ನಮ್ಮದೇ ನಿಜವಾದ ಜೆಡಿಎಸ್ : ಯಾವ ಕಾರಣಕ್ಕೂ ಎನ್‌ಡಿಎ ಮೈತ್ರಿಕೂಟದ ಜೊತೆ ಹೋಗಲ್ಲ : ಸಿ.ಎಂ.ಇಬ್ರಾಹಿಂ

ಬೆಂಗಳೂರು : ಲೋಕಸಭೆ ಚುಣಾವಣೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರು ಈಗ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರಿಗೇ ಸಡ್ಡು ಹೊಡೆದಿದ್ದಾರೆ. ನಮ್ಮದೇ ಅಸಲಿ ಜೆಡಿಎಸ್. ನಾವು ಯಾವುದೇ ಕಾರಣಕ್ಕೂ ಎನ್‌ಡಿಎ ಮೈತ್ರಿಕೂಟದ ಜೊತೆ ಹೋಗುವುದಿಲ್ಲ ಎಂದು ಸಿಎಂ … Continued

ಠೇವಣಿ ಕಳೆದುಕೊಳ್ಳಲು ನಿಮಗೆ ಸ್ಥಾನ ನೀಡಬೇಕೇ: ಕಾಂಗ್ರೆಸ್ ವಿರುದ್ಧ ಲಾಲೂ ಗರಂ

ಪಾಟ್ನಾ: ಪ್ರಮುಖ ಮಿತ್ರಪಕ್ಷ ಕಾಂಗ್ರೆಸ್ಸಿನ ಬಲವನ್ನೇ ಪ್ರಶ್ನಿಸಿರುವ ಆರ್‌ಜೆಡಿ ಅಧ್ಯಕ್ಷ ಲಾಲೂ ಪ್ರಸಾದ್ ಯಾದವ್, “ನಿಮಗೆ ಸೋಲಲು ಅಥವಾ ಠೇವಣಿ ಕಳೆದುಕೊಳ್ಳಲು ವಿಧಾನಸಭೆ ಸ್ಥಾನಗಳನ್ನು ಬಿಟ್ಟುಕೊಡಬೇಕೇ” ಎಂದು ಮಾರ್ಮಿಕವಾಗಿ ಪ್ರಶ್ನಿಸಿದ್ದಾರೆ. ಬಿಹಾರದ ಎಐಸಿಸಿ ಉಸ್ತುವಾರಿ ಭಕ್ತ ಚರಣ್ ದಾಸ್ ಅವರನ್ನು ಅವಿವೇಕಿ ಎಂದು ಲಾಲೂ ಕರೆದಿರುವುದಕ್ಕೆ ಕಾಂಗ್ರೆಸ್ ಪಕ್ಷದಿಂದ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ಅಲ್ಲದೆ ಎನ್‌ಡಿಎ ಒಕ್ಕೂಟದಿಂದಲೂ … Continued