ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ; ಕ್ಷಮೆ ಕೋರಿದ ಸಚಿವ ಜಮೀರ್‌ ಅಹ್ಮದ್‌

ಮೈಸೂರು: ಚನ್ನಪಟ್ಟಣ ಚುನಾವಣೆಯ ಪ್ರಚಾರದ ವೇಳೆ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾದ ನಂತರ ಸಚಿವ ಜಮೀರ್‌ ಅಹ್ಮದ್‌ (Zameer ahmed) ಕ್ಷಮೆಯಾಚನೆ ಮಾಡಿದ್ದಾರೆ. ನನ್ನ ಮಾತಿನಿಂದ ಜೆಡಿಎಸ್ ಕಾರ್ಯಕರ್ತರಿಗೆ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ ಎಂದು ಹೇಳಿದ್ದಾರೆ. ನಾನು ಮೊದಲಿನಿಂದಲೂ ಕುಮಾರಸ್ವಾಮಿ ಅವರನ್ನು ಕರಿಯಣ್ಣ … Continued

ಸಲ್ಮಾನ್ ಖಾನ್ ದೇವಸ್ಥಾನಕ್ಕೆ ಹೋಗಬೇಕು, ಲಾರೆನ್ಸ್ ಬಿಷ್ಣೋಯ್ ಬಳಿ ಕ್ಷಮೆ ಕೇಳಬೇಕು: ಜೀವ ಬೆದರಿಕೆ ಮಧ್ಯೆ ಬಾಲಿವುಡ್‌ ನಟನಿಗೆ ರಾಕೇಶ ಟಿಕಾಯತ್‌ ಸಲಹೆ

ನವದೆಹಲಿ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಕೃಷ್ಣಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ದಿನಗಳಿಂದ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರಿಂದಕೊಲೆ ಬೆದರಿಕೆಗಳನ್ನು ಎದುರಿಸುತ್ತಿದ್ದಾರೆ. ನಟನಿಗೆ ಸುರಕ್ಷತೆಯನ್ನು ಖಾತ್ರಿಪಡಿಸಲು ಬಿಗಿ ಭದ್ರತೆ ನೀಡಲಾಗಿದ್ದರೂ, ರೈತ ನಾಯಕ ರಾಕೇಶ ಟಿಕಾಯತ್‌ ಅವರು ಸಲ್ಮಾನ್ ಅವರು ದೇವಸ್ಥಾನಕ್ಕೆ ಹೋಗಿ ಕ್ಷಮೆ ಕೇಳಬೇಕು ಎಂದು ಸೂಚಿಸಿದ್ದಾರೆ. ಸಂದರ್ಶನವೊಂದರಲ್ಲಿ, ರಾಕೇಶ ಟಿಕಾಯತ್‌ … Continued

ಕನ್ನಡಿಗರ ಕ್ಷಮೆ ಕೋರಿದ ಫೋನ್‌ ಪೇ ಸಿಇಒ ಸಮೀರ್ ನಿಗಮ್

ಬೆಂಗಳೂರು : ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವ ಸಂಬಂಧ ರಾಜ್ಯ ಸರ್ಕಾರ ರೂಪಿಸಿದ್ದ ನೀತಿಯನ್ನು ಖಂಡಿಸಿದ್ದ ಫೋನ್‌ಪೇ ಸಿಇಒ ಮತ್ತು ಸಂಸ್ಥಾಪಕ ಸಮೀರ್ ನಿಗಮ್‌ ಈ ಸಂಬಂಧ ಭಾನುವಾರ ಬೇಷರತ್‌ ಆಗಿ ಕನ್ನಡಿಗರ ಕ್ಷಮೆಯಾಚಿಸಿದ್ದಾರೆ. ಕಂಪನಿಗಳ ‘ಸಿ’ ಮತ್ತು ‘ಡಿ’ ದರ್ಜೆಯ ಹುದ್ದೆಗಳಿಗೆ ಕನ್ನಡಿಗರನ್ನು ನೇಮಿಸಿಕೊಳ್ಳುವ ಸಂಬಂಧ ಸರ್ಕಾರವು ಮಸೂದೆ ಮಂಡಿಸಲು ನಿರ್ಧರಿಸಿತ್ತು. ಇದಕ್ಕೆ … Continued

ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ಜೈನರ ಕ್ಷಮೆಯಾಚಿಸಿದ ಹಂಸಲೇಖ

ಬೆಂಗಳೂರು: ಜೈನ ಸಮುದಾಯದ ಬಗ್ಗೆ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಸಂಗೀತ ನಿರ್ದೇಶಕ ಹಂಸಲೇಖ ಕ್ಷಮೆಯಾಚಿಸಿದ್ದಾರೆ. ಹೇಳಿಕೆ ಕುರಿತು ಲಿಖಿತ ಹಾಗೂ ವೀಡಿಯೊ ಮೂಲಕ ಕ್ಷಮೆಯಾಚಿಸಿದ ತಮ್ಮ ಹೇಳಿಕೆಯನ್ನು ಹಂಸಲೇಖ ಬಿಡುಗಡೆಗೊಳಿಸಿದ್ದಾರೆ. ಸೋಮವಾರ ಗೌರಿ ಚಿತ್ರದ ಹಾಡು ಬಿಡುಗಡೆ ಕಾರ್ಯಕ್ರಮದ ವೇಳೆ ಮಾತನಾಡಿದ್ದ ಹಂಸಲೇಖ, ಜೈನರ ಫಿಲಾಸಫಿಯಲ್ಲಿ 24 ಜನ್ಮಗಳಿವೆ ಅಂತಾರೆ, ಅದೆಲ್ಲ ಬುಲ್ ಶಿಟ್ ಎಂದು … Continued

ಕ್ರೈಸ್ತ ಧರ್ಮ ಗುರು ಪೋಪ್ ಫ್ರಾನ್ಸಿಸ್ ಜೊತೆಗಿನ ಮೋದಿ ಭೇಟಿ ಅಣಕಿಸಿದ ಕಾಂಗ್ರೆಸ್; ಭಾರೀ ಆಕ್ರೋಶದ ನಂತರ ಕ್ರೈಸ್ತರ ಕ್ಷಮೆಯಾಚನೆ

ನವದೆಹಲಿ : ಇಟಲಿಯಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕ್ರೈಸ್ತ ಧರ್ಮ ಗುರು ಪೋಪ್ ಫ್ರಾನ್ಸಿಸ್ ಅವರ ಭೇಟಿಯನ್ನು ಅಣಕಿಸಿ ಕಾಂಗ್ರೆಸ್ ಪಕ್ಷದ ಕೇರಳ ಘಟಕವು ಸಾಮಾಜಿಕ ಮಾಧ್ಯಮದಲ್ಲಿ ವ್ಯಂಗ್ಯಾತ್ಮಕ ಪೋಸ್ಟ್ ಮಾಡಿದ ನಂತರ ವ್ಯಾಪಕ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಈಗ ಕೇರಳ ಕಾಂಗ್ರೆಸ್‌ ಘಟಕವು ಕ್ರೈಸ್ತ ಸಮುದಾಯದ ಕ್ಷಮೆಯಾಚಿಸಿದೆ. ಅಳಿಸಲಾದ … Continued

ಭಾರತೀಯ ಧ್ವಜ ಬಳಸಿದ ಪೋಸ್ಟ್ ಆಕ್ರೋಶಕ್ಕೆ ಕಾರಣವಾದ ನಂತರ ಕ್ಷಮೆಯಾಚಿಸಿದ ಅಮಾನತುಗೊಂಡ ಮಾಲ್ಡೀವ್ಸ್ ಸಚಿವೆ

ನವದೆಹಲಿ : ಅಮಾನತುಗೊಂಡಿರುವ ಮಾಲ್ಡೀವ್ಸ್ ಸಚಿವೆ ಮರಿಯಮ್ ಶಿಯುನಾ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ನಂತರ ಕ್ಷಮೆಯಾಚಿಸಿದ್ದಾರೆ, ಅದರಲ್ಲಿ ಅವರು ಭಾರತೀಯ ರಾಷ್ಟ್ರಧ್ವಜವನ್ನು ಅಗೌರವಗೊಳಿಸಿದ್ದಾರೆ ಎಂದು ಆರೋಪಿಸಲಾದ ಚಿತ್ರವನ್ನು ಹಂಚಿಕೊಂಡಿದ್ದು ಆಕ್ರೋಶಕ್ಕೆ ಕಾರಣವಾಗಿದೆ. ವಿವಾದದ ನಂತರ ಈಗ ಅಳಿಸಲಾದ ಪೋಸ್ಟ್, ಮಾಲ್ಡೀವ್ಸ್‌ನ ಸಂಸತ್ತಿನ ಚುನಾವಣೆಗೆ ಮುಂಚಿತವಾಗಿ ವಿರೋಧ ಪಕ್ಷದ ಪ್ರಚಾರದ ಪೋಸ್ಟರ್ ಅನ್ನು ಆ … Continued

ʼಅನ್ನಪೂರಣಿ’ ಚಲನಚಿತ್ರ ವಿವಾದ ; ಹಿಂದೂಗಳ ಭಾವನೆಗೆ ಧಕ್ಕೆ ತಂದಿದ್ದಕ್ಕೆ ನಟಿ ನಯನತಾರಾ ಕ್ಷಮೆಯಾಚನೆ

ದಕ್ಷಿಣ ಭಾರತದ ಖ್ಯಾತ ನಟಿ ನಯನತಾರಾ ತಮ್ಮ ‘ಅನ್ನಪೂರಣಿ’ ಚಿತ್ರದ ವಿವಾದಕ್ಕೆ ಕ್ಷಮೆಯಾಚಿಸಿದ್ದಾರೆ, ನಾನು ಮತ್ತು ತನ್ನ ತಂಡವು ಯಾರ ಭಾವನೆಗಳಿಗೂ ನೋವುಂಟು ಮಾಡುವ ಉದ್ದೇಶ ಹೊಂದಿಲ್ಲ ಎಂದು ಅವರು ಹೇಳಿದ್ದಾರೆ. ನಯನತಾರಾ ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್ ಮೂಲಕ ‘ಜೈ ಶ್ರೀ ರಾಮ’ ಮತ್ತು ಹಿಂದೂ ಧಾರ್ಮಿಕ ಚಿಹ್ನೆ ‘ಓಂ’ ಅನ್ನು ಮಾಸ್ಟ್‌ಹೆಡ್‌ನಲ್ಲಿ ಬರೆದಿದ್ದಾರೆ. ತಮ್ಮ … Continued

ಹಿಂದಿ ರಾಜ್ಯಗಳಿಗೆ ʼಗೋ ಮೂತ್ರʼ ರಾಜ್ಯಗಳೆಂದು ಟೀಕಿಸಿದ ಡಿಎಂಕೆ ಸಂಸದ : ಹೇಳಿಕೆಗೆ ಪಕ್ಷಾತೀತವಾಗಿ ಖಂಡನೆ ನಂತರ ಸೆಂಥಿಲ್ ಕುಮಾರ ಕ್ಷಮೆಯಾಚನೆ

ನವದೆಹಲಿ: ಡಿಎಂಕೆ ಸಂಸದ ಡಿಎನ್‌ವಿ ಸೆಂಥಿಲ್ ಕುಮಾರ ಅವರು ಸಂಸತ್ತಿನಲ್ಲಿ ತಮ್ಮ ಹೇಳಿಕೆ ವಿವಾದಕ್ಕೆ ಕಾರಣವಾಗಿ ಪಕ್ಷಾತೀತವಾಗಿ ಟೀಕೆ ಎದುರಿಸಿದ ನಂತರ ಹೇಳಿಕೆಗಾಗಿ ಬುಧವಾರ ಕ್ಷಮೆಯಾಚಿಸಿದ್ದಾರೆ. ಧರ್ಮಪುರಿ ಸಂಸದರ ಹೇಳಿಕೆಗೆ ಬಿಜೆಪಿ ಮತ್ತು ಡಿಎಂಕೆ ಮಿತ್ರಪಕ್ಷ ಕಾಂಗ್ರೆಸ್‌ನಿಂದ ತಕ್ಷಣವೇ ಖಂಡನೆ ವ್ಯಕ್ತವಾಗಿದ್ದು, ಅವರು ಡಿಎಂಕೆ ಸಂಸದ ಡಿಎನ್‌ವಿ ಸೆಂಥಿಲ್ ಕುಮಾರ ಕ್ಷಮೆಯಾಚಿಸುವಂತೆ ಒತ್ತಾಯಿಸಿದರು. ಸದನದಲ್ಲಿ ಜೆ … Continued

‘ಸನಾತನ ಧರ್ಮ’ದ ನಂತರ ಹೊಸ ವಿವಾದದಲ್ಲಿ ಡಿಎಂಕೆ : ಹಿಂದಿ ಹೃದಯ ಭಾಗದ ರಾಜ್ಯಗಳ ಕುರಿತು ವಿವಾದಾತ್ಮಕ ಹೇಳಿಕೆ ನಂತರ ಕ್ಷಮೆಯಾಚಿಸಿದ ಡಿಎಂಕೆ ಸಂಸದ

ನವದೆಹಲಿ: ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಂಸದ ಡಿಎನ್‌ವಿ ಸೆಂಥಿಲ್‌ಕುಮಾರ್ ಅವರು ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಂಗಳವಾರ ಲೋಕಸಭೆಯಲ್ಲಿ ತಮ್ಮ ಹೇಳಿಕೆಯ ಮೂಲಕ ವಿವಾದಕ್ಕೆ ಕಾರಣರಾದರು. ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಇತ್ತೀಚಿನ ಗೆಲುವನ್ನು ಲೇವಡಿ ಮಾಡಿದ ತಮಿಳುನಾಡು ನಾಯಕ ಹಿಂದಿ ಹೃದಯ ರಾಜ್ಯಗಳನ್ನು ಗುರಿಯಾಗಿಟ್ಟುಕೊಂಡು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. … Continued

ಬೈಕ್ ಸವಾರನಿಗೆ ಅವಾಚ್ಯ ಶಬ್ದಗಳಿಂದ ಭವಾನಿ ರೇವಣ್ಣ ನಿಂದನೆ: ಎಚ್‌.ಡಿ. ರೇವಣ್ಣ, ಸೂರಜ್ ರೇವಣ್ಣ ಕ್ಷಮೆಯಾಚನೆ

ಬೆಳಗಾವಿ: ಕಾರಿಗೆ ಡಿಕ್ಕಿ ಹೊಡೆದ ಬೈಕ್‌ ಸವಾರನನ್ನು ಅಸಭ್ಯ ಶಬ್ದಗಳಿಂದ ನಿಂದಿಸಿದ ಪತ್ನಿ ಭವಾನಿ ಪರವಾಗಿ ಜೆಡಿಎಸ್‌ ಶಾಸಕ ಎಚ್‌. ಡಿ. ರೇವಣ್ಣ ಮತ್ತು ಮಗ, ವಿಧಾನ ಪರಿಷತ್‌ ಸದಸ್ಯ ಸೂರಜ್ ರೇವಣ್ಣ ಕ್ಷಮೆಯಾಚಿಸಿದ್ದಾರೆ. ಸುವರ್ಣಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ರೇವಣ್ಣ, ‘ಪತ್ನಿಯ ವರ್ತನೆಯ ಬಗ್ಗೆ ಯಾರಿಗಾದರೂ ನೋವಾದರೆ ಕ್ಷಮೆ ಕೋರುತ್ತೇನೆ’ ಎಂದು ಹೇಳಿದ್ದಾರೆ. ‘ಬೈಕ್ … Continued