ಅಂಕೋಲಾ: ವಿಷ ಸೇವಿಸಿ ಯುವಕ ಆತ್ಮಹತ್ಯೆ

posted in: ರಾಜ್ಯ | 0

ಅಂಕೋಲಾ: ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಾರವಾಡದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಹಾರವಾಡ ತರಂಗಮೇಟ ನಿವಾಸಿ ಅಜಯ ಕುಲಮಣಿ ಫಂಡಾ(26) ಮೃತ ಯುವಕನಾಗಿದ್ದು ಈತ ಮಲ್ಪೆಯಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ಹಾಗೂ ಹಾರವಾಡದ ದುರ್ಗಾದೇವಿ ಜಾತ್ರೆ ಪ್ರಯುಕ್ತ ಒಂದು ವಾರದ ಹಿಂದೆ ಊರಿಗೆ ಆಗಮಿಸಿದ್ದ. ಈತ … Continued

ಅಂಕೋಲಾ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

posted in: ರಾಜ್ಯ | 0

ಅಂಕೋಲಾ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಕೀಟನಾಶ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬೆಳಂಬಾರದ ತಾಳೇಬೈಲಿನಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಮೃತ ವಿದ್ಯಾರ್ಥಿನಿಯನ್ನು ತಾಳೇಬೈಲ್ ನಿವಾಸಿ ಶಿಲ್ಪಾ ಆರ್. ಗೌಡ (17) ಎಂದು ಗುರುತಿಸಲಾಗಿದೆ. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ದ್ವಿತೀಯ ವರ್ಷದ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾಗಿದ್ದ ಈಕೆ ಈಗ ನಡೆಯುತ್ತಿರುವ … Continued

ಅಂಕೋಲಾ: ಹೊಸವರ್ಷದ ಮೊದಲ ದಿನವೇ ಭೀಕರ ಅಪಘಾತ, ನಾಲ್ವರು ಸಾವು

posted in: ರಾಜ್ಯ | 0

ಅಂಕೋಲಾ: ಕಾರು ಮತ್ತು ಸಾರಿಗೆ ಸಂಸ್ಥೆ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸಾವಿಗೀಡಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪಟ್ಟಣದ ಹೊರವಲಯದ ಬಾಳೆಗುಳಿ ಕ್ರಾಸ್‌ ಸಮೀಪದ ವರದರಾಜ ಹೊಟೇಲ್ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು  ಮೃತಪಟ್ಟವರು ತಮಿಳುನಾಡು ಮೂಲದವರು. ಮೃತರನ್ನು ಅರುಣ ಪಾಂಡ್ಯನ್, ನಿಫುಲ್, … Continued

ಅಂಕೋಲಾ: ಕುಡಿಯುವ ನೀರಿನ ಬಾವಿಗಳಲ್ಲಿ ಡೀಸೆಲ್ ಯುಕ್ತ ನೀರು…!

posted in: ರಾಜ್ಯ | 0

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪಟ್ಟಣದ ಮಠಾಕೇರಿ ಕ್ರಾಸ್ ಬಳಿ ಕುಡಿಯುವ ನೀರಿನ ಬಾವಿಗಳಲ್ಲಿ ಡಿಸೇಲ್ ಅಂಶ ಕಂಡು ಬಂದಿದ್ದು ಕಂಗಾಲಾದ ಮನೆ ಮಾಲಿಕರು ಪುರಸಭೆಗೆ ದೂರು ನೀಡಿದ್ದಾರೆ. ಕಳೆದ 3 ದಿನಗಳಿಂದ ಮಠಾಕೇರಿ ಕ್ರಾಸ್ ಬಳಿಯ ಗಣಪತಿ ವೆಂಕಟ್ರಮಣ ಕಿಣಿ ಮತ್ತು ಸಂತೋಷ ಗಣೇಶ ನಾಯಕ ಎನ್ನುವವರ ಎರಡು ಬಾವಿಗಳ ನೀರಿನಲ್ಲಿ ಡಿಸೇಲ್ … Continued

ಅಂಕೋಲಾ: ಸಿನಿಮಾ ಚಿತ್ರೀಕರಣದ ವೇಳೆ ಹೆಜ್ಜೇನು ದಾಳಿ: ರಸ್ತೆಯಲ್ಲಿ ಕುಸಿದುಬಿದ್ದ ಇಬ್ಬರು

posted in: ರಾಜ್ಯ | 0

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ಚಲನಚಿತ್ರವೊಂದರ ಚಿತ್ರೀಕರಣಕ್ಕೆಂದು ಆಗಮಿಸಿದ ತಂಡದ ಕೆಲಸಗಾರರ ಮೇಲೆ ಹೆಜ್ಜೇನು ದಾಳಿ ನಡೆಸಿದ್ದು, ಇಬ್ಬರು ತೀವ್ರ ಅಸ್ವಸ್ಥಗೊಂಡ ಘಟನೆ ಜಮಗೋಡ ರೈಲ್ವೆ ಸ್ಟೇಷನ್ ಕ್ರಾಸ್ ಬಳಿ ನಡೆದಿದೆ. ಚಿತ್ರೀಕರಣ ತಂಡದಲ್ಲಿ ಲೈಟಿಂಗ್ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ಮಂಡ್ಯ ಮೂಲದ ರಮೇಶ ಮತ್ತು ರಾಮು ಎಂಬವರ ಮೇಲೆ ಜೇನು ನೊಣಗಳು … Continued

ಅಂಕೋಲಾ: ತೋಟದಲ್ಲಿ ಮೊಟ್ಟೆ ಇಟ್ಟಿದ್ದ ನವಿಲು ನುಂಗಿ ಬಂಧಿಯಾದ ಹೆಬ್ಬಾವು | ವೀಕ್ಷಿಸಿ

posted in: ರಾಜ್ಯ | 0

ಅಂಕೋಲಾ : ಬೃಹತ್ ಹೆಬ್ಬಾವೊಂದು ಪ್ರತಕ್ಷವಾಗಿ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಜಮಗೋಡ್‌ನಲ್ಲಿ ಎಂಬಲ್ಲಿ ನಡೆದಿದೆ. ಜಮಗೋಡದ ವಕೀಲ ಬೀರಣ್ಣ ನಾಯಕ ಎನ್ನುವವರ ಮನೆಯ ತೋಟದಲ್ಲಿ ನವಿಲು ಮೊಟ್ಟೆ ಇಟ್ಟು ಅದರಲ್ಲಿ ಕುಳಿತಿತ್ತು. ಅದನ್ನು ಕಂಡಿದ್ದ ಸುಮಾರು 14 ಅಡಿ ಉದ್ದದ ಹೆಬ್ಬಾವು, ನವಿಲನ್ನು ಬೇಟೆಯಾಡಿ ನುಂಗಿ ಹಾಕಿದೆ. … Continued

ಹುಬ್ಬಳ್ಳಿ – ಅಂಕೋಲಾ ರೈಲು ಯೋಜನೆ ಜಾರಿಗೆ ಬೆಂಬಲ : ಸಾಮಾಜಿಕ ಜಾಲತಾಣ  ಜಾಗೃತಿ ಅಭಿಯಾನಕ್ಕೆ ಚಾಲನೆ

posted in: ರಾಜ್ಯ | 0

ಅಂಕೋಲಾ : ಹುಬ್ಬಳ್ಳಿ – ಅಂಕೋಲಾ ರೈಲ್ವೇ ಹೋರಾಟ ಕ್ರಿಯಾ ಸಮಿತಿ ವತಿಯಿಂದ‌ ಹುಬ್ಬಳ್ಳಿ – ಅಂಕೋಲಾ ರೈಲು ಯೋಜನೆ ಜಾರಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮೇಲೆ ಒತ್ತಡ ತರುವ ಉದ್ದೇಶದಿಂದ ಸಾಮಾಜಿಕ ಜಾಲತಾಣ‌ ಜಾಗೃತಿ ಅಭಿಯಾನಕ್ಕೆ ಸೋಮವಾರ ಚಾಲನೆ ನೀಡಲಾಯಿತು. ಅಂಕೋಲಾ ಅರ್ಬನ್ ಬ್ಯಾಂಕಿನಲ್ಲಿ ಈ ಅಭಿಯಾನದ‌ ಪೋಸ್ಟರ್ ಅನ್ನು ಹೋರಾಟ ಸಮಿತಿ … Continued

ಅಂಕೋಲಾ: ಸ್ವಾತಂತ್ರ್ಯ ಹೋರಾಟಗಾರ ವೆಂಕಣ್ಣ ನಾಯಕ ನಿಧನ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಭಾಸಗೋಡ ಸೂರ್ವೆಯ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಶತಾಯುಷಿ ವೆಂಕಣ್ಣ ಹಮ್ಮಣ್ಣ ನಾಯಕ (102) ಅವರು ವಯೋಸಹಜ ಅನಾರೋಗ್ಯದಿಂದ ಭಾನುವಾರ ನಿಧನರಾದರು. ಸ್ವಾತಂತ್ರ್ಯ ಹೋರಾಟಗಾರ ವೆಂಕಣ್ಣ ನಾಯಕ ಅವರ ನಿಧನದಿಂದ ಅಂಕೋಲಾ ತಾಲೂಕಿನ ಸ್ವಾತಂತ್ರ್ಯ ಹೋರಾಟದ ಕೊನೆಯ ಕೊಂಡಿ ಕಳಚಿದಂತಾಗಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ದುಮುಕಿ ಜೈಲುವಾಸ ಅನುಭವಿಸಿರುವ ಅವರನ್ನು … Continued

ಬೈಕ್ ಸ್ಕಿಡ್ ಆಗಿ ಬಿದ್ದು ಕಾಲೇಜು ಉಪನ್ಯಾಸಕ ಸಾವು

posted in: ರಾಜ್ಯ | 0

ಅಂಕೋಲಾ: ಬೈಕ್ ಸ್ಕಿಡ್ ಆಗಿ ಬಿದ್ದು ಕಾಲೇಜು ಉಪನ್ಯಾಸಕರೋರ್ವರು ಸ್ಥಳದಲ್ಲಿಯೇ ಮೃತ ಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬೆಳಸೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದೆ. ವಾಸರಕುದ್ರಿಗೆ ಗ್ರಾಮದ ನಿವಾಸಿ ಅರವಿಂದ ಬೀರಾ ಆಗೇರ (49) ಮೃತ ವ್ಯಕ್ತಿಯಾಗಿದ್ದು ಅಂಕೋಲಾ ಪಟ್ಟಣದ ಪಿ.ಎಂ.ಪದವಿ ಪೂರ್ವ ಕಾಲೇಜಿನಲ್ಲಿ ಇತಿಹಾಸ ಸಮಾಜಶಾಸ್ತ್ರದ ಉಪನ್ಯಾಸಕರಾಗಿ ಕಾರ್ಯ … Continued

ಅಂಕೋಲಾ: ಟ್ರಾನ್ಸಫಾರ್ಮರ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು, ಓರ್ವ ಸಾವು

posted in: ರಾಜ್ಯ | 0

ಅಂಕೋಲಾ: ಅಂಕೋಲಾ: ಸ್ವಿಪ್ಟ್ ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಟ್ರಾನ್ಸಫಾರ್ಮರ್‌ಗೆ ಡಿಕ್ಕಿ ಹೊಡೆದ ನಂತರ ಸಂಪೂರ್ಣವಾಗಿ ಹೊತ್ತಿ ಉರಿದ ಘಟನೆ ತಾಲೂಕಿನ ಹಾರವಾಡದ ರೈಲ್ವೆ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ 17ರಲ್ಲಿ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಓರ್ವ ಪ್ರಯಾಣಿಕ ಮೃತಪಟ್ಟಿದ್ದು, ಉಳಿದ ನಾಲ್ವರು ಪ್ರಯಾಣಿಕರು ಗಾಯಗೊಂಡಿರುವುದಾಗಿ ಮಾಹಿತಿ ದೊರಕಿದೆ. ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು ಅಗ್ನಿಶಾಮಕ … Continued