ರಾಹುಲ್ ಪೌರತ್ವ ವಿವಾದ : ಡಿ.19ರೊಳಗೆ ನಿರ್ಧಾರ ಕೈಗೊಳ್ಳುವಂತೆ ಕೇಂದ್ರಕ್ಕೆ ಸೂಚಿಸಿದ ಅಲಾಹಾಬಾದ್ ಹೈಕೋರ್ಟ್

ಲಕ್ನೋ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತೀಯ ಪೌರತ್ವ ಪ್ರಶ್ನಿಸಿ ನಾಗರಿಕರೊಬ್ಬರು ಬರೆದಿರುವ ಪತ್ರದ ಕುರಿತು ಶೀಘ್ರ ನಿರ್ಧಾರ ತೆಗೆದುಕೊಳ್ಳುವಂತೆ ಅಲಾಹಾಬಾದ್ ಹೈಕೋರ್ಟ್ ಕೇಂದ್ರ ಗೃಹ ಸಚಿವಾಲಯಕ್ಕೆ ಸೂಚಿಸಿದೆ. ಡಿಸೆಂಬರ್ 19ರಂದು ಪತ್ರದ ಕುರಿತು ತೆಗೆದುಕೊಳ್ಳಲಾದ ನಿರ್ಧಾರದ ಬಗ್ಗೆ ಸರ್ಕಾರವು ನ್ಯಾಯಾಲಯಕ್ಕೆ ತಿಳಿಸಬೇಕು ಎಂದು ನ್ಯಾಯಮೂರ್ತಿ ಅತ್ತೌ ರೆಹಮಾನ್ ಮಸೂದಿ ಮತ್ತು ನ್ಯಾಯಮೂರ್ತಿ … Continued

ರಾಹುಲ್ ಗಾಂಧಿ ಪೌರತ್ವ : ಗೃಹ ಸಚಿವಾಲಯದ ಪ್ರತಿಕ್ರಿಯೆ ಕೇಳಿದ ಅಲಹಾಬಾದ್ ಹೈಕೋರ್ಟ್

ಲೋಕಸಭೆ ವಿಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಬ್ರಿಟಿಷ್ ಪೌರತ್ವ ಪಡೆದಿದ್ದಾರೆ ಎಂದು ಪ್ರತಿಪಾದಿಸಿದ್ದ ಮನವಿಯ ಕುರಿತಾಗಿ ಗೃಹ ಸಚಿವಾಲಯದಿಂದ ವಿವರಗಳನ್ನು ಪಡೆಯುವಂತೆ ಅಲಹಾಬಾದ್ ಹೈಕೋರ್ಟ್ ಬುಧವಾರ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಸೂರ್ಯಭಾನ್ ಪಾಂಡೆ ಅವರಿಗೆ ಈ ಸಂಬಂಧ ಗೃಹ ಸಚಿವಾಲಯದಿಂದ ವಿವರಗಳನ್ನು ಪಡೆಯುವಂತೆ ನ್ಯಾಯಮೂರ್ತಿಗಳಾದ ರಾಜನ್ ರಾಯ್ ಮತ್ತು … Continued

ಸುಲ್ತಾನಪುರ ಸಂಸದ ನಿಶಾದ್‌ ಆಯ್ಕೆ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಮೇನಕಾ ಗಾಂಧಿ

ಲಕ್ನೋ : ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ಸುಲ್ತಾನಪುರ ಕ್ಷೇತ್ರದಿಂದ ಆಯ್ಕೆಯಾಗಿರುವ ಸಮಾಜವಾದಿ ಪಕ್ಷದ ಸಂಸದ ರಾಮ ಭುವಲ್‌ ನಿಶಾದ್‌ ಅವರ ಆಯ್ಕೆ ಸಿಂಧುತ್ವ ಪ್ರಶ್ನಿಸಿ ಬಿಜೆಪಿಯ ಮಾಜಿ ಸಂಸದೆ ಮೇನಕಾ ಗಾಂಧಿ ಅಲಹಾಬಾದ್‌ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ನಿಶಾದ್ ವಿರುದ್ಧ 43,174 ಮತಗಳ ಅಂತರದಿಂದ ಸೋತ ಮೇನಕಾ ಗಾಂಧಿ ಅವರು ಶನಿವಾರ ನ್ಯಾಯಾಲಯದ ನೋಂದಣಿಗೆ ಚುನಾವಣಾ … Continued

ಧಾರ್ಮಿಕ ಸಭೆಗಳಲ್ಲಿ ಮತಾಂತರ ಮುಂದುವರೆದರೆ ಬಹುಸಂಖ್ಯಾತರು ಅಲ್ಪಸಂಖ್ಯಾತರಾಗುತ್ತಾರೆ: ಅಲಾಹಾಬಾದ್ ಹೈಕೋರ್ಟ್

ಲಕ್ನೋ : ಧಾರ್ಮಿಕ ಸಭೆಗಳಲ್ಲಿ ಮತಾಂತರಕ್ಕೆ ತಡೆ ಒಡ್ಡದಿದ್ದರೆ ಮುಂದೊಂದು ದಿನ ದೇಶದ ಬಹುಸಂಖ್ಯಾತರು ಅಲ್ಪಸಂಖ್ಯಾತರಾಗುತ್ತಾರೆ ಎಂದು ಅಲಾಹಾಬಾದ್‌ ಹೈಕೋರ್ಟ್‌ ಸೋಮವಾರ ಹೇಳಿದೆ. ಉತ್ತರ ಪ್ರದೇಶ ಕಾನೂನುಬಾಹಿರ ಧರ್ಮ ಪರಿವರ್ತನೆ ಕಾಯಿದೆ, 2021ರ ಅಡಿಯಲ್ಲಿ ಆರೋಪಿಯ ಜಾಮೀನು ಅರ್ಜಿ ವಜಾಗೊಳಿವಾಗ ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್ವಾಲ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿದ್ದ “ಕ್ಷೇಮ” ಕೂಟಕ್ಕೆ … Continued

ಮುಸ್ಲಿಂ ಪಕ್ಷಕ್ಕೆ ಕೋರ್ಟ್ ಹಿನ್ನಡೆ : ಜ್ಞಾನವಾಪಿ ಮಸೀದಿಯಲ್ಲಿ ಹಿಂದೂಗಳ ಪೂಜೆಗೆ ಅವಕಾಶ ಪ್ರಶ್ನಿಸಿದ್ದ ಅರ್ಜಿ ತಿರಸ್ಕರಿಸಿದ ಅಲಾಹಾಬಾದ್‌ ಹೈಕೋರ್ಟ್‌

ಲಕ್ನೋ : ವಾರಾಣಸಿಯ ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯೊಂದರಲ್ಲಿ ಹಿಂದೂ ಪ್ರಾರ್ಥನೆಯನ್ನು ನಿಲ್ಲಿಸಿದ ಮುಲಾಯಂ ಸಿಂಗ್ ಸರ್ಕಾರವು 1993 ರ ಕ್ರಮವನ್ನು “ಕಾನೂನುಬಾಹಿರ” ಎಂದು ಅಲಹಾಬಾದ್ ಹೈಕೋರ್ಟ್ ಇಂದು, ಸೋಮವಾರ ಹೇಳಿದೆ. ಹಾಗೂ 30 ವರ್ಷಗಳ ನಂತರ ಪ್ರಾರ್ಥನೆ ಪುನರಾರಂಭಿಸಲು ಅನುಮತಿ ನೀಡಿದ ಜಿಲ್ಲಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಮುಸ್ಲಿಂ ಪಕ್ಷಕಾರರು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದೆ. ನ್ಯಾಯಮೂರ್ತಿ … Continued

ಕಾಶಿ ಜ್ಞಾನವಾಪಿ ಮಸೀದಿ ನೆಲಮಾಳಿಗೆಯಲ್ಲಿ ಹಿಂದೂಗಳ ಪ್ರಾರ್ಥನೆಗೆ ಅನುಮತಿಸಿದ್ದ ಆದೇಶಕ್ಕೆ ಮಧ್ಯಂತರ ತಡೆ ನೀಡಲು ಅಲಾಹಾಬಾದ್‌ ಹೈಕೋರ್ಟ್‌ ನಕಾರ

ಲಕ್ನೋ: ವಾರಾಣಸಿಯ ಜ್ಞಾನವಾಪಿ ಮಸೀದಿಯ ದಕ್ಷಿಣದ ನೆಲಮಾಳಿಗೆಯಲ್ಲಿ ಹಿಂದೂ ಪಕ್ಷಕಾರರಿಗೆ ಪ್ರಾರ್ಥನೆ ಮತ್ತು ಪೂಜೆ ನಡೆಸಲು ಅವಕಾಶ ನೀಡಿದ ಜಿಲ್ಲಾ ನ್ಯಾಯಾಲಯದ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಲು ಅಲಹಾಬಾದ್ ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ. ಜಿಲ್ಲಾ ನ್ಯಾಯಾಲಯದ ಜನವರಿ 31ರ ಆದೇಶವನ್ನು ಜಾರಿಗೊಳಿಸಿದ ಪರಿಣಾಮವಾಗಿ ಜನವರಿ 17ರ ಆದೇಶಕ್ಕೆ ಈ ಸವಾಲನ್ನು ಸೇರಿಸಿ ಮುಸ್ಲಿಂ ಪಕ್ಷಕಾರರಿಗೆ (ಜಿಲ್ಲಾ … Continued

ಅಯೋಧ್ಯಾ ರಾಮ ಮಂದಿರ : ಜನವರಿ 22 ರಂದು ‘ಪ್ರಾಣ ಪ್ರತಿಷ್ಠೆ’ ಕಾರ್ಯಕ್ರಮಕ್ಕೆ ತಡೆ ಕೋರಿ ಅಲಹಾಬಾದ್ ಹೈಕೋರ್ಟ್‌ನಲ್ಲಿ ಅರ್ಜಿ

ಪ್ರಯಾಗರಾಜ್‌ : ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದಲ್ಲಿ ಜನವರಿ 22 ರಂದು ರಾಮಲಲ್ಲಾ ವಿಗ್ರಹ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ನಿಷೇಧಿಸುವಂತೆ ಕೋರಿ ಅಲಾಹಾಬಾದ್ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ. ಉತ್ತರ ಪ್ರದೇಶದ ಗಾಜಿಯಾಬಾದ್ ನಿವಾಸಿ ಭೋಲಾ ದಾಸ್ ಎಂಬುವವರು ಅರ್ಜಿ ಸಲ್ಲಿಸಿದ್ದಾರೆ. 2024ರ ಜನವರಿ 22ರಂದು ಅಯೋಧ್ಯೆಯಲ್ಲಿ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿದೆ. … Continued

ಕೃಷ್ಣ ಜನ್ಮಭೂಮಿ ವಿವಾದ: ಸದ್ಯಕ್ಕೆ ಮಥುರಾ ಶಾಹಿ ಈದ್ಗಾ ಸಮೀಕ್ಷೆ ಇಲ್ಲ ; ಕೋರ್ಟ್‌ ಕಮಿಷನರ್‌ ನೇಮಕ ಆದೇಶಕ್ಕೆ ಸುಪ್ರೀಂಕೋರ್ಟ್‌ ತಡೆ

ನವದೆಹಲಿ: ಉತ್ತರ ಪ್ರದೇಶದ ಮಥುರಾದಲ್ಲಿರುವ ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಸಂಕೀರ್ಣದ ಸಮೀಕ್ಷೆ ನಡೆಸಲು ಅಡ್ವೊಕೇಟ್ ಕಮಿಷನ್ ನೇಮಕಕ್ಕೆ ಅನುಮತಿ ನೀಡಿದ ಅಲಹಾಬಾದ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಡೆಹಿಡಿದಿದೆ. ಹೈಕೋರ್ಟ್‌ ಪ್ರಕರಣದ ವಿಚಾರಣೆ ಮುಂದುವರೆಸಬಹುದಾದರೂ ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸುವವರೆಗೆ ಕೋರ್ಟ್‌ ಕಮಿಶನ್ ನೇಮಕ ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ … Continued

ಮಥುರಾ ಶ್ರೀಕೃಷ್ಣ ಜನ್ಮಭೂಮಿ ಪ್ರಕರಣ: ಶಾಹಿ ಈದ್ಗಾ ಸಂಕೀರ್ಣದ ಸರ್ವೆ ನಡೆಸಲು ಅಲಹಾಬಾದ್ ಹೈಕೋರ್ಟ್ ಅನುಮತಿ

ಪ್ರಯಾಗರಾಜ್‌ : ಶ್ರೀಕೃಷ್ಣ ಜನ್ಮಭೂಮಿ ಪ್ರಕರಣದ ಪ್ರಮುಖ ಬೆಳವಣಿಗೆಯಲ್ಲಿ, ಅಲಹಾಬಾದ್ ಹೈಕೋರ್ಟ್ ಗುರುವಾರ ಮಥುರಾದ ಶಾಹಿ ಈದ್ಗಾ ಸಂಕೀರ್ಣದ ಸರ್ವೆ ನಡೆಸಲು ಅನುಮೋದನೆ ನೀಡಿದೆ. ಹಿಂದೂಪರ ಸಂಘಟನೆಗಳು ಸಲ್ಲಿಸಿದ್ದ ಮನವಿಯನ್ನು ಸ್ವೀಕರಿಸಿರುವ ಅಲಹಾಬಾದ್ ಹೈಕೋರ್ಟ್ ವಿವಾದಿತ ಶಾಹಿ ಈದ್ಗಾ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆ ನಡೆಸಲು ಅನುಮತಿ ನೀಡಿದೆ. ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ … Continued

ನಿತಾರಿ ಹತ್ಯೆ : ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಸುರೇಂದ್ರ ಕೋಲಿಯನ್ನು 12 ಪ್ರಕರಣಗಳಲ್ಲಿ, ಮೊನೀಂದರ್ ಪಂಧೇರನನ್ನು 2 ಪ್ರಕರಣಗಳಲ್ಲಿ ಖುಲಾಸೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ಅಲಹಾಬಾದ್‌ : ನೋಯ್ಡಾದಲ್ಲಿ 2005-2006ರಲ್ಲಿ ನಡೆದ ನಿಥಾರಿ ಹತ್ಯೆಗಳಿಗೆ ಸಂಬಂಧಿಸಿದ ಕೆಲವು ಪ್ರಕರಣಗಳಲ್ಲಿ ಆರೋಪಿ ಮೊನಿಂದರ್ ಸಿಂಗ್ ಪಂಧೇರ್ ಮತ್ತು ಅವರ ಮನೆಯ ಸಹಾಯಕ ಸುರೇಂದ್ರ ಕೋಲಿ ಅವರನ್ನು ಅಲಹಾಬಾದ್ ಹೈಕೋರ್ಟ್ ಸೋಮವಾರ ಖುಲಾಸೆಗೊಳಿಸಿದೆ, ಈ ಪ್ರಕರಣಗಳಲ್ಲಿ ಈ ಹಿಂದೆ ವಿಚಾರಣಾ ನ್ಯಾಯಾಲಯವು ಅವರಿಗೆ ಮರಣದಂಡನೆ ವಿಧಿಸಿತ್ತು. ಗಮನಾರ್ಹವಾಗಿ, ನ್ಯಾಯಾಲಯವು ಕೋಲಿಯನ್ನು 12 ಪ್ರಕರಣಗಳಲ್ಲಿ ಮತ್ತು … Continued