ಕ್ಯಾಂಪಸ್‌ ಶೌಚಾಲಯದಲ್ಲಿ ಮಹಿಳಾ ಉದ್ಯೋಗಿಗಳ ವೀಡಿಯೊ ಚಿತ್ರೀಕರಣ ; ಇನ್ಫೋಸಿಸ್‌ ಉದ್ಯೋಗಿಯ ಬಂಧನ

ಬೆಂಗಳೂರು :  ಕ್ಯಾಂಪಸ್‌ನ ಶೌಚಾಲಯದಲ್ಲಿ ಮಹಿಳಾ ಸಹೋದ್ಯೋಗಿಗಳ ಅಶ್ಲೀಲ ವೀಡಿಯೊಗಳನ್ನು ರಹಸ್ಯವಾಗಿ ರೆಕಾರ್ಡ್ ಮಾಡಿದ ಆರೋಪದ ಮೇಲೆ ಟೆಕ್ ಕಂಪನಿ ಇನ್ಫೋಸಿಸ್‌ನ ಉದ್ಯೋಗಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ಸ್ವಪ್ನಿಲ್ ನಾಗೇಶ ಮಾಲಿ (28) ಎಂದು ಗುರುತಿಸಲಾಗಿದೆ, ಈತ ಆಂಧ್ರಪ್ರದೇಶದವರಾಗಿದ್ದು, ಇನ್ಫೋಸಿಸ್‌ನ ಹೆಲಿಕ್ಸ್ ಘಟಕದಲ್ಲಿ ಹಿರಿಯ ಅಸೋಸಿಯೇಟ್ ಸಲಹೆಗಾರನಾಗಿದ್ದಾನೆ ಎನ್ನಲಾಗಿದೆ. ಪೊಲೀಸ್ ವರದಿಯ ಪ್ರಕಾರ, ಜೂನ್ 30 ರಂದು … Continued

ಐಐಟಿ-ಬಾಂಬೆಯಲ್ಲಿ 14 ದಿನ ವಾಸವಿದ್ದ ನಕಲಿ ‘ಪಿಎಚ್‌ಡಿ ವಿದ್ಯಾರ್ಥಿ’…! ಈತನ ಗುಟ್ಟು ರಟ್ಟು ಮಾಡಿದ ಸೋಫಾ ಮೇಲಿನ ನಿದ್ರೆ…!!

ಮುಂಬೈ: 22 ವರ್ಷದ ಯುವಕನೊಬ್ಬ ಮುಂಬೈನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ-ಬಾಂಬೆ)ಗೆ ನುಸುಳಿ ಸುಮಾರು ಎರಡು ವಾರಗಳ ಕಾಲ ಅದರ ಹೈ ಸೆಕ್ಯುರಿಟಿ ಕ್ಯಾಂಪಸ್‌ನಲ್ಲಿ ಯಾರಿಗೂ ಗೊತ್ತಾಗದಂತೆ ವಾಸಿಸುತ್ತಿದ್ದ ಎಂದು ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ. ಬಿಲಾಲ್ ಅಹ್ಮದ್ ತೇಲಿ ಎಂದು ಗುರುತಿಸಲ್ಪಟ್ಟ ಈ ಯುವಕ ಕಳೆದ ವಾರ ಸೋಫಾದ ಮೇಲೆ ಮಲಗಿದ್ದಾಗ ಗಮನಿಸಿದ ಐಐಟಿ-ಬಾಂಬೆ ಉದ್ಯೋಗಿಯೊಬ್ಬರು ಆತನ … Continued

30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೆಂಗಳೂರು ಸ್ಫೋಟದ ಪ್ರಮುಖ ಆರೋಪಿ ಅರೆಸ್ಟ್‌

ಚೆನ್ನೈ : ಬೆಂಗಳೂರು ನಗರ ಸೇರಿ ದಕ್ಷಿಣ ಭಾರತದ ಹಲವು ಬಾಂಬ್ ಸ್ಫೋಟ ಪ್ರಕರಣಗಳ ಪ್ರಮುಖ ಆರೋಪಿಯನ್ನು 30 ವರ್ಷಗಳ ಬಳಿಕ ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ನಾಗೂರು ನಿವಾಸಿ ಅಬೂಬಕರ್ ಸಿದ್ದಿಕ್ (60) ಬಂಧಿತ ಉಗ್ರ ಎಂದು ಹೇಳಲಾಗಿದೆ. ಈತ 1995ರಿಂದ ತಲೆ ಮರೆಸಿಕೊಂಡಿದ್ದ. ಈತನನ್ನು ತಮಿಳುನಾಡು ಪೊಲೀಸರು ಆಂಧ್ರಪ್ರದೇಶದ ಅನ್ನಮಯ ಜಿಲ್ಲೆಯಲ್ಲಿ ಬಂಧಿಸಿದ್ದಾರೆ. … Continued

ಕಾನೂನು ಕಾಲೇಜ್‌ ಆವರಣದಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ; ತೃಣಮೂಲ ನಾಯಕ, ಇಬ್ಬರು ವಿದ್ಯಾರ್ಥಿಗಳ ಬಂಧನ

ಕೋಲ್ಕತಾ : ಕೋಲ್ಕತಾದ ಕಾನೂನು ಕಾಲೇಜಿನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಆರೋಪಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಈ ಘಟನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಆರ್‌.ಜಿ. ಕರ್ ವೈದ್ಯಕೀಯ ಕಾಲೇಜಿನಲ್ಲಿ ಇದೇ ರೀತಿಯ ಅಪರಾಧವು ದೇಶಾದ್ಯಂತ ಪ್ರತಿಭಟನೆಗಳಿಗೆ ಕಾರಣವಾದ ಆರು ತಿಂಗಳ ನಂತರ ಈ ಘಟನೆ ನಡೆದಿದೆ. ಬಂಧಿತ ಮೂವರು … Continued

ಮನಗೂಳಿ ಕೆನರಾ ಬ್ಯಾಂಕ್​ ದರೋಡೆ ಪ್ರಕರಣ ಭೇದಿಸಿದ ಪೊಲೀಸರು : ಅದೇ ಬ್ಯಾಂಕಿನಲ್ಲಿ ಮ್ಯಾನೇಜರ್​ ಆಗಿದ್ದವನೇ ಮಾಸ್ಟರ್‌ ಮೈಂಡ್‌; ಮೂವರ ಬಂಧನ

ವಿಜಯಪುರ: ಕಳೆದ ತಿಂಗಳು ಜಿಲ್ಲೆಯ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್​ನಲ್ಲಿ ನಡೆದಿದ್ದ 53.26 ಕೋಟಿ ರೂ. ಮೌಲ್ಯದ ಬಂಗಾರ ಹಾಗೂ ನಗದು ದರೋಡೆ ಪ್ರಕರಣವನ್ನು ವಿಜಯಪುರ ಪೊಲೀಸರು ಭೇದಿಸಿದ್ದಾರೆ. ಮೇ 25 ರಂದು ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್​ನ ಲಾಕರ್​ನಲ್ಲಿದ್ದ ಅಂದಾಜು 53.26 ಕೋಟಿ ರೂ. ಮೌಲ್ಯದ 58.97 ಕೆ.ಜಿಬಂಗಾರದ ಆಭರಣಗಳು ಹಾಗೂ … Continued

ಮಾದಕ ವಸ್ತು ಪ್ರಕರಣ : ನಟ ಶ್ರೀಕಾಂತ ಬಂಧನ

ಚೆನ್ನೈ: ಕೊಕೇನ್ ಸಂಬಂಧಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರಿಯ ತಮಿಳು ಮತ್ತು ತೆಲುಗು ಚಲನಚಿತ್ರ ನಟ ಶ್ರೀಕಾಂತ ಅವರನ್ನು ಪೊಲೀಸರು ಬಂಧಿಸಿದ್ದು, ಚೆನ್ನೈ ನ್ಯಾಯಾಲಯವು ಜುಲೈ 7 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ನುಂಗಂಬಾಕ್ಕಂ ಪೊಲೀಸ್ ಠಾಣೆಯಲ್ಲಿ ನಟನನ್ನು ಹಲವಾರು ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಲಾಯಿತು ಮತ್ತು ಅಧಿಕೃತವಾಗಿ ಬಂಧಿಸಲಾಯಿತು. ಸೋಮವಾರ ಮಧ್ಯಾಹ್ನ ನಟ ಶ್ರೀಕಾಂತ ಅವರನ್ನು … Continued

ತನ್ನ ಬಿಟ್ಟು ಬೇರೊಬ್ಬಳನ್ನು ಮದುವೆಯಾದ ವ್ಯಕ್ತಿ ಸಿಲುಕಿಸಲು 21 ಸಲ ಬಾಂಬ್ ಬೆದರಿಕೆ ಹಾಕಿದ್ದ ಮಹಿಳಾ ರೊಬೊಟಿಕ್ಸ್ ಎಂಜಿನಿಯರ್ ಬಂಧನ…!

ಅಹಮದಾಬಾದ್ : 30 ವರ್ಷದ ರೊಬೊಟಿಕ್ಸ್ ಎಂಜಿನಿಯರ್ ಒಬ್ಬಳ ಏಕಪಕ್ಷೀಯ ಪ್ರೀತಿ ಅಪಾಯಕಾರಿ ತಿರುವು ಪಡೆದುಕೊಂಡಿದೆ, ಏಕೆಂದರೆ ಅವಳು ಪ್ರೀತಿಸಿದ ವ್ಯಕ್ತಿಯ ಮೇಲೆ ಸುಳ್ಳು ಪ್ರಕರಣ ದಾಖಲಾಗುವಂತೆ ಮಾಡಲು ಆಕೆ ದೇಶಾದ್ಯಂತ ಹಲವಾರು ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆ ಹಾಕಿದ್ದಾಳೆ…! ಚೆನ್ನೈನ ಉನ್ನತ ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ ಹಿರಿಯ ಸಲಹೆಗಾರ್ತಿಯಾಗಿರುವ ರೆನೆ ಜೋಶಿಲ್ಡಾ ಎಂಬ ಮಹಿಳೆಯನ್ನು ಅಹಮದಾಬಾದ್ … Continued

ಪಹಲ್ಗಾಮ್ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ | ದಾಳಿಯಲ್ಲಿ ಭಾಗಿಯಾಗಿದ್ದ ಪಾಕ್ ಎಲ್‌ಇಟಿ ಭಯೋತ್ಪಾದಕರಿಗೆ ಆಶ್ರಯ : ಇಬ್ಬರ ಬಂಧನ

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿ ಪ್ರಕರಣದ ಪ್ರಮುಖ ಬೆಳವಣಿಗೆಯಲ್ಲಿ, ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಯು 26 ಪ್ರವಾಸಿಗರನ್ನು ಕೊಂದುಹಾಕಿದ ಮತ್ತು 16 ಜನರನ್ನು ತೀವ್ರವಾಗಿ ಗಾಯಗೊಳಿಸಿದ ಕ್ರೂರ ಪಹಲ್ಗಾಮ್‌ ದಾಳಿಗೆ ಕಾರಣರಾದ ಲಷ್ಕರ್-ಎ-ತೊಯ್ಬಾ (LeT) ಭಯೋತ್ಪಾದಕರಿಗೆ ಆಶ್ರಯ ನೀಡಿದ್ದಕ್ಕಾಗಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದೆ. ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ದಾಳಿಯಲ್ಲಿ 26 ಅಮಾಯಕ ಭಾರತೀಯರ … Continued

ಮದ್ಯ ಹಗರಣ ; ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಆಂಧ್ರ ಮಾಜಿ ಸಿಎಂ ಜಗನ್ಮೋಹನ ರೆಡ್ಡಿ ಆಪ್ತನ ಬಂಧನ

ಬೆಂಗಳೂರು: ಬಹುಕೋಟಿ ಮೌಲ್ಯದ ಮದ್ಯ ಹಗರಣದಲ್ಲಿ ಆಂದ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ ಅವರ ಸಹಾಯಕ ಮತ್ತು ವೈಎಸ್ಆರ್ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಚೆವಿರೆಡ್ಡಿ ಭಾಸ್ಕರ ರೆಡ್ಡಿ ಅವರನ್ನು ಆಂಧ್ರ ಪೊಲೀಸರು ಬಂಧಿಸಿದ್ದಾರೆ. ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಅವರ ವಿರುದ್ಧ ಲುಕೌಟ್ ನೋಟಿಸ್ ಜಾರಿ ಮಾಡಿದ್ದರಿಂದ ಮಂಗಳವಾರ ರಾತ್ರಿ … Continued

ಸಂಡೂರಿನಲ್ಲಿ ಸಿಕ್ಕಿಬಿದ್ದ ʼಬ್ಲ್ಯಾಕ್ ಮೇಲ್ʼ ಕಾಮುಕ ; ಈತನ ಮೊಬೈಲ್‌ ನಲ್ಲಿತ್ತು 13500ಕ್ಕೂ ಹೆಚ್ಚು ಮಹಿಳೆಯರ ಅಶ್ಲೀಲ ಫೋಟೋ, ವೀಡಿಯೊಗಳು !

ಮುಂಬೈ ಪೊಲೀಸರು ಎರಡು ವರ್ಷಗಳ ಕಾಲ ಹುಡುಕಾಟ ನಡೆಸಿದ ನಂತರ ಸೈಬರ್ ಲೈಂಗಿಕ ಅಪರಾಧಗಳಿಗೆ ಬೇಕಾಗಿದ್ದ 25 ವರ್ಷದ ವ್ಯಕ್ತಿಯನ್ನು ಕರ್ನಾಟಕದ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಬಂಧಿಸಿದ್ದಾರೆ. ಆರೋಪಿ ಶುಭಂ ಕುಮಾರ ಮನೋಜಪ್ರಸಾದ ಸಿಂಗ್ ಎಂಬಾತನನ್ನು ಸಂಡೂರು ಪಟ್ಟಣದಲ್ಲಿ ಪತ್ತೆಹಚ್ಚಲಾಗಿದ್ದು, ಅಲ್ಲಿ ಈತ ಖಾಸಗಿ ಕಂಪನಿಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ. ಮುಂಬೈನ ವಿದ್ಯಾರ್ಥಿನಿಯೊಬ್ಬರು ನೀಡಿದ … Continued