ವೀಡಿಯೊ..| ಕಾರವಾರ : ಸಮುದ್ರದ ಅಲೆಗಳ ಅಬ್ಬರಕ್ಕೆ ತೀರಕ್ಕೆ ಬಂದುಬಿದ್ದ ಡಾಲ್ಫಿನ್ ಮೀನು : ರಕ್ಷಿಸಿ ಪುನಃ ನೀರಿಗೆ ಬಿಟ್ಟ ಜನ

ಕಾರವಾರ : ಅರಬ್ಬಿ ಸಮುದ್ರದಲ್ಲಿ ಬಿರುಗಾಳಿಯ ಪರಿಣಾಮದಿಂದ ಉಂಟಾದ ಅಲೆಗಳ ಅಬ್ಬರಕ್ಕೆ ಕಡಲತೀರಕ್ಕೆ ಬಂದು ಸಿಲುಕ್ಕಿದ್ದ ಇಂಡೋ-ಪೆಸಿಫಿಕ್ ಹಂಪ್‌ಬ್ಯಾಕ್‌ ತಳಿಯ ಡಾಲ್ಫಿನ್ ಮೀನನ್ನು ಕಾರವಾರ ತಾಲೂಕಿನ ದೇವಬಾಗ ಕಡಲತೀರದಲ್ಲಿ ರಕ್ಷಣೆ ಮಾಡಲಾಗಿದೆ. ಸೋಮವಾರ ಮಧ್ಯಾಹ್ನ 12ರ ಸುಮಾರಿಗೆ ಡಾಲ್ಫಿನ್‌ ಮೀನಿನ ಮರಿಯನ್ನು ರಕ್ಷಿಸಲಾಗಿದೆ. ಸಮುದ್ರಕ್ಕೆ ಹಿಂತಿರುಗಲು ಡಾಲ್ಫಿನ್ ಒದ್ದಾಡುತ್ತಿರುವುದು ಕಂಡು ಬಂದ ನಂತರ ಅಲ್ಲಿದ್ದ ಜಂಗಲ್ … Continued

ವೀಡಿಯೊ..| ಪಹಲ್ಗಾಮ್‌ ದಾಳಿ : ಅರಬ್ಬೀ ಸಮುದ್ರದಲ್ಲಿ ಕ್ಷಿಪಣಿ ದಾಳಿ ಪರೀಕ್ಷೆ ; ಭಾರತದ ನೌಕಾಪಡೆಯಿಂದ ಸಮರಾಭ್ಯಾಸ

ನವದೆಹಲಿ: ಭಾರತೀಯ ಯುದ್ಧನೌಕೆಗಳು ಅರೇಬಿಯನ್ ಸಮುದ್ರದಲ್ಲಿ ಅನೇಕ ಮಿಸೈಲ್‌ ಪರೀಕ್ಷೆಗಳನ್ನು ನಡೆಸಿದ್ದು, ದೀರ್ಘ-ಶ್ರೇಣಿಯ ನಿಖರ ದಾಳಿಗಳಿಗೆ ತಮ್ಮ ಸನ್ನದ್ಧತೆಯನ್ನು ಪ್ರದರ್ಶಿಸಿವೆ ಹಾಗೂ ನೌಕಾಪಡೆಯು ದೇಶದ ಹಿತಾಸಕ್ತಿಗಳನ್ನು ರಕ್ಷಿಸಲು ಯುದ್ಧಕ್ಕೆ ಸಿದ್ಧವಾಗಿದೆ ಎಂದು ಪ್ರತಿಪಾದಿಸಿದೆ. ಸಮುದ್ರದ ಮಧ್ಯದಲ್ಲಿರುವ ಯುದ್ಧನೌಕೆಗಳಿಂದ ಬ್ರಹ್ಮೋಸ್ ಕ್ರೂಸ್ ಕ್ಷಿಪಣಿಗಳನ್ನು ಹಾರಿಸುತ್ತಿರುವ ಬಹು ದೃಶ್ಯಗಳನ್ನು ನೌಕಾಪಡೆಯು ಹಂಚಿಕೊಂಡಿದೆ. ಈ ಯುದ್ಧನೌಕೆಗಳಲ್ಲಿ ಕೋಲ್ಕತ್ತಾ-ಕ್ಲಾಸ್‌ ವಿಧ್ವಂಸಕ ನೌಕೆಗಳು … Continued

ಗೋಕರ್ಣ : ಸಮುದ್ರ ಅಲೆಗಳಿಗೆ ಸಿಲುಕಿ ಕೊಚ್ಚಿ ಹೋದ ಇಬ್ಬರು ವೈದ್ಯ ವಿದ್ಯಾರ್ಥಿನಿಯರು

ಕುಮಟಾ : ಇಬ್ಬರು ವಿದ್ಯಾರ್ಥಿನಿಯರು ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಗುರುವಾರ ಸಂಜೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಜಟಾಯುತೀರ್ಥ ಗುಡ್ಡದ ಬಳಿ ನಡೆದಿದೆ. ತಮಿಳುನಾಡಿನ ತಿರುಚಿಯ ಎಸ್.ಆರ್.ಎಂ ಮೆಡಿಕಲ್ ಕಾಲೇಜಿನ ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿನಿಯರಾದ ಕನ್ನಿಮೋಳಿ ಈಶ್ವರನ್(23) ಮತ್ತು ಹಿಂದುಜಾ ನಟರಾಜನ್(23) ಮೃತರು ಎಂದು ಗುರುತಿಸಲಾಗಿದೆ. ತಿರುಚಿಯ ಎಸ್.ಆರ್.ಎಂ ಮೆಡಿಕಲ್ ಕಾಲೇಜಿನ 23 … Continued

ಮಂಗಳೂರು: ಸುರತ್ಕಲ್‌ ಬಳಿ ಸಮುದ್ರದ ಅಲೆಗೆ ಕೊಚ್ಚಿಹೋದ ಮೂವರು ವಿದ್ಯಾರ್ಥಿಗಳು

ಮಂಗಳೂರು: ಹೊಸಬೆಟ್ಟು ಬೀಚ್ ಬಳಿ ಸಮುದ್ರದಲೆಗೆ ಕೊಚ್ಚಿಹೋದ ಮೂವರು ವೈದ್ಯಕೀಯ ವಿದ್ಯಾರ್ಥಿಗಳು! ಮಂಗಳೂರು : ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ನೀರುಪಾಲಾದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್‌ನ ಕುಳಾಯಿ ಜೆಟ್ಟಿ ಬಳಿಯ ಹೊಸಬೆಟ್ಟು ಸಮುದ್ರ ತೀರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಬೆಂಗಳೂರಿನ ಎಎಂಸಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಾದ ಮಂಜುನಾಥ, ಶಿವಕುಮಾರ ಹಾಗೂ ಸತ್ಯವೇಲು ಎಂದು … Continued

ವೀಡಿಯೊ…| ಕುಮಟಾ: ಅಪರೂಪಕ್ಕೆ ಬಲೆಗೆ ಬಿದ್ದ ಬೃಹತ್‌ ಬಿಳಿ ತೊರ್ಕೆ ಮೀನು..!

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಲನಗದ್ದೆ ಕಡ್ಲೆಯ ಅರಬ್ಬೀ ಸಮುದ್ರ ತೀರದಲ್ಲಿ ಅಪರೂಪದ ಬಿಳಿ ತೊರ್ಕೆ ಮೀನು ಬಲೆಯಲ್ಲಿ ಸಿಕ್ಕಿಬಿದ್ದಿದೆ. ಅಪರೂಪಕ್ಕೆ ಸಿಗುವ ಈ ಮೀನು ಅತ್ಯಂತ ಬಲಶಾಲಿಯಾಗಿರುತ್ತದೆ. ಬಲೆಗೆ ಬಿದ್ದ ಮೀನಿನ ತೂಕ ಅಂದಾಜು ೩೦-೩೫ ಕೆಜಿ ಇರಬಹುದು ಎಂದು ಮೀನುಗಾರರು ತಿಳಿಸಿದ್ದಾರೆ. ಇದು ಸಾಮಾನ್ಯ ಮೀನು ಬಲೆಯನ್ನು ಇದು … Continued

ನಾಲ್ವರು ವಿದ್ಯಾರ್ಥಿಗಳ ಸಾವಿನ ನಂತರ ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಕಾರವಾರ : ಕೋಲಾರದ ನಾಲ್ವರು ವಿದ್ಯಾರ್ಥಿನಿಯರು ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಬೆನ್ನಲ್ಲೇ ಮುರುಡೇಶ್ವರದ ಕಡಲತೀರಕ್ಕೆ ಪ್ರವಾಸಿಗರ ಪ್ರವೇಶಕ್ಕೆ ಜಿಲ್ಲಾಡಳಿತ ತಾತ್ಕಾಲಿಕವಾಗಿ ನಿರ್ಬಂಧ ವಿಧಿಸಿದೆ. ಪ್ರ ಈ ಕುರಿತು ಎಸ್​ಪಿ ಎಂ.ನಾರಾಯಣ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾಡಳಿತದ ವತಿಯಿಂದ ಪ್ರವಾಸಕ್ಕೆ ಆಗಮಿಸಿದ್ದ ಉಳಿದ ವಿದ್ಯಾರ್ಥಿಗಳನ್ನು ಕೋಲಾರದ … Continued

ಮುರುಡೇಶ್ವರ ಬೀಚ್‌ ದುರಂತ; ಕೋಲಾರ ಶಾಲೆಯ ಪ್ರಿನ್ಸಿಪಾಲ್, ಅತಿಥಿ ಶಿಕ್ಷಕರು ಅಮಾನತು

ಕೋಲಾರ: ಮುರುಡೇಶ್ವರ ಬೀಚ್‌ನಲ್ಲಿ ನಾಲ್ವರು ಬಾಲಕಿಯರು ಜಲಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ, ಬೇಜವಾಬ್ದಾರಿ ಹಿನ್ನೆಲೆಯಲ್ಲಿ ಜಿಲ್ಲೆಯ ಮುಳಬಾಗಲು ತಾಲೂಕಿನ ಕೊತ್ತೂರು ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು ಹಾಗೂ ಐವರು ಅತಿಥಿ ಶಿಕ್ಷಕರನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ. ಕೋಲಾರ ಮುಳಬಾಗಿಲಿನ ಕೊತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸೇರಿ … Continued

ಮುರುಡೇಶ್ವರ : ಸಮುದ್ರಕ್ಕೆ ಇಳಿದಿದ್ದ ನಾಲ್ವರು ವಿದ್ಯಾರ್ಥಿಗಳು ನಾಪತ್ತೆ

ಕಾರವಾರ : ಸಮುದ್ರದಲ್ಲಿ ಈಜಲು ಇಳಿದಿದ್ದ ಓರ್ವ ವಿದ್ಯಾರ್ಥಿನಿ ಮೃತಪಟ್ಟು ಮೂವರು ಪ್ರವಾಸಿ ವಿದ್ಯಾರ್ಥಿಗಳು ನಾಪತ್ತೆಯಾಗಿದ್ದುಘಟನೆ ಮಂಗಳವಾರ ಮುರುಡೇಶ್ವರ ಕಡಲ ತೀರದಲ್ಲಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಮಂಗಳವಾರ (ಡಿಸೆಂಬರ್ 10) ಸಂಜೆ ಮುರುಡೇಶ್ವರ ಕಡಲ ತೀರದಲ್ಲಿ ಸಮುದ್ರ ದಂಡೆಯ ಸಮೀಪದ ನೀರಿನಲ್ಲಿ ಆಟವಾಡುತ್ತಿದ್ದ 54 ವಿದ್ಯಾರ್ಥಿಗಳ ಪೈಕಿ ನಾಲ್ವರು ಸಮುದ್ರದಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಅವರಲ್ಲಿ … Continued

ಮುರುಡೇಶ್ವರ : ಸಮುದ್ರದಲ್ಲಿ ಮುಳುಗಿ ವಿದ್ಯಾರ್ಥಿ ಸಾವು, ಓರ್ವನ ರಕ್ಷಣೆ

ಕಾರವಾರ : ಪ್ರವಾಸಕ್ಕೆ ಬಂದಿದ್ದ ವೇಳೆ ಬೆಂಗಳೂರು ಮೂಲದ ಓರ್ವ ವಿದ್ಯಾರ್ಥಿ ಸಮುದ್ರದ ಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲ ತೀರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮತ್ತೊಬ್ಬನನ್ನು ರಕ್ಷಣೆ ಮಾಡಲಾಗಿದೆ. ಮೃತ ವಿದ್ಯಾರ್ಥಿಯನ್ನು ಬೆಂಗಳೂರಿನ ವಿದ್ಯಾಸೌಧ ಪಿ.ಯು ಕಾಲೇಜು ವಿದ್ಯಾರ್ಥಿ ಗೌತಮ (17) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ವಿದ್ಯಾ ಸೌಧ … Continued

ಶುಕ್ರವಾರ ಅರಬ್ಬಿ ಸಮುದ್ರದಲ್ಲಿ ರೂಪುಗೊಳ್ಳಲಿದೆ ಚಂಡಮಾರುತ; ಹವಾಮಾನ ಇಲಾಖೆ

ನವದೆಹಲಿ : ಶುಕ್ರವಾರ ಗುಜರಾತ್ ಕರಾವಳಿಯ ಉತ್ತರ ಅರಬ್ಬಿ ಸಮುದ್ರದಲ್ಲಿ ಚಂಡಮಾರುತವು ರೂಪುಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಗುರುವಾರ ತಿಳಿಸಿದೆ. ಆದಾಗ್ಯೂ, ಚಂಡಮಾರುತವು ಭಾರತದ ಕರಾವಳಿಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಕಡಿಮೆ, ಏಕೆಂದರೆ ಸೌರಾಷ್ಟ್ರ-ಕಚ್‌ನಲ್ಲಿ ಚಾಲ್ತಿಯಲ್ಲಿರುವ ಆಳವಾದ ಖಿನ್ನತೆಯು ಶುಕ್ರವಾರದ ವೇಳೆಗೆ ಉತ್ತರ ಅರೇಬಿಯನ್ ಸಮುದ್ರಕ್ಕೆ ಚಲಿಸುತ್ತದೆ ಎಂದು ಅದು … Continued