ತಾಜ್‌ ಮಹಲ್‌ನಲ್ಲಿ ಗಂಗಾಜಲ ಸುರಿದ ಇಬ್ಬರ ಬಂಧನ

ಆಗ್ರಾ:  ಘಟನೆಯೊಂದರಲ್ಲಿ  ಉತ್ತರ ಪ್ರದೇಶದ ಆಗ್ರಾದಲ್ಲಿರುವ ವಿಶ್ವವಿಖ್ಯಾತ ತಾಜ್ ಮಹಲ್‌ನಲ್ಲಿ ಗಂಗಾಜಲ ಪ್ರೋಕ್ಷಣೆ ಮಾಡಿದ್ದಕ್ಕಾಗಿ ಪೊಲೀಸರು ಶನಿವಾರ ಇಬ್ಬರನ್ನು ಬಂಧಿಸಿದ್ದಾರೆ. ವರದಿಗಳ ಪ್ರಕಾರ, ಸಮಾಧಿಯಲ್ಲಿ ಪವಿತ್ರ ಗಂಗಾಜಲವನ್ನು ಸಿಂಪಡಿಸಿದ ಆರೋಪದ ಮೇಲೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಸಿಬ್ಬಂದಿಯು ವಿನೇಶ ಮತ್ತು ಶ್ಯಾಮ್ ಎಂಬ ಇಬ್ಬರನ್ನು ಬಂಧಿಸಿದ್ದಾರೆ. ತಾಜ್‌ಮಹಲ್‌ನ ಭದ್ರತೆಯ ಹೊಣೆಯನ್ನು ಸಿಐಎಸ್‌ಎಫ್‌ ಹೊಂದಿದೆ. … Continued

20ಕ್ಕೂ ಹೆಚ್ಚು ಮಹಿಳೆಯರನ್ನು ಮದುವೆಯಾಗಿ ಬೆಲೆಬಾಳುವ ವಸ್ತು ದೋಚಿದ್ದ ಖತರ್ನಾಕ್‌ ವ್ಯಕಿಯನ್ನು ಆತನ ತಂತ್ರದ ಮೂಲಕವೇ ಹೆಡೆಮುರಿ ಕಟ್ಟಿದ ಪೊಲೀಸರು..!

ಪಾಲ್ಘರ್: ದೇಶದಾದ್ಯಂತ 20ಕ್ಕೂ ಹೆಚ್ಚು ಮಹಿಳೆಯರನ್ನು ಮದುವೆಯಾಗಿ ಅವರ ಬೆಲೆಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗುತ್ತಿದ್ದ 43 ವರ್ಷದ ವ್ಯಕ್ತಿಯನ್ನು ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಲ್ಲ ಸೋಪಾರ ಮೂಲದ ಮಹಿಳೆ ನೀಡಿದ ದೂರಿನ ಮೇರೆಗೆ ಎಂಬಿವಿವಿ ಪೊಲೀಸರು ತನಿಖೆ ನಡೆಸಿದ್ದು, ಜುಲೈ 23 ರಂದು ಥಾಣೆ ಜಿಲ್ಲೆಯ ಕಲ್ಯಾಣದಿಂದ ಆರೋಪಿ … Continued

ಜೈಲಿನಿಂದ ಹೊರಬಂದ ನಂತರ ಬೆಂಬಲಿಗರೊಂದಿಗೆ ಮೆಗಾ ರ್‍ಯಾಲಿ ನಡೆಸಿದ ಗ್ಯಾಂಗ್‌ಸ್ಟರ್‌ : ಮತ್ತೆ ಬಂಧಿಸಿದ ಪೊಲೀಸರು

ಮುಂಬೈ: ಮಹಾರಾಷ್ಟ್ರದ ನಾಸಿಕ್‌ನ ಕುಖ್ಯಾತ ಗ್ಯಾಂಗ್‌ಸ್ಟರ್‌ ನನ್ನು ಜೈಲಿನಿಂದ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಮತ್ತೆ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಜೈಲಿನಿಂದ ಬಿಡುಗಡೆಯಾದ ನಂತರ ಬೆತೆಲ್ ನಗರದಿಂದ ಅಂಬೇಡ್ಕರ ಚೌಕದ ವರೆಗೆ ಬೆಂಬಲಗರೊಂದಿಗೆ ಮೆಗಾ ರ್ಯಾಲಿ ನಡೆಸಿದ ವೀಡಿಯೊ ವೈರಲ್ ಆದ ನಂತರ ಪೊಲೀಸರು ಮತ್ತೆ ಬಂಧಿಸಿದ್ದಾರೆ. ಜುಲೈ 23 ರಂದು, ಗ್ಯಾಂಗ್‌ಸ್ಟರ್‌ ಹರ್ಷದ್ ಪಾಟಣಕರ್ ಜೈಲಿನಿಂದ ಬಿಡುಗಡೆಯಾದ … Continued

ರೈತರಿಗೆ ಪಿಸ್ತೂಲ್ ತೋರಿಸಿದ ವೀಡಿಯೊ ವೈರಲ್‌ ; ವಿವಾದಿತ ಟ್ರೇನಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ ತಾಯಿ ಬಂಧನ

ಮುಂಬೈ: ಟ್ರೇನಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ ಅವರ ತಾಯಿ ಮನೋರಮಾ ಖೇಡ್ಕರ ಅವರು ಗ್ರಾಮಸ್ಥರ ಗುಂಪಿಗೆ ಬಂದೂಕು ತೋರಿಸಿ ಬೆದರಿಕೆ ಹಾಕುತ್ತಿರುವ ವೀಡಿಯೊಕ್ಕೆ ಸಂಬಂಧಿಸಿದಂತೆ ಕೊಲೆ ಯತ್ನದ ಆರೋಪ ಹೊರಿಸಲಾಗಿದೆ. ಇಂದು, ಗುರುವಾರ (ಜುಲೈ ೧೮) ಬೆಳಿಗ್ಗೆ ಆಕೆಯನ್ನು ಬಂಧಿಸಿದ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಿಲಾಗಿದ್ದು, ಎರಡು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ. ಹಲವು ದಿನಗಳಿಂದ … Continued

ಬೆಳಗಾವಿ : ವೈದ್ಯಕೀಯ ಸೀಟ್‌ ವಂಚನೆ ಜಾಲ ಪತ್ತೆ , ಪ್ರಮುಖ ಆರೋಪಿ ಬಂಧಿಸಿದ ಪೊಲೀಸರು

 ಬೆಳಗಾವಿ: ಸರ್ಕಾರಿ ಕಾಲೇಜುಗಳಲ್ಲಿ ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ವಿದ್ಯಾರ್ಥಿಗಳನ್ನು ವಂಚಿಸುತ್ತಿದ್ದ ಜಾಲವೊಂದನ್ನು ಬೆಳಗಾವಿ ಪೊಲೀಸರು ಪತ್ತೆ ಮಾಡಿದ್ದಾರೆ. ಬೆಳಗಾವಿಯಲ್ಲಿ ಕೋಚಿಂಗ್ ಸೆಂಟರ್ ಆರಂಭಿಸಿ ಯಾರು ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆಯುತ್ತಾರೋ ಅಂಥವರನ್ನೇ ಗುರಿಯಾಗಿಸಿ ಅವರಿಗೆ ವೈದ್ಯಕೀಯ ಸೀಟ್‌ ಕೊಡಿಸುತ್ತೇನೆ ಎಂದು ಭರವಸೆ ನೀಡಿ ಹಣ ಪಡೆದು ವಂಚಿಸುತ್ತಿದ್ದ ವ್ಯಕ್ತಿಯನ್ನು ಬೆಳಗಾವಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. … Continued

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 30 ಕೋಟಿ ರೂ. ಮೌಲ್ಯದ ಕೊಕೇನ್ ವಶ; ಮಹಿಳೆ ಬಂಧನ

ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡೈರೆಕ್ಟರೇಟ್ ಆಫ್ ರೆವೆನ್ಯೂ ಇಂಟೆಲಿಜೆನ್ಸ್ (ಡಿಆರ್‌ಐ) ಕೀನ್ಯಾದ ಮಹಿಳೆಯೊಬ್ಬರಿಂದ 30 ಕೋಟಿ ರೂಪಾಯಿ ಮೌಲ್ಯದ ಕೊಕೇನ್ ಅನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜುಲೈ 12 ರಂದು ದೋಹಾದಿಂದ ಇಂಡಿಗೋ ವಿಮಾನದಲ್ಲಿ ಬೆಂಗಳೂರಿಗೆ ಬಂದಿಳಿದ ಮಹಿಳೆಯನ್ನು ಡಿಆರ್‌ಐ ಘಟಕವು ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ತಪಾಸಣೆಗೆ … Continued

ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಹಗರಣ: ಬಿಜೆಪಿ ಮಾಜಿ ಶಾಸಕ ಡಿ.ಎಸ್. ವೀರಯ್ಯ ಬಂಧನ

ಬೆಂಗಳೂರು: ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್‌ನಲ್ಲಿ ನಡೆದಿದೆ ಎನ್ನಲಾದ 47.10 ಕೋಟಿ ರೂ.ಗಳ ಅಕ್ರಮ ಪ್ರಕರಣದಲ್ಲಿ ಬಿಜೆಪಿ ನಾಯಕ, ವಿಧಾನ ಪರಿಷತ್​ ಮಾಜಿ ಸದಸ್ಯ ಡಿ ಎಸ್ ವೀರಯ್ಯ ಅವರನ್ನು ಸಿಐಡಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಈ ಹಗರಣದ ತನಿಖೆ ತನಿಖೆ ಚುರುಕುಗೊಳಿಸಿರುವ ಸಿಐಡಿ ಅಧಿಕಾರಿಗಳು ಮೈಸೂರಿನಲ್ಲಿ ಮುಡಾ ಅಕ್ರಮ ವಿರೋಧಿಸಿ … Continued

ವೀಡಿಯೊ : ಜೈಪುರ ವಿಮಾನ ನಿಲ್ದಾಣದಲ್ಲಿ ಸಿಐಎಸ್‌ಎಫ್ ಅಧಿಕಾರಿಗೆ ಕಪಾಳಮೋಕ್ಷ ಮಾಡಿದ ಸ್ಪೈಸ್‌ಜೆಟ್ ಮಹಿಳಾ ಉದ್ಯೋಗಿ ; ಬಂಧನ

ಸೆಕ್ಯುರಿಟಿ ಸ್ಕ್ರೀನಿಂಗ್ ಕುರಿತು ನಡೆದ ವಾಗ್ವಾದದಲ್ಲಿ ಸ್ಪೈಸ್‌ಜೆಟ್ ಮಹಿಳಾ ಉದ್ಯೋಗಿಯೊಬ್ಬರು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಅಧಿಕಾರಿಗೆ ಕಪಾಳಮೋಕ್ಷ ಮಾಡಿದ ಘಟನೆ ಗುರುವಾರ ಜೈಪುರ ವಿಮಾನ ನಿಲ್ದಾಣದಲ್ಲಿ ನಡೆದಿದ್ದು, ನಂತರ ಮಹಿಳಾ ಉದ್ಯೋಗಿಯನ್ನು ಬಂಧಿಸಲಾಯಿತು. ಸ್ಪೈಸ್‌ಜೆಟ್‌ನ ಆಹಾರ ಮೇಲ್ವಿಚಾರಕಿಯಾಗಿರುವ ಅನುರಾಧಾ ರಾಣಿ ಅವರು ಇತರ ಉದ್ಯೋಗಿಗಳೊಂದಿಗೆ ವಾಹನದ ಗೇಟ್‌ನಿಂದ ಮುಂಜಾನೆ 4 ಗಂಟೆಯ ಸುಮಾರಿಗೆ … Continued

ಮಂಗಳೂರು : ದರೋಡೆ ಕೃತ್ಯ ನಡೆದ 5 ತಾಸಿನಲ್ಲೇ ಚಡ್ಡಿ ಗ್ಯಾಂಗ್‌ ಬಂಧಿಸಿದ ಪೊಲೀಸರು

ಮಂಗಳೂರು : ನಗರದ ಕೋಟೆಕಣಿಯ ಮನೆಗೆ ನುಗ್ಗಿ ಮನೆಮುಂದಿಯನ್ನು ಬೆದರಿಸಿ ದರೋಡೆ ಮಾಡಿದ್ದ ಚಡ್ಡಿ ಗ್ಯಾಂಗ್‌ ಅನ್ನು ಘಟನೆ ನಡೆದ 5 ತಾಸಿನಲ್ಲೇ ಹಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿತರನ್ನು ಮಧ್ಯಪ್ರದೇಶ ಮೂಲದ ರಾಜು ಸಿಂಘಾನಿಯಾ(24), ಮಯೂರ(30), ಬಾಲಿ(22), ಮತ್ತು ವಿಕ್ಕಿ(21) ಎಂದು ಗುರುತಿಸಲಾಗಿದೆ. ಮಂಗಳವಾರ ನಸುಕಿನ 4 ಗಂಟೆಯ ಸುಮಾರಿಗೆ ಉರ್ವಾ ಪೊಲೀಸ್ … Continued

ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ತಮಿಳುನಾಡು ಬಿಎಸ್‌ಪಿ ಮುಖ್ಯಸ್ಥನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಚೆನ್ನೈ: ಬಹುಜನ ಸಮಾಜ ಪಕ್ಷದ ತಮಿಳುನಾಡು ಘಟಕದ ಅಧ್ಯಕ್ಷರನ್ನು ಬೈಕ್‌ನಲ್ಲಿ ಬಂದ ಆರು ಮಂದಿ ದುಷ್ಕರ್ಮಿಗಳು ಅವರ ಮನೆಯ ಸಮೀಪವೇ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದಿದ್ದಾರೆ. ಪೊಲೀಸರ ಪ್ರಕಾರ, ದಾಳಿಗೆ ಸಂಬಂಧಿಸಿದಂತೆ ಎಂಟು ವ್ಯಕ್ತಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಆರ್ಮ್‌ಸ್ಟ್ರಾಂಗ್ ಅವರು ನಗರದ ಸೇಂಬಿಯಂ ಪ್ರದೇಶದಲ್ಲಿನ ಅವರ ಮನೆಯ ಬಳಿ ಪಕ್ಷದ ಕೆಲವು ಕಾರ್ಯಕರ್ತರೊಂದಿಗೆ ಚರ್ಚೆ ನಡೆಸುತ್ತಿದ್ದಾಗ ಆರು … Continued