ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ ; ದರೋಡೆಕೋರನ ಕಾಲಿಗೆ ಗುಂಡೇಟು

ಗದಗ: ಪೊಲೀಸರ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ದರೋಡೆಕೋರನ ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ​​ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಮತ್ತು ಡೋಣಿ ಗ್ರಾಮದಲ್ಲಿ ನಡೆದಿದೆ. ಆರೋಪಿ ಜಯಸಿಂಹ ಮೊಡಕೆರ ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಆರೋಪಿ ಜಯಸಿಂಹ ಮೊಡಕೆರನನ್ನು ಕರೆತರುವಾಗ ಈ ಘಟನೆ ನಡೆದಿದೆ. ಎಂದು ಹೇಳಲಾಗಿದ್ದು, … Continued

ಬೆಳಗಾವಿ | ಜನಿಸಿದ ತಕ್ಷಣ ನವಜಾತ ಶಿಶುವನ್ನು ಸಾಯಿಸಿ ತಿಪ್ಪೆಗುಂಡಿಯಲ್ಲಿ ಬಿಸಾಕಿ ಹೋದ ಪ್ರಕರಣ : ಪ್ರೇಮಿಗಳ ಬಂಧನ

ಬೆಳಗಾವಿ : ಮಗುವನ್ನು ಕೊಲೆ ಮಾಡಿ ತಿಪ್ಪೆಗುಂಡಿ ಬಳಿ ಬಿಸಾಡಿದ ಪ್ರಕರಣವನ್ನು ಭೇದಿಸಿರುವ ಪೊಲೀಸರು ಈ ಸಂಬಂಧ ಪ್ರೇಮಿಗಳನ್ನು ಬಂಧಿಸಿದ್ದಾರೆ. ಈ ಘಟನೆ ಬೆಳಗಾವಿ ಜಿಲ್ಲೆ ಚನ್ನಮ್ಮ ಅಂಬಡಗಟ್ಟಿ ಗ್ರಾಮದಲ್ಲಿ ನಡೆದಿದ್ದು, ಅವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದಾರೆ. ಬಂಧಿತರನ್ನು ಅಂಬಡಗಟ್ಟಿಯ ಮಹಾಬಲೇಶ್ವರ ರುದ್ರಪ್ಪ ಕಾಮೋಜಿ (31) ಹಾಗೂ ಸಿಮ್ರನ್ ಮೌಲಾಸಾಬ್ ಮಾಣಿಕಬಾಯಿ (22) ಎಂದು … Continued

ಬೆಳಗಾವಿ | ಕನ್ನಡಿಗರ ವಿರುದ್ಧ ನಾಲಿಗೆ ಹರಿಬಿಟ್ಟ ಎಂಇಎಸ್ ಮುಖಂಡನ ಬಂಧನ

ಬೆಳಗಾವಿ: ಎಂಇಎಸ್ ಮುಖಂಡ ಶುಭಂ ಶೆಳಕೆಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗೆ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಎಂಇಎಸ್ ಯುವ ಮುಖಂಡ ಶುಭಂ ಶೆಳಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಈಚೆಗೆ ಬೆಳಗಾವಿ ಬಳಿ ಬಸ್ ನಿರ್ವಾಹಕನ ಮೇಲೆ ನಡೆದ ಹಲ್ಲೆಯ ಘಟನೆಯನ್ನು ಶುಭಂ ತನ್ನ ಫೇಸ್‌ಬುಕ್‌ ಖಾತೆಯಲ್ಲಿ ಸಮರ್ಥಿಸಿಕೊಂಡಿದ್ದರು. ಕರ್ನಾಟಕದಲ್ಲಿರುವ ಕನ್ನಡ ಸಂಘಟನೆಗಳು … Continued

ಬಿಡದಿಯ ಕಾರ್ಖಾನೆಯಲ್ಲಿ ಪಾಕಿಸ್ತಾನ ಪರ ಬರಹ; ಇಬ್ಬರ ಬಂಧನ

ರಾಮನಗರ : ವ ಬಿಡದಿಯಲ್ಲಿರುವ ಟೊಯೋಟಾ ಬೋಷೂಕೂ ಆಟೋಮೇಟಿವ್ ಇಂಡಿಯಾ ಕಂಪನಿಯ ಕಾರ್ಖಾನೆಯ ಶೌಚಾಲಯದಲ್ಲಿ ಪಾಕಿಸ್ತಾನ ಪರ ಬರಹ ಬರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಿಡದಿಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಹೈಮದ್ ಹುಸೇನ್ (24) ಮತ್ತು ಸಾದಿಕ್ (20) ಎಂಬವರು ಬಂಧಿತ ಆರೋಪಿಗಳು. ಇವರು ಟೊಯೋಟಾ ಕಾರ್ಖಾನೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು. ಶೌಚಾಲಯದ … Continued

ಚಿನ್ನದ ಕಳ್ಳಸಾಗಣೆ ಹಗರಣ | ‘ಯೂ ಟ್ಯೂಬ್‌ ನೋಡಿ ಚಿನ್ನ ಅಡಗಿಸಿಟ್ಟುಕೊಳ್ಳುವುದು ಕಲಿತೆ ಎಂದು ಬಾಯ್ಬಿಟ್ಟ ನಟಿ ರನ್ಯಾ ರಾವ್‌ : ವರದಿ

ಬೆಂಗಳೂರು: ₹ 12.56 ಕೋಟಿ ಮೌಲ್ಯದ 14.2 ಕೆಜಿ ಚಿನ್ನ ಕಳ್ಳಸಾಗಣೆ ಆರೋಪದಲ್ಲಿ ಬಂಧಿತಳಾಗಿರುವ ನಟಿ ರನ್ಯಾ ರಾವ್, ಚಿನ್ನ ಕಳ್ಳಸಾಗಣೆಯಲ್ಲಿ ಇದೇ ತನ್ನ ಮೊದಲ ಪ್ರಯತ್ನ ಎಂದು ಹೇಳಿಕೊಂಡಿದ್ದಾಳೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನದ ಬಿಸ್ಕೆಟ್‌ಗಳನ್ನು ಬ್ಯಾಂಡೇಜ್‌ ಒಳಗೆ ಅಡಗಿಸಿಟ್ಟುಕೊಂಡು ಬಂದಿಳಿದ ಆಕೆಯನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ವಶಕ್ಕೆ ತೆಗೆದುಕೊಂಡಿದೆ. ಕರ್ನಾಟಕ ಡಿಜಿಪಿ … Continued

ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನ ; ನಟೋರಿಯಸ್‌ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಕಾಲಿಗೆ ಗುಂಡೇಟು

ಉಡುಪಿ : ಕೆಲವು ದಿನಗಳ ಹಿಂದೆ ಮಣಿಪಾಲ ಪೊಲೀಸರು ಹಾಗೂ ನೆಲಮಂಗಲದ ಪೊಲೀಸರಿಂದ ತಪ್ಪಿಸಿಕೊಂಡಿದ್ದ ನಟೋರಿಯಸ್‌ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಕಾಲಿಗೆ ಗುಂಡು ಹೊಡೆದ ಪೊಲೀಸರು ಆತನನ್ನು ಹೆಡೆಮುರಿ ಕಟ್ಟಿದ್ದಾರೆ. ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಇಸಾಕ್ ಹಿರಿಯಡ್ಕದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ಕಾಲಿಗೆ ಗುಂಡು ಹಾರಿಸಿ ಆತನನ್ನು ಬಂಧಿಸಿದ್ದಾರೆ … Continued

ತೆಲಂಗಾಣ ಸಿಎಂ ವಿರುದ್ಧ ವೀಡಿಯೊ ಪೋಸ್ಟ್‌ ಮಾಡಿದ್ದ ಇಬ್ಬರು ಮಹಿಳಾ ಪತ್ರಕರ್ತರ ಬಂಧನ

ಹೈದರಾಬಾದ್: ತೆಲಂಗಾಣದ ಮುಖ್ಯಮಂತ್ರಿ ರೇವಂತ ರೆಡ್ಡಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡುತ್ತಿದ್ದ ಆರೋಪದ ಮೇಲೆ ಹೈದರಾಬಾದ್ ಸೈಬರ್ ಕ್ರೈಂ ಪೊಲೀಸರು ಇಬ್ಬರು ಪತ್ರಕರ್ತರನ್ನು ಬುಧವಾರ ಬಂಧಿಸಿದ್ದಾರೆ. ಪಲ್ಸ್ ನ್ಯೂಸ್ ಎಂಡಿ ಪಿ. ರೇವತಿ ಮತ್ತು ಪಲ್ಸ್ ನ್ಯೂಸ್ ವರದಿಗಾರ್ತಿ ಬಂಡಿ ಸಂಧ್ಯಾ ಬಂಧಿತ ಪತ್ರಕರ್ತರಾಗಿದ್ದಾರೆ. ಕಾಂಗ್ರೆಸ್‌ ಕಾರ್ಯಾಧ್ಯಕ್ಷ ವಿಎಸ್‌ ವಂಶಿ ಕಿರಣ ನೀಡಿದ ದೂರಿನ … Continued

ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ: ಡಿವೈಎಸ್ಪಿ ಕನಕಲಕ್ಷ್ಮೀ ಬಂಧನ

ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮ ಅಕ್ರಮದ ತನಿಖೆ ವೇಳೆ ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಡಿವೈಎಸ್ಪಿ ಕನಕಲಕ್ಷ್ಮಿ ಅವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ವಕೀಲೆ ಜೀವಾ ತನ್ನ ಆತ್ಮಹತ್ಯೆಗೆ ಡಿವೈಎಸ್ಪಿ ಕನಕಲಕ್ಷ್ಮೀ ಕಾರಣ ಎಂದು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ರಾಜ್ಯ ಭೋವಿ ನಿಗಮ ಹಗರಣದ ತನಿಖೆ ಎದುರಿಸಿದಾಗ ಪೊಲೀಸ್ ಅಧಿಕಾರಿ ವಿವಸ್ತ್ರಗೊಳಿಸಿ ವಿಚಾರಣೆ … Continued

ಚಿನ್ನ ಕಳ್ಳ ಸಾಗಣೆ ಪ್ರಕರಣ : ನಟಿ ರನ್ಯಾ ವಿರುದ್ಧ ಎಫ್‌ಐಆರ್‌ ದಾಖಲಿಸಿದ ಸಿಬಿಐ

ಬೆಂಗಳೂರು : ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್‌ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಈಗ ಸಿಬಿಐ ಪ್ರಕರಣ ದಾಖಲಿಸಿದೆ. ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಪ್ರತ್ಯೇಕವಾಗಿ ಎಫ್‌ಐಆರ್ ದಾಖಲಿಸಿಕೊಂಡಿದ್ದು, ಪ್ರತ್ಯೇಕವಾಗಿ ತನಿಖೆ ಆರಂಭಿಸಿದೆ.ಚಿನ್ನ ಕಳ್ಳ ಸಾಗಣೆಯ ಸಿಂಡಿಕೇಟ್‌ ಪತ್ತೆಗೆ ಮುಂದಾಗಿರುವ ಸಿಬಿಐ ದೆಹಲಿ, … Continued

ಚಿನ್ನ ಕಳ್ಳ ಸಾಗಣೆ ಪ್ರಕರಣ | 15 ದಿನದಲ್ಲಿ ದುಬೈಗೆ 4 ಸಲ ಭೇಟಿ ; ಅದೇ ಬಟ್ಟೆ ಧರಿಸಿದ್ದ ನಟಿ ; ರನ್ಯಾ ರಾವ್ ಸಿಕ್ಕಿಬಿದ್ದಿದ್ದು ಹೇಗೆ…?

 ಬೆಂಗಳೂರು : ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳ್ಳ ಸಾಗಣೆ ಮಾಡುತ್ತಿದ್ದ 14.8 ಕೆಜಿ ಚಿನ್ನಾಭರಣವನ್ನು ಪತ್ತೆ ಮಾಡಿದ ನಂತರ ನಟಿ ಮತ್ತು ಹಿರಿಯ ಐಪಿಎಸ್ ಅಧಿಕಾರಿಯ ಮಲ ಪುತ್ರಿ ರನ್ಯಾ ರಾವ್ ಅವಳನ್ನು ಕಂದಾಯ ಗುಪ್ತಚರ ನಿರ್ದೇಶನಾಲಯವು ಬಂಧಿಸಿದೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅತಿದೊಡ್ಡ ಪ್ರಮಾಣದ ಚಿನ್ನಾಭರಣದ ಪ್ರಮುಖ ಕಳ್ಳಸಾಗಣೆ ದಂಧೆಯನ್ನು ಡಿಆರ್‌ಐ ಭೇದಿಸಿದ್ದಾರೆ. … Continued