ: ಭ್ರಷ್ಟಾಚಾರದ ಆರೋಪದ ಮೇಲೆ ವಜಾಗೊಳಿಸುವ ಪ್ರಕ್ರಿಯೆಯನ್ನು (Impeachment) ಎದುರಿಸುತ್ತಿರುವ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ ವರ್ಮಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಳೆದ ವರ್ಷ ದೆಹಲಿಯ ಅವರ ನಿವಾಸದಲ್ಲಿ ಭಾರಿ ಪ್ರಮಾಣದ ನಗದು ಪತ್ತೆಯಾದ ನಂತರ ವರ್ಮಾ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದ ರಾಜೀನಾಮೆ ಪತ್ರದಲ್ಲಿ ನ್ಯಾಯಮೂರ್ತಿ … Continued

ಸಹೋದರನ ಕೊಲೆ ಮಾಡಿ ಧರ್ಮ, ಹೆಸರು ಬದಲಿಸಿಕೊಂಡು 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅಪರಾಧಿ ಕೊನೆಗೂ ಅಂದರ್…!

ಬರೇಲಿ (ಉತ್ತರ ಪ್ರದೇಶ): ಕಾಲ ಮತ್ತು ದಾಖಲೆಗಳಿಗೆ ಒಂದು ಸಾಮ್ಯತೆ ಇದೆ – ಅವು ಏನನ್ನೂ ಮರೆಯುವುದಿಲ್ಲ. ಉತ್ತರ ಪ್ರದೇಶದ ಬರೇಲಿಯ ಪ್ರದೀಪ ಸಕ್ಸೇನಾ ಎಂಬಾತ ತನ್ನ ಸಹೋದರನ ಕೊಲೆಗಾಗಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ 36 ವರ್ಷಗಳ ಹಿಂದೆ ಪೊಲೀಸ್ ಬಲೆಯಿಂದ ತಪ್ಪಿಸಿಕೊಂಡಿದ್ದ. ಪೊಲೀಸರಿಂದ ಪಾರಾಗಲು ತನ್ನ ಧರ್ಮ, ಹೆಸರು ಮತ್ತು ರೂಪವನ್ನು ಬದಲಾಯಿಸಿಕೊಂಡರೂ, 36 … Continued

ಭಾರತದಲ್ಲಿ ಸಿಖ್ಖರ ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ಅಮೆರಿಕದಲ್ಲಿ ಹೇಳಿಕೆ ; ರಾಹುಲ್‌ ಗಾಂಧಿ ಅರ್ಜಿ ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್

ಲಕ್ನೋ: ಅಮೆರಿಕ ಪ್ರವಾಸದ ವೇಳೆ ಸಿಖ್ಖರ ಬಗ್ಗೆ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಅವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ವಾರಾಣಸಿ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಇಂದು, ಶುಕ್ರವಾರ ವಜಾಗೊಳಿಸಿದೆ. ವಾರಾಣಸಿ ನ್ಯಾಯಾಲಯದ ಆದೇಶವು ಕಳೆದ ವರ್ಷ ಅಮೆರಿಕದಲ್ಲಿ ರಾಹುಲ್ ಗಾಂಧಿಭಾರತದಲ್ಲಿ ಸಿಖ್ಖರ ಧಾರ್ಮಿಕ ಸ್ವಾತಂತ್ರ್ಯದ … Continued

ರಾಹುಲ್ ಗಾಂಧಿ ಅರ್ಜಿ ತೀರ್ಪು ಕಾಯ್ದಿರಿಸಿದ ಅಲಾಹಾಬಾದ್ ಹೈಕೋರ್ಟ್

ಪ್ರಯಾಗರಾಜ: ಅಮೆರಿಕಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ರಾಹುಲ್‌ ಗಾಂಧಿ ಅವರು ಭಾರತದ ಸಿಖ್ಖರಲ್ಲಿ ಅಭದ್ರತೆಯ ಭಾವನೆಯಿದೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ವಾರಾಣಸಿ ನ್ಯಾಯಾಲಯ ನೀಡಿದ್ದ ಆದೇಶ ಪ್ರಶ್ನಿಸಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಅಲಾಹಾಬಾದ್‌ ಹೈಕೋರ್ಟ್‌ ಬುಧವಾರ ಕಾಯ್ದಿರಿಸಿದೆ. ರಾಹುಲ್ ಗಾಂಧಿ ಹೇಳಿಕೆಗಾಗಿ ಎಫ್ಐಆರ್ ದಾಖಲಿಸುವಂತೆ ಕೋರಿ ನಾಗೇಶ್ವರ ಮಿಶ್ರಾ … Continued

‘ಚೀನಾ ಭಾರತದ 2 ಸಾವಿರ ಚದರ ಕಿಮೀ ಕಬಳಿಸಿದೆ ಎಂದು ನಿಮಗೆ ಹೇಗೆ ಗೊತ್ತು’: ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ: 2020 ರ ಗಾಲ್ವಾನ್ ಕಣಿವೆಯಲ್ಲಿ ಚೀನಾ ಜೊತೆಗಿನ ಘರ್ಷಣೆಯ ಸಂದರ್ಭದಲ್ಲಿ ಭಾರತೀಯ ಸೇನೆಯ ಬಗ್ಗೆ ವಿಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನೀಡಿರುವ ಹೇಳಿಕೆಗಳಿಗೆ ಸಂಬಂಧಿಸಿದಂತೆ ಅವರ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ (ಆಗಸ್ಟ್ 4) ತಡೆ ನೀಡಿದೆ. ರಾಹುಲ್‌ ಗಾಂಧಿಗೆ ಮಧ್ಯಂತರ ತಡೆ ನೀಡಲಾಗಿದ್ದರೂ, ವಿಚಾರಣೆಯ ಸಮಯದಲ್ಲಿ, … Continued

ಸಾವರ್ಕರ್‌ ಕುರಿತ ಹೇಳಿಕೆ: ರಾಹುಲ್‌ ವಿರುದ್ಧದ ಸಮನ್ಸ್ ರದ್ದುಪಡಿಸಲು ನಿರಾಕರಿಸಿದ ಅಲಾಹಾಬಾದ್‌ ಹೈಕೋರ್ಟ್‌

ಲಕ್ನೋ : ವಿನಾಯಕ ದಾಮೋದರ್ ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಸಮನ್ಸ್ ಜಾರಿ ಮಾಡಿದ್ದ ಸತ್ರ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಲು ಅಲಹಾಬಾದ್ ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ. ಅಪರಾಧ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 397 (ಕೆಳ ನ್ಯಾಯಾಲಯದ ದಾಖಲೆಗಳ ಪರಿಶೀಲನೆ) ಅಡಿಯಲ್ಲಿ ಸತ್ರ ನ್ಯಾಯಾಲಯದ ಕದತಟ್ಟಲು ರಾಹುಲ್‌ … Continued

ನ್ಯಾಯಮೂರ್ತಿ ಯಶವಂತ ವರ್ಮಾ ಅಲಹಾಬಾದ್ ಹೈಕೋರ್ಟ್‌ ಗೆ ವರ್ಗಾವಣೆ

ನವದೆಹಲಿ: ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ ವರ್ಮಾ ಅವರನ್ನು ಅವರ ಮೂಲ ಹೈಕೋರ್ಟ್‌ ಆದ ಅಲಹಾಬಾದ್ ಹೈಕೋರ್ಟಿಗೆ ವರ್ಗಾವಣೆ ಮಾಡಿ ಕೇಂದ್ರ ಸರ್ಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ. ಇದೇ ವೇಳೆ ಅವರಿಗೆ ನ್ಯಾಯಾಂಗ ಕಾರ್ಯ ವಹಿಸದಂತೆ ಅಲಾಹಾಬಾದ್‌ ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್‌ ಸೂಚಿಸಿದೆ. ಮಾರ್ಚ್ 24 ರಂದು ಸುಪ್ರೀಂ ಕೋರ್ಟ್ ಕೊಲಿಜಿಯಂ ಮಾಡಿದ ಶಿಫಾರಸಿನ ಮೇರೆಗೆ … Continued

ಅಲಾಹಾಬಾದ್‌ ಹೈಕೋರ್ಟಿಗೆ ನ್ಯಾಯಮೂರ್ತಿ ವರ್ಮಾ ವರ್ಗಾವಣೆ ಮಾಡಲು ಕೊಲಿಜಿಯಂ ನಿರ್ಧಾರ

ನವದೆಹಲಿ : ದೆಹಲಿ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ ವರ್ಮಾ ಅವರನ್ನು ಮರಳಿ ಅವರ ಮಾತೃ ಸಂಸ್ಥೆಯಾದ ಅಲಹಾಬಾದ್‌ ಹೈಕೋರ್ಟ್‌ಗೆ ವರ್ಗಾಯಿಸಲು ಸುಪ್ರೀಂ ಕೋರ್ಟ್‌ ಕೊಲಿಜಿಯಂ ನಿರ್ಧರಿಸಿದೆ. ನ್ಯಾಯಮೂರ್ತಿ ವರ್ಮಾ ಅವರ ಮನೆಯಲ್ಲಿ ಅಗ್ನಿಶಾಮಕ ದಳ ಬೆಂಕಿ ನಂದಿಸುವಾಗ ಸುಟ್ಟ ನೋಟಿನ ಕಂತೆಗಳು ಪತ್ತೆಯಾದ ನಂತರ ಸುಪ್ರೀಂ ಕೋರ್ಟ್‌ ಕೊಲಿಜಿಯಂ ಈ ನಿರ್ಧಾರ ಕೈಗೊಂಡಿದೆ. ಮಾರ್ಚ್‌ 20 … Continued