ಸಿಎಂ ಸಿದ್ದರಾಮಯ್ಯ ವಿರುದ್ಧ ಸಂಸದ ಅನಂತಕುಮಾರ ಹೆಗಡೆ ಬಳಸಿದ ಭಾಷೆ ಶೋಭೆ ತರುವಂಥದ್ದಲ್ಲ : ಹೈಕೋರ್ಟ್‌ ಅಸಮಾಧಾನ

ಬೆಂಗಳೂರು : “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ಅವರು ಬಳಕೆ ಮಾಡಿರುವ ಭಾಷೆ ಶೋಭೆ ತರುವಂಥದ್ದಲ್ಲ. ಭಾಷೆ ಬಳಕೆ ಮೇಲೆ ನಿಯಂತ್ರಣ ಇರಬೇಕು ಎಂಬುದನ್ನು ನಿಮ್ಮ ಕ್ಷಕಿದಾರರಿಗೆ ಹೇಳಿ” ಎಂದು ಹೈಕೋರ್ಟ್‌ ಶುಕ್ರವಾರ ಮೌಖಿಕವಾಗಿ ಎಚ್ಚರಿಕೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಮಮಂದಿರ ವಿಚಾರದ ಕುರಿತು ಆಕ್ಷೇಪಾರ್ಹ ಹೇಳಿಕೆ … Continued

ಅನಂತಕುಮಾರ ಹೇಳಿಕೆಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಬೆಂಗಳೂರು : ಸಂಸದ ಅನಂತಕುಮಾರ ಹೇಳಿಕೆಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಅವರು ಹೇಳಿರುವುದು ಅವರ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ಅನಂತಕುಮಾರ ಹೇಳಿಕೆ ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲೇ ಜನರು ರಾಜಕಾರಣಿಗಳನ್ನು ನಂಬದಂತಹ ಪರಿಸ್ಥಿತಿ ಇದೆ. ಹೀಗಾಗಿ ಯಾರೇ ಇದ್ದರೂ ನಮ್ಮ ಹೇಳಿಕೆ ಗಂಭೀರವಾಗಿರಬೇಕು. ನಮ್ಮ ಮಾತು … Continued

ಸಂಸದ ಅನಂತಕುಮಾರ ಹೆಗಡೆಗೆ ಮತ್ತೊಂದು ಜೀವ ಬೆದರಿಕೆ ಕರೆ

ಶಿರಸಿ: ಕೇಂದ್ರದ ಮಾಜಿ ಸಚಿವ ಹಾಗೂ ಉತ್ತರ ಕನ್ನಡ ಸಂಸದ, ಬಿಜೆಪಿ ಫೈರ್‌ ಬ್ರ್ಯಾಂಡ್‌  ಅನಂತಕುಮಾರ ಹೆಗಡೆ ಅವರಿಗೆ ಜೀವ ಬೆದರಿಕೆ ಹಾಕಿದವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಇಲ್ಲಿನ ಹೊರ ಮಾರುಕಟ್ಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಶಿರಸಿಯ ಕೆಎಚ್‌ಬಿ ಕಾಲೊನಿಯಲ್ಲಿರುವ ಸಂಸದರ ನಿವಾಸದ ಸ್ಥಿರ ದೂರವಾಣಿಗೆ ೯೪೬೪೫೫೪೦೩೯೯ ಈ ಸಂಖ್ಯೆಯಿಂದ ಎಪ್ರಿಲ್‌ ೫ರಂದು ಬೆಳಗ್ಗೆ … Continued