ಬೆಂಗಳೂರು: ಓರ್ವ ಪಾಕಿಸ್ತಾನಿ ಪ್ರಜೆ ಸೇರಿ ಅಕ್ರಮವಾಗಿ ನೆಲೆಸಿದ್ದ ನಾಲ್ವರು ವಿದೇಶಿಗರ ಬಂಧನ

ಬೆಂಗಳೂರು: ಓರ್ವ ಪಾಕಿಸ್ತಾನಿ ಪ್ರಜೆ ಸೇರಿ ನಾಲ್ವರು ವಿದೇಶಿ ಪ್ರಜೆಗಳನ್ನು ಬೆಂಗಳೂರಿನ ಜಿಗಣಿ ಪೊಲಿಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ಅಕ್ರಮವಾಗಿ ನಾಲ್ವರು ವಾಸವಾಗಿದ್ದರು. ಪಾಕಿಸ್ತಾನಿ, ಬಾಂಗ್ಲಾದೇಶ ಮೂಲದ ಪ್ರಜೆಗಳು ಅಕ್ರಮವಾಗಿ ನೆಲೆಸಿರುವ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆ ನೀಡಿದ ಮಾಹಿತಿ ಆಧರಿಸಿ ರಾತ್ರಿ ಕಾರ್ಯಾಚರಣೆ ನಡೆಸಿದ ಜಿಗಣಿ … Continued

ಬಿಜೆಪಿ ಶಾಸಕ ಮುನಿರತ್ನ ಮತ್ತೆ ಬಂಧನ

ಬೆಂಗಳೂರು: ಬೆಂಗಳೂರು ಆರ್​ಆರ್​ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ. ಮಹಿಳೆಯೊಬ್ಬರು ನೀಡಿದ ಅತ್ಯಾಚಾರ ಆರೋಪದಡಿ ಮುನಿರತ್ನ ಅವರನ್ನು ಬಂಧಿಸಲಾಗಿದೆ. ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಹಾಗೂ ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ಗುರುವಾರ ಜಾಮೀನು ಪಡೆದು ಜೈಲಿನಿಂದ ಹೊರಬಂದಿದ್ದ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ರಾಮನಗರದ ಕಗ್ಗಲೀಪುರ ಠಾಣೆ ಪೊಲೀಸರು … Continued

ಮುಂಬೈ ಮೂಲದ ಮಾಡೆಲ್-ನಟಿಯ ಅಕ್ರಮ ಬಂಧನ ; ಆಂಧ್ರದ ಮೂವರು ಐಪಿಎಸ್ ಅಧಿಕಾರಿಗಳ ಅಮಾನತು

ಅಮರಾವತಿ : ಮುಂಬೈ ಮೂಲದ ಮಾಡೆಲ್ ಹಾಗೂ ನಟಿಯೊಬ್ಬರನ್ನು ಅಕ್ರಮವಾಗಿ ಬಂಧಿಸಿ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರ ಪ್ರದೇಶ ಸರ್ಕಾರ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತು ಮಾಡಿದೆ. ಅಮಾನತುಗೊಂಡ ಆಂಧ್ರಪ್ರದೇಶದ ಮೂವರು ಐಪಿಎಸ್ ಅಧಿಕಾರಿಗಳಲ್ಲಿ ಡೈರೆಕ್ಟರ್ ಜನರಲ್ ಶ್ರೇಣಿಯ ಒಬ್ಬರು, ಇನ್ಸ್ ಪೆಕ್ಟರ್ ಜನರಲ್ ಮತ್ತು ಇನ್ಸ್ ಪೆಕ್ಟರ್ ಜನರಲ್ ಶ್ರೇಣಿಯ ಒಬ್ಬರು ಮತ್ತು … Continued

ಕೋಲ್ಕತ್ತಾ ಕಿರಿಯ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ ; ಆಸ್ಪತ್ರೆ ಮಾಜಿ ಪ್ರಾಂಶುಪಾಲ, ಪೊಲೀಸ್ ಅಧಿಕಾರಿ ಬಂಧಿಸಿದ ಸಿಬಿಐ…!

ಕೋಲ್ಕತ್ತಾ: ಕೋಲ್ಕತ್ತಾದ ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರೇನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ ಘೋಷ್ ಮತ್ತು ಆರಂಭದಲ್ಲಿ ತನಿಖೆ ನಡೆಸಿದ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಅವರನ್ನು ತನಿಖಾಧಿಕಾರಿಗಳನ್ನು ಸಿಬಿಐ ಬಂಧಿಸಿದೆ. ತನಿಖೆ ದಾರಿ ತಪ್ಪಿಸಲು ಯತ್ನಿಸಿರುವುದು ಮತ್ತು … Continued

ಜ್ಯೂಸ್‌ ಗೆ ಮೂತ್ರ ಬೆರೆಸಿ ಮಾರಾಟ ; ವ್ಯಾಪಾರಿಗೆ ಸಾರ್ವಜನಿಕರಿಂದ ಗೂಸಾ, ಅಂಗಡಿ ಧ್ವಂಸ…

ಗಾಜಿಯಾಬಾದ್‌ : ಅಂಗಡಿಯ ವ್ಯಾಪಾರಿಯೊಬ್ಬ ತನ್ನ ಗ್ರಾಹಕರಿಗೆ ಜ್ಯೂಸ್‌ ನೀಡುವಾಗ ಅದಕ್ಕೆ ಮೂತ್ರ ಬೆರೆಸಿ ಜ್ಯೂಸ್‌ ಮಾರಾಟ ಮಾಡುತ್ತಿದ್ದ ಪ್ರಕರಣವೊಂದು ಉತ್ತರಪ್ರದೇಶದ ಗಾಜಿಯಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ಇದರ ಬಗ್ಗೆ ಜನರಿಗೆ ತಿಳಿಯುತ್ತಿದ್ದಂತೆ ಅಕ್ರೋಶಗೊಂಡ ಜನರು ವ್ಯಾಪಾರಿಯನ್ನು ಮನಬಂದಂತೆ ಥಳಿಸಿದ್ದು, ಅಂಗಡಿಯನ್ನು ಧ್ವಂಸಗೊಳಿಸಿದ್ದಾರೆ. ನಂತರ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಅವರು ಖುಷಿ ಜ್ಯೂಸ್ ಕಾರ್ನರ್ ಮಾಲೀಕ ಅಮೀರ್ … Continued

ಜೀವ ಬೆದರಿಕೆ, ಜಾತಿನಿಂದನೆ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನ ಪೊಲೀಸ್​ ವಶಕ್ಕೆ

ಬೆಂಗಳೂರು : ಗುತ್ತಿಗೆದಾರ ಚಲುವರಾಜು ಅವರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪಿತ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೋಲಾರ ಜಿಲ್ಲೆಯ ಮುಳುಬಾಗಿಲು ತಾಲೂಕಿನ ನಂಗಲಿ ಗ್ರಾಮದಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದ್ದು, ಕೋಲಾರದಿಂದ ಆಂಧ್ರದ ಚಿತ್ತೂರಿಗೆ ತೆರಳುತ್ತಿದ್ದಾಗ ಮೊಬೈಲ್ ಫೋನ್ ಲೊಕೇಷನ್ ಆಧಾರದ ಮೇಲೆ … Continued

ಮನೆಯಲ್ಲೇ ಕಾಡುಕೋಣದ ಮಾಂಸ, ಜಿಂಕೆ ಕೊಂಬು ಇರಿಸಿಕೊಂಡಿದ್ದ ಇಬ್ಬರ ಬಂಧನ

ಬೆಳಗಾವಿ: ಖಾನಾಪುರ ತಾಲೂಕಿನ ಗೋಟಗಾಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಜಾಂಬೇಗಾಳಿ ಗ್ರಾಮದ ಮನೆಯಲ್ಲಿ ಅಕ್ರಮವಾಗಿ ಸಂಗ್ರಹ ಮಾಡಿ ಇಟ್ಟುಕೊಂಡಿದ್ದ ಕಾಡುಕೋಣದ ಮಾಂಸ ಮತ್ತು ಜಿಂಕೆಯ ಕೊಂಬುಗಳನ್ನು ಗುರುವಾರ ಅರಣ್ಯ ಇಲಾಖೆಯ ಅಧಿಕಾರಿಗಳು ಪತ್ತೆಹಚ್ಚಿ ಈ ಸಂಬಂಧ ಇಬ್ಬರನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು ಮಹಮ್ಮದ್ ಆಲಿ ಹಲಸಿಕರ ಮತ್ತು ಮೌಲಾಲಿ ಹಲಸಿಕರ … Continued

34 ವರ್ಷದ ಹಿಂದೆ ₹20 ಲಂಚ ಪಡೆದ ಪ್ರಕರಣ : ಮಾಜಿ ಕಾನ್‌ಸ್ಟೆಬಲ್ ಬಂಧನಕ್ಕೆ ಕೋರ್ಟ್ ಆದೇಶ…

ಪಾಟ್ನಾ: 34 ವರ್ಷಗಳ ಹಿಂದಿನ 20 ರೂಪಾಯಿಯ ಲಂಚ ಪ್ರಕರಣವೊಂದು ಈಗ ಮತ್ತೆ ಸುದ್ದಿಯಲ್ಲಿದೆ. 1990ರಲ್ಲಿ ಬಿಹಾರದ ಸಹರ್ಸಾ ರೈಲ್ವೇ ನಿಲ್ದಾಣದಲ್ಲಿ ತರಕಾರಿ ಸಾಗಿಸುತ್ತಿದ್ದ ಮಹಿಳೆಯೊಬ್ಬರಿಂದ 20 ರೂಪಾಯಿ ಲಂಚ ಸ್ವೀಕರಿಸಿದ ಆರೋಪದ ಮೇಲೆ ನ್ಯಾಯಾಲಯವೊಂದು ಮಾಜಿ ಕಾನ್‌ಸ್ಟೆಬಲ್‌ನನ್ನು ಬಂಧಿಸಲು ಆದೇಶಿಸಿದೆ. 1990ರ ಮೇ 6ರಂದು ಸಹಾರ್ಸ ರೈಲ್ವೆ ನಿಲ್ದಾಣದಲ್ಲಿ ಕರ್ತವ್ಯಕ್ಕೆ ನಿಯೋಜಿತನಾಗಿದ್ದ ಬರಾಹಿಯಾದ ಕಾನ್‌ಸ್ಟೆಬಲ್ … Continued

ಕೋಲ್ಕತ್ತಾ ಆರ್‌.ಜಿ. ಕರ್ ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ ಘೋಷ್ ಬಂಧಿಸಿದ ಸಿಬಿಐ

ಕೋಲ್ಕತ್ತಾ: ಕಳೆದ ತಿಂಗಳು ವೈದ್ಯೆಯೊಬ್ಬರ ಅತ್ಯಾಚಾರ ಮತ್ತು ಹತ್ಯೆಗೈದ ಕೋಲ್ಕತ್ತಾ ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ ಘೋಷ್ ಅವರನ್ನು ಸಿಬಿಐ ಸೋಮವಾರ ಬಂಧಿಸಿದೆ. ಅತ್ಯಾಚಾರ-ಕೊಲೆ ಪ್ರಕರಣದ ಜೊತೆಗೆ ಸಿಬಿಐ ತನಿಖೆ ನಡೆಸುತ್ತಿರುವ ಸಂದೀಪ ಘೋಷ್ ಅಧಿಕಾರಾವಧಿಯಲ್ಲಿ ನಡೆದಿದೆ ಎನ್ನಲಾದ ಹಣಕಾಸಿನ ಅಕ್ರಮಗಳ ಆರೋಪಗಳಿಗೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ. ಸಂದೀಪ್ ಘೋಷ್ ಜೊತೆ ಮಾರಾಟಗಾರರಾದ ಬಿಪ್ಲವ್ ಸಿಂಘಾ … Continued

ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: 20 ಗಂಟೆಯೊಳಗೆ ಭಟ್ಕಳದಲ್ಲಿ ಆರೋಪಿ ಬಂಧನ

ಉಡುಪಿ: ಬೆಂಗಳೂರು-ಮುರುಡೇಶ್ವರ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಮಣಿಪಾಲ ಪೊಲೀಸರು ಭಟ್ಕಳ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಸಂತ್ರಸ್ತೆ ನೀಡಿದ ಫೋಟೋ ಆಧರಿಸಿ ಅಪರಾಧ ನಡೆದ ೨೦ ಗಂಟೆಯೊಳಗೆ ಬಂಧಿಸಿದ್ದಾರೆ. ಭಟ್ಕಳದ ಶುರೈಮ್‌ (22) ಬಂಧಿತ ವ್ಯಕ್ತಿ. ಬೆಂಗಳೂರಿನ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಉಡುಪಿ ಮೂಲದ ಯುವತಿ ಎರಡು ದಿನಗಳ ಹಿಂದೆ … Continued