ಪಹಲ್ಗಾಮ್ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ | ದಾಳಿಯಲ್ಲಿ ಭಾಗಿಯಾಗಿದ್ದ ಪಾಕ್ ಎಲ್‌ಇಟಿ ಭಯೋತ್ಪಾದಕರಿಗೆ ಆಶ್ರಯ : ಇಬ್ಬರ ಬಂಧನ

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿ ಪ್ರಕರಣದ ಪ್ರಮುಖ ಬೆಳವಣಿಗೆಯಲ್ಲಿ, ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಯು 26 ಪ್ರವಾಸಿಗರನ್ನು ಕೊಂದುಹಾಕಿದ ಮತ್ತು 16 ಜನರನ್ನು ತೀವ್ರವಾಗಿ ಗಾಯಗೊಳಿಸಿದ ಕ್ರೂರ ಪಹಲ್ಗಾಮ್‌ ದಾಳಿಗೆ ಕಾರಣರಾದ ಲಷ್ಕರ್-ಎ-ತೊಯ್ಬಾ (LeT) ಭಯೋತ್ಪಾದಕರಿಗೆ ಆಶ್ರಯ ನೀಡಿದ್ದಕ್ಕಾಗಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದೆ. ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ದಾಳಿಯಲ್ಲಿ 26 ಅಮಾಯಕ ಭಾರತೀಯರ … Continued

ಮದ್ಯ ಹಗರಣ ; ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಆಂಧ್ರ ಮಾಜಿ ಸಿಎಂ ಜಗನ್ಮೋಹನ ರೆಡ್ಡಿ ಆಪ್ತನ ಬಂಧನ

ಬೆಂಗಳೂರು: ಬಹುಕೋಟಿ ಮೌಲ್ಯದ ಮದ್ಯ ಹಗರಣದಲ್ಲಿ ಆಂದ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ ಅವರ ಸಹಾಯಕ ಮತ್ತು ವೈಎಸ್ಆರ್ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಚೆವಿರೆಡ್ಡಿ ಭಾಸ್ಕರ ರೆಡ್ಡಿ ಅವರನ್ನು ಆಂಧ್ರ ಪೊಲೀಸರು ಬಂಧಿಸಿದ್ದಾರೆ. ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಅವರ ವಿರುದ್ಧ ಲುಕೌಟ್ ನೋಟಿಸ್ ಜಾರಿ ಮಾಡಿದ್ದರಿಂದ ಮಂಗಳವಾರ ರಾತ್ರಿ … Continued

ಸಂಡೂರಿನಲ್ಲಿ ಸಿಕ್ಕಿಬಿದ್ದ ʼಬ್ಲ್ಯಾಕ್ ಮೇಲ್ʼ ಕಾಮುಕ ; ಈತನ ಮೊಬೈಲ್‌ ನಲ್ಲಿತ್ತು 13500ಕ್ಕೂ ಹೆಚ್ಚು ಮಹಿಳೆಯರ ಅಶ್ಲೀಲ ಫೋಟೋ, ವೀಡಿಯೊಗಳು !

ಮುಂಬೈ ಪೊಲೀಸರು ಎರಡು ವರ್ಷಗಳ ಕಾಲ ಹುಡುಕಾಟ ನಡೆಸಿದ ನಂತರ ಸೈಬರ್ ಲೈಂಗಿಕ ಅಪರಾಧಗಳಿಗೆ ಬೇಕಾಗಿದ್ದ 25 ವರ್ಷದ ವ್ಯಕ್ತಿಯನ್ನು ಕರ್ನಾಟಕದ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಬಂಧಿಸಿದ್ದಾರೆ. ಆರೋಪಿ ಶುಭಂ ಕುಮಾರ ಮನೋಜಪ್ರಸಾದ ಸಿಂಗ್ ಎಂಬಾತನನ್ನು ಸಂಡೂರು ಪಟ್ಟಣದಲ್ಲಿ ಪತ್ತೆಹಚ್ಚಲಾಗಿದ್ದು, ಅಲ್ಲಿ ಈತ ಖಾಸಗಿ ಕಂಪನಿಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ. ಮುಂಬೈನ ವಿದ್ಯಾರ್ಥಿನಿಯೊಬ್ಬರು ನೀಡಿದ … Continued

ಮದುವೆಯಾಗಲು ಗೋವಾಕ್ಕೆ ಹೋಗಿದ್ದ ಬೆಂಗಳೂರಿನ ಜೋಡಿ ; ಆದ್ರೆ ಕನಸಿನ ಪ್ರವಾಸ ಪ್ರೇಯಸಿ ಕೊಲೆಯಲ್ಲಿ ಅಂತ್ಯ

ಪಣಜಿ : ಮನಕಲಕುವ ಘಟನೆಯೊಂದರಲ್ಲಿ, ಮದುವೆಯಲ್ಲಿ ಕೊನೆಗೊಳ್ಳಬೇಕಿದ್ದ ಗೋವಾ ಪ್ರವಾಸವು ಪ್ರೇಯಸಿಯ ಕೊಲೆಯಲ್ಲಿ ಅಂತ್ಯ ಕಂಡಿದೆ. ತನ್ನ ಪ್ರೇಯಸಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಬೆಂಗಳೂರಿನ 22 ವರ್ಷದ ಯುವಕನನ್ನು ಬಂಧಿಸಲಾಗಿದೆ. ದಕ್ಷಿಣ ಗೋವಾದ ಅರಣ್ಯ ಪ್ರದೇಶದಲ್ಲಿ ಯುವತಿಯ ಶವ ಪತ್ತೆಯಾಗಿದ್ದು ಗೋವಾಕ್ಕೆ ಮದುವೆಯಾಗಬೇಕೆಂದು ಬಂದಿದ್ದ ಯುವತಿಯ ಬದುಕು ದುರಂತದಲ್ಲಿ ಕೊನೆಗೊಂಡಿತು. ಉತ್ತರ ಬೆಂಗಳೂರಿನ ನಿವಾಸಿ … Continued

ಬೆಂಗಳೂರು ಮಹಿಳೆಗೆ ಬ್ಲ್ಯಾಕ್‌ ಮೇಲ್, ಅತ್ಯಾಚಾರ ಯತ್ನ: ಕೇರಳ ಅರ್ಚಕನ ಬಂಧನ

ಬೆಂಗಳೂರು: ಮಹಿಳೆಯೊಬ್ಬರಿಗೆ ಬ್ಲ್ಯಾಕ್‌ಮೇಲ್ ಮಾಡಿ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ಬೆಂಗಳೂರು ಪೊಲೀಸರು ಕೇರಳದ ಅರ್ಚಕರೊಬ್ಬರನ್ನು ಬಂಧಿಸಿದ್ದಾರೆ ಮತ್ತು ತಲೆಮರೆಸಿಕೊಂಡಿರುವ ಇನ್ನೊಬ್ಬ ಅರ್ಚಕನಿಗಾಗಿ ಹುಡುಕಾಟ ನಡೆಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಬಂಧಿತ ವ್ಯಕ್ತಿಯನ್ನು ಕೇರಳದಲ್ಲಿರುವ ಪೆರಿಂಗೊಟ್ಟುಕರ ದೇವಸ್ಥಾನದ ಅರುಣ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದೇವಾಲಯದ ಪ್ರಧಾನ ಅರ್ಚಕ ಉನ್ನಿ ದಾಮೋದರನ್‌ … Continued

ದಾಂಡೇಲಿ | ವೃದ್ಧೆ ಮೇಲೆ ಅತ್ಯಾಚಾರ ಪ್ರಕರಣ ; ಪರಾರಿಯಾಗಿದ್ದ ಆರೋಪಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ನಗರ ವ್ಯಾಪ್ತಿಯಲ್ಲಿ 60 ವರ್ಷದ ವೃದ್ಧೆಯ ಮೇಲೆ ನಡೆದ ಅತ್ಯಾಚಾರ ಹಾಗೂ ದರೋಡೆ ಪ್ರಕರಣದ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬಂಧಿಸಲು ತೆರಳಿದ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ, ತಪ್ಪಿಸಿಕೊಳ್ಳಲು ಯತ್ನಿಸಿದಾಗ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಾತನನ್ನು ಬಂಧಿಸಲಾಗಿದೆ ಎಂದು … Continued

ಬೆಂಗಳೂರು | ಪತ್ನಿಯ ಶಿರಚ್ಛೇದ ಮಾಡಿದ ಗಂಡ; ರುಂಡ ಹಿಡಿದುಕೊಂಡು ಪೊಲೀಸ್ ಠಾಣೆಗೆ ಬಂದ…!

 ಬೆಂಗಳೂರು: ಬೆಂಗಳೂರಿನ ಆನೇಕಲ್ ಪ್ರದೇಶದಲ್ಲಿ 28 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿಯ ಶಿರಚ್ಛೇದ ಮಾಡಿ, ಕತ್ತರಿಸಿದ ತಲೆಯನ್ನು ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿ ಶಂಕರ ಎಂಬಾತ ತನ್ನ 26 ವರ್ಷದ ಪತ್ನಿ ಮಾನಸಾಳ  ಜೊತೆ ನಡೆದ ತೀವ್ರ ಜಗಳದಲ್ಲಿ ಆಕೆಯನ್ನು ಕೊಲೆ ಮಾಡಿದ್ದಾನೆ. ಪೊಲೀಸ್ ಮೂಲಗಳ ಪ್ರಕಾರ, ವಿವಾಹಿತ ದಂಪತಿ ಶಂಕರ … Continued

ಬೆಂಗಳೂರು ಕಾಲ್ತುಳಿತ ಪ್ರಕರಣ : ಕೆಎಸ್‌ಸಿಎ ಪದಾಧಿಕಾರಿಗಳಿಗೆ ಹೈಕೋರ್ಟ್‌ ನಿಂದ ದೊಡ್ಡ ರಿಲೀಫ್‌

ಬೆಂಗಳೂರು : ಆರ್‌ಸಿಬಿ ವಿಜಯೋತ್ಸವಕ್ಕೂ ಮುನ್ನ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಮುಂಭಾಗದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯ ಪದಾಧಿಕಾರಿಗಳ ವಿರುದ್ಧ ಬಲವಂತ ಕ್ರಮಕೈಗೊಳ್ಳಬಾರದು ಎಂದು ಶುಕ್ರವಾರ ಹೈಕೋರ್ಟ್‌ ಆದೇಶಿಸಿದೆ. ಅಲ್ಲದೆ, ಕೆಎಸ್‌ಸಿಎ ಪದಾಧಿಕಾರಿಗಳು ನ್ಯಾಯಾಲಯದ ವ್ಯಾಪ್ತಿ ತೊರೆಯಬಾರದು ಮತ್ತು ತನಿಖೆಗೆ ಎಲ್ಲಾ ರೀತಿಯಲ್ಲೂ ಸಹಕರಿಸಬೇಕು ಎಂದೂ ಹೈಕೋರ್ಟ್‌ ಸೂಚಿಸಿದೆ. … Continued

ಆರ್‌ಸಿಬಿ, ಈವೆಂಟ್ ಮ್ಯಾನೇಜ್‌ಮೆಂಟ್ ಕಂಪನಿ ಅಧಿಕಾರಿಗಳು ಸೇರಿ ನಾಲ್ವರ ಬಂಧನ

ಬೆಂಗಳೂರು:ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಈ ಘಟನೆಯು ಬುಧವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಮೊದಲ ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿ 11 ಜನರ ಸಾವಿಗೆ ಕಾರಣವಾಯಿತು. ಪೊಲೀಸರ ಪ್ರಕಾರ, ಆರ್‌ಸಿಬಿಯ ಉನ್ನತ ಮಾರ್ಕೆಟಿಂಗ್ ಅಧಿಕಾರಿ ನಿಖಿಲ್ ಸೋಸಲೆ ಬಂಧಿತರಲ್ಲಿ ಒಬ್ಬರು. ಅವರನ್ನು ವಿಮಾನ ನಿಲ್ದಾಣಕ್ಕೆ … Continued

ಬೆಂಗಳೂರು ಕಾಲ್ತುಳಿತ ಘಟನೆ ; ಆರ್‌ ಸಿಬಿ, ಕೆಎಸ್‌ಸಿಎ, ಈವೆಂಟ್ ಸಂಸ್ಥೆಯ ಅಧಿಕಾರಿಗಳ ಬಂಧನಕ್ಕೆ ಸಿಎಂ ಸೂಚನೆ

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಸಿಬಿ, ಡಿಎನ್‌ಎ, ಕೆಎಸ್‌ಸಿಎ ಪ್ರತಿನಿಧಿಗಳನ್ನು ಬಂಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಕಾಲ್ತುಳಿತ ಪ್ರಕರಣದಲ್ಲಿ ಆರ್‌ಸಿಬಿ ಫ್ರಾಂಚೈಸಿ- ಎ1, ಡಿಎನ್‌ ಎಂಟರ್‌ಟೈನ್‌ಮೆಂಟ್‌ ಸಂಸ್ಥೆ (ಈವೆಂಟ್‌ ಮ್ಯಾನೇಜ್‌ಮೆಂಟ್‌) ಎ2, ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯು ಎ3 ಆರೋಪವನ್ನು ಹೊತ್ತಿವೆ. ಕಬ್ಬನ್‌ಪಾರ್ಕ್‌ ಪೊಲೀಸ್‌ … Continued