ವ್ಲಾಗರ್, ವಿದ್ಯಾರ್ಥಿ, ಉದ್ಯಮಿ, ಗಾರ್ಡ್….: 9 ಮಂದಿ ‘ಪಾಕಿಸ್ತಾನ ಗೂಢಚಾರರ’ ಬಂಧನ

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಬೇಹುಗಾರಿಕೆ ಚಟುವಟಿಕೆಗಳ ಮೇಲೆ ಹೆಚ್ಚಿದ ಕಣ್ಗಾವಲು ನಡುವೆಯೂ ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಮೂರು ರಾಜ್ಯಗಳಿಂದ ಕನಿಷ್ಠ ಒಂಬತ್ತು ಜನರನ್ನು ಭಾರತೀಯ ಅಧಿಕಾರಿಗಳು ಬಂಧಿಸಿದ್ದಾರೆ. ಈ ಇವರಲ್ಲಿ ಕನಿಷ್ಠ ನಾಲ್ಕು ಜನರನ್ನು ಹರಿಯಾಣದಲ್ಲಿ, ಮೂವರನ್ನು ಪಂಜಾಬ್‌ನಲ್ಲಿ ಮತ್ತು ಒಬ್ಬನನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ. ಬೇಹುಗಾರಿಕೆ ನಡೆಸುತ್ತಿದ್ದಾರೆಂದು … Continued

ಪಾಕಿಸ್ತಾನ ಪರ ಬೇಹುಗಾರಿಕೆ: ಹರಿಯಾಣ ಮೂಲದ ಯೂಟ್ಯೂಬರ್ ಸೇರಿ 6 ಜನರ ಬಂಧನ

ನವದೆಹಲಿ: ಪಾಕಿಸ್ತಾನಿ ಆಪರೇಟಿವ್ಸ್‌ ಗಳಿಗೆ ಸೂಕ್ಷ್ಮ ಮಾಹಿತಿಯನ್ನು ರವಾನಿಸಿದ ಆರೋಪದ ಮೇಲೆ ಹರಿಯಾಣ ಮೂಲದ ಟ್ರಾವೆಲ್ ಬ್ಲಾಗರ್ ಸೇರಿದಂತೆ ಆರು ಭಾರತೀಯ ಪ್ರಜೆಗಳನ್ನು ಬಂಧಿಸಲಾಗಿದೆ. ಈ ಜಾಲವು ಹರಿಯಾಣ ಮತ್ತು ಪಂಜಾಬಿನಾದ್ಯಂತ ವ್ಯಾಪಿಸಿದ್ದು, ಪ್ರಮುಖ ಕಾರ್ಯಕರ್ತರು ಏಜೆಂಟ್‌ಗಳು, ಹಣಕಾಸು ಮಾರ್ಗದರ್ಶಕರು ಮತ್ತು ಮಾಹಿತಿದಾರರಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ. ಆರೋಪಿಗಳಲ್ಲಿ ಹರಿಯಾಣ ಮೂಲದ ಟ್ರಾವೆಲ್ ಬ್ಲಾಗರ್ ಜ್ಯೋತಿ … Continued

ಸುಹಾಸ ಶೆಟ್ಟಿ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ

ಮಂಗಳೂರು : ಕೆಲವು ದಿನಗಳ ಹಿಂದೆ ಬಜ್ಪೆಯಲ್ಲಿ ಬರ್ಬರವಾಗಿ ಕೊಲೆಯಾದ ಸುಹಾಸ ಶೆಟ್ಟಿ ಹತ್ಯೆ (Suhas Shetty) ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಳವಾರಿನ ಅಜರುದ್ದೀನ್ ಆಲಿಯಾಸ್ ಅಜರ್ ಆಲಿಯಾಸ್ ಅಜ್ಜು(29), ಬಜ್ಪೆ ನಿವಾಸಿ ಅಬ್ದುಲ್ ಖಾದರ್ ಆಲಿಯಾಸ್ ನೌಫಲ್(24), ವಾಮಂಜೂರಿನ ನೌಷದ್ ಆಲಿಯಾಸ್ ಚೊಟ್ಟೆ ನೌಷದ್(39) ಎಂದು ಗುರುತಿಸಲಾಗಿದೆ. … Continued

ಪಹಲ್ಗಾಮ್ ದಾಳಿಯ ಹಿಂದೆ ಸರ್ಕಾರದ ಪಿತೂರಿ ಹೇಳಿಕೆ : ಅಸ್ಸಾಂ ಶಾಸಕನ ಬಂಧನ

ಗುವಾಹತಿ/ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಮತ್ತು ಈ ಮೊದಲು ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಗಳ ಕುರಿತು ವಿವಾದಿತ ಹೇಳಿಕೆ ನೀಡಿದ್ದಕ್ಕಾಗಿ ಅಸ್ಸಾಂನ ಶಾಸಕರೊಬ್ಬರನ್ನು ಬಂಧಿಸಲಾಗಿದೆ. 2019 ರ ಫೆಬ್ರವರಿಯಲ್ಲಿ ಪುಲ್ವಾಮಾದಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಬೆಂಗಾವಲು ಪಡೆಯ ಮೇಲೆ ನಡೆದ ಆತ್ಮಹತ್ಯಾ ಬಾಂಬ್ ದಾಳಿ ಮತ್ತು ಪಹಲ್ಗಾಮ್‌ನಲ್ಲಿ 26 ಪ್ರವಾಸಿಗರನ್ನು ಕೊಂದಿದ್ದು … Continued

ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ಓಂ ಪ್ರಕಾಶ ಹತ್ಯೆ ಪ್ರಕರಣ : ಪತ್ನಿ-ಪುತ್ರಿ ವಿರುದ್ಧ ದೂರು ದಾಖಲು, ಪತ್ನಿಯ ಬಂಧನ

ಬೆಂಗಳೂರು : ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ಓಂ ಪ್ರಕಾಶ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಮತ್ತು ಪುತ್ರಿಯ ಮೇಲೆ ಎಫ್‌ಐಆರ್‌ ದಾಖಲಾಗಿದ್ದು, ನಂತರ ಪತ್ನಿ ಪಲ್ಲವಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಓಂ ಪ್ರಕಾಶ ಅವರ ಪುತ್ರ ಕಾರ್ತಿಕೇಶ ನೀಡಿದ ದೂರಿನ ಮೇರೆಗೆ ತಾಯಿ ಪಲ್ಲವಿ, ಸಹೋದರಿ ಕೃತಿ ವಿರುದ್ಧ ಹೆಚ್‌ಎಸ್‌ಆರ್‌ ಲೇಔಟ್‌ ಠಾಣೆಯಲ್ಲಿ ಬಿಎನ್‌ಎಸ್‌ … Continued

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಕಾರು ಅಪಘಾತ ಪ್ರಕರಣ ; ಮಹಾರಾಷ್ಟ್ರದ ಲಾರಿ ಚಾಲಕನ ಬಂಧನ

ಬೆಳಗಾವಿ: ಕಿತ್ತೂರು ‌ತಾಲೂಕಿನ ಅಂಬಡಗಟ್ಟಿ ಗ್ರಾಮದ ಬಳಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರಿ ಚಾಲಕನನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರ ದ ಪುಣೆ ಜಿಲ್ಲೆಯ ಇಂದಾಪುರ ತಾಲೂಕಿನ ತಕ್ರಾರವಾಡಿ ಗ್ರಾಮದ ಮಧುಕರ ಕೊಂಡಿರಾಮ ಸೋಮವಂಶ(65) ಬಂಧಿತನಾಗಿದ್ದಾನೆ. ಜನವರಿ 14 ರಂದು ಅಂಬಡಗಟ್ಟಿ … Continued

ಬೆಂಗಳೂರು ಲೈಂಗಿಕ ದೌರ್ಜನ್ಯ ಪ್ರಕರಣ | 3 ರಾಜ್ಯಗಳು, 700 ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ : ಕೇರಳದಲ್ಲಿ ಆರೋಪಿ ಬಂಧನ

ಬೆಂಗಳೂರು : ಈ ವಾರದ ಆರಂಭದಲ್ಲಿ ಬೆಂಗಳೂರಿನಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ವ್ಯಕ್ತಿಯನ್ನು ಕೊನೆಗೂ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪೊಲೀಸರು 700 ಸಿಸಿಟಿವಿಗಳ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡಿದ ನಂತರ ಅಂತಿಮವಾಗಿ ಕೇರಳದ ದೂರದ ಹಳ್ಳಿಯಲ್ಲಿ ಆತನನ್ನು ಭಾನುವಾರ ಕೇರಳದ ನಡುವನ್ನೂರ್ ಪಟ್ಟಣದ ಬಳಿ ಸೆರೆಹಿಡಿದಿದ್ದಾರೆ. ಪೊಲೀಸರು 10 ದಿನಗಳ ಕಾಲ ನಡೆಸಿದ … Continued

ಸ್ನೇಹಿತನ ಜೊತೆ ಕುಳಿತಿದ್ದ ಅನ್ಯಕೋಮಿನ ಯುವತಿ ; ನೈತಿಕ ಪೊಲೀಸ್‌ ಗಿರಿ, ಹಲ್ಲೆ : ನಾಲ್ವರ ಬಂಧನ

ಬೆಂಗಳೂರು: ಬೆಂಗಳೂರಿನ ಚಂದ್ರಾ ಲೇ ಔಟ್‌ನಲ್ಲಿ ಉದ್ಯಾನವನದ ಹೊರಗೆ ನೈತಿಕ ಪೊಲೀಸ್‌ ಗಿರಿ ನಡೆಸಿದ ಆರೋಪದ ಮೇಲೆ ಅಪ್ರಾಪ್ತ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬುರ್ಖಾ ಧರಿಸಿದ ಯುವತಿಯೊಬ್ಬಳು ಯುವಕನೊಂದಿಗೆ ಸ್ಕೂಟರ್‌ನಲ್ಲಿ ಕುಳಿತಿದ್ದಾಗ, ಅಲ್ಲಿಗೆ ಬಂದ ನಾಲ್ವರು ಬೇರೆ ಸಮುದಾಯದ ವ್ಯಕ್ತಿಯೊಂದಿಗೆ ಮಾತನಾಡಿದ ಕಾರಣಕ್ಕಾಗಿ ಅವರಿಗೆ ತೊಂದರೆ ನೀಡಿದ್ದಾರೆ. ಇವರಿಗೆ ಐವರು ಕಿರುಕುಳ ನೀಡಿ ಹಲ್ಲೆ … Continued

26/11 ಮುಂಬೈ ದಾಳಿ ಸಂಚುಕೋರ ತಹವ್ವೂರ್ ರಾಣಾನನ್ನು 18 ದಿನಗಳ ಎನ್‌ಐಎ ಕಸ್ಟಡಿಗೆ ಕಳುಹಿಸಿದ ನ್ಯಾಯಾಲಯ

ನವದೆಹಲಿ: ಗುರುವಾರ ಭಾರತಕ್ಕೆ ಹಸ್ತಾಂತರಿಸಲ್ಪಟ್ಟ 26/11 ಮುಂಬೈ ದಾಳಿಯ ಪ್ರಮುಖ ಆರೋಪಿ ತಹವ್ವೂರ್ ರಾಣಾನನ್ನು ನ್ಯಾಯಾಲಯವು 18 ದಿನಗಳ ರಾಷ್ಟ್ರೀಯ ತನಿಖಾ ದಳ(NIA)ದ ಕಸ್ಟಡಿಗೆ ಕಳುಹಿಸಿದೆ. ಎನ್‌ಐಎ ಗುರುವಾರ ಸಂಜೆ ರಾಣಾನನ್ನು ಔಪಚಾರಿಕವಾಗಿ ಬಂಧಿಸಿದ ನಂತರ ವಿಶೇಷ ಎನ್‌ಐಎ ನ್ಯಾಯಾಲಯದ ಮುಂದೆ ಹಾಜರುಪಡಿಸಿತು ಹಾಗೂ 20 ದಿನಗಳ ಕಸ್ಟಡಿಗೆ ಕೋರಿತು, ನಂತರ ಆದೇಶವನ್ನು ಕಾಯ್ದಿರಿಸಲಾಯಿತು. ವಾದಗಳನ್ನು … Continued

ಭೋವಿ ನಿಗಮ ಅಕ್ರಮ ; ಹಿಂದಿನ ಪ್ರಧಾನ ವ್ಯವಸ್ಥಾಪಕನ ಬಂಧಿಸಿದ ಇ.ಡಿ.

ಬೆಂಗಳೂರು : ಶೋಧ ಕಾರ್ಯಾಚರಣೆಯ ನಂತರ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ (ಕೆಬಿಡಿಸಿ) ಮಾಜಿ ಪ್ರಧಾನ ವ್ಯವಸ್ಥಾಪಕರನ್ನು ಬಂದಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ.)ಭಾನುವಾರ ತಿಳಿಸಿದೆ. ಬಿ ಕೆ ನಾಗರಾಜಪ್ಪ ಅವರನ್ನು ಏಪ್ರಿಲ್ 5 ರಂದು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಬೆಂಗಳೂರಿನ ವಿಶೇಷ ಪ್ರಿವೆನ್ಶನ್ ಆಫ್ ಮನಿ … Continued