ಮಂಗಳೂರು | ಖೋಟಾ ನೋಟು ಚಲಾವಣೆ ಯತ್ನ : ನಾಲ್ವರ ಬಂಧನ

ಮಂಗಳೂರು : ಕೇರಳದಿಂದ ಮಂಗಳೂರು ನಗರಕ್ಕೆ ಖೋಟಾ ನೋಟು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಅಂತಾರಾಜ್ಯ ಖೋಟಾ ನೋಟು ಚಲಾವಣೆ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಹಾಗೂ ಈ ಸಂಬಂಧ ನಾಲ್ವರನ್ನು ಬಂಧಿಸಿದ್ದು, ಅವರಿಂದ 500 ರೂಪಾಯಿ ಮುಖಬೆಲೆಯ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಕೇರಳದ ಕಾಸರಗೋಡು ಜಿಲ್ಲೆಯಲ್ಲಿ 500 ರೂಪಾಯಿ ಮುಖಬೆಲೆಯ ಖೋಟಾ ನೋಟುಗಳನ್ನು … Continued

ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಸಿಎಂ ಮಮತಾ ಬ್ಯಾನರ್ಜಿಗೆ ಜೀವ ಬೆದರಿಕೆಯೊಡ್ಡಿದ ವಿದ್ಯಾರ್ಥಿನಿ ಅರೆಸ್ಟ್

ಕೋಲ್ಕತ್ತ : ಕೋಲ್ಕತ್ತದ ಆರ್.ಜಿ.ಕರ್ ವೈದ್ಯಕೀಯ ಕಾಲೇಜಿನಲ್ಲಿ ನಡೆದ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ವಿದ್ಯಾರ್ಥಿನಿಯ ಚಿತ್ರವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಜೀವ ಬೆದರಿಕೆ ಒಡ್ಡಿದ್ದ ವಿದ್ಯಾರ್ಥನಿಯೊಬ್ಬಳನ್ನು ಬಂಧಿಸಲಾಗಿದೆ. ಬಂಧಿತ ವಿದ್ಯಾರ್ಥಿನಿಯನ್ನು ಕೀರ್ತಿ ಶರ್ಮಾ ಎಂದು ಗುರುತಿಸಲಾಗಿದೆ. ಆರೋಪಿ ವಿರುದ್ಧ ತಲ್‌ತಲಾ ಪೊಲೀಸ್ … Continued

ʼನವಿಲು ಕರಿʼ ವೀಡಿಯೊ ವೈರಲ್‌ ಆದ ನಂತರ ತೆಲಂಗಾಣ ಯೂ ಟ್ಯೂಬರ್ ಬಂಧನ

ತೆಲಂಗಾಣದ ಸಿರ್ಸಿಲ್ಲಾದ ಯೂಟ್ಯೂಬರ್‌ ನನ್ನು ಭಾನುವಾರ ಬಂಧಿಸಲಾಗಿದ್ದು, ಭಾರತದ ರಾಷ್ಟ್ರೀಯ ಪಕ್ಷಿಯಾದ ‘ನವಿಲು ಕರಿ’ ತಯಾರಿಸಿ ಸೇವಿಸುತ್ತಿರುವ ವೀಡಿಯೊ ವೈರಲ್ ಆದ ನಂತರ ಆತನನ್ನು ಬಂಧಿಸಲಾಗಿದೆ. ಕೋಡಂ ಪ್ರಣಯಕುಮಾರ ಪೋಸ್ಟ್ ಮಾಡಿದ ವೀಡಿಯೊ ವೈರಲ್‌ ಆದ ಬೆನ್ನಿಗೇ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಯಿತು. ಆತನನ್ನು ಬಂಧಿಸಲಾಗಿದೆ. ಆತ ಯೂಟ್ಯೂಬನಲ್ಲಿ ನವಿಲು ಕರಿಯ ಸಂಪ್ರದಾಯಿಕ ವಿಧಾನ … Continued

ಡೊನಾಲ್ಡ್ ಟ್ರಂಪ್-ಅಮೆರಿಕ ಅಧಿಕಾರಿಗಳ ಹತ್ಯೆಗೆ ಸಂಚು ರೂಪಿಸಿದ ಆರೋಪದಲ್ಲಿ ಪಾಕಿಸ್ತಾನಿ ವ್ಯಕ್ತಿ ಬಂಧನ ; ಈ ಪಾಕ್‌ ವ್ಯಕ್ತಿ ಯಾರು?

ಇರಾನ್‌ನೊಂದಿಗೆ ಸಂಬಂಧ ಹೊಂದಿರುವ ಪಾಕಿಸ್ತಾನಿ ಪ್ರಜೆ ಆಸಿಫ್ ಮರ್ಚೆಂಟ್ ಎಂಬಾತನನ್ನು ಕಳೆದ ತಿಂಗಳು ಅಮೆರಿಕದಲ್ಲಿ ರಾಜಕಾರಣಿಗಳು ಹಾಗೂ ಸರ್ಕಾರಿ ಅಧಿಕಾರಿಗಳ ಹತ್ಯೆಗೆ ಸಂಚು ರೂಪಿಸಿದ್ದಕ್ಕಾಗಿ ಬಂಧಿಸಲಾಗಿದೆ. ಆಸಿಫ್ ಮರ್ಚೆಂಟ್ ಎಂಬಾತನ ಸಂಭಾವ್ಯ ಟಾರ್ಗೆಟ್‌ ಎಂದು ಪರಿಗಣಿಸಿದ ವ್ಯಕ್ತಿಗಳಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹ ಒಬ್ಬರು ಎಂದು ಈ ವಿಷಯವನ್ನು ತಿಳಿದಿರುವ ವ್ಯಕ್ತಿ ಬ್ಲೂಮ್‌ಬರ್ಗ್‌ಗೆ … Continued

60 ಕಿಮೀ ಬೆನ್ನಟ್ಟಿದ ನಂತರ ಪಾರ್ಶ್ವನಾಥ ಲ್ಯಾಂಡ್‌ಮಾರ್ಕ್ ಸಿಇಒ ಸಂಜೀವ್ ಜೈನ್ ಬಂಧನ…

ನವದೆಹಲಿ: ರಿಯಾಲ್ಟಿ ಸಂಸ್ಥೆಯ ಪಾರ್ಶ್ವನಾಥ ಡೆವಲಪರ್ಸ್‌ನ ಅಂಗಸಂಸ್ಥೆಯ ನಿರ್ದೇಶಕ ಮತ್ತು ಸಿಇಒ ಸಂಜೀವ ಜೈನ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. 60 ಕಿಲೋಮೀಟರ್ ಬೆನ್ನಟ್ಟಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. “ರಾಷ್ಟ್ರೀಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಮುಂದೆ ಹಾಜರಾಗಲು ವಿಫಲವಾದ ನಂತರ ಸಿಇಒ ಸಂಜೀವ ಜೈನ್ ವಿರುದ್ಧ ಜಾಮೀನು ರಹಿತ ವಾರೆಂಟ್‌ಗಳನ್ನು … Continued

ತಾಜ್‌ ಮಹಲ್‌ನಲ್ಲಿ ಗಂಗಾಜಲ ಸುರಿದ ಇಬ್ಬರ ಬಂಧನ

ಆಗ್ರಾ:  ಘಟನೆಯೊಂದರಲ್ಲಿ  ಉತ್ತರ ಪ್ರದೇಶದ ಆಗ್ರಾದಲ್ಲಿರುವ ವಿಶ್ವವಿಖ್ಯಾತ ತಾಜ್ ಮಹಲ್‌ನಲ್ಲಿ ಗಂಗಾಜಲ ಪ್ರೋಕ್ಷಣೆ ಮಾಡಿದ್ದಕ್ಕಾಗಿ ಪೊಲೀಸರು ಶನಿವಾರ ಇಬ್ಬರನ್ನು ಬಂಧಿಸಿದ್ದಾರೆ. ವರದಿಗಳ ಪ್ರಕಾರ, ಸಮಾಧಿಯಲ್ಲಿ ಪವಿತ್ರ ಗಂಗಾಜಲವನ್ನು ಸಿಂಪಡಿಸಿದ ಆರೋಪದ ಮೇಲೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಸಿಬ್ಬಂದಿಯು ವಿನೇಶ ಮತ್ತು ಶ್ಯಾಮ್ ಎಂಬ ಇಬ್ಬರನ್ನು ಬಂಧಿಸಿದ್ದಾರೆ. ತಾಜ್‌ಮಹಲ್‌ನ ಭದ್ರತೆಯ ಹೊಣೆಯನ್ನು ಸಿಐಎಸ್‌ಎಫ್‌ ಹೊಂದಿದೆ. … Continued

20ಕ್ಕೂ ಹೆಚ್ಚು ಮಹಿಳೆಯರನ್ನು ಮದುವೆಯಾಗಿ ಬೆಲೆಬಾಳುವ ವಸ್ತು ದೋಚಿದ್ದ ಖತರ್ನಾಕ್‌ ವ್ಯಕಿಯನ್ನು ಆತನ ತಂತ್ರದ ಮೂಲಕವೇ ಹೆಡೆಮುರಿ ಕಟ್ಟಿದ ಪೊಲೀಸರು..!

ಪಾಲ್ಘರ್: ದೇಶದಾದ್ಯಂತ 20ಕ್ಕೂ ಹೆಚ್ಚು ಮಹಿಳೆಯರನ್ನು ಮದುವೆಯಾಗಿ ಅವರ ಬೆಲೆಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗುತ್ತಿದ್ದ 43 ವರ್ಷದ ವ್ಯಕ್ತಿಯನ್ನು ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಲ್ಲ ಸೋಪಾರ ಮೂಲದ ಮಹಿಳೆ ನೀಡಿದ ದೂರಿನ ಮೇರೆಗೆ ಎಂಬಿವಿವಿ ಪೊಲೀಸರು ತನಿಖೆ ನಡೆಸಿದ್ದು, ಜುಲೈ 23 ರಂದು ಥಾಣೆ ಜಿಲ್ಲೆಯ ಕಲ್ಯಾಣದಿಂದ ಆರೋಪಿ … Continued

ಜೈಲಿನಿಂದ ಹೊರಬಂದ ನಂತರ ಬೆಂಬಲಿಗರೊಂದಿಗೆ ಮೆಗಾ ರ್‍ಯಾಲಿ ನಡೆಸಿದ ಗ್ಯಾಂಗ್‌ಸ್ಟರ್‌ : ಮತ್ತೆ ಬಂಧಿಸಿದ ಪೊಲೀಸರು

ಮುಂಬೈ: ಮಹಾರಾಷ್ಟ್ರದ ನಾಸಿಕ್‌ನ ಕುಖ್ಯಾತ ಗ್ಯಾಂಗ್‌ಸ್ಟರ್‌ ನನ್ನು ಜೈಲಿನಿಂದ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಮತ್ತೆ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಜೈಲಿನಿಂದ ಬಿಡುಗಡೆಯಾದ ನಂತರ ಬೆತೆಲ್ ನಗರದಿಂದ ಅಂಬೇಡ್ಕರ ಚೌಕದ ವರೆಗೆ ಬೆಂಬಲಗರೊಂದಿಗೆ ಮೆಗಾ ರ್ಯಾಲಿ ನಡೆಸಿದ ವೀಡಿಯೊ ವೈರಲ್ ಆದ ನಂತರ ಪೊಲೀಸರು ಮತ್ತೆ ಬಂಧಿಸಿದ್ದಾರೆ. ಜುಲೈ 23 ರಂದು, ಗ್ಯಾಂಗ್‌ಸ್ಟರ್‌ ಹರ್ಷದ್ ಪಾಟಣಕರ್ ಜೈಲಿನಿಂದ ಬಿಡುಗಡೆಯಾದ … Continued

ರೈತರಿಗೆ ಪಿಸ್ತೂಲ್ ತೋರಿಸಿದ ವೀಡಿಯೊ ವೈರಲ್‌ ; ವಿವಾದಿತ ಟ್ರೇನಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ ತಾಯಿ ಬಂಧನ

ಮುಂಬೈ: ಟ್ರೇನಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ ಅವರ ತಾಯಿ ಮನೋರಮಾ ಖೇಡ್ಕರ ಅವರು ಗ್ರಾಮಸ್ಥರ ಗುಂಪಿಗೆ ಬಂದೂಕು ತೋರಿಸಿ ಬೆದರಿಕೆ ಹಾಕುತ್ತಿರುವ ವೀಡಿಯೊಕ್ಕೆ ಸಂಬಂಧಿಸಿದಂತೆ ಕೊಲೆ ಯತ್ನದ ಆರೋಪ ಹೊರಿಸಲಾಗಿದೆ. ಇಂದು, ಗುರುವಾರ (ಜುಲೈ ೧೮) ಬೆಳಿಗ್ಗೆ ಆಕೆಯನ್ನು ಬಂಧಿಸಿದ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಿಲಾಗಿದ್ದು, ಎರಡು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ. ಹಲವು ದಿನಗಳಿಂದ … Continued

ಬೆಳಗಾವಿ : ವೈದ್ಯಕೀಯ ಸೀಟ್‌ ವಂಚನೆ ಜಾಲ ಪತ್ತೆ , ಪ್ರಮುಖ ಆರೋಪಿ ಬಂಧಿಸಿದ ಪೊಲೀಸರು

 ಬೆಳಗಾವಿ: ಸರ್ಕಾರಿ ಕಾಲೇಜುಗಳಲ್ಲಿ ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ವಿದ್ಯಾರ್ಥಿಗಳನ್ನು ವಂಚಿಸುತ್ತಿದ್ದ ಜಾಲವೊಂದನ್ನು ಬೆಳಗಾವಿ ಪೊಲೀಸರು ಪತ್ತೆ ಮಾಡಿದ್ದಾರೆ. ಬೆಳಗಾವಿಯಲ್ಲಿ ಕೋಚಿಂಗ್ ಸೆಂಟರ್ ಆರಂಭಿಸಿ ಯಾರು ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆಯುತ್ತಾರೋ ಅಂಥವರನ್ನೇ ಗುರಿಯಾಗಿಸಿ ಅವರಿಗೆ ವೈದ್ಯಕೀಯ ಸೀಟ್‌ ಕೊಡಿಸುತ್ತೇನೆ ಎಂದು ಭರವಸೆ ನೀಡಿ ಹಣ ಪಡೆದು ವಂಚಿಸುತ್ತಿದ್ದ ವ್ಯಕ್ತಿಯನ್ನು ಬೆಳಗಾವಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. … Continued