ಕೆಪಿಎಸ್‌ಸಿ ಹಗರಣ : ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ ಸಿಐಡಿ ವಶಕ್ಕೆ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ (KSPC) ನಡೆಸಿದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಪೊಲೀಸ್ ಇಲಾಖೆಯ ಅಪರಾಧ ತನಿಖಾ ಇಲಾಖೆ (CID) ಶನಿವಾರ ಐಎಎಸ್ ಅಧಿಕಾರಿ ಜ್ಞಾನೇಂದ್ರಕುಮಾರ ಗಂಗ್ವಾರ್ ಅವರನ್ನು ವಶಕ್ಕೆ ಪಡೆದಿದೆ ಎಂದು ತಿಳಿದುಬಂದಿದೆ. ಅವರನ್ನು ಭಾನುವಾರ ನ್ಯಾಯಾಧೀಶರ ಎದುರು ಹಾಜರುಪಡಿಸುವ ಸಾಧ್ಯತೆ ಇದೆ. 2016ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ … Continued

ವಿಡಿಯೋ | ನೇಪಾಳ ಪ್ರವಾಹ : ಸಾವಿನಲ್ಲೂ ಬಿಡದ ದುರಾಸೆ ; ನದಿಯಿಂದ ಶವ ಎಳೆದು ಕಿವಿಯೋಲೆ ಕದ್ದ ದುಷ್ಕರ್ಮಿಗಳು !

ಕಠ್ಮಂಡು: ಚೀನಾ–ನೇಪಾಳ ಗಡಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ಹಠಾತ್‌ ಪ್ರವಾಹದ ಬಳಿಕ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿರುವ ನಡುವೆಯೇ, ಪ್ರವಾಹದಲ್ಲಿ ಕೊಚ್ಚಿಹೋಗಿದ್ದ ಮಹಿಳೆಯೊಬ್ಬರ ಮೃತದೇಹದಿಂದ ಚಿನ್ನದ ಕಿವಿಯೋಲೆಗಳನ್ನು ಕಳವು ಮಾಡಿದ ಆರೋಪದಡಿ ಇಬ್ಬರನ್ನು ನೇಪಾಳ ಪೊಲೀಸರು ಬಂಧಿಸಿದ್ದಾರೆ. ಮೃತ ಮಹಿಳೆಯ ದೇಹದಿಂದ ಇಬ್ಬರು ವ್ಯಕ್ತಿಗಳು ಚಿನ್ನದ ಕಿವಿಯೋಲೆಗಳನ್ನು ತೆಗೆದುಕೊಳ್ಳುತ್ತಿರುವ ದೃಶ್ಯವಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ … Continued

ಹೆಂಡತಿಯನ್ನು ಕತ್ತು ಹಿಸುಕಿ ಕೊಂದು ಹೃದಯಾಘಾತದಿಂದ ಸತ್ತಿದ್ದಾಳೆ ಎಂದು ಕಥೆ ಕಟ್ಟಿದ್ದ ಪತಿ ಅರೆಸ್ಟ್‌

ಹೊನ್ನಾವರ: ಹೆಂಡತಿಯನ್ನು ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ಕತೆ ಕಟ್ಟಿದ್ದ ಗಂಡನನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಈ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಂಕಿ ಠಾಣೆ ವ್ಯಾಪ್ತಿಯ ದೊಡ್ಡಗುಂದೆಂಬಲ್ಲಿ ನಡೆದಿದೆ. ಹೊನ್ನಾವರ ತಾಲೂಕಿನ ದೊಡ್ಡಗುಂದ ಗ್ರಾಮದ ಗಣಪತಿ ನಾಯ್ಕ ಬಂಧಿತ ಆರೋಪಿಯಾಗಿದ್ದು, . ಆತನ ಪತ್ನಿ ಮಂಗಲಾ ನಾಯ್ಕ (28) ಕೊಲೆಯಾದ … Continued

ಪೊಲೀಸರಿಗೆ 3 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್‌

ಬೆಂಗಳೂರು: ವಿವಾದವಿದ್ದ  ಉಯಿಲು ಪತ್ರಕ್ಕೆ (ವಿಲ್‌) ಸಾಕ್ಷಿಯಾಗಿ ಸಹಿ ಹಾಕಿದ್ದ  ವ್ಯಕ್ತಿಯೊಬ್ಬರಿಗೆ ತನಿಖೆಗೆ ಹಾಜರಾಗುವಂತೆ ನೋಟಿಸ್‌ ನೀಡಿದ ದಿನವೇ ಅವರನ್ನು ಬಂಧಿಸಿದ ಬೆಂಗಳೂರಿನ ವೈಟ್‌ಫೀಲ್ಡ್‌ ಪೊಲೀಸರ ಕ್ರಮಕ್ಕೆ ಗುರುವಾರ ಕರ್ನಾಟಕ ಹೈಕೋರ್ಟ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಅಲ್ಲದೇ, ತನಿಖಾಧಿಕಾರಿ, ಅವರ ಮೇಲಧಿಕಾರಿಗಳಾದ ಉಪ ಪೊಲೀಸ್‌ ಆಯುಕ್ತರು (ಡಿಸಿಪಿ) ಮತ್ತು ಸಹಾಯಕ ಪೊಲೀಸ್‌ ಆಯುಕ್ತರಿಗೆ (ಎಸಿಪಿ) ತಲಾ … Continued

ಬ್ರಹ್ಮಾವರ : ಹೆತ್ತ ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಮಗ !

ಉಡುಪಿ :  ಮಗನೊಬ್ಬ ಹೆತ್ತ ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಭೀಕರವಾಗಿ ಹತ್ಯೆ ಮಾಡಿದ ಘಟನೆ ಜಿಲ್ಲೆಯ ಬ್ರಹ್ಮಾವರದ ಗಾಂಧಿನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಗಾಂಧಿನಗರದ ನಿವಾಸಿಗಳಾದ ಮೆಹಬೂಬ್ ಅಲಿ ಮತ್ತು ಅವರ ಪತ್ನಿ ಶಂಶಾದ್ ಬೇಗಂ ಮೃತಪಟ್ಟರು ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ಶಾಹಿದ್ ಅಲಿ ಎಂಬಾತನನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. … Continued

ಉದ್ಯಮಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು

ಉಡುಪಿ : ಉದ್ಯಮಿ ಹಾಗೂ ಕಾಂಗ್ರೆಸ್‌ ನಾಯಕ ಮುದರಂಗಡಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಕುಖ್ಯಾತ ಗ್ಯಾಂಗ್‌ಸ್ಟರ್ ಮುಂಬೈನ ಅನುಜ ಪಾಟೀಲ(35) ಪೊಲೀಸರು ಬಂಧಿಸಿದ್ದು, ಈ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ಆತ್ಮರಕ್ಷಣೆಗಾಗಿ ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ. ಪೊಲೀಸರು ಅನುಜ ಪಾಟೀಲ್‌ನನ್ನು ಬಂಧಿಸಿ ಹೆಬ್ರಿಗೆ ಕರೆದೊಯ್ಯುತ್ತಿದ್ದ … Continued

ದೊಡ್ಡಬಳ್ಳಾಪುರ : ಇನ್‌ಸ್ಟಾಗ್ರಾಂನಲ್ಲಿ ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳ ಸಂಪರ್ಕ; ವ್ಯಕ್ತಿಯ ಬಂಧನ

ಬೆಂಗಳೂರು : ಬೆಂಗಳೂರು ಉತ್ತರ ಹೊರವಲಯದ ದೊಡ್ಡಬಳ್ಳಾಪುರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದನಾ ಸಂಪರ್ಕ ಹೊಂದಿರುವ ಗ್ಯಾಂಗ್‌ಸ್ಟರ್‌ಗಳ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ 28 ವರ್ಷದ ಏರ್‌ ಕಂಡೀಷನರ್‌ ಮೆಕ್ಯಾನಿಕ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಇಸ್ಲಾಂಪುರ ನಿವಾಸಿ ಎಸ್. ಸಯ್ಯದ್ ಅಬುಬಕರ್ ಎಂದು ಗುರುತಿಸಲಾಗಿದೆ. ಕಳೆದ ಎರಡು ವರ್ಷಗಳಿಂದ ಆತ ಪಾಕಿಸ್ತಾನ ಮೂಲದ ಗ್ಯಾಂಗ್‌ಸ್ಟರ್‌ಗಳು ಹಾಗೂ … Continued

23ನೇ ವಯಸ್ಸಿನಲ್ಲಿ ಕೊಲೆ ಮಾಡಿ ಪರಾರಿ : 42 ವರ್ಷಗಳ ಬಳಿಕ 65ನೇ ವಯಸ್ಸಿನಲ್ಲಿ ಈತ ಪೊಲೀಸರ ಬಲೆಗೆ ಬಿದ್ದಿದ್ದೇ ರೋಚಕ !

ನವದೆಹಲಿ : ಕೊಲೆ ಪ್ರಕರಣವೊಂದರಲ್ಲಿ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ 65 ವರ್ಷದ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. 1984ರಲ್ಲಿ ಪಶ್ಚಿಮ ದೆಹಲಿಯ ಜನಕಪುರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಪ್ರಕರಣದ ಆರೋಪಿ ನತ್ತು ಅಲಿಯಾಸ್ ನತ್ತೂಲಾಲ ಎಂಬ ಆರೋಪಿಯನ್ನು ಸೆಂಟ್ರಲ್ ರೇಂಜ್ ಕ್ರೈಂ ಬ್ರಾಂಚ್ ಹಲವು ತಿಂಗಳ ಸತತ … Continued

ಶಿಗ್ಗಾವಿ | ದೇವಸ್ಥಾನದ ಆವರಣದಲ್ಲಿ ಮೂತ್ರ ವಿಸರ್ಜನೆ ಆರೋಪ; ವ್ಯಕ್ತಿಯ ಬಂಧನ

ಶಿಗ್ಗಾವಿ: ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದ ಆಂಜನೇಯ ದೇವಸ್ಥಾನದ ಆವರಣದಲ್ಲಿ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಶಿಗ್ಗಾವಿ ಪಟ್ಟಣದಲ್ಲಿ ನಡೆದಿರುವ ಈ ಘಟನೆಗೆ ಸಂಬಂಧಿಸಿದಂತೆ ಹಾನಗಲ್ ಪಟ್ಟಣದ ನಿವಾಸಿ ಎನ್ನಲಾಗಿರುವ ಮಹಮ್ಮದ್ ಜಾಫರ್ ಖದರಮಂಡಲಗಿ ಎಂಬಾತನ ವಿರುದ್ಧ ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು … Continued

27 ಬಾರಿ ಇರಿತ..‘ಬಾಬು’ ಎಂಬ ಕೊನೆಯ ಪದ: ಪ್ರಾಂಶುಪಾಲೆಯ ಕೊಲೆ ಪ್ರಕರಣ ಭೇದಿಸಿದ ಪೊಲೀಸರು ; ಇಬ್ಬರು ವಿದ್ಯಾರ್ಥಿಗಳ ಬಂಧನ

ಹೈದರಾಬಾದ್ : ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ 48 ವರ್ಷದ ಶಾಲಾ ಪ್ರಾಂಶುಪಾಲೆ ಹಾಗೂ ನಿರ್ದೇಶಕಿಯ ಭೀಕರ ಹತ್ಯೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಹಣ ಮತ್ತು ಐಷಾರಾಮಿ ಜೀವನ ನಡೆಸುವ ಆಸೆಯಿಂದ ಕೊಲೆಗೆ ಸಂಚು ರೂಪಿಸಿದ್ದರೆನ್ನಲಾದ 10ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಕೊಂಡಮಲ್ಲೇಪಲ್ಲಿಯ ನಾಗಾರ್ಜುನ ಪಬ್ಲಿಕ್ ಸ್ಕೂಲ್‌ನ ಪ್ರಾಂಶುಪಾಲೆ ಹಾಗೂ ನಿರ್ದೇಶಕಿ ಕಲ್ಲು ರೂಪಾ ರೆಡ್ಡಿ … Continued