ಲಂಡನ್‌ಗೆ ವಿಮಾನ ಹತ್ತಲು ಪ್ರಯತ್ನಿಸುತ್ತಿದ್ದಾಗ ಅಮೃತಸರ್‌ ನಿಲ್ದಾಣದಲ್ಲಿ ಅಮೃತ್‌ಪಾಲ್ ಸಿಂಗ್ ಪತ್ನಿಯನ್ನು ತಡೆದ ಅಧಿಕಾರಿಗಳು

ನವದೆಹಲಿ: ಪರಾರಿಯಾಗಿರುವ ವಾರಿಸ್ ಪಂಜಾಬ್ ದೇ ಮುಖ್ಯಸ್ಥ ಹಾಗೂ ಖಾಲಿಸ್ತಾನೀ ಪ್ರತಿಪಾದಕ ಅಮೃತಪಾಲ್ ಸಿಂಗ್ ಪತ್ನಿ ಕಿರಣ್‌ದೀಪ್ ಕೌರ್ ಲಂಡನ್‌ಗೆ ವಿಮಾನ ಹತ್ತಲು ಪ್ರಯತ್ನಿಸುತ್ತಿದ್ದಾಗ ಅಮೃತಸರದ ಶ್ರೀ ಗುರು ರಾಮದಾಸ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪಂಜಾಬ್ ಪೊಲೀಸರು ಅವರನ್ನು ತಡೆದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅಮೃತಪಾಲ್ ಅವರ ಪತ್ನಿ ಮಧ್ಯಾಹ್ನದ ವಿಮಾನದಲ್ಲಿ ಲಂಡನ್‌ಗೆ ತೆರಳಲಿದ್ದರು. … Continued