ಮದುವೆಗೆ ಮುಂಚೆ ಮದುಮಗ ನಾಪತ್ತೆ, ಪೊಲೀಸರು ಹುಡುಕಿದ ನಂತ್ರ ಆತನನ್ನು ಒತ್ತೆಯಾಳಾಗಿಟ್ಟುಕೊಂಡ ವಧುವಿನ ಕುಟುಂಬ…! ಏನಿದರ ಹಕೀಕತ್ತು..?

ಅಮೇಥಿ : ಉತ್ತರ ಪ್ರದೇಶದ ಅಮೇಥಿಯಲ್ಲಿ ನಡೆದ ಮದುವೆಯೊಂದು ವಿಲಕ್ಷಣ ತಿರುವು ಪಡೆದಿದ್ದು, ವಧುವಿನ ಕುಟುಂಬದ ಸದಸ್ಯರು ವರನನ್ನು ಒತ್ತೆಯಾಳಾಗಿಟ್ಟುಕೊಂಡ ಘಟನೆ ನಡೆದಿದೆ ಎಂದು ವರದಿಯಾಗಿದೆ. ವರನಿಗೆ ಬೇರೆ ಮಹಿಳೆಯೊಂದಿಗೆ ಸಂಬಂಧವಿದೆ ಎಂದು ಆರೋಪಿಸಿ ವಧುವಿನ ಮನೆಯವರು ಮದುವೆಯನ್ನು ರದ್ದುಗೊಳಿಸಿದ್ದಾರೆ. ವಧುವಿನ ಕುಟುಂಬವು ಮದುವೆ ಸಿದ್ಧತೆಗೆ ಆದ ಖರ್ಚನ್ನು ವಾಪಸ್‌ ಕೊಡಬೇಕು ಎಂದು ಪಟ್ಟು ಹಿಡಿದು … Continued

‘ಪ್ರಿಯಾಂಕಾ ಗಾಂಧಿ ವಿರುದ್ಧ ಪಕ್ಷದಲ್ಲೇ ದೊಡ್ಡ ಪಿತೂರಿ…ಜೂನ್ 4ರ ನಂತರ ಕಾಂಗ್ರೆಸ್ ಅಣ್ಣ-ತಂಗಿ ಬಣಗಳಾಗಿ ವಿಭಜನೆ’ : ಕಾಂಗ್ರೆಸ್‌ ಮಾಜಿ ನಾಯಕನ ಸ್ಫೋಟಕ ಹೇಳಿಕೆ

ನವದೆಹಲಿ: ಮಾರ್ಚ್‌ನಲ್ಲಿ ಕಾಂಗ್ರೆಸ್‌ನಿಂದ ಉಚ್ಛಾಟಿತರಾದ ಆಚಾರ್ಯ ಪ್ರಮೋದ ಕೃಷ್ಣಂ ಅವರು ಲೋಕಸಭೆ ಚುನಾವಣೆಗೆ ರಾಯ್ಬರೇಲಿ ಕ್ಷೇತ್ರದಿಂದ ಕಣಕ್ಕಿಳಿದಿರುವ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರಿಯಾಂಕಾ ಗಾಂಧಿ ಚುನಾವಣಾ ಅಖಾಡಕ್ಕೆ ಪ್ರವೇಶಿಸುವ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದ ಒಂದು ದಿನದ ನಂತರ, ಕಾಂಗ್ರೆಸ್‌  ಪಕ್ಷದಲ್ಲಿ ನಡೆಯುತ್ತಿರುವ ಷಡ್ಯಂತ್ರಕ್ಕೆ ಪ್ರಿಯಾಂಕಾ ಗಾಂಧಿ ಬಲಿಯಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. … Continued

ಲೋಕಸಭೆ ಚುನಾವಣೆ ; ಮತ್ತೊಂದು ಕ್ಷೇತ್ರದಿಂದಲೂ ರಾಹುಲ್‌ ಗಾಂಧಿ ಸ್ಪರ್ಧೆ

ನವದೆಹಲಿ : ರಾಹುಲ್‌ ಗಾಂಧಿ ಅಮೇಥಿಯನ್ನು ಮರಳಿ ಗೆಲ್ಲಲು ಸಂಪೂರ್ಣ ಪ್ರಯತ್ನ ನಡೆಸಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಕಾಂಗ್ರೆಸ್‌ ಪಕ್ಷವು ರಾಹುಲ್ ಗಾಂಧಿ ಅವರನ್ನು ರಾಯ್ಬರೇಲಿಯಿಂದ ಕಣಕ್ಕಿಳಿಸುವುದಾಗಿ ಪ್ರಕಟಿಸಿದೆ. ಕಾಂಗ್ರೆಸ್ ಶುಕ್ರವಾರ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ರಾಯ್ಬರೇಲಿಯಿಂದ ರಾಹುಲ್ ಗಾಂಧಿ ಮತ್ತು ಅಮೇಥಿಯಿಂದ ಕಿಶೋರಿ ಲಾಲ್ ಶರ್ಮಾ ಅವರನ್ನು ಕಣಕ್ಕಿಳಿಸಿದೆ. ಉತ್ತರ ಪ್ರದೇಶದ … Continued

ರಾಹುಲ್ ಗಾಂಧಿ ಸ್ಪರ್ಧೆಯ ಸಸ್ಪೆನ್ಸ್ ನಡುವೆ ಅಮೇಥಿಯಲ್ಲಿ ರಾರಾಜಿಸುತ್ತಿರುವ “ರಾಬರ್ಟ್ ವಾದ್ರಾ ಅಬ್ ಕಿ ಬಾರ್” ಪೋಸ್ಟರ್…!

ಅಮೇಥಿ : ಉತ್ತರ ಪ್ರದೇಶದ ಅಮೇಥಿಯ ಕಾಂಗ್ರೆಸ್‌ ಅಭ್ಯರ್ಥಿಯ ಬಗ್ಗೆ ಸಸ್ಪೆನ್ಸ್ ನಡುವೆ, ಪಕ್ಷದ ಸ್ಥಳೀಯ ಕಚೇರಿಯ ಹೊರಗೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ ರಾಬರ್ಟ್ ವಾದ್ರಾ ಅವರಿಗೆ ಟಿಕೆಟ್‌ ನೀಡುವಂತೆ ಒತ್ತಾಯಿಸುವ ಪೋಸ್ಟರ್‌ಗಳು ರಾರಾಜಿಸುತ್ತಿವೆ. ಪೋಸ್ಟರ್‌ಗಳಲ್ಲಿ “ಅಮೇಥಿ ಕಿ ಜನತಾ ಕರೇ ಪುಕಾರ್, ರಾಬರ್ಟ್ ವಾದ್ರಾ ಅಬ್ ಕಿ ಬಾರ್”, ಅಂದರೆ “ಅಮೇಥಿಯ … Continued

ಲೋಕಸಭೆ ಚುನಾವಣೆ : ಅಮೇಥಿಯಲ್ಲಿ ಸ್ಪರ್ಧೆ ವಿಚಾರ, ರಾಹುಲ್‌ ಗಾಂಧಿ ಹೇಳಿದ್ದೇನು..?

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಉತ್ತರ ಪ್ರದೇಶದ ಅಮೇಥಿಯಿಂದಲೂ ಸ್ಪರ್ಧಿಸುವ ಸುಳಿವು ನೀಡಿದ್ದಾರೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ ಯಾದವ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅಮೆಥಿಯಲ್ಲಿ ಸ್ಪರ್ಧಸಿಉವ ಕುರಿತಾದ ಪ್ರಶ್ನೆಗೆ, “ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಮತ್ತು ಕಾಂಗ್ರೆಸ್ ಅಧ್ಯಕ್ಷರು ನನ್ನನ್ನು ಏನು ಮಾಡಲು ಕೇಳುತ್ತಾರೋ ಅದನ್ನು ನಾನು ಮಾಡುತ್ತೇನೆ… ಅಂತಹ ನಿರ್ಧಾರಗಳನ್ನು … Continued

“ಅಮೇಥಿ ನನ್ನನ್ನು ಬಯಸಿದರೆ…”: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸುಳಿವು ನೀಡಿದ ಗಾಂಧಿ ಕುಟುಂಬದ ಅಳಿಯ

ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ ರಾಬರ್ಟ್ ವಾದ್ರಾ ಅವರು ತಮ್ಮ ರಾಜಕೀಯ ಪಾದಾರ್ಪಣೆಯ ಸುಳಿವು ನೀಡಿದ್ದಾರೆ. ಈ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ಕಾಂಗ್ರೆಸ್‌ ಭದ್ರಕೋಟೆಯಾದ ಅಮೇಥಿಯಿಂದ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿದ್ದಾರೆ. ಗುರುವಾರ “ನಾನು ಸಂಸದನಾಗಲು ಬಯಸಿದರೆ ನಾನು ಅವರನ್ನು ಪ್ರತಿನಿಧಿಸಬೇಕೆಂದು ಅಮೇಥಿಯ ಜನರು ನಿರೀಕ್ಷಿಸುತ್ತಾರೆ ಎಂದು ಹೇಳಿದ್ದಾರೆ. ರಾಯಬರೇಲಿ, … Continued

ವೀಡಿಯೊ..| 22 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕ ಈಗ ಸನ್ಯಾಸಿಯಾಗಿ ತಾಯಿ ಬಳಿಗೆ ಬಂದ: ಬಂದವ ಹೊರಟು ಹೋದ : ಯಾಕೆ ? ಅದೇ ಸ್ವಾರಸ್ಯ…

ನವದೆಹಲಿ : ನಾಪತ್ತೆಯಾಗಿದ್ದ ಮಗ, ಎರಡು ದಶಕಗಳ ನಂತರ ವಾಪಸ್ಸಾಗಿದ್ದು ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯ ಗ್ರಾಮವೊಂದರಲ್ಲಿ ತಲ್ಲಣಕ್ಕೆ ಕಾರಣವಾಗಿದೆ. 22 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ 11 ವರ್ಷದ ಬಾಲಕ ಈಗ ಸನ್ಯಾಸಿಯಾಗಿ ಗ್ರಾಮಕ್ಕೆ ಮರಳಿದ್ದು, ಎಲ್ಲರಿಗೂ ದಿಗ್ಭ್ರಮೆಗೆ ಕಾರಣವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವೀಡಿಯೊವು ತಾಯಿ ಮತ್ತು ಮಗನ ನಡುವಿನ ಭಾವನಾತ್ಮಕ ಪುನರ್ಮಿಲನವನ್ನು ತೋರಿಸುತ್ತದೆ. … Continued