ಬೆಂಗಳೂರು : ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ ಪ್ರಕರಣ ; ಮೂವರ ಬಂಧನ

ಬೆಂಗಳೂರು : ಬೆಂಗಳೂರಿನ ಕಲಾಸಿಪಾಳ್ಯ ಬಸ್‌ ನಿಲ್ದಾಣದಲ್ಲಿ ಜಿಲೆಟಿನ್‌ ಹಾಗೂ ಡಿಟೊನೇಟರ್‌ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಗಣೇಶ, ಶಿವ ಹಾಗೂ ಮುನಿಯಪ್ಪ ಬಂಧಿತ ಆರೋಪಿಗಳು. ಜುಲೈ 23ರಂದು ಮಧ್ಯಾಹ್ನ ಕಲಾಸಿಪಾಳ್ಯದ ಶೌಚಾಲಯದ ಬಳಿ ಜಿಲೆಟಿನ್‌, ಡಿಟೊನೇಟರ್‌ ಪತ್ತೆಯಾಗಿದ್ದವು. ನಂತರ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ 6 (ಆರ್.ಇ.ಎಕ್ಸ್ – … Continued

ಧಾರವಾಡ | ಹಲ್ಲೆ ನಡೆಸಿ ಪರಾರಿಯಾಗಲು ಯತ್ನ ; ಇಬ್ಬರು ಕಳ್ಳತನದ ಆರೋಪಿಗಳಿಗೆ ಪೊಲೀಸರ ಗುಂಡೇಟು

ಧಾರವಾಡ: ನಗರದಲ್ಲಿ ಬೆಳ್ಳಂ ಬೆಳಗ್ಗೆ ಗುಂಡಿನ ಸದ್ದು ಕೇಳಿ ಬಂದಿದೆ. ಕಳ್ಳತನ ಮಾಡಿ ಪರಾರಿಯಾಗುತ್ತಿದ್ದ ಇಬ್ಬರ ಕಳ್ಳರ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಧಾರವಾಡದ ವಿದ್ಯಾಗಿರಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮುಜಾಮಿಲ್ ಸೌದಾಗಾರ​, ವಿಜಯ ಅಣ್ಣಿಗೇರಿ​ ಎಂಬವರು ಪೊಲೀಸರಿಂದ ಗುಂಡೇಟಿನಿಂದ ಗಾಯಗೊಂಡ ಆರೋಪಿಗಳಾಗಿದ್ದಾರೆ. ಇವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಧಾರವಾಡದ ಗಿರಿನಗರದ ಬಡಾವಣೆಯಲ್ಲಿ … Continued

ಶಿರಸಿ | ಇಸ್ಪೀಟ್ ಜೂಜಾಟದ ಮೇಲೆ ದಾಳಿ : 19 ಮಂದಿ ಬಂಧನ ; ₹49.50 ಲಕ್ಷ ನಗದು ವಶಕ್ಕೆ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಭೈರುಂಬೆ ಗ್ರಾಮ ಪಂಚಾಯತ ವ್ಯಾಪ್ತಿಯ ಅಗಸಾಲ ಗ್ರಾಮದ ಸಮೀಪದ ಹೋಂ ಸ್ಟೇ ಬಳಿ ಅಕ್ರಮವಾಗಿ ನಡೆಯುತ್ತಿದ್ದ ಅಂದರ್‌-ಬಾಹರ್‌ ಇಸ್ಪೀಟ್ ಜೂಜಾಟದ ಅಡ್ಡೆ ಮೇಲೆ ಗ್ರಾಮೀಣ ಠಾಣೆಯ ಪೊಲೀಸರು ದಾಳಿ ನಡೆಸಿ 49 ಲಕ್ಷ ನಗದು, ನಾಲ್ಕು ಕಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದು, ಪ್ರಕರಣ ದಾಖಲಿಸಿದ್ದಾರೆ. ಖಚಿತ ಮಾಹಿತಿ ಆಧರಿಸಿ … Continued

ಅಲ್-ಖೈದಾ ಭಯೋತ್ಪಾದಕ ಜಾಲ ಭೇದಿಸಿದ ಗುಜರಾತ್ ಎಟಿಎಸ್ ; ನಾಲ್ವರ ಬಂಧನ

ಅಹಮದಾಬಾದ್‌ : ಗುಜರಾತ್ ಭಯೋತ್ಪಾದನಾ ನಿಗ್ರಹ ದಳವು ಅಲ್-ಖೈದಾ ಭಯೋತ್ಪಾದನಾ ಸಂಘಟನೆ ಜೊತೆ ಸಂಪರ್ಕ ಹೊಂದಿರುವ ನಾಲ್ವರನ್ನು ಬಂಧಿಸಿದೆ ಎಂದು ಹೇಳಿಕೊಂಡಿದೆ. ಅಧಿಕಾರಿಗಳ ಪ್ರಕಾರ, ಭಾರತೀಯ ಉಪಖಂಡದಲ್ಲಿ ಅಲ್-ಖೈದಾ (AQIS) ನಿಷೇಧಿತ ಭಯೋತ್ಪಾದಕ ಸಂಘಟನೆಯಾಗಿದೆ. ” ಅಲ್-ಖೈದಾ ಭಯೋತ್ಪಾದಕ ಸಂಘಟನೆ ಜೊತೆ ಸಂಯೋಜಿತವಾಗಿರುವ ಭಯೋತ್ಪಾದಕ ಘಟಕವನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS ) ಪತ್ತೆಹಚ್ಚಿದೆ. … Continued

ಆಘಾತಕಾರಿ ಘಟನೆ | ಮನೆಬಿಟ್ಟು ಹೋದ ಪತ್ನಿಯನ್ನು ಮರಳಿ ಕರೆತರಲು 5 ವರ್ಷದ ಸಂಬಂಧಿಯನ್ನೇ ‘ಬಲಿ’ ಕೊಟ್ಟ ವ್ಯಕ್ತಿ…!

ಜೈಪುರ : ರಾಜಸ್ಥಾನದ ಖೈರ್ತಾಲ್ ಜಿಲ್ಲೆಯಲ್ಲಿ ಬೆಚ್ಚಿಬೀಳುವ ಘಟನೆ ನಡೆದಿದ್ದು, ಜಿಲ್ಲೆಯ ಮುಂಡಾವರ್ ಪೊಲೀಸ್ ಠಾಣಾ ವ್ಯಾಪ್ತಿಯ ಸರೈ ಗ್ರಾಮದಲ್ಲಿ ಮೂರು ದಿನಗಳ ಹಿಂದೆ ಕೊಲೆಯಾಗಿದ್ದ ಐದು ವರ್ಷದ ಮಗುವನ್ನು ಮಾಟಮಂತ್ರಕ್ಕಾಗಿ “ಬಲಿ” ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಐದು ವರ್ಷದ ಬಾಲಕನ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮಗುವನ್ನು ಆತನ ಮಾವ ಮನೋಜ ಪ್ರಜಾಪತ್‌ … Continued

ತಾಯಿಗೆ ಮಾಡಿದ ಅವಮಾನಕ್ಕೆ 10 ವರ್ಷಗಳ ನಂತರ ಆ ವ್ಯಕ್ತಿಯ ಕೊಲೆ ಮಾಡಿ ಸೇಡು ತೀರಿಸಿಕೊಂಡ ಮಗ…!

ಲಕ್ನೋ: 10 ವರ್ಷಗಳ ಹಿಂದೆ ತನ್ನ ತಾಯಿಯನ್ನು ಒಬ್ಬ ವ್ಯಕ್ತಿ ಅವಮಾನಿಸಿ ಥಳಿಸಿದ್ದ ಕಾರಣಕ್ಕೆ ಈಗ ಆ ವ್ಯಕ್ತಿಯ ಕೊಲೆ (Murder) ಮಾಡುವ ಮೂಲಕ ಮಗ ಸೇಡು ತೀರಿಸಿಕೊಂಡಿದ್ದಾನೆ. ಈ ಘಟನೆ ಉತ್ತರ ಪ್ರದೇಶದ ಲಕ್ನೋನಲ್ಲಿ ನಡೆದಿದೆ. ಇದೊಂದು ಬಾಲಿವುಡ್​ನ ಚಿತ್ರಕಥೆಯಂತೆ ತೋರುತ್ತದೆ. ಸೇಡಿನ ಕಿಚ್ಚು ಥಳಿತದ ಘಟನೆ ನಡೆದ 10 ವರ್ಷಗಳ ನಂತರ ಆರೋಪಿ … Continued

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪ; ಕಾಂಗ್ರೆಸ್ ವಿದ್ಯಾರ್ಥಿ ಘಟಕದ ನಾಯಕನ ಬಂಧನ

ಭುವನೇಶ್ವರ: 19 ವರ್ಷದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಒಡಿಶಾ ಪೊಲೀಸರು ಭಾನುವಾರ ತಡರಾತ್ರಿ ಕಾಂಗ್ರೆಸ್‌ ವಿದ್ಯಾರ್ಥಿ ಘಟಕವಾದ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಯುಐ) ರಾಜ್ಯ ಘಟಕದ ಅಧ್ಯಕ್ಷ ಉದಿತ್ ಪ್ರಧಾನ ಅವರನ್ನು ಬಂಧಿಸಿದ್ದಾರೆ. 19 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮಾರ್ಚ್‌ನಲ್ಲಿ ಹೋಟೆಲ್ ಕೋಣೆಯಲ್ಲಿ ಉದಿತ್‌ ಪ್ರಧಾನ ತನಗೆ ಮಾದಕ ದ್ರವ್ಯ … Continued

ವಿವಾಹಿತ ಮಹಿಳೆಗೆ ಮದುವೆಯಾಗುವಂತೆ ಕಿರುಕುಳ; ಬುದ್ಧಿವಾದ ಹೇಳಿದ್ದಕ್ಕೆ ಆಕೆಯ ಸಂಬಂಧಿಯ ಕತ್ತು ಕೊಯ್ದ…!

ಬೆಂಗಳೂರು : ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾಗಿದ್ದ ವಿವಾಹಿತ ಮಹಿಳೆಗೆ ಮದುವೆಯಾಗುವಂತೆ ಕಿರುಕುಳ ನೀಡುತ್ತಿದ್ದ ಯುವಕನಿಗೆ ಬುದ್ಧಿ ಹೇಳಿದ ಮಹಿಳೆಯ ಸಂಬಂಧಿಯ ಕತ್ತು ಕೊಯ್ದು ಕೊಲೆಗೆ ಯತ್ನಿಸಿದ ಘಟನೆ ಬೆಂಗಳೂರಿನ ಎಚ್‌ಎಎಲ್ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಈ ಘಟನೆ ಜುಲೈ ೧೭ರಂದು ನಡೆದಿದ್ದು, ಗಾಯಗೊಂಡಿರುವ ಖಾಸಗಿ ಕಂಪನಿಯ ಉದ್ಯೋಗ ಪ್ರಶಾಂತ ಎಂಬವರು ಈಗ ಆಸ್ಪತ್ರೆಯಲ್ಲಿ … Continued

ಕನ್ನಡ-ಕರ್ನಾಟಕದ ಬಗ್ಗೆ ಅವಹೇಳನ ; ಪಶ್ಚಿಮ ಬಂಗಾಳದ ವ್ಯಕ್ತಿ ಬಂಧನ

ಬೆಂಗಳೂರು: ಕರ್ನಾಟಕ (Karnataka) ಮತ್ತು ಕನ್ನಡ ಭಾಷಿಕರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜುಲೈ 17 ರಂದು ಬೆಳಗ್ಗೆ 9:30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಆನ್‌ಲೈನ್ ಪ್ಲಾಟ್‌ಫಾರ್ಮ್ ಮೂಲಕ ಆರ್ಡರ್ ಮಾಡಿದ್ದ ಟಿ-ಶರ್ಟ್ ತಲುಪಿಸಲು ವಿಳಾಸ ದೃಢೀಕರಣಕ್ಕಾಗಿ ಡೆಲಿವರಿ ಎಕ್ಸಿಕ್ಯೂಟಿವ್ ರಂಜಿತ್ … Continued

ಸಾಲ ಕೊಡಿಸುವುದಾಗಿ ಉದ್ಯಮಿಗಳಿಗೆ ಕೋಟ್ಯಂತರ ರೂ. ವಂಚನೆ ; ಮಂಗಳೂರಿನ ವಂಚಕ ಅರೆಸ್ಟ್‌ ; ತಪ್ಪಿಸಿಕೊಳ್ಳಲು ಮನೆಯಲ್ಲೇ ನಿಗೂಢ ಕೋಣೆ ಪತ್ತೆ…!

ಮಂಗಳೂರು : ಮಂಗಳೂರು ನಗರ ಪೊಲೀಸರು ಮಧ್ಯರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ ಜೆಪಿನಮೊಗರು ಪ್ರದೇಶದ ವಂಚಕ ರೋಹನ್ ಸಲ್ಡಾನಾ ಎಂಬಾತನನ್ನು ಬಂಧಿಸಿದ್ದಾರೆ. ಈತ ನಕಲಿ ಸಾಲ ಮತ್ತು ಭೂ ವ್ಯವಹಾರಗಳ ಮೂಲಕ ಶ್ರೀಮಂತ ಉದ್ಯಮಿಗಳಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪ ಹೊತ್ತಿದ್ದಾನೆ. ಪೊಲೀಸ್ ಆಯುಕ್ತ ಸುಧೀರಕುಮಾರ ರೆಡ್ಡಿ ಮತ್ತು ಸಹಾಯಕ ಪೊಲೀಸ್ ಆಯುಕ್ತ ರವೀಶ ನಾಯಕ ನೇತೃತ್ವದ … Continued