ಮಲಸಹೋದರನಿಂದಲೇ ಹಾರ್ದಿಕ್ ಪಾಂಡ್ಯಗೆ 4.3 ಕೋಟಿ ವಂಚನೆ ; ಬಂಧನ

ಭಾರತೀಯ ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ ಮತ್ತು ಅವರ ಸಹೋದರ ಕೃನಾಲ್ ಪಾಂಡ್ಯ ಅವರನ್ನು ವಂಚಿಸಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಹಾರ್ದಿಕ್ ಪಾಂಡ್ಯ ಸಹೋದರರಿಗೆ 4.3 ಕೋಟಿ ರೂಪಾಯಿ ವಂಚಿಸಿದ ಆರೋಪದ ಮೇಲೆ ಹಾರ್ದಿಕ್ ಪಾಂಡ್ಯ ಅವರ ಮಲ ಸಹೋದರ ವೈಭವ ಪಾಂಡ್ಯ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. 37 ವರ್ಷದ ವೈಭವ … Continued

ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​ ಪ್ರಕರಣ : ಪ್ರಮುಖ ಆರೋಪಿ ಬಂಧನ

ನವದೆಹಲಿ : ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಪ್ರಮುಖ ಸಂಚುಕೋರನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಂಧಿಸಿದೆ ಎಂದು ಗುರುವಾರ ಎನ್‌ಐಎ ಪ್ರಕಟಣೆ ತಿಳಿಸಿದೆ. ಕರ್ನಾಟಕದ 12, ತಮಿಳುನಾಡಿನ 5 ಮತ್ತು ಉತ್ತರ ಪ್ರದೇಶದ 1 ಸೇರಿದಂತೆ 18 ಸ್ಥಳಗಳಲ್ಲಿ ಎನ್‌ಐಎ ತಂಡಗಳು ದಾಳಿ ನಡೆಸಿದ ನಂತರ ಮುಝಮ್ಮಿಲ್ ಷರೀಫ್‌ ಎಂಬಾತನನ್ನು ಬುಧವಾರ ಈ … Continued

ಐಸಿಸ್‌ ಗೆ ನಿಷ್ಠೆ ತೋರಿದ ಗುವಾಹತಿ ಐಐಟಿ ವಿದ್ಯಾರ್ಥಿ ಬಂಧನ

ಗುವಾಹತಿ : ಐಎಸ್‌ಐಎಸ್‌ಗೆ ನಿಷ್ಠೆ ವ್ಯಕ್ತಪಡಿಸಿ ಉಗ್ರಗಾಮಿ ಸಂಘಟನೆಗೆ ಸೇರಲು ಹೊರಟಿದ್ದ ಐಐಟಿ-ಗುವಾಹತಿ ವಿದ್ಯಾರ್ಥಿಯನ್ನು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ ಯುಎಪಿಎ (UAPA) ಅಡಿಯಲ್ಲಿ ಬಂಧಿಸಲಾಗಿದೆ. ಬಯೋಸೈನ್ಸ್‌ನ 4ನೇ ವರ್ಷದ ವಿದ್ಯಾರ್ಥಿಯಾಗಿರುವ ಆರೋಪಿ ತೌಸೀಫ್ ಅಲಿ ಫಾರೂಕಿಯನ್ನು ಶನಿವಾರ ಬಂಧಿಸಲಾಗಿದೆ. ಫಾರೂಕಿ ಇತ್ತೀಚೆಗೆ ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಮತ್ತು ಇಮೇಲ್‌ಗಳ ಮೂಲಕ ಭಯೋತ್ಪಾದಕ ಸಂಘಟನೆಗೆ ಸೇರುವ … Continued

ವೀಡಿಯೊ…| ‘ಒಂದು ಕಾಲದಲ್ಲಿ ಅರವಿಂದ ಕೇಜ್ರಿವಾಲ್ ನನ್ನೊಂದಿಗೆ ಸಾರಾಯಿ ವಿರುದ್ಧ ಧ್ವನಿ ಎತ್ತಿದ್ದರು, ಆದರೆ ಈಗ….’: ಕೇಜ್ರಿವಾಲ್ ಬಂಧನದ ಬಗ್ಗೆ ಅಣ್ಣಾ ಹಜಾರೆ

ನವದೆಹಲಿ : ದಶಕದ ಹಿಂದೆ ಭ್ರಷ್ಟಾಚಾರ ವಿರೋಧಿ ಹೋರಾಟದ ಮೂಲಕ ಗಮನ ಸೆಳೆದಿದ್ದ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರು, ತನ್ನೊಂದಿಗೆ ಸಾರಾಯಿ ವಿರುದ್ಧ ಹೋರಾಟ ನಡೆಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಅಬಕಾರಿ ನೀತಿ ರೂಪಿಸದಂತೆ ಎಚ್ಚರಿಸಿದ್ದೆ ಎಂದು ಹೇಳಿದ್ದಾರೆ. 2010ರ ಲೋಕಪಾಲ ಚಳವಳಿಯ ಮುಂಚೂಣಿ ನಾಯಕರಾಗಿದ್ದ ಅಣ್ಣಾ ಹಜಾರೆ ಜೊತೆ ಹೋರಾಟದಲ್ಲಿ … Continued

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಂಧನ

ನವದೆಹಲಿ : ಅಬಕಾರಿ ನೀತಿ ಹಗರಣದ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ತಂಡವು ಗುರುವಾರ (ಮಾರ್ಚ್ 21) ರಾತ್ರಿ 9 ಗಂಟೆ ವೇಳೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwa ಆ) ಅವರನ್ನು ಬಂಧಿಸಿದೆ. ಅವರ ಬಂಧನಕ್ಕೆ ತಡೆ ನೀಡಲು ದೆಹಲಿ ಹೈಕೋರ್ಟ್​ ನಿರಾಕರಿಸಿದ ನಂತರ ಗುರುವಾರ ಸಂಜೆ ವೇಳೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ … Continued

ಲೌಡ್ ಸ್ಪೀಕರಿನಲ್ಲಿ ಹನುಮಾನ ಚಾಲೀಸಾ ಹಾಕಿದ್ದಕ್ಕಾಗಿ ವ್ಯಕ್ತಿ ಮೇಲೆ ಹಲ್ಲೆ ಆರೋಪ : ಮೂವರ ಬಂಧನ | ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು: ಅಂಗಡಿಯಲ್ಲಿ ಲೌಡ್ ಸ್ಪೀಕರ್ ಹಾಕಿದ್ದಕ್ಕಾಗಿ ಆಕ್ಷೇಪ ವ್ಯಕ್ತಪಡಿಸಿ ಯುವಕರ ಗುಂಪೊಂದು ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಕಬ್ಬನ್ ಪೇಟೆ ಸಿದ್ದನಗಲ್ಲಿ ಜುಮ್ಮಾ ಮಸೀದಿ ರಸ್ತೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಘಟನೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ಸಂಬಂಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಭಾನುವಾರ ಸಂಜೆ … Continued

ಹಾವಿನ ವಿಷದ ಪ್ರಕರಣ : ಎಲ್ವಿಶ್ ಯಾದವ್ ಬಂಧನ

ನವದೆಹಲಿ: ಬಿಗ್ ಬಾಸ್ ಒಟಿಟಿ (OTT) ವಿಜೇತ ಮತ್ತು ಯೂ ಟ್ಯೂಬರ್ ಎಲ್ವಿಶ್ ಯಾದವ್ ತಪ್ಪು ಕಾರಣಗಳಿಗಾಗಿ ಸುದ್ದಿಯಲ್ಲಿದ್ದಾರೆ. ಹಾವಿನ ವಿಷದ ಪ್ರಕರಣದಲ್ಲಿ ಯೂಟ್ಯೂಬರ್ ಎಲ್ವಿಶ್ ಯಾದವ್ ಅವರನ್ನು ನೋಯ್ಡಾ ಪೊಲೀಸರು ಬಂಧಿಸಿದ್ದಾರೆ. ಕಳೆದ ವರ್ಷ, ನೋಯ್ಡಾ ಪೊಲೀಸರು ಸೆಕ್ಟರ್ 39 ರಲ್ಲಿ ಎಫ್‌ಐಆರ್ ದಾಖಲಿಸಿದ್ದರು ಮತ್ತು ವಿಚಾರಣೆಗೆ ಕರೆದ ನಂತರ ಆತನನ್ನು ಬಂಧಿಸಲಾಯಿತು. ಆತನನ್ನು … Continued

ದೆಹಲಿ ಅಬಕಾರಿ ನೀತಿ ಹಗರಣ: ಭ್ರಷ್ಟಾಚಾರ ಪ್ರಕರಣದಲ್ಲಿ ಕೆಸಿಆರ್ ಪುತ್ರಿ-ಬಿಆರ್‌ ಎಸ್‌ ನಾಯಕಿ ಕೆ. ಕವಿತಾ ಬಂಧನ

ನವದೆಹಲಿ: ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂಎಲ್‌ಸಿ ಮತ್ತು ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಕೆ ಕವಿತಾ ಅವರನ್ನು ಜಾರಿ ನಿರ್ದೇಶನಾಲಯ ಶುಕ್ರವಾರ ಬಂಧಿಸಿದೆ. 45 ವರ್ಷದ ಕೆ.ಕವಿತಾ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹೈದರಾಬಾದ್ ನಿವಾಸದ … Continued

ವೀಡಿಯೊ…| ಮಂಗಳೂರು : 87 ವರ್ಷದ ಮಾವನನ್ನು ವಾಕಿಂಗ್ ಸ್ಟಿಕ್‌ನಿಂದ ಅಮಾನುಷವಾಗಿ ಥಳಿಸಿದ ಸೊಸೆ ; ಬಂಧನ

ಮಂಗಳೂರು: ಸೊಸೆ ತಮ್ಮ ವಯೋವೃದ್ಧ ಮಾವನನ್ನು ವಾಕಿಂಗ್ ಸ್ಟಿಕ್‌ನಿಂದ ಅಮಾನುಷವಾಗಿ ಥಳಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ ಎಂದು ವರದಿಯಾಗಿದ್ದು, ಘಟನೆಯ ವೀಡಿಯೊ ವೈರಲ್ ಆಗಿದೆ. ಈ ಘಟನೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಈ ದೃಶ್ಯಾವಳಿಗಳು ವೇಗವಾಗಿ ವೈರಲ್ ಆಗಿದ್ದು, ಮಂಗಳೂರಿನ ನಾಗರಿಕ ಸಮಾಜದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ ಮತ್ತು ಇಂತಹ ಘಟನೆಗಳಲ್ಲಿ ಅಗತ್ಯ ಕ್ರಮಕ್ಕಾಗಿ ಒತ್ತಾಯಿಸಿದ್ದಾರೆ. … Continued

₹ 2,000 ಕೋಟಿ ಮೌಲ್ಯದ ಡ್ರಗ್ಸ್ ಕಳ್ಳಸಾಗಣೆ ಆರೋಪ: ಚಲನಚಿತ್ರ ನಿರ್ಮಾಪಕನ ಬಂಧನ

ನವದೆಹಲಿ: ₹ 2,000 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತುವನ್ನು ದೇಶದಿಂದ ಹೊರಕ್ಕೆ ಸಾಗಿಸುತ್ತಿದ್ದ ಆರೋಪದ ಮೇಲೆ ಸಿನಿಮಾ ನಿರ್ಮಾಪಕನನ್ನು ಬಂಧಿಸಲಾಗಿದೆ. ದಕ್ಷಿಣ ಭಾರತದ ಚಲನಚಿತ್ರೋದ್ಯಮದಲ್ಲಿ ಕೆಲಸ ಮಾಡಿದ ಡಿಎಂಕೆ ಮಾಜಿ ಪದಾಧಿಕಾರಿ ಜಾಫರ್ ಸಾದಿಕ್ ಎಂಬವನನ್ನು ನಾಲ್ಕು ತಿಂಗಳ ಶೋಧದ ನಂತರ ಬಂಧಿಸಲಾಗಿದೆ ಎಂದು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಶನಿವಾರ ತಿಳಿಸಿದೆ. ಎನ್‌ಸಿಬಿ (NCB) … Continued