ಅಂಕೋಲಾ : ಖಾಸಗಿ ಬಸ್‌ ಪಲ್ಟಿ ; ಓರ್ವ ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

ಕಾರವಾರ: ಬಳ್ಳಾರಿಯಿಂದ ಗೋವಾಕ್ಕೆ ತೆರಳುತ್ತಿದ್ದ ಸೀಬರ್ಡ್ ಸಂಸ್ಥೆಯ ಖಾಸಗಿ ಸ್ಲೀಪರ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಓರ್ವ ಪ್ರಯಾಣಿಕ ಮೃತಪಟ್ಟು 20ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಅಡ್ಲೂರು ಕಂಚಿನ ಬಾಗಿಲಿನ ಸಮೀಪ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಶನಿವಾರ ಬೆಳಗಿನ ಜಾವ ಸಂಭವಿಸಿದೆ ಎಂದು ವರದಿಯಾಗಿದೆ. ಅಪಘಾತದ … Continued

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ, ಜಿಲ್ಲಾ ಪರಿಷತ್ ಮಾಜಿ ಅಧ್ಯಕ್ಷ ರಮಾನಂದ ನಾಯಕ ನಿಧನ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ, ಜನಪರ ಹೋರಾಟಗಾರ ಹಾಗೂ ಜಿಲ್ಲಾ ಪರಿಷತ್‌ನ ಪ್ರಥಮ ಅಧ್ಯಕ್ಷರಾಗಿದ್ದ ರಮಾನಂದ ನಾಯಕ ಹಿಚ್ಕಡ (78) ಅವರು ಗುರುವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಅಪಾರಬಂಧು ಬಳಗದವರನ್ನು ಅಗಲಿದ್ದಾರೆ. ಸಜ್ಜನಿಕೆ, ಸರಳತೆ … Continued

ಅಂಕೋಲಾ: ಬೆಂಕಿ ಹೊತ್ತಿ ಉರಿದ ಟ್ಯಾಂಕರ್‌

ಅಂಕೋಲಾ: ಇಥೆನಾಲ್ ರಾಸಾಯನಿಕ ತುಂಬಿದ ಟ್ಯಾಂಕರ್ ಲಾರಿ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡು ಸುಟ್ಟು ಕರುಕಲಾದ ಘಟನೆ ತಾಲೂಕಿನ ಕಂಚಿನಬಾಗಿಲ ಬಳಿ ರಾಷ್ಟ್ರೀಯ ಹೆದ್ದಾರಿಯ 52 ರಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದೆ ಎಂದು ವರದಿಯಾಗಿದೆ. ಅದೃಷ್ಟವಶಾತ್ ಪಾರಾದ ಲಾರಿ ಚಾಲಕನಿಗೆ ಸುಟ್ಟ ಗಾಯಗಳಾಗಿದ್ದು ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆ ಬರುತ್ತಿದ್ದ … Continued

ಅಂಕೋಲಾ : ವಿಭೂತಿ ಜಲಪಾತದಲ್ಲಿ ಮುಳುಗಿ ಪ್ರವಾಸಿಗ ಸಾವು

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಚವೆ ಸಮೀಪದ ಚನಗಾರದ ವಿಭೂತಿ ಜಲಪಾತದಲ್ಲಿ ಪ್ರವಾಸಿಗನೊಬ್ಬ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಮೃತ ವ್ಯಕ್ತಿಯನ್ನುತೆಲಂಗಾಣ ರಾಜ್ಯದ ಅಜಯ (24) ಎಂದು ಗುರುತಿಸಲಾಗಿದೆ. ತೆಲಂಗಾಣದಿಂದ 6 ಜನರು ಇಲ್ಲಿಗೆ ಪ್ರವಾಸಕ್ಕೆ ಬಂದಿದ್ದ ವೇಳೆ ಜಲಪಾತದ ನೀರಿಗಿಳಿದಿದ್ದಾರೆ. ಈ ವೇಳೆ ಕಾಲು ಜಾರಿ … Continued

ಅಂಕೋಲಾ ; ಕಾಂಗ್ರೆಸ್‌ ಮುಖಂಡನ ಕೊಲೆಗೆ ಯತ್ನ

ಅಂಕೋಲಾ : ಕೆ.ಪಿ.ಸಿ.ಸಿ ಮಾಜಿ ಕಾರ್ಯದರ್ಶಿ ಗೋಪಾಲಕೃಷ್ಣ ನಾಯಕ ಅವರ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಪಟ್ಟಣದ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪಟ್ಟಣದ ಕಾರವಾರ ರಸ್ತೆ ಕಣಕಣೇಶ್ವರ ದೇವಾಲಯದ ಪಕ್ಕದಲ್ಲಿ ನಡೆದಿದೆ. ಬುಧವಾರ ಬೆಳಿಗ್ಗೆ ಹೇರ್ ಕಟಿಂಗ್ ಸೆಲೂನ್ ನಿಂದ ಗೋಪಾಲಕೃಷ್ಣ ನಾಯಕ ಅವರು   ತಮ್ಮ ಕಾರಿನ ಕಡೆಗೆ … Continued

ಅಂಕೋಲಾ : ಸುಂಕಸಾಳ ಬ್ಯಾಂಕ್‌ ದರೋಡೆ ಯತ್ನ ಪ್ರಕರಣ ; ಐವರ ಬಂಧನ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಸುಂಕಸಾಳದಲ್ಲಿರುವ ಬ್ಯಾಂಕ್ ಆಫ್ ಬರೋಡ ಶಾಖೆಯಲ್ಲಿ ದರೋಡೆಗೆ ಯತ್ನ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಅಂಕೋಲಾ ಪೊಲೀಸರು ಬಂಧಿಸಿದ್ದಾರೆ.  ಸುಂಕಸಾಳದ ರಾಷ್ಟ್ರೀಯ ಹೆದ್ದಾರಿ 52 ರ ಪಕ್ಕದಲ್ಲಿರುವ ಬ್ಯಾಂಕ್ ಆಫ್ ಬರೋಡಾ ಶಾಖೆಯ ಶೌಚಾಲಯದ ಗೋಡೆಗೆ ಕನ್ನ ಕೊರೆದು ಒಳನುಗ್ಗಿ ದರೋಡೆಗೆ ಯತ್ನ ನಡೆಸಲಾಗಿತ್ತು. ಆರೋಪಿತರು … Continued

ಜೂನ್‌ ಒಳಗೆ ಜಿಪಂ, ತಾಪಂ, ಗ್ರಾಪಂ ಚುನಾವಣೆ ; ಸಿಎಂ ಸಿದ್ದರಾಮಯ್ಯ

ಅಂಕೋಲಾ : ಜೂನ್‌ ಒಳಗೆ ರಾಜ್ಯದಲ್ಲಿ ಜಿಲ್ಲಾ ಪಂಚಾಯತ, ತಾಲೂಕು ಪಂಚಾಯತ ಹಾಗೂ ಗ್ರಾಮ ಪಂಚಾಯತ ಚುನಾವಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಮಂಜಗುಣಿಯಲ್ಲಿ ಗಂಗಾವಳಿ ನದಿಗೆ ಕಟ್ಟಲಾದ ಗಂಗಾವಳಿ-ಮಂಜುಗುಣಿ ಸೇತುವೆ ಉದ್ಘಾಟಿಸಿ ಮಾತನಾಡಿದ ಅವರು, ಗೋಕರ್ಣವನ್ನು ಮೇಲ್ದರ್ಜಗೇರಿಸಿ ಪಟ್ಟಣ ಪಂಚಾಯತ ಒತ್ತಾಯ ಇದ್ದಾಗ್ಯೂ ಜೂನ್‌ ಒಳಗೆ … Continued

ಫಾರ್ಮಾಸಿಸ್ಟ್ ಆತ್ಮಹತ್ಯೆ ಪ್ರಕರಣ: ವೀಡಿಯೊ ವೈರಲ್ ಮಾಡಿದ ಮೂವರ ಬಂಧನ

ಕಾರವಾರ:  ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅವರ್ಸಾದಲ್ಲಿ ನಡೆದ ಫಾರ್ಮಾಸಿಸ್ಟ್ ರಾಜೀವ ಪಿಕ್ಳೆ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ವೈರಲ್ ಮಾಡಿದ ಆರೋಪದ ಮೇಲೆ ಅಂಕೋಲಾ ಪೊಲೀಸರು ಮೂವರನ್ನು ಬಂಧಿಸಿದ್ದಾರೆಎಂದು ವರದಿಯಾಗಿದೆ. ಕಾರವಾರ ತಾಲೂಕಿನ ವೈಲವಾಡ ಗ್ರಾಮದ ಸುಭಾಷ, ಹರಿಶ್ಚಂದ್ರ ಮತ್ತು ಅನಿಲ ಎಂಬವರು ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ಕಾರವಾರದ … Continued

ಅಂಕೋಲಾ : ಬ್ಯಾಂಕ್‌ ದರೋಡೆಗೆ ಯತ್ನ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಸುಂಕಸಾಳದಲ್ಲಿರುವ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ದರೋಡೆಗೆ ವಿಫಲ ಯತ್ನ ನಡೆಸಲಾಗಿದೆ. ಬ್ಯಾಂಕಿನ ಹಿಂಬದಿಯ ಶೌಚಾಲಯದ ಗೋಡೆಗೆ ಕನ್ನ ಕೊರೆದು ಒಳನುಗ್ಗುವ ಪ್ರಯತ್ನ ಮಾಡಲಾಗಿದೆ. ಬ್ಯಾಂಕಿನ ಸ್ಟ್ರಾಂಗ್ ರೂಮ್ ಗೋಡೆಯನ್ನು ಸಹ ಒಡೆಯುವ ಪ್ರಯತ್ನ ನಡೆದಿದೆ. ಬ್ಯಾಂಕ್ ಆಫ್ ಬರೋಡಾದ ಸುಂಕಸಾಳ ಶಾಖೆ ರಾಷ್ಟ್ರೀಯ ಹೆದ್ದಾರಿ 63 … Continued

ನನ್ನ-ಸಿಎಂ ಸಿದ್ದರಾಮಯ್ಯ ನಡುವೆ ಒಪ್ಪಂದವಾಗಿದೆ : ಅಧಿಕಾರ ಹಂಚಿಕೆ ಬಗ್ಗೆ ಮಾರ್ಮಿಕವಾಗಿ ಹೇಳಿದ ಡಿ.ಕೆ ಶಿವಕುಮಾರ

ಕಾರವಾರ: ನನ್ನ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಒಂದು ಒಪ್ಪಂದವಾಗಿದೆ. ಹೈಕಮಾಂಡ್ ಒಂದು ಒಪ್ಪಂದಕ್ಕೆ ತಂದಿದೆ. ಆ ಪ್ರಕಾರ ನಾವಿಬ್ಬರೂ ಮುಂದೆ ಹೋಗುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ  ಹೇಳಿದ್ದಾರೆ. ಗೋಕರ್ಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದ ಅವರು,  ನಾನು ಅವರು ಐದು ವರ್ಷ ಇರಲ್ಲ ಎಂದು ಎಲ್ಲಿಯೂ ಹೇಳಿಲ್ಲ. ಎಲ್ಲವೂ ಹೈಕಮಾಂಡ್ ನಿರ್ಧಾರದಂತೆ … Continued