ಸಿ.ಡಿ. ಪ್ರಕರಣ : ಸಿಬಿಐ ತನಿಖೆ ಬಗ್ಗೆ ಸಿಎಂ ಬೊಮ್ಮಾಯಿ ಜೊತೆ ಚರ್ಚೆ- ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು : ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ ಜಾರಕಿಹೊಳಿ ನನಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಬುಧವಾರ ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಿ.ಡಿ. ಪ್ರಕರಣವನ್ನು ಸಿಬಿಐಗೆ ವಹಿಸುವ ವಿಷಯದ ಬಗ್ಗೆ ರಮೇಶ ಜಾರಕಿಹೊಳಿ ನನಗೆ ಮಾಹಿತಿ … Continued

ಬೆಂಗಳೂರಿನಲ್ಲಿ ಸ್ಥಗಿತಗೊಳಿಸಿದ ಟೋಯಿಂಗ್ ವ್ಯವಸ್ಥೆ ಪುನಃ ಜಾರಿ ಇಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು : ಬೆಂಗಳೂರು ನಗರದಲ್ಲಿ ಸ್ಥಗಿತಗೊಳಿಸಲಾಗಿರುವ ಟೋಯಿಂಗ್ ವ್ಯವಸ್ಥೆಯನ್ನು ಪುನಃ ಜಾರಿ ಮಾಡುವ ಯಾವುದೇ ಪ್ರಸ್ತಾವನೆ ಸದ್ಯಕ್ಕೆ ಸರ್ಕಾರದ ಮುಂದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಸಚಿವರು, ನಗರದಲ್ಲಿ ಸಾರ್ವಜನಿಕ ಸ್ನೇಹಿ ಮತ್ತು ಸುಗಮ ವಾಹನ ಪಾರ್ಕಿಂಗ್ ವ್ಯವಸ್ಥೆ ಜಾರಿಗೊಳಿಸುವ ಬಗ್ಗೆ ವಿಸ್ತೃತವಾದ ಚರ್ಚೆ ಹಾಗೂ … Continued

ಪ್ರವೀಣ ಹಂತಕರ ಸುಳಿವು ಸಿಕ್ಕಿದೆ, ಶೀಘ್ರದಲ್ಲೇ ಬಂಧಿಸ್ತೇವೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಪ್ರವೀಣ್ ಬೆಳ್ಳಾರೆ ಹತ್ಯೆ ಪ್ರಕರಣದಲ್ಲಿ ಹಂತಕರ ಸುಳಿವು ಸಿಕ್ಕಿದೆ. ಶೀಘ್ರವೇ ಅವರ ಬಂಧನವಾಗಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವೀಣ ಹತ್ಯೆ ಪ್ರಕರಣದ ಸಂಬಂಧ ಬೆಂಗಳೂರಿನಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಇವರ ಮೇಲೆ ಕೃತ್ಯಕ್ಕೆ ಸಹಾಯ ಮಾಡಿದ ಆರೋಪವಿದೆ ಮತ್ತೆ ಅನೇಕರನ್ನು ವಶಕ್ಕೆ ಪಡೆದು ವಿಚಾರ ಮಾಡಲಾಗುತ್ತಿದೆ. … Continued

ಅಡಕೆ ಬೆಲೆಯ ಅಂದಾಜು ವೆಚ್ಚ ಪರಿಷ್ಕರಣೆಗೆ ಕೇಂದ್ರಕ್ಕೆ ನಿಯೋಗ : ಧಾರಣೆ ಬಗ್ಗೆ ಆತಂಕ ಬೇಡ ಎಂದು ಸಚಿವ ಅರಗ ಜ್ಞಾನೇಂದ್ರ ಅಭಯ

ಬೆಂಗಳೂರು : ಅಡಕೆ ಧಾರಣೆಯ ಬಗ್ಗೆ ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಗೃಹ ಸಚಿವರು ಹಾಗೂ ರಾಜ್ಯ ಅಡಕೆ ಟಾಸ್ಕ್ ಫೋರ್ಸ್ ಅಧ್ಯಕ್ಷ ಅರಗ ಜ್ಞಾನೇಂದ್ರ ಬೆಳೆಗಾರರಿಗೆ ಅಭಯ ನೀಡಿದ್ದಾರೆ. ಕೇಂದ್ರ ಸರ್ಕಾರವು ನಿಗದಿ ಪಡಿಸಿರುವ ಅಡಕೆ ಬೆಲೆಯ ಅಂದಾಜು ವೆಚ್ಚವನ್ನು ಪರಿಷ್ಕರಣೆ ಮಾಡುವಂತೆ ಒತ್ತಾಯಿಸಲು ಕೇಂದ್ರಕ್ಕೆ ನಿಯೋಗ ಹೋಗಿ ಮನವಿ ಮಾಡಲಿದೆ. ಕೇಂದ್ರ ಕೃಷಿ … Continued

ಹುಬ್ಬಳ್ಳಿ ಹಿಂಸಾಚಾರದಲ್ಲಿ ಹಲವರ ಕೈವಾಡವಿದೆ, ಶೀಘ್ರವೇ ಎಲ್ಲರ ಬಂಧನ: ಗೃಹ ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು: ಹುಬ್ಬಳ್ಳಿ ಹಿಂಸಾಚಾರ ಪ್ರಕರಣದ ಹಿಂದೆ ಹಲವು ಕಾಣದ ಕೈಗಳು ಕೆಲಸ ಮಾಡಿವೆ. ಪ್ರಕರಣದಲ್ಲಿ ಭಾಗಿಯಾದವರನ್ನು ಎಲ್ಲರನ್ನೂ ಬಂಧಿಸಿವ ಜಾವಾಬ್ದಾರಿ ನಿಭಾಯಿಸುತ್ತೇವೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಸಾಮಾಜಿಕ ಸೌಹಾರ್ದತೆ ಕದಡುವ ಸಂಘಟನೆಗಳ ಚಟುವಟಿಕೆಗಳನ್ನು ನಿಯಂತ್ರಿಸುವುದು ಹಾಗೂ ಅಂತಹ ಸಂಘಟನೆಗಳನ್ನು ನಿಷೇಧಿಸುವುದಕ್ಕೆ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿಸಿದ್ದಾರೆ. ಹುಬ್ಬಳ್ಳಿಯ ಘಟನೆಯಲ್ಲಿ ಭಾರಿ … Continued

ಹಳೇಹುಬ್ಬಳ್ಳಿ ಹಿಂಸಾಚಾರದ ಹಿಂದೆ ಮತೀಯ ಸಂಘಟನೆಗಳಿದ್ದರೆ ತನಿಖೆಯಲ್ಲಿ ಹೊರಗೆ ಬಂದೇ ಬರುತ್ತದೆ: ಗೃಹ ಸಚಿವ ಅರಗ ಜ್ಞಾನೇಂದ್ರ

ಹುಬ್ಬಳ್ಳಿ: ಶನಿವಾರ ಒಂದು ದೊಡ್ಡ ಗುಂಪು ಕಾನೂನು ಕೈಗೆ ತಗೆದುಕೊಂಡಿದೆ. ಪೊಲೀಸರ ಮೇಲೆ ಹಲ್ಲೆ ಮಾಡಿ, ವಾಹನಗಳನ್ನು ಜಖಂ ಮಾಡಿದೆ. ಓಣಿಯಲ್ಲಿ ಕಲ್ಲು ಎಸೆದು ಅರಾಜಕತೆ ಸೃಷ್ಟಿ ಮಾಡಿದನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ನಗರದ ದಿಡ್ಡಿಕೇರಿ ಓಣಿಯಲ್ಲಿರುವ ಹನುಮಂತನ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರ ಜೊತೆ … Continued

ಚಂದ್ರು ಹತ್ಯೆ ಪ್ರಕರಣ ಸಿಐಡಿಗೆ ತನಿಖೆಗೆ ವಹಿಸಿದ ರಾಜ್ಯ ಸರ್ಕಾರ

ಬೆಂಗಳೂರು; ಭಾರೀ ಚರ್ಚೆಗೆ ಕಾರಣವಾಗಿರುವ ಬೆಂಗಳೂರು ನಗರದ ಚಂದ್ರು ಕೊಲೆ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಸಿಐಡಿ ತನಿಖೆ ಬಗ್ಗೆ ಮಾಹಿತಿ ನೀಡಿದ್ದಾರೆ. ಬೆಂಗಳೂರು ನಗರದ, ಹಳೆಗುಡ್ಡದ ಹಳ್ಳಿ ಪ್ರದೇಶದಲ್ಲಿ ನಡೆದ, ಚಂದ್ರಶೇಖರ್ ಎಂಬ ಯುವಕನ ಬರ್ಬರ ಹತ್ಯೆ ಪ್ರಕರಣವನ್ನು, ರಾಜ್ಯ ಸರಕಾರ ಸಿಐಡಿಗೆ ವಹಿಸಿದೆ ಎಂದು … Continued

ಸಂಚಾರ ನಿಯಮ ಉಲ್ಲಂಘನೆ: ರಾಜ್ಯದಲ್ಲಿ 3 ವರ್ಷದಲ್ಲಿ ಸಂಗ್ರಹಿಸಿದ ಹಣವೆಷ್ಟು ಗೊತ್ತಾ..?

ಬೆಂಗಳೂರು: ಸಂಚಾರ ನಿಯಮಗಳನ್ನು ಉಲ್ಲಂಘನೆ ಪ್ರಕರಣಗಳಿಂದ ಕಳೆದ ಮೂರು ವರ್ಷದಲ್ಲಿ 660.97 ಕೋಟಿ ರೂ.ಗಳ ದಂಡ ಸಂಗ್ರಹಿಸಲಾಗಿದೆ…! ಕಾಂಗ್ರೆಸ್ ಸದಸ್ಯ ದಿನೇಶ್ ಗೂಳಿ ಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ ಈ ಮಾಹಿತಿ ನೀಡಿದ್ದಾರೆ. ಸಂಚಾರ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗುತ್ತಿದ್ದು, ಪ್ರಕರಣಗಳಿಂದ ಸಂಗ್ರಹಿಸಲಾದ … Continued

ಹಿಂದೂ ಸಂಘಟನೆ ಕಾರ್ಯಕರ್ತನ ಕೊಲೆ ಪ್ರಕರಣ: ಸುಳಿವು ಸಿಕ್ಕಿದೆ, ಶೀಘ್ರವೇ ಬಂಧಿಸ್ತೇವೆ-ಆರಗ ಜ್ಞಾನೇಂದ್ರ

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದಲ್ಲಿ ಯಾರು ಭಾಗಿಯಾಗಿದ್ದಾರೆ ಎಂದು ಸುಳಿವು ಸಿಕ್ಕಿದೆ. ಕೊಲೆ ಮಾಡಿದ ಆರೋಪಿಗಳನ್ನು ಬಂಧಿಸಿ ಅವರಿಗೆ ಶಿಕ್ಷೆ ಕೊಡಿಸುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಜಾಬ್ ಗಲಾಟೆಗೂ ಇದಕ್ಕೂ ಸಂಬಂಧ ಇದೆ ಎನಿಸುವುದಿಲ್ಲ. ಐವರು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬುದು ತಿಳಿದುಬಂದಿದೆ. ಏನು … Continued

ಶಿಕ್ಷಕರಿಗೆ ಹಿಜಾಬ್ ಧರಿಸಲು ಅಡ್ಡಿ ಆರೋಪ: ಪರಿಶೀಲನೆ ನಂತರ ಆದೇಶ ಮಾಡ್ತೇನೆ ಎಂದ ಗೃಹ ಸಚಿವರು

ಬೆಂಗಳೂರು: ಹಿಜಾಬ್ ಧರಿಸಿದ ಕಾರಣಕ್ಕಾಗಿ ಶಿಕ್ಷಕರನ್ನು ತರಗತಿ ಒಳಗಡೆ ಬಿಡದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಕುರಿತು ಪರಿಶೀಲನೆ ನಡೆಸಿ ಆದೇಶ ಹೊರಡಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಭರವಸೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಈ ಸುದ್ದಿ ನಮ್ಮ ಗಮನಕ್ಕೆ ಬಂದಿದೆ. ಈ ಬಗ್ಗೆ ಪರಿಶೀಲನೆ ನಡೆಸಿ ಒಂದು ಆದೇಶ ಮಾಡುತ್ತೇವೆ ಎಂದು … Continued