ಅಮೂಲ್ ಜೊತೆ ನಂದಿನಿ ವಿಲೀನ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳ(KMF)ದ ನಂದಿನಿ ಉತ್ಪನ್ನವನ್ನು ಗುಜರಾತಿನ ಅಮೂಲ್ ಜೊತೆಗೆ ವಿಲೀನ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ನಂದಿನಿ ವಿಲೀನವಾಗುತ್ತದೆ ಎಂದು ಯಾರೂ ಊಹೆ ಮಾಡಿ ಏನೇನೋ ಹೇಳಬಾರದು ನಂದಿನಿ ಉತ್ಪನ್ನವನ್ನು ಅಮೂಲ್ ಜೊತೆ ವಿಲೀನ ಮಾಡುತ್ತಾರೆ ಎನ್ನುವುದು ತಪ್ಪು ಕಲ್ಪನೆ. … Continued