ಅಂಕೋಲಾ: ಖ್ಯಾತ ಸಾಹಿತಿ ವಿಷ್ಣು ನಾಯ್ಕ ಇನ್ನಿಲ್ಲ

ಅಂಕೋಲಾ : ಖ್ಯಾತಸಾಹಿತಿ, ಪ್ರಕಾಶಕ, ಪತ್ರಕರ್ತರಾಗಿದ್ದ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ವಿಷ್ಣು ನಾಯ್ಕ (81) ಶನಿವಾರ ತಡರಾತ್ರಿ ಕಾರವಾರದ ಜಿಲ್ಲಾಸ್ಪತ್ರೆಯಲ್ಲಿ ನಿಧನರಾದರು. ಮೃತರಿಗೆ ಇಬ್ಬರು ಪುತ್ರಿಯರು ಇದ್ದಾರೆ. ಅಂಕೋಲಾದ ಅಂಬಾರಕೊಡ್ಲದವರಾಗಿರುವ ವಿಷ್ಣು ನಾಯ್ಕ ಅವರು 1944ರಲ್ಲಿ ತಾಲ್ಲೂಕಿನ ಅಂಬಾರಕೊಡ್ಲಾದಲ್ಲಿ ಜನಿಸಿದರು. ಎಂ.ಎ ಪದವೀಧರರಾಗಿದ್ದು, ದಿನಕರ ದೇಸಾಯಿ ಅವರ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ. … Continued

ಅಂಕೋಲಾ : ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಇಬ್ಬರು ಪದ್ಮಶ್ರೀ ಪುರಸ್ಕೃತರಿಗೆ ಆಹ್ವಾನ

ಕಾರವಾರ: ಅಯೋಧ್ಯೆಯ ರಾಮಮಂದಿರದಲ್ಲಿ ಜನವರಿ 22 ರಂದು ನಡೆಯಲಿರುವ ‘ಪ್ರಾಣ ಪ್ರತಿಷ್ಠೆ’ ಸಮಾರಂಭಕ್ಕೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಇಬ್ಬರು ಪದ್ಮಶ್ರೀ ಪುರಸ್ಕೃತರನ್ನು ವಿಶೇಷವಾಗಿ ಆಹ್ವಾನಿಸಲಾಗಿದೆ. ಅಂಕೋಲಾದ ಪದ್ಮಶ್ರೀ ಪುರಸ್ಕೃತರಾದ ಸುಕ್ರಿ ಬೊಮ್ಮಗೌಡ (Sukri Bommagowda) ಹಾಗೂ ತುಳಸಿ ಗೌಡ (Tulasi Gowda) ಅವರಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹ ಪ್ರಾಂತ್ಯ ಪ್ರಚಾರಕರು ಆಹ್ವಾನ ಪತ್ರಿಕೆ … Continued

ವೀಡಿಯೊ | ಅಂಕೋಲಾದಲ್ಲಿ ಬೃಹತ್‌ ಕಾಳಿಂಗ ಸರ್ಪ ಸೆರೆ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಕೃಷ್ಣಾಪುರದಲ್ಲಿ ಬೃಹತ್‌ ಕಾಳಿಂಗ ಸರ್ಪವೊಂದನ್ನು ಸೆರೆ ಹಿಡಿಯಲಾಗಿದೆ. ಅಂಕೋಲಾದ ಕೃಷ್ಣಾಪುರದಲ್ಲಿ ಪ್ರಶಾಂತ ನಾಯಕ ಎಂಬವರ ಮನೆಯ ಸಮೀಪ ಬೃಹತ್ ಕಾಳಿಂಗ ಸರ್ಪ (King Cobra) ಕಾಣಿಸಿಕೊಂಡಿತ್ತು. ಮನೆಯವರು ಕೂಡಲೇ ಸ್ಥಳೀಯ ಉರಗ ತಜ್ಞ ಮಹೇಶ ನಾಯ್ಕ ಎಂಬವರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಮಹೇಶ ನಾಯ್ಕ ಅವರು ಗಿಡಗಂಟಿಗಳ … Continued

ಅಂಕೋಲಾ : ಗಂಗಾವಳಿ ನದಿಯಲ್ಲಿ ಮೊಸಳೆ ಪ್ರತ್ಯಕ್ಷ, ಸ್ಥಳೀಯರಿಗೆ ಆತಂಕ | ವೀಕ್ಷಿಸಿ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊಸಕಂಬಿ ಸೇತುವೆ ಬಳಿ ನದಿಯಲ್ಲಿ ಮೊಸಳೆ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಇದು ಸುಮಾರು 7 ಅಡಿಗಳಷ್ಟು ಉದ್ದವಿರುವ ಬೃಹತ್ ಮೊಸಳೆ ಎನ್ನಲಾಗಿದೆ. ಮೊಸಳೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನದಿ ಪಾತ್ರದ ನಿವಾಸಿಗಳಲ್ಲಿ ಆತಂಕ ಎದುರಾಗಿದೆ. ಅವರು ಹೆಚ್ಚಾಗಿ ನದಿಯನ್ನು ಅವಲಂಬಿಸಿರುವುದರಿಂದ ಅವರಿಗೆ ಆತಂಕ ಎದುರಾಗಿದೆ. ನದಿ ತೀರದಲ್ಲಿ … Continued

ಅಂಕೋಲಾ: ಹಿರಿಯ ಯಕ್ಷಗಾನ ಕಲಾವಿದ ವಿಠೋಬ ನಾಯಕ ನಿಧನ

ಅಂಕೋಲಾ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಯಕ್ಷಗಾನ ಕಲಾವಿದರಾದ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ವಿಠೋಬ ನಾಯಕ ವಂದಿಗೆ (88) ಅವರು ಗುರುವಾರ ನಿಧನರಾಗಿದ್ದಾರೆ. ಹವ್ಯಾಸಿ ಯಕ್ಷಗಾನ ಕಲಾವಿದರಾಗಿ ಸುಮಾರು 50 ವರ್ಷಗಳಿಗೂ ಹೆಚ್ಚಿನ ಕಾಲ ಉತ್ತರ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಹಲವಾರು ಪಾತ್ರಗಳಿಗೆ ಜೀವಂತಿಕೆ ತುಂಬಿದ್ದರು. ಅವರು ತಮ್ಮ ಗಂಭೀರ ಪಾತ್ರನಿರ್ವಹಣೆ, … Continued

ಅಂಕೋಲಾ: ಸಂಶಯಕ್ಕೆ ಕಾರಣವಾದ ಗೋಡೆಗೆ ಅಂಟಿಸಿದ ಚಿತ್ರ-ವಿಚಿತ್ರ ಬರಹದ ಪೋಸ್ಟರುಗಳು…!

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಬಂಡೀಬಜಾರದ ನಾಲ್ಕು ರಸ್ತೆ ಕೂಡಿದ ಚಿಕನ್ ಅಂಗಡಿಯ ಪಕ್ಕದ ಸ್ಪೋರ್ಟ್ಸ್ ಅಂಗಡಿಯ ಗೋಡೆಗೆ ಮೂರು ಪೋಸ್ಟರಗಳನ್ನು ಅಂಟಿಸಲಾಗಿದೆ. ಬೆಳಿಗ್ಗೆ ಹಲವರು ಇದನ್ನು ಗಮನಿಸಿದ್ದಾರೆ ಬಿಳಿ ಗಾಳೆಯ ಮೇಲೆ ಕೆಂಪು ಬಣ್ಣದ ಮಾರ್ಕರ್ ನಿಂದ ಈ ಬರಹಗಳನ್ನು ಬರೆಯಲಾಗಿದೆ. ಈ ಬರಹಗಳನ್ನು ಯಾರು ಬರೆದು ಅಂಟಿಸಿದ್ದಾರೆಂಬುದು ಗೊತ್ತಾಗಿಲ್ಲ. ಇಂಗ್ಲಿಷ್ ನಲ್ಲಿ … Continued

ವೀಡಿಯೊ..:.ಪದ್ಮಶ್ರೀ ಪುರಸ್ಕೃತ ಸುಕ್ರಿ ಗೌಡ-ತುಳಸಿ ಗೌಡರಿಗೆ ಶಿರಬಾಗಿ ನಮಸ್ಕರಿಸಿದ ಪ್ರಧಾನಿ ಮೋದಿ | ವೀಕ್ಷಿಸಿ

ಅಂಕೋಲಾ : ಅಂಕೋಲಾ : ಬಿಜೆಪಿ ಪ್ರಚಾರಾರ್ಥ ಅಂಕೋಲಾಕ್ಕೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿಯವರು ಬುಡಕಟ್ಟು ಹಾಲಕ್ಕಿ ಸಮುದಾಯದ ಪದ್ಮಪ್ರಶಸ್ತಿ ಪುರಸ್ಕೃತರಾದ ಸುಕ್ರಿ ಗೌಡ ಮತ್ತು ತುಳಸಿ ಗೌಡ ಅವರನ್ನು ಭೇಟಿಯಾದರು, ನಂತರ ಅವರಿಗೆ ಶಿರಬಾಗಿ ನಮಸ್ಕರಿಸಿದರು. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಹಟ್ಟಿಕೇರಿಯ ಟೋಲ್ ಗೇಟ್ ಬಳಿಯ ಗೌರಿಕೆರೆಯಲ್ಲಿ ಬಿಜೆಪಿ ಸಮಾವೇಶದಲ್ಲಿ ಜಿಲ್ಲೆಯ ಆರು … Continued

ಉದ್ಯಮಿ ಆನಂದ ಮಹಿಂದ್ರಾ ಗಮನ ಸೆಳೆದ ಅಂಕೋಲಾ ಬಸ್‌ ನಿಲ್ದಾಣದಲ್ಲಿನ ಹಾಲಕ್ಕಿ ಮಹಿಳೆಯ ಸ್ವಚ್ಛತೆ | ವೀಕ್ಷಿಸಿ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಬಸ್ಸಿನಿಂದ ಹೊರಚೆಲ್ಲಿದ ಕಸ ಆರಿಸಿ ಕಸದ ಬುಟ್ಟಿಗೆ ಹಾಕುತ್ತಿರುವ ಹಾಲಕ್ಕಿ ಮಹಿಳೆಯ ಸ್ವಚ್ಛತಾ ಕಳಕಳಿಯ ವಿಡಿಯೋ ತುಣುಕು ಇದೀಗ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದ್ದು ಈ ಮಹಿಳೆಯ ಕೆಲಸಕ್ಕೆ ಹಲವಾರು ಗಣ್ಯರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಬೇಸಿಗೆ ಸಮಯದಲ್ಲಿ ಸಿಗುವ ಕಾಡು ಹಣ್ಣುಗಳನ್ನು … Continued

ಅಂಕೋಲೆಯ ಸುಪ್ರಸಿದ್ಧ ಕರಿ ಇಷಾಡು ಮಾವಿಗೆ ಈಗ ಜಿಐ ಟ್ಯಾಗ್ ಹೆಗ್ಗಳಿಕೆ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ಬೆಳೆಯುವ ಸುಪ್ರಸಿದ್ಧ ಕರಿ ಇಷಾಡು ಮಾವು ಅತ್ಯಂತ ಸ್ವಾದಿಷ್ಟ ಫಲವಾಗಿದ್ದು, ಇದರ ವಿಶೇಷ ಸ್ವಾದಿಷ್ಟಕ್ಕೆ ಹೆಗ್ಗಳಿಕೆಯಾಗಿ ಈಗ ಭೌಗೋಳಿಕ ಹೆಗ್ಗುರುತಿನ ಆಧಾರದ ಮೇಲೆ ನೀಡುವ ಜಿಐ (Geographical Indication Tags) ಟ್ಯಾಗ್ ಮಾನ್ಯತೆ ದೊರೆತಿದೆ. ವಿಶ್ವ ವ್ಯಾಪಾರ ಸಂಸ್ಥೆ (ಡಬ್ಲ್ಯುಟಿಒ) ಪ್ರಕಾರ, ಜಿಯೋಗ್ರಾಫಿಕಲ್ ಇಂಡಿಕೇಶನ್ (ಜಿಐ) ಟ್ಯಾಗ್ … Continued

ಅಂಕೋಲಾ: ವಿಷ ಸೇವಿಸಿ ಯುವಕ ಆತ್ಮಹತ್ಯೆ

ಅಂಕೋಲಾ: ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಾರವಾಡದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಹಾರವಾಡ ತರಂಗಮೇಟ ನಿವಾಸಿ ಅಜಯ ಕುಲಮಣಿ ಫಂಡಾ(26) ಮೃತ ಯುವಕನಾಗಿದ್ದು ಈತ ಮಲ್ಪೆಯಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ಹಾಗೂ ಹಾರವಾಡದ ದುರ್ಗಾದೇವಿ ಜಾತ್ರೆ ಪ್ರಯುಕ್ತ ಒಂದು ವಾರದ ಹಿಂದೆ ಊರಿಗೆ ಆಗಮಿಸಿದ್ದ. ಈತ … Continued