ಉತ್ತರ ಕನ್ನಡ : ಆಳ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ

ಕಾರವಾರ : ಉತ್ತರ ಕನ್ನ ಜಿಲ್ಲೆಯ ಆಳ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆಯಾದ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ. ಬೋಟ್‌ನಲ್ಲಿದ್ದ ಎಲ್ಲಾ 7 ಮೀನುಗಾರರನ್ನು ಸಕಾಲದಲ್ಲಿ ರಕ್ಷಿಸಲಾಗಿದೆ. ಮುಳುಗಡೆಯಾದ ಬೋಟ್ ‘ಶ್ರೀ ನವರತ್ನ’ ಅಂಕೋಲಾ ತಾಲೂನಿ ಬೆಳಂಬಾರದಿಂದ ಮೀನುಗಾರಿಕೆಗೆ ತೆರಳಿತ್ತು. ಇದು ಹಿಂತಿರುಗಿ ಬರುವಾಗ ಹೊನ್ನಾವರ ಹಾಗೂ ಕುಮಟಾ ವ್ಯಾಪ್ತಿಯ ಆಳ ಸಮುದ್ರದಲ್ಲಿ ಮುಳುಗಲು ಪ್ರಾರಂಭಿಸಿದೆ. … Continued

ಗೋವಾ ಕರಾವಳಿಯಲ್ಲಿ ಕಾರವಾರದ ಬೋಟ್ ಮುಳುಗಡೆ : 22 ಮೀನುಗಾರರ ರಕ್ಷಣೆ

ಬೆತುಲ್ (ಗೋವಾ): ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಕಾರವಾರ ಮೂಲದ ಪರ್ಶಿಯನ್ ಮಾದರಿಯ ಮೀನುಗಾರಿಕಾ ಬೋಟ್ ಗೋವಾದ ಬೆತುಲ್ ಕರಾವಳಿ ಪ್ರದೇಶದಲ್ಲಿ ಮುಳುಗಡೆಯಾಗಿದೆ. ಬೋಟ್‌ನಲ್ಲಿದ್ದ ಎಲ್ಲಾ 22 ಮೀನುಗಾರರನ್ನು ಹತ್ತಿರದಲ್ಲಿದ್ದ ಇತರ ಮೀನುಗಾರರು ರಕ್ಷಿಸಿದ್ದು, ಭಾರಿ ದುರಂತವೊಂದು ತಪ್ಪಿದಂತಾಗಿದೆ. ಕಾರವಾರದ ಮುದಗಾ ನಿವಾಸಿ ದಿನೇಶ ಕಾಂಚನ್ ಎಂಬವರಿಗೆ ಸೇರಿದ “ಶ್ರೀ ಅಮ್ಮ” ಹೆಸರಿನ ಬೋಟ್ ಸುಮಾರು … Continued

ಭಟ್ಕಳ; ಇಬ್ಬರು ಸಮುದ್ರ ಪಾಲು

ಕಾರವಾರ : ಸಮುದ್ರ ತೀರಕ್ಕೆ ವಿಹಾರಕ್ಕೆ ತೆರಳಿದ್ದ ಇಬ್ಬರು ಯುವಕರು ಆಕಸ್ಮಿಕವಾಗಿ ಅಲೆಗಳ ಅಬ್ಬರಕ್ಕೆ ಸಿಲುಕಿ ಸಮುದ್ರ ಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಬುಧವಾರ ಅಪರಾಹ್ನ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಉತ್ತರ ಪ್ರದೇಶದ ಕಾನ್ಪುರ ಮೂಲದ ಅಫ್ರೋಜ್ (34) ಮತ್ತು ರಿಜ್ವಾನ್ (28) ಎಂದು ಹೇಳಲಾಗಿದೆ. ಮೃತರು ಭಟ್ಕಳದ ಸ್ಥಳೀಯ ಗಾರ್ಮೆಂಟ್ಸ್‌ನಲ್ಲಿ … Continued

ವೀಡಿಯೊಗಳು..| ಕುಮಟಾ : ಹೊಲನಗದ್ದೆ-ಕಡ್ಲೆ ಅರಣ್ಯ ಪ್ರದೇಶದಲ್ಲಿ ಕಾಣಿಸಿಕೊಂಡ ಬೆಂಕಿ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಲನಗದ್ದೆಯ ಕಡ್ಲೆ ಗುಡ್ಡದ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ಸಂಜೆ ಬೆಂಕಿ ವ್ಯಾಪಿಸಿದ್ದು  ಸಸ್ಯ ಸಂಕುಲಗಳು ಬೆಂಕಿಗೆ ಆಹುತಿಯಾಗಿದೆ. ಈ ಘಟನೆ ಶುಕ್ರವಾರ ಅಪರಾಹ್ನದ ಸುಮಾರಿಗೆ ನಡೆದಿದೆ ಎಂದು ಹೇಳಲಾಗಿದೆ. ಅರಬ್ಬೀ ಸಮುದ್ರಕ್ಕೆ ಹೊಂದಿಕೊಂಡಿರುವ ಕಡ್ಲೆ ಗುಡ್ಡದಲ್ಲಿ ವ್ಯಾಪಿಸಿರುವ ಬೆಂಕಿ ನಂದಿಸುವುದು ಸುಲಭವಲ್ಲ. ಅರಬ್ಬೀ ಸಮುದ್ರದ ಪಶ್ಚಿಮ … Continued

ಕಾರವಾರ : ಸಮುದ್ರ ಸ್ನಾನ ಮಾಡುವಾಗ ಮುಳುಗಿ ಬಾಲಕ ಸಾವು

ಕಾರವಾರ: ಶಿವರಾತ್ರಿ ಹಿನ್ನೆಲೆಯಲ್ಲಿ ಸಮುದ್ರ ಸ್ನಾನಕ್ಕೆ ಇಳಿದ ಬಾಲಕನೊಬ್ಬ ಮುಳುಗಿ ಮೃತಪಟ್ಟ ಘಟನೆ ಮಂಗಳವಾರ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಮಾಜಾಳಿ ಬಳಿ ಸಂಭವಿಸಿದೆ ಎಂದು ವರದಿಯಾಗಿದೆ. ಗಾಂವಗೇರಿಯ ಯಶ್ (17) ಎಂಬಾತ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಬಾಲಕನಾಗಿದ್ದಾನೆ. ಶಿವರಾತ್ರಿ ಹಿನ್ನೆಲೆಯನ್ನು ಮಾಜಾಳಿ ಸಮುದ್ರಕ್ಕೆ ರಾಮನಾಥ ಪರಿವಾರ ದೇವರು ಸೇರುದಂತೆ ಸುತ್ತಮುತ್ತಲಿನ ದೇವರನ್ನು ಪಲ್ಲಕ್ಕಿಯಲ್ಲಿ ತಂದು … Continued

ಹೊನ್ನಾವರ : ಮಂಕಿಯಲ್ಲಿ ಸಮುದ್ರದಲ್ಲಿ ಮುಳುಗಿ ಇಬ್ಬರು ಸಹೋದರರ ಸಾವು

ಹೊನ್ನಾವರ : ಅರಬ್ಬೀ ಸಮುದ್ರದಲ್ಲಿ ಮುಳುಗಿ ಇಬ್ಬರು ಸಹೋದರರು ಸಾವಿಗೀಡಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಂಕಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ವಿದ್ಯಾರ್ಥಿಗಳಾದ ಮದನ್ ನಾರಾಯಣ ಖಾರ್ವಿ (17) ಮತ್ತು ಸುಜನ್ ನಾರಾಯಣ ಖಾರ್ವಿ (15) ಎಂದು ಗುರುತಿಸಲಾಗಿದೆ. ಅವರು ಗುರುವಾರ ಸಂಜೆ 6:30ರ ಸುಮಾರಿಗೆ ತಮ್ಮ ಪಾತಿ ದೋಣಿಯಲ್ಲಿ ಮೀನುಗಾರಿಕೆಗೆ … Continued

ಸಿಂಧುದುರ್ಗದಲ್ಲಿ ದುರಂತ: ಪಿಕ್ನಿಕ್ ಗೆ ತೆರಳಿದ್ದ ಬೆಳಗಾವಿ ಜಿಲ್ಲೆ ಮೂವರ ದುರ್ಮರಣ, ನಾಲ್ವರು ನಾಪತ್ತೆ

 ಬೆಳಗಾವಿ : ಮಹಾರಾಷ್ಟ್ರದ ಸಿಂಧುದುರ್ಗಕ್ಕೆ ತೆರಳಿದ್ದ ಖಾನಾಪುರದ ಎಂಟು ಜನರ ತಂಡದಲ್ಲಿ ಮೂವರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ. ಮಹಾರಾಷ್ಟ್ರದ ಶಿರೋಡಾ-ವೇಲಗರ್ ಬೀಚ್‌ನಲ್ಲಿ ಶುಕ್ರವಾರ ಘೋರ ದುರಂತ ಸಂಭವಿಸಿದೆ. ಎಂಟು ಜನರಿದ್ದ ಕುಟುಂಬ ಸದಸ್ಯರು ಅರಬ್ಬೀ ಸಮುದ್ರಕ್ಕೆ ಹೋದಾಗ ಪಿಕ್ನಿಕ್ ಮಾರಕವಾಗಿ ಪರಿಣಮಿಸಿದೆ. ಈ ಕುಟುಂಬದ ಮೂವರು ಸದಸ್ಯರು ನೀರಿನಲ್ಲಿ ಮುಳುಗಿ … Continued

ಮುರುಡೇಶ್ವರ : ಪ್ರವಾಸಕ್ಕೆ ಬಂದಿದ್ದ ಬಾಲಕ ಸಮುದ್ರ ಪಾಲು

ಕಾರವಾರ : ಪ್ರವಾಸಕ್ಕೆ ಬಂದಿದ್ದ ಬೆಂಗಳೂರು ಕುಟುಂಬವೊಂದು ಸಮುದ್ರದಲ್ಲಿ ಇಳಿದಿದ್ದಾಗ ಬಾಲಕನೊಬ್ಬ ಕಡಲ ಅಲೆಗೆ ಸಿಲುಕಿ ನೀರು ಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಬೀಚ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬೆಂಗಳೂರಿನ ಬಿದರಳ್ಳಿ ನಿವಾಸಿ ಕೃತಿಕ್ (8), ತಮ್ಮ ಕುಟುಂಬ ಸಮೇತ ಭೇಟಿ ನೀಡಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಬೆಂಗಳೂರಿನ … Continued

ವೀಡಿಯೊ..| ಕಾರವಾರ : ಸಮುದ್ರದ ಅಲೆಗಳ ಅಬ್ಬರಕ್ಕೆ ತೀರಕ್ಕೆ ಬಂದುಬಿದ್ದ ಡಾಲ್ಫಿನ್ ಮೀನು : ರಕ್ಷಿಸಿ ಪುನಃ ನೀರಿಗೆ ಬಿಟ್ಟ ಜನ

ಕಾರವಾರ : ಅರಬ್ಬಿ ಸಮುದ್ರದಲ್ಲಿ ಬಿರುಗಾಳಿಯ ಪರಿಣಾಮದಿಂದ ಉಂಟಾದ ಅಲೆಗಳ ಅಬ್ಬರಕ್ಕೆ ಕಡಲತೀರಕ್ಕೆ ಬಂದು ಸಿಲುಕ್ಕಿದ್ದ ಇಂಡೋ-ಪೆಸಿಫಿಕ್ ಹಂಪ್‌ಬ್ಯಾಕ್‌ ತಳಿಯ ಡಾಲ್ಫಿನ್ ಮೀನನ್ನು ಕಾರವಾರ ತಾಲೂಕಿನ ದೇವಬಾಗ ಕಡಲತೀರದಲ್ಲಿ ರಕ್ಷಣೆ ಮಾಡಲಾಗಿದೆ. ಸೋಮವಾರ ಮಧ್ಯಾಹ್ನ 12ರ ಸುಮಾರಿಗೆ ಡಾಲ್ಫಿನ್‌ ಮೀನಿನ ಮರಿಯನ್ನು ರಕ್ಷಿಸಲಾಗಿದೆ. ಸಮುದ್ರಕ್ಕೆ ಹಿಂತಿರುಗಲು ಡಾಲ್ಫಿನ್ ಒದ್ದಾಡುತ್ತಿರುವುದು ಕಂಡು ಬಂದ ನಂತರ ಅಲ್ಲಿದ್ದ ಜಂಗಲ್ … Continued

ವೀಡಿಯೊ..| ಪಹಲ್ಗಾಮ್‌ ದಾಳಿ : ಅರಬ್ಬೀ ಸಮುದ್ರದಲ್ಲಿ ಕ್ಷಿಪಣಿ ದಾಳಿ ಪರೀಕ್ಷೆ ; ಭಾರತದ ನೌಕಾಪಡೆಯಿಂದ ಸಮರಾಭ್ಯಾಸ

ನವದೆಹಲಿ: ಭಾರತೀಯ ಯುದ್ಧನೌಕೆಗಳು ಅರೇಬಿಯನ್ ಸಮುದ್ರದಲ್ಲಿ ಅನೇಕ ಮಿಸೈಲ್‌ ಪರೀಕ್ಷೆಗಳನ್ನು ನಡೆಸಿದ್ದು, ದೀರ್ಘ-ಶ್ರೇಣಿಯ ನಿಖರ ದಾಳಿಗಳಿಗೆ ತಮ್ಮ ಸನ್ನದ್ಧತೆಯನ್ನು ಪ್ರದರ್ಶಿಸಿವೆ ಹಾಗೂ ನೌಕಾಪಡೆಯು ದೇಶದ ಹಿತಾಸಕ್ತಿಗಳನ್ನು ರಕ್ಷಿಸಲು ಯುದ್ಧಕ್ಕೆ ಸಿದ್ಧವಾಗಿದೆ ಎಂದು ಪ್ರತಿಪಾದಿಸಿದೆ. ಸಮುದ್ರದ ಮಧ್ಯದಲ್ಲಿರುವ ಯುದ್ಧನೌಕೆಗಳಿಂದ ಬ್ರಹ್ಮೋಸ್ ಕ್ರೂಸ್ ಕ್ಷಿಪಣಿಗಳನ್ನು ಹಾರಿಸುತ್ತಿರುವ ಬಹು ದೃಶ್ಯಗಳನ್ನು ನೌಕಾಪಡೆಯು ಹಂಚಿಕೊಂಡಿದೆ. ಈ ಯುದ್ಧನೌಕೆಗಳಲ್ಲಿ ಕೋಲ್ಕತ್ತಾ-ಕ್ಲಾಸ್‌ ವಿಧ್ವಂಸಕ ನೌಕೆಗಳು … Continued