ಹುಬ್ಬಳ್ಳಿ: ಕರಸೇವಕ ಶ್ರೀಕಾಂತ ಪೂಜಾರಿ ಜೈಲಿನಿಂದ ಬಿಡುಗಡೆ ; ಭರ್ಜರಿ ಸ್ವಾಗತ

ಹುಬ್ಬಳ್ಳಿ: ಮೂವತ್ತು ವರ್ಷಗಳ ಹಿಂದಿನ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಕರಸೇವಕ ಶ್ರೀಕಾಂತ ಪೂಜಾರಿ ಶನಿವಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ರಾಮ ಜನ್ಮಭೂಮಿ ಹೋರಾಟ ಪ್ರಕರಣದಲ್ಲಿ 31 ವರ್ಷಗಳ ನಂತರ ಬಂಧನಕ್ಕೊಳಗಾಗಿದ್ದ ಶ್ರೀಕಾಂತ ಪೂಜಾರಿ ಅವರು ಕೋರ್ಟ್‌ ನಿಂದ ಜಾಮೀನು ದೊರೆತ ಮೇಲೆ 9 ದಿನಗಳ ನಂತರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. 31 ವರ್ಷಗಳ ಹಿಂದಿನ ರಾಮಜನ್ಮಭೂಮಿ ಹೋರಾಟದ ಗಲಭೆ ಪ್ರಕರಣದಲ್ಲಿ … Continued

ಬೆಳಗಾವಿ : ಅಂಗನವಾಡಿ ಸಹಾಯಕಿ ಮೂಗು ಕತ್ತರಿಸಿದ ಆರೋಪಿ ಬಂಧನ

ಬೆಳಗಾವಿ : ಕುಡುಗೋಲಿನಿಂದ ಅಂಗನವಾಡಿ ಸಹಾಯಕಿಯ ಮೂಗು ಕತ್ತರಿಸಿ ಪರಾರಿಯಾಗಿದ್ದ ವ್ಯಕ್ತಿಯನ್ನು ಪೊಲೀಸರು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳಗಾವಿ ತಾಲೂಕಿನ ಕಾಕತಿ ಪೊಲೀಸ್ ಠಾಣೆ ವ್ಯಾಪ್ತಿಯ ಬಸುರ್ತೆ ಗ್ರಾಮದಲ್ಲಿ ಈ ಘಟನೆ ನಡೆದಿತ್ತು. ಅಂಗನವಾಡಿ ಮಕ್ಕಳು ತನ್ನ ಮನೆಯ ಹೂವುಗಳನ್ನು ಕಿತ್ತಿದ್ದಾರೆಂದು ಕೋಪಗೊಂಡ ಮನೆಯ ಮಾಲೀಕ ಕಲ್ಯಾಣಿ ಜ್ಯೋತಿಬಾ ಮೋರೆ ಎಂಬಾತ ಜಗಳ ತೆಗೆದು ಕುಡುಗೋಲಿನಿಂದ … Continued

ಅಯೋಧ್ಯೆ ರಾಮ ಮಂದಿರಕ್ಕೆ ಬಾಂಬ್ ಬೆದರಿಕೆ: ಇಬ್ಬರು ಆರೋಪಿಗಳ ಬಂಧನ

ನವದೆಹಲಿ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮತ್ತು ಅಯೋಧ್ಯೆಯಲ್ಲಿ ಉದ್ಘಾಟನೆಗೊಳ್ಳಲಿರುವ ರಾಮ ಮಂದಿರಕ್ಕೆ ಬಾಂಬ್ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಇಬ್ಬರನ್ನು ಬಂಧಿಸಿದೆ. ಎಸ್‌ಟಿಎಫ್ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿ) ಅಮಿತಾಬ್‌ ಯಶ ಮತ್ತು ದೇವೇಂದ್ರ ತಿವಾರಿ ಎಂಬ ವ್ಯಕ್ತಿಗೂ ಬಾಂಬ್ ಬೆದರಿಕೆಗಳನ್ನು ಕಳುಹಿಸಲಾಗಿದೆ. ಬಂಧಿತ ಆರೋಪಿಗಳಾದ ತಹರ್ ಸಿಂಗ್ … Continued

ಬಂಧಿತ ಶ್ರೀಕಾಂತ ಪೂಜಾರಿ ಕರಸೇವಕನಲ್ಲ, ಆತನ ವಿರುದ್ಧ 16 ಪ್ರಕರಣಗಳಿವೆ : ಗೃಹ ಸಚಿವ ಪರಮೇಶ್ವರ

ಬೆಂಗಳೂರು: ಹುಬ್ಬಳ್ಳಿಯಲ್ಲಿ ಕರಸೇವಕನ ಬಂಧನ ಖಂಡಿಸಿ ಬಿಜೆಪಿಯ ಪ್ರತಿಭಟನೆಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು, ಬಂಧಿತ ವ್ಯಕ್ತಿ ಕರಸೇವಕನಲ್ಲ ಮತ್ತು ಆತನ ವಿರುದ್ಧ 16 ಪೊಲೀಸ್ ಪ್ರಕರಣಗಳಿವೆ ಎಂದು ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶ್ರೀಕಾಂತ ಪೂಜಾರಿ ಎಂಬ ವ್ಯಕ್ತಿಯನ್ನು ಪೊಲೀಸರು ದಾಖಲಿಸಿರುವ ಎಫ್‌ಐಆರ್ ಮತ್ತು ಇತರ ದಾಖಲೆಗಳಲ್ಲಿ ಕರಸೇವಕ ಎಂದು … Continued

ಹುಬ್ಬಳ್ಳಿ: ಬಿಜೆಪಿ ಪ್ರತಿಭಟನೆ, ಠಾಣೆಗೆ ನುಗ್ಗಲು ಯತ್ನ: ಆರ್.ಅಶೋಕ ಸೇರಿ ಹಲವರು ವಶಕ್ಕೆ

ಹುಬ್ಬಳ್ಳಿ: ರಾಮಜನ್ಮಭೂಮಿ ಹೋರಾಟಗಾರರ ಬಂಧನ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಹಮ್ಮಿಕೊಂಡಿರುವ ಪ್ರತಿಭಟನೆಯು ಹುಬ್ಬಳ್ಳಿಯಲ್ಲಿ ತೀವ್ರಗೊಂಡಿದೆ. ಹಿಂದೂ ಕಾರ್ಯಕರ್ತನ ಬಂಧನ ಖಂಡಿಸಿ ವಿಪಕ್ಷ ನಾಯಕ ಆರ್‌.ಅಶೋಕ ನೇತೃತ್ವದಲ್ಲಿ ನಡೆದ ಪ್ರತಿಭಟನೆ ವೇಳೆ ಬಿಜೆಪಿ ಕಾರ್ಯಕರ್ತರು ಪೋಲಿಸ್ ಠಾಣೆಗೆ ನುಗ್ಗಲು ಯತ್ನಿಸಿದಾಗ ತಡೆದ ಪೊಲೀಸರು, ನಾಯಕ ಆರ್. ಅಶೋಕ್ ಸೇರಿದಂತೆ 90 ಜನರನ್ನು ವಶಕ್ಕೆ ಪಡೆದರು. ಹಿಂದೂ ಕಾರ್ಯಕರ್ತ … Continued

ಮರಗಳ್ಳತನ ಆರೋಪ: ಪ್ರತಾಪ ಸಿಂಹ ಸಹೋದರ ವಿಕ್ರಂ ಸಿಂಹ ಅರಣ್ಯಾಧಿಕಾರಿಗಳ ವಶಕ್ಕೆ

ಬೆಂಗಳೂರು : ಮರಗಳ್ಳತನ ಪ್ರಕರಣದ ಆರೋಪ ಎದುರಿಸುತ್ತಿರುವ ಮೈಸೂರು-ಕೊಡಗು ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಅವರ ಸಹೋದರ ವಿಕ್ರಂ ಸಿಂಹನನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. .ಹಾಸನ ಜಿಲ್ಲೆಯ ಬೇಲೂರು ಬಳಿಯ ನಂದಗೊಂಡನಹಳ್ಳಿಯಲ್ಲಿ 126 ಮರಗಳನ್ನು ಕಡಿದ ಆರೋಪದಡಿ ವಿಕ್ರಂ ಸಿಂಹ ಅವರನ್ನು ಅಧಿಕಾರಿಗಳು ಬಂಧಿಸಿದ್ದಾರೆ ಎನ್ನಲಾಗಿದೆ. ನಂದಗೋಡನಹಳ್ಳಿಯಲ್ಲಿ ತಾವು ಲೀಸ್‌ಗೆ ಪಡೆದಿದ್ದ ಜಮೀನಿನಲ್ಲಿ … Continued

ಮಹಿಳೆಯ ಮೇಲೆ ಕಾರು ಚಲಾಯಿಸಿದ ಆರೋಪ: ಹಿರಿಯ ಅಧಿಕಾರಿಯ ಪುತ್ರನ ಬಂಧನ

ಮುಂಬೈ: ಈ ವಾರದ ಆರಂಭದಲ್ಲಿ ಥಾಣೆಯಲ್ಲಿ ಸಾಮಾಜಿಕ ಮಾಧ್ಯಮದ ಪ್ರಭಾವಿ ಮಹಿಳೆಯನ್ನು ಗಾಯಗೊಳಿಸಿದ ಆರೋಪದ ಮೇಲೆ ಮಹಾರಾಷ್ಟ್ರದ ಹಿರಿಯ ಅಧಿಕಾರಿಯೊಬ್ಬರ ಮಗ ಸೇರಿದಂತೆ ಮೂವರನ್ನು ಭಾನುವಾರ ತಡರಾತ್ರಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಹಾರಾಷ್ಟ್ರ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅನಿಲ ಗಾಯಕ್ವಾಡ್ ಅವರ ಪುತ್ರ ಅಶ್ವಜಿತ್ ಗಾಯಕ್ವಾಡ್ ಮತ್ತು ರೊಮಿಲ್ … Continued

ಸಚಿವ ಜಾರ್ಜ್ ವಿರುದ್ಧ ಅವಹೇಳನಕಾರಿ ಪೋಸ್ಟ್: ತೆಲಂಗಾಣದ ಬಿಆರ್‌ ಎಸ್ ಮುಖಂಡನ ಬಂಧನ

ಬೆಂಗಳೂರು : ಇಂಧನ ಸಚಿವ ಕೆ.ಜೆ ಜಾರ್ಜ್ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪಿದ ಮೇರೆಗೆ ಸೈಬರ್ ಕ್ರೈಂ ಪೊಲೀಸರು ತೆಲಂಗಾಣದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ತೆಲಂಗಾಣದ ಕರೀಂನಗರದ ನಿವಾಸಿ ರವಿಕಾಂತ ಶರ್ಮಾ (33) ಬಂಧಿತ ಆರೋಪಿಯಾಗಿದ್ದಾನೆ. ಈತ ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ ನೇತೃತ್ವದ ಭಾರತ ರಾಷ್ಟ್ರ ಸಮಿತಿ … Continued

ದುಬೈನಲ್ಲಿ ಮಹದೇವ ಬೆಟ್ಟಿಂಗ್ ಆಪ್ ಮಾಲೀಕನ ಬಂಧನ : ಭಾರತಕ್ಕೆ ಗಡಿಪಾರು ಮಾಡುವ ಪ್ರಕ್ರಿಯೆ ಆರಂಭ

ನವದೆಹಲಿ : ಮಹಾದೇವ ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣದ ಆರೋಪಿಗಳಲ್ಲಿ ಒಬ್ಬ ಮತ್ತು ಮಹಾದೇವ ಆನ್‌ಲೈನ್ ಬೆಟ್ಟಿಂಗ್ ಪ್ಲಾಟ್‌ಫಾರ್ಮ್‌ ಮಾಲೀಕ ರವಿ ಉಪ್ಪಲ್ ಅವರನ್ನು ಸ್ಥಳೀಯ ಅಧಿಕಾರಿಗಳು ದುಬೈನಲ್ಲಿ ಬಂಧಿಸಿದ್ದಾರೆ. ಇಂಟರ್‌ಪೋಲ್ ಮೂಲಕ ಜಾರಿ ನಿರ್ದೇಶನಾಲಯ ನೀಡಿದ ರೆಡ್ ಕಾರ್ನರ್ ನೋಟಿಸ್ ಆಧರಿಸಿ ಆತನನ್ನು , ಯುನೈಟೆಡ್ ಅರಬ್ ಎಮಿರೇಟ್ಸ್‌ ಅಧಿಕಾರಿಗಳು ದುಬೈನಲ್ಲಿ ಬಂಧಿಸಿದ್ದಾರೆ. ಕಳೆದ … Continued

‘ಭಾರತದ ಮೇಲೆ ಆಕ್ರಮಣ ಮಾಡಿ ಮೋದಿಯನ್ನು ಸರಪಳಿ ಹಾಕಿ ಬಂಧಿಸ್ತೇವೆ’: ಬಡಾಯಿ ಕೊಚ್ಚಿಕೊಂಡ ಪಾಕ್ ಸೇನಾಧಿಕಾರಿ | ವೀಡಿಯೊ ವೀಕ್ಷಿಸಿ

ಜಾಗತಿಕ ವೇದಿಕೆಯಲ್ಲಿ ಪಾಕಿಸ್ತಾನವನ್ನು ಅಪಹಾಸ್ಯ ಮಾಡುತ್ತಿರುವಾಗ, ಅದರ ಹಿರಿಯ ಸೇನಾಧಿಕಾರಿ ಇತ್ತೀಚೆಗೆ ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿಷ ಕಕ್ಕುತ್ತಿರುವುದು ಕಂಡುಬಂದಿದೆ. ಪಾಕಿಸ್ತಾನದ ಹಿರಿಯ ಸೇನಾಧಿಕಾರಿಯೊಬ್ಬರು ಗುಂಪನ್ನು ಉದ್ದೇಶಿಸಿ ಮಾತನಾಡುತ್ತಾ ಭಾರತವನ್ನು ವಶಪಡಿಸಿಕೊಳ್ಳುವುದು ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬಂಧಿಸಿ ಇಸ್ಲಾಮಿಕ್ ರಾಷ್ಟ್ರಕ್ಕೆ ಸರಪಳಿಯಲ್ಲಿ ಕರೆತರುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ.. ಅಷ್ಟೇ … Continued