ಧಾರವಾಡ : ಅಪಾರ್ಟ್‌ಮೆಂಟ್‌ನಲ್ಲಿ ವೈದ್ಯನ ಹತ್ಯೆ: 8 ವರ್ಷದ ಮಗನಿಗೆ ಗಾಯ ; ಪತ್ನಿ ವಶಕ್ಕೆ

ಧಾರವಾಡ: ನಗರದಲ್ಲಿ ವೈದ್ಯರೊಬ್ಬರು ತಮ್ಮ ಅಪಾರ್ಟ್‌ಮೆಂಟ್‌ನಲ್ಲೇ ಹತ್ಯೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರ ಎಂಟು ವರ್ಷದ ಮಗ ಚಾಕು ಇರಿತದಿಂದ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ. ಹತ್ಯೆಯಾದ ವೈದ್ಯರನ್ನು ಡಾ. ಕಿರಣ ಹೊನ್ನಣ್ಣವರ (45) ಎಂದು ಗುರುತಿಸಲಾಗಿದೆ. ಅವರು ಚಿರಾಯು ಆಸ್ಪತ್ರೆಯಲ್ಲಿ ಅನಸ್ತೇಶಿಯಾಲಜಿಸ್ಟ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪತ್ನಿ … Continued

ಬಾಗೇಪಲ್ಲಿ : ಪಾಕಿಸ್ತಾನ ಪೌರತ್ವದ ಮಾಹಿತಿ ಮುಚ್ಚಿಟ್ಟು ರೇಷನ್ ಕಾರ್ಡ್‌, ವೋಟರ್‌ ಐಡಿ ಪಡೆದಿದ್ದ ಪಾಕ್ ಮಹಿಳೆ, ಪುತ್ರನ ಬಂಧನ

ಚಿಕ್ಕಬಳ್ಳಾಪುರ : ತನ್ನ ಪಾಕಿಸ್ತಾನಿ ಪೌರತ್ವದ ಮಾಹಿತಿಯನ್ನು ಮುಚ್ಚಿಟ್ಟು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಕ್ರಮವಾಗಿ ಪಡಿತರ ಚೀಟಿ (ರೇಷನ್ ಕಾರ್ಡ್) ಹಾಗೂ ಮತದಾರರ ಗುರುತಿನ ಚೀಟಿ (ವೋಟರ್ ಐಡಿ) ಪಡೆದ ಆರೋಪದಡಿ ಪಾಕಿಸ್ತಾನ ಮೂಲದ ಮಹಿಳೆ ಹಾಗೂ ಆಕೆಯ ಪುತ್ರನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರನ್ನು ಫರಾ ನಾಜ್ ಹಾಗೂ ಆಕೆಯ ಪುತ್ರ ಮೊಹಮ್ಮದ್ ಫರ್ದೀನ್ … Continued

ಸುಟ್ಟ ಶವ, ಯಾವುದೇ ಕುರುಹುಗಳಿಲ್ಲದ ಪ್ರಕರಣ…: ಆದ್ರೆ ಹಂತಕರ ಪತ್ತೆಗೆ ಕಾರಣವಾಯ್ತು ‘ಹಪ್ಪಳ’ದ ಪ್ಯಾಕೆಟ್‌….!

ಅನಂತಪುರ: ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಅಪರಿಚಿತ ವ್ಯಕ್ತಿಯ ಶವದ ಪ್ರಕರಣವನ್ನು ಆರಂಭದಲ್ಲಿ ‘ಬ್ಲೈಂಡ್ ಕೇಸ್’ ಎಂದು ಪರಿಗಣಿಸಿದ್ದ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ರಾಯದುರ್ಗಂ ಪೊಲೀಸರು, ವೈಜ್ಞಾನಿಕ ತನಿಖೆ ಹಾಗೂ ಘಟನೆ ಸ್ಥಳದಲ್ಲಿ ಸಿಕ್ಕಿದ್ದ ಒಂದು ಸಣ್ಣ ಸುಳಿವಿನ ನೆರವಿನಿಂದ ಅದನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣದ ಪ್ರಮುಖ ಸುಳಿವಾಗಿ ಸಿಕ್ಕಿದ್ದ ಹಪ್ಪಳ(ಪಾಪಡ್)ದ ಪ್ಯಾಕೆಟ್ ಕೊಲೆಯ ರಹಸ್ಯವನ್ನು ಬಯಲಿಗೆಳೆಯುವಲ್ಲಿ … Continued

ಬಿಷ್ಣೋಯ್ ಗ್ಯಾಂಗ್ ಸೇರಿ ಹಲವು ಗ್ಯಾಂಗ್‌ಗಳ ವಿರುದ್ಧ ವಿಶ್ವದಾದ್ಯಂತ ಭಾರಿ ಕಾರ್ಯಾಚರಣೆ: 24 ಜನರ ಬಂಧನ

ನವದೆಹಲಿ: ಭಾರತ ಮೂಲದ ಅಂತಾರಾಷ್ಟ್ರೀಯ ಸಂಘಟಿತ ಅಪರಾಧ ಜಾಲಗಳ ವಿರುದ್ಧ ಅಮೆರಿಕ, ಕೆನಡಾ ಹಾಗೂ ಯುರೋಪಿನ ಕಾನೂನು ಜಾರಿ ಸಂಸ್ಥೆಗಳು ಜಂಟಿಯಾಗಿ ನಡೆಸಿದ ಭಾರೀ ಕಾರ್ಯಾಚರಣೆಯಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಸೇರಿದಂತೆ ಹಲವು ಅಪರಾಧ ಸಂಘಟನೆಗಳಿಗೆ ದೊಡ್ಡ ಹೊಡೆತ ಬಿದ್ದಿದೆ. ಕೊಲೆ, ಮಾದಕ ವಸ್ತು ಸಾಗಣೆ, ಸುಲಿಗೆ, ಅಪಹರಣ ಹಾಗೂ ಗಡಿಪಾರು ಅಪರಾಧ ಚಟುವಟಿಕೆಗಳಲ್ಲಿ ತೊಡಗಿದ್ದ … Continued

₹300 ಕೋಟಿ ಬೇನಾಮಿ ಆಸ್ತಿ ಗಳಿಸಿದ ಆರೋಪ : ತೆಲಂಗಾಣದ ಉನ್ನತ ಪೊಲೀಸ್ ಅಧಿಕಾರಿ ಎಸಿಬಿ ಬಲೆಗೆ

ಹೈದರಾಬಾದ್ : ಆದಾಯಕ್ಕೆ ಮೀರಿದ ಆಸ್ತಿ (Disproportionate Assets) ಹೊಂದಿರುವ ಆರೋಪದಡಿ ದಾಖಲಾಗಿದ್ದ ಪ್ರಕರಣದಲ್ಲಿ ತೆಲಂಗಾಣ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಸೋಮವಾರ ಸಂಜೆ ಪೊಲೀಸ್ ಕಂಪ್ಯೂಟರ್ ಸರ್ವಿಸಸ್‌ (ಪಿಸಿಎಸ್‌) ಡಿಎಸ್‌ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಂಕಿರೆಡ್ಡಿ ಭೀಮ ರೆಡ್ಡಿಯನ್ನು ಹೈದರಾಬಾದ್‌ನಲ್ಲಿ ಬಂಧಿಸಿದೆ. ಆದಾಯ ಮೂಲಗಳನ್ನು ಮೀರಿ ಸುಮಾರು 300 ಕೋಟಿ ರೂಪಾಯಿ ಅಕ್ರಮ ಆಸ್ತಿ ಪತ್ತೆಯಾದ … Continued

ವಿಡಿಯೋ | 443 ಮೀಟರ್ ಎತ್ತರದ ಎಂಪೈರ್ ಸ್ಟೇಟ್ ಕಟ್ಟಡದ ತುತ್ತತುದಿಯ ಆ್ಯಂಟೆನಾ ಏರಿ ಪ್ರೇಮ ನಿವೇದನೆ ; ಬಂಧನ

ನ್ಯೂಯಾರ್ಕ್: ಅಮೆರಿಕದ ನ್ಯೂಯಾರ್ಕ್ ನಗರದ ಪ್ರಸಿದ್ಧ ಎಂಪೈರ್ ಸ್ಟೇಟ್ ಬಿಲ್ಡಿಂಗ್‌ನ ಅತ್ಯುನ್ನತ ಟವರ್‌ ಏರಿ, ಅಲ್ಲಿಯೇ ನಿಶ್ಚಿತಾರ್ಥ ಮಾಡಿಕೊಂಡಿರುವಂತೆ ಕಾಣಿಸಿಕೊಂಡ ರಷ್ಯಾ ಮೂಲದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. 32 ವರ್ಷದ ಇವಾನ್ ಬೀರ್ಕಸ್ ಅವರು 33 ವರ್ಷದ ಆಂಜೆಲಾ ನಿಕೊಲಾವ್ ಅವರಿಗೆ ಮೊಣಕಾಲೂರಿ ಉಂಗುರ ನೀಡಿ ವಿವಾಹ ಪ್ರಸ್ತಾಪ ಮಾಡಿದ ದೃಶ್ಯವಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ … Continued

ವಿಜಯ ಸರ್ಕಾರ ಉರುಳಿಸಲು ಡಿಎಂಕೆ ಸಂಚು ? ಟಿವಿಕೆಯಿಂದ ಶಾಸಕರಿಗೆ ₹35 ಕೋಟಿ ಆಮಿಷದ ಆರೋಪ ; ಮೂವರ ಬಂಧನ

ಚೆನ್ನೈ: ವಿಜಯ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಎರಡು ತಿಂಗಳು ಕೂಡ ಪೂರ್ಣಗೊಳ್ಳುವ ಮುನ್ನವೇ ರಾಜ್ಯ ರಾಜಕೀಯದಲ್ಲಿ ಕುದುರೆ ವ್ಯಾಪಾರ (ಹಾರ್ಸ್ ಟ್ರೇಡಿಂಗ್) ಆರೋಪದ ವಿವಾದ ಭುಗಿಲೆದ್ದಿದೆ. ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಶಾಸಕರನ್ನು ಸೆಳೆಯಲು ಪ್ರತಿಪಕ್ಷ ಡಿಎಂಕೆ ನಾಯಕರಿಗೆ ಸಂಬಂಧಿಸಿದ ವ್ಯಕ್ತಿಗಳು ₹10 ಕೋಟಿಯಿಂದ ₹50 ಕೋಟಿವರೆಗೆ ಆಮಿಷ ಒಡ್ಡಿದ್ದಾರೆ … Continued

ಮೊಹರಂ ಮೆರವಣಿಗೆ ವೇಳೆ ವಿಷದ ಮಾತ್ರೆ ಹಂಚುತ್ತಿದ್ದ ವ್ಯಕ್ತಿಯ ಬಂಧನ ; 15 ಸಾವಿರ ಮಂದಿ ಹತ್ಯೆಯ ಉದ್ದೇಶದ ಸಂಚು ಬಯಲು

ಮುಂಬೈ: ಶುಕ್ರವಾರ ನಡೆದ ಮೊಹರಂ (ಆಶೂರಾ) ಮೆರವಣಿಗೆಯ ವೇಳೆ ಸಂಭವಿಸಬಹುದಾಗಿದ್ದ ಭಾರೀ ದುರಂತವನ್ನು ಮುಂಬೈ ಪೊಲೀಸರು ಮತ್ತು ಮೂವರು ಮಹಿಳಾ ಸ್ವಯಂಸೇವಕರು ಸಮಯೋಚಿತ ಕಾರ್ಯಾಚರಣೆಯಿಂದ ತಪ್ಪಿಸಿದ್ದಾರೆ. ಸಾರ್ವಜನಿಕರಿಗೆ ವಿಷಕಾರಿ ಕ್ಯಾಪ್ಸುಲ್‌ಗಳನ್ನು ಹಂಚುತ್ತಿದ್ದ ಆರೋಪದ ಮೇಲೆ ಫಯ್ಯಾಜ್ ಪ್ರೇಂಜಿ (Fayyaz Premji) ಎಂಬಾತನನ್ನು ಬೈಕುಲ್ಲಾ ಪ್ರದೇಶದಲ್ಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಹಂಚಿದ್ದ ಕ್ಯಾಪ್ಸುಲ್‌ಗಳನ್ನು ಸೇವಿಸಿದ್ದ ಸುಮಾರು 11 … Continued

ಅಯೋಧ್ಯೆ ರಾಮ ಮಂದಿರ ಕಾಣಿಕೆ ಹಣ ಕಳುವು ಪ್ರಕರಣ : 8 ಆರೋಪಿಗಳ ಬಂಧನ

ಅಯೋಧ್ಯಾ : ಅಯೋಧ್ಯೆಯ ರಾಮ ಮಂದಿರದಲ್ಲಿ ಭಕ್ತರು ಅರ್ಪಿಸಿದ ಕಾಣಿಕೆ ಹಣವನ್ನು ಕಳುವು ಮಾಡಿದ ಆರೋಪದ ಹಿನ್ನೆಲೆಯಲ್ಲಿ ಎಂಟು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ಪ್ರಕಾರ, ಈ ಪ್ರಕರಣದಲ್ಲಿ ಎಂಟು ಜನರನ್ನು ಆರೋಪಿಗಳನ್ನಾಗಿ ಹೆಸರಿಸಲಾಗಿದ್ದು, ಇವರಲ್ಲಿ ಆರು ಮಂದಿ ದೇವಸ್ಥಾನದ ನಗದು ಎಣಿಕೆ ವಿಭಾಗದ ಉದ್ಯೋಗಿಗಳಾಗಿದ್ದಾರೆ. ಆರೋಪಿಗಳು … Continued

ಎರಡು ಕೊಲೆ ಸಂಚು ವಿಫಲ ; ನಂತ್ರ ಜನ್ಮದಿನದ ನೆಪದಲ್ಲಿ ಕರೆದೊಯ್ದು ಭಾವಿ ಪತಿಯನ್ನೇ 400 ಅಡಿ ಪ್ರಪಾತಕ್ಕೆ ತಳ್ಳಿ ಸಾಯಿಸಿದ ಯುವತಿ !

ಪುಣೆ : ಮಹಾರಾಷ್ಟ್ರದ ಪುಣೆ ಸಮೀಪದ ಐತಿಹಾಸಿಕ ಲೋಹಗಢ್ ಕೋಟೆಯಲ್ಲಿ ನಡೆದ ಭೀಕರ ಚಾರಣ ದುರಂತ ಎಂದು ಆರಂಭದಲ್ಲಿ ವರದಿಯಾಗಿದ್ದ ಪ್ರಕರಣವೊಂದು ಈಗ ಒಂದು ಅತ್ಯಂತ ಕ್ರೂರ ಹಾಗೂ ವ್ಯವಸ್ಥಿತ ಕೊಲೆ ಸಂಚು ಎಂದು ಬೆಳಕಿಗೆ ಬಂದಿದೆ. ತನ್ನ ಭಾವಿ ಪತಿ, 26 ವರ್ಷದ ರಿಯಲ್ ಎಸ್ಟೇಟ್ ಉದ್ಯಮಿ ಕೇತನ್ ವಿಶಾಲ ಅಗರ್ವಾಲ್‌ ಅವರನ್ನು ಅತ್ಯಂತ … Continued