ಪ್ರಜ್ವಲ್ ರೇವಣ್ಣ ವೀಡಿಯೊ ಪ್ರಕರಣ : ಎಸ್‌ಐಟಿಯಿಂದ ಇಬ್ಬರ ಬಂಧನ

ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶ್ಲೀಲ ವೀಡಿಯೊ ಹರಿಬಿಟ್ಟವರನ್ನು ಎಸ್​ಐಟಿ ಬಂಧಿಸಿದೆ ಎಂದು ವರದಿಯಾಗಿದೆ. ಆರೋಪಿಗಳಾದ ನವೀನ ಗೌಡ, ಚೇತನ ಎಂಬವರನ್ನು ಎಸ್‌ಐಟಿ ಬಂಧಿಸಿದೆ ಎಂದು ವರದಿಯಾಗಿದೆ. ವೀಡಿಯೊ ವೈರಲ್​ ಮಾಡಿದ್ದವರನ್ನು ಬಂಧಿಸದಕ್ಕೆ ಎಚ್​ಡಿ ಕುಮಾರಸ್ವಾಮಿ ಅವರು ಸಾಕಷ್ಟು ಆಕ್ಷೇಪ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಇದೀಗ ದೂರು ದಾಖಲಾದ … Continued

ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣ : ಅಪ್ರಾಪ್ತನ ರಕ್ತದ ಮಾದರಿ ಬದಲಾಯಿಸಲು ಪಡೆದಿದ್ದ 3 ಲಕ್ಷ ರೂ. ವಶಕ್ಕೆ ಪಡೆದ ಪೊಲೀಸರು ; ಇಬ್ಬರು ವೈದ್ಯರ ಬಂಧನ

ಮೇ 19 ರಂದು ನಗರದ ಕಲ್ಯಾಣಿ ನಗರದಲ್ಲಿ ಕಾರು ಅಪಘಾತಕ್ಕೀಡಾಗಿ ಮೋಟಾರುಬೈಕಿನಲ್ಲಿದ್ದ ಇಬ್ಬರು ಸಾಫ್ಟ್‌ವೇರ್ ಇಂಜಿನಿಯರ್‌ಗಳು ಸಾವಿಗೀಡಾದ ಪ್ರಕರಣದಲ್ಲಿ ಕಾರು ಚಾಲನೆ ಮಾಡಿದ್ದ ಅಪ್ರಾಪ್ತನ ರಕ್ತದ ಮಾದರಿಯನ್ನೇ ಬದಲಾಯಿಸಲು ವೈದ್ಯರಿಗೆ ಲಂಚ ನೀಡಿದ್ದ 3 ಲಕ್ಷ ರೂ.ಗಳನ್ನು ಪುಣೆ ಪೊಲೀಸರ ಅಪರಾಧ ವಿಭಾಗವು ಸೋಮವಾರ ವಶಪಡಿಸಿಕೊಂಡಿದೆ. ಭಾನುವಾರ, 17 ವರ್ಷದ ಬಾಲಕನ ರಕ್ತದ ವರದಿಯನ್ನು ಬದಲಾಯಿಸಿದ … Continued

ಐಷಾರಾಮಿ ಪೋರ್ಷೆ ಕಾರು ಅಪಘಾತ ಪ್ರಕರಣ : ಕಾರು ಚಾಲಕನ ಅಪಹರಣದ ಆರೋಪದ ಮೇಲೆ ಆರೋಪಿ ಅಪ್ರಾಪ್ತನ ಅಜ್ಜನ ಬಂಧನ

ಪುಣೆ: ಮೇ 19 ರಂದು ನಗರದಲ್ಲಿ ಇಬ್ಬರು ಸಾಫ್ಟ್‌ವೇರ್ ಇಂಜಿನಿಯರ್‌ಗಳ ಸಾವಿಗೆ ಕಾರಣವಾದ ಪೋರ್ಷೆ ಕಾರನ್ನು ಅತಿವೇಗದಲ್ಲಿ ಚಲಾಯಿಸಿದ ಆರೋಪದ ಮೇಲೆ ಬಂಧಿತನಾದ ಅಪ್ರಾಪ್ತ ಬಾಲಕನ ಅಜ್ಜನನ್ನು ಪುಣೆ ನಗರ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಪೋರ್ಷೆ ಕಾರಿನ ಚಾಲಕನ ಅಪಹರಣ ಮತ್ತು ಅಕ್ರಮ ಬಂಧನಕ್ಕೆ ಸಂಬಂಧಿಸಿ ಅಪ್ರಾಪ್ತನ ಅಜ್ಜನ್ನು ಪೊಲೀಸರು ಈಗ ಬಂಧಿಸಿದ್ದಾರೆ. ಅಪಘಾತಕ್ಕೆ ನಾನೇ … Continued

ಬೆಂಗಳೂರು ರಾಮೇಶ್ವರಂ‌ ಕೆಫೆ ಸ್ಫೋಟ ಪ್ರಕರಣ: 5ನೇ ಆರೋಪಿ ಬಂಧನ

ನವದೆಹಲಿ: ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶುಕ್ರವಾರ ಮತ್ತೊಬ್ಬ ಆರೋಪಿಯನ್ನು ಹುಬ್ಬಳ್ಳಿಯಲ್ಲಿ ಬಂಧಿಸಿದೆ. ಇದರಿಂದಾಗಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಬಂಧಿತರ ಸಂಖ್ಯೆ ಈಗ ಐದಕ್ಕೇರಿದೆ. ಬಂಧಿತ ಹುಬ್ಬಳ್ಳಿಯ ಶಂಕಿತ ಉಗ್ರನನ್ನು ಶೋಯೆಬ್‌ ಅಹ್ಮದ್‌ ಮಿರ್ಜಾ ಅಲಿಯಾಸ್‌ ಚೋಟು ಎಂದು ಹೇಳಲಾಗಿದೆ. ಈ ಶಂಕಿತ ಹುಬ್ಬಳ್ಳಿ ನಿವಾಸಿ, … Continued

ಬಾಲಕ ಚಲಾಯಿಸುತ್ತಿದ್ದ ಐಷಾರಾಮಿ ʼಪೋಷೆʼ ಕಾರು ಅಪಘಾತದಲ್ಲಿ ಇಬ್ಬರು ಸಾವು : ತಂದೆಯ ಬಂಧನ

ಪುಣೆ: ಇಬ್ಬರು ವ್ಯಕ್ತಿಗಳನ್ನು ಬಲಿತೆಗೆದುಕೊಂಡ ಮಾರಣಾಂತಿಕ ಕಾರು ಅಪಘಾತದಲ್ಲಿ ಭಾಗಿಯಾಗಿದ್ದ 17 ವರ್ಷದ ಬಾಲಕನ ತಂದೆಯನ್ನು ಪುಣೆ ಪೊಲೀಸರು ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ಬಂಧಿಸಿದ್ದಾರೆ. ಹೆಚ್ಚುವರಿಯಾಗಿ, ಅಪ್ರಾಪ್ತರಿಗೆ ಮದ್ಯ ನೀಡಿದ ಒಂದೆರಡು ಬಾರ್‌ಗಳ ಮಾಲೀಕರನ್ನೂ ಬಂಧಿಸಲಾಗಿದೆ. ಪುಣೆಯ ಕಲ್ಯಾಣಿನಗರ ಪ್ರದೇಶದಲ್ಲಿ ಭಾನುವಾರ ಮುಂಜಾನೆ ಈ ದುರ್ಘಟನೆ ನಡೆದಿದೆ. ಪೊಲೀಸ್ ವರದಿಗಳ ಪ್ರಕಾರ, 17 ವರ್ಷ ವಯಸ್ಸಿನ ಅಪ್ರಾಪ್ತ … Continued

ವೀಡಿಯೊ..| ಒಂದೇ ಮತಗಟ್ಟೆಯಲ್ಲಿ 8 ಸಲ ಮತದಾನ ಮಾಡಿದ ಯುವಕ ; ವೀಡಿಯೋ ವೈರಲ್ ಆದ ನಂತರ ಬಂಧನ

ಮೂರನೇ ಹಂತದ ಮತದಾನದ ವೇಳೆ ಉತ್ತರಪ್ರದೇಶದ ಇಟಾಹ್‌ನಲ್ಲಿ ಯುವಕನೊಬ್ಬ ಒಂದೇ ಬೂತ್ ನಲ್ಲಿ 8 ಬಾರಿ ಮತದಾನ ಮಾಡಿದ್ದಾನೆ. ತಾನು ಪ್ರತಿ ಬಾರಿ ಮತದಾನ ಮಾಡಿದ್ದನ್ನೂ ವೀಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ವೀಡಿಯೊ ವೈರಲ್ ಆದ ನಂತರ ಆತನನ್ನು ಬಂಧಿಸಲಾಗಿದೆ. ಅಲ್ಲದೆ, ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳು ಮತಗಟ್ಟೆಯ ಎಲ್ಲ ಸಿಬ್ಬಂದಿಯನ್ನೂ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. … Continued

ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ : ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಆಪ್ತ ಸಹಾಯಕನ ಬಂಧನ

ನವದೆಹಲಿ : ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಆಪ್ತ ಸಹಾಯಕನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಸೋಮವಾರ ಕೇಜ್ರಿವಾಲ್ ಅವರ ನಿವಾಸಕ್ಕೆ ಭೇಟಿ ನೀಡಿದಾಗ ದೆಹಲಿ ಮುಖ್ಯಮಂತ್ರಿಯ ಕಾರ್ಯದರ್ಶಿ ವಿಭವಕುಮಾರ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮಲಿವಾಲ್ ತಮ್ಮ ಎಫ್‌ಐಆರ್‌ನಲ್ಲಿ ಆರೋಪಿಸಿದ್ದಾರೆ. ಮುಖ್ಯಮಂತ್ರಿಯವರ … Continued

ಘಾಟ್‌ಕೋಪರ್‌ ಹೋರ್ಡಿಂಗ್ ಕುಸಿತ ದುರಂತ : ಉದಯಪುರದಲ್ಲಿ ಜಾಹೀರಾತು ಫಲಕದ ಮಾಲೀಕನ ಬಂಧನ

ಮುಂಬೈ: ಮುಂಬೈನ ಘಾಟ್‌ಕೋಪರ್‌ನಲ್ಲಿ ಕುಸಿದು ಬಿದ್ದ ಜಾಹೀರಾತು ಫಲಕ ಅಳವಡಿಕೆ ಹೊಣೆ ಹೊತ್ತಿದ್ದ ಉದ್ಯಮಿ ಭವೇಶ್ ಭಿಂಡೆ ಅವರನ್ನು ಗುರುವಾರ ರಾತ್ರಿ ರಾಜಸ್ಥಾನದ ಉದಯಪುರದಲ್ಲಿ ಬಂಧಿಸಲಾಗಿದ್ದು, ಇಂದು ಬೆಳಗ್ಗೆ ಮುಂಬೈಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ. ಇಗೋ ಮೀಡಿಯಾ ಪ್ರೈವೇಟ್ ಲಿಮಿಟೆಡ್‌ನ ಮಾಲೀಕ ಭವೇಶ್ ಭಿಂಡೆ ಅವರನ್ನು ಮುಂಬೈ ಪೋಲಿಸ್ ಕ್ರೈಂ ಬ್ರಾಂಚ್ ಬಂಧಿಸಿದೆ. ಸೋಮವಾರ ಸಂಜೆ … Continued

ಹುಬ್ಬಳ್ಳಿ : ಅಂಜಲಿ ಹತ್ಯೆ ಆರೋಪಿ ಬಂಧನ ; ಈತನ ಬಂಧನವಾಗಿದ್ದೇ ರೋಚಕ

ಹುಬ್ಬಳ್ಳಿ : ರಾಜ್ಯದಲ್ಲಿ ಸಂಚಲನ ಸೃಷ್ಟಿಸಿರುವ ಹುಬ್ಬಳ್ಳಿಯ ಅಂಜಲಿ ಅಂಬಿಗೇರ (20) ಎಂಬ ಯುವತಿ ಹತ್ಯೆ ಆರೋಪಿಯನ್ನು ಗುರುವಾರ ತಡರಾತ್ರಿ ಪೊಲೀಸರು ದಾವಣಗೆರೆ ಬಳಿ ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಕೊಲೆ ಆರೋಪಿ ಆಟೋ ಚಾಲಕ ಗಿರೀಶ (ವಿಶ್ವ) ಸಾವಂತ (21) ಎಂಬಾತನನ್ನು ದಾವಣಗೆರೆ ಬಳಿ ರೈಲ್ವೇ ಪೊಲೀಸರ ಸಹಾಯದಿಂದ ಬಂಧಿಸಲಾಗಿದೆ. ರೈಲಿನಿಂದ ಜಿಗಿದು ಗಾಯಗೊಂಡಿದ್ದ ಆರೋಪಿಯನ್ನು … Continued

ಅಕ್ರಮ ಹಣ ವರ್ಗಾವಣೆ ಪ್ರಕರಣ : ಜಾರ್ಖಂಡ ಸಚಿವನನ್ನು ಬಂಧಿಸಿದ ಇ.ಡಿ.

ನವದೆಹಲಿ: ಜಾರ್ಖಂಡ್‌ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್‌ ಆಲಂ ಅವರ ಆಪ್ತ ಕಾರ್ಯದರ್ಶಿಗೆ ಸಂಬಂಧಿಸಿದ ಫ್ಲ್ಯಾಟ್‌ನಿಂದ ₹ 35 ಕೋಟಿಗೂ ಅಧಿಕ ನಗದು ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಅಲಂಗೀರ್‌ ಆಲಂ ಅವರನ್ನು ಬಂಧಿಸಿದೆ. ಮಂಗಳವಾರ ರಾಂಚಿಯಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಯಲ್ಲಿ ಆಲಂ ಅವರನ್ನು ಒಂಬತ್ತು ಗಂಟೆಗಳ ಕಾಲ … Continued