ಲೌಡ್ ಸ್ಪೀಕರಿನಲ್ಲಿ ಹನುಮಾನ ಚಾಲೀಸಾ ಹಾಕಿದ್ದಕ್ಕಾಗಿ ವ್ಯಕ್ತಿ ಮೇಲೆ ಹಲ್ಲೆ ಆರೋಪ : ಮೂವರ ಬಂಧನ | ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು: ಅಂಗಡಿಯಲ್ಲಿ ಲೌಡ್ ಸ್ಪೀಕರ್ ಹಾಕಿದ್ದಕ್ಕಾಗಿ ಆಕ್ಷೇಪ ವ್ಯಕ್ತಪಡಿಸಿ ಯುವಕರ ಗುಂಪೊಂದು ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಕಬ್ಬನ್ ಪೇಟೆ ಸಿದ್ದನಗಲ್ಲಿ ಜುಮ್ಮಾ ಮಸೀದಿ ರಸ್ತೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಘಟನೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ಸಂಬಂಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಭಾನುವಾರ ಸಂಜೆ … Continued

ಹಾವಿನ ವಿಷದ ಪ್ರಕರಣ : ಎಲ್ವಿಶ್ ಯಾದವ್ ಬಂಧನ

ನವದೆಹಲಿ: ಬಿಗ್ ಬಾಸ್ ಒಟಿಟಿ (OTT) ವಿಜೇತ ಮತ್ತು ಯೂ ಟ್ಯೂಬರ್ ಎಲ್ವಿಶ್ ಯಾದವ್ ತಪ್ಪು ಕಾರಣಗಳಿಗಾಗಿ ಸುದ್ದಿಯಲ್ಲಿದ್ದಾರೆ. ಹಾವಿನ ವಿಷದ ಪ್ರಕರಣದಲ್ಲಿ ಯೂಟ್ಯೂಬರ್ ಎಲ್ವಿಶ್ ಯಾದವ್ ಅವರನ್ನು ನೋಯ್ಡಾ ಪೊಲೀಸರು ಬಂಧಿಸಿದ್ದಾರೆ. ಕಳೆದ ವರ್ಷ, ನೋಯ್ಡಾ ಪೊಲೀಸರು ಸೆಕ್ಟರ್ 39 ರಲ್ಲಿ ಎಫ್‌ಐಆರ್ ದಾಖಲಿಸಿದ್ದರು ಮತ್ತು ವಿಚಾರಣೆಗೆ ಕರೆದ ನಂತರ ಆತನನ್ನು ಬಂಧಿಸಲಾಯಿತು. ಆತನನ್ನು … Continued

ದೆಹಲಿ ಅಬಕಾರಿ ನೀತಿ ಹಗರಣ: ಭ್ರಷ್ಟಾಚಾರ ಪ್ರಕರಣದಲ್ಲಿ ಕೆಸಿಆರ್ ಪುತ್ರಿ-ಬಿಆರ್‌ ಎಸ್‌ ನಾಯಕಿ ಕೆ. ಕವಿತಾ ಬಂಧನ

ನವದೆಹಲಿ: ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂಎಲ್‌ಸಿ ಮತ್ತು ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಕೆ ಕವಿತಾ ಅವರನ್ನು ಜಾರಿ ನಿರ್ದೇಶನಾಲಯ ಶುಕ್ರವಾರ ಬಂಧಿಸಿದೆ. 45 ವರ್ಷದ ಕೆ.ಕವಿತಾ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹೈದರಾಬಾದ್ ನಿವಾಸದ … Continued

ವೀಡಿಯೊ…| ಮಂಗಳೂರು : 87 ವರ್ಷದ ಮಾವನನ್ನು ವಾಕಿಂಗ್ ಸ್ಟಿಕ್‌ನಿಂದ ಅಮಾನುಷವಾಗಿ ಥಳಿಸಿದ ಸೊಸೆ ; ಬಂಧನ

ಮಂಗಳೂರು: ಸೊಸೆ ತಮ್ಮ ವಯೋವೃದ್ಧ ಮಾವನನ್ನು ವಾಕಿಂಗ್ ಸ್ಟಿಕ್‌ನಿಂದ ಅಮಾನುಷವಾಗಿ ಥಳಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ ಎಂದು ವರದಿಯಾಗಿದ್ದು, ಘಟನೆಯ ವೀಡಿಯೊ ವೈರಲ್ ಆಗಿದೆ. ಈ ಘಟನೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಈ ದೃಶ್ಯಾವಳಿಗಳು ವೇಗವಾಗಿ ವೈರಲ್ ಆಗಿದ್ದು, ಮಂಗಳೂರಿನ ನಾಗರಿಕ ಸಮಾಜದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ ಮತ್ತು ಇಂತಹ ಘಟನೆಗಳಲ್ಲಿ ಅಗತ್ಯ ಕ್ರಮಕ್ಕಾಗಿ ಒತ್ತಾಯಿಸಿದ್ದಾರೆ. … Continued

₹ 2,000 ಕೋಟಿ ಮೌಲ್ಯದ ಡ್ರಗ್ಸ್ ಕಳ್ಳಸಾಗಣೆ ಆರೋಪ: ಚಲನಚಿತ್ರ ನಿರ್ಮಾಪಕನ ಬಂಧನ

ನವದೆಹಲಿ: ₹ 2,000 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತುವನ್ನು ದೇಶದಿಂದ ಹೊರಕ್ಕೆ ಸಾಗಿಸುತ್ತಿದ್ದ ಆರೋಪದ ಮೇಲೆ ಸಿನಿಮಾ ನಿರ್ಮಾಪಕನನ್ನು ಬಂಧಿಸಲಾಗಿದೆ. ದಕ್ಷಿಣ ಭಾರತದ ಚಲನಚಿತ್ರೋದ್ಯಮದಲ್ಲಿ ಕೆಲಸ ಮಾಡಿದ ಡಿಎಂಕೆ ಮಾಜಿ ಪದಾಧಿಕಾರಿ ಜಾಫರ್ ಸಾದಿಕ್ ಎಂಬವನನ್ನು ನಾಲ್ಕು ತಿಂಗಳ ಶೋಧದ ನಂತರ ಬಂಧಿಸಲಾಗಿದೆ ಎಂದು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಶನಿವಾರ ತಿಳಿಸಿದೆ. ಎನ್‌ಸಿಬಿ (NCB) … Continued

55 ದಿನಗಳಿಂದ ತಲೆಮರೆಸಿಕೊಂಡಿದ್ದ ಸಂದೇಶಖಾಲಿ ಪ್ರಕರಣದ ಆರೋಪಿ ಶೇಖ್ ಷಹಜಹಾನ್ ಬಂಧನ : ಪಕ್ಷದಿಂದ 6 ವರ್ಷ ಅಮಾನತು ಮಾಡಿದ ಟಿಎಂಸಿ

ಕೋಲ್ಕತ್ತಾ: ಸಂದೇಶಖಾಲಿ ಪ್ರಕರಣದ ಪ್ರಮುಖ ಆರೋಪಿ ತೃಣಮೂಲ ಕಾಂಗ್ರೆಸ್ ನಾಯಕ ಶೇಖ್ ಷಹಜಹಾನ್ ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶೇಖ್ ಷಹಜಹಾನ್ ಬಂಧನದ ಬಳಿಕ ತೃಣ ಮೂಲ ಕಾಂಗ್ರೆಸ್ ಆತನನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಅಮಾನತು ಮಾಡಲಾಗಿದೆ ಎಂದು ಹೇಳಿದೆ. ಆತ ಮತ್ತು ಆತನ ಸಹಚರರ ವಿರುದ್ಧ ಸಂದೇಶಖಾಲಿಯಲ್ಲಿ ಮಹಿಳೆಯರ … Continued

ಕೇವಲ ಒಂದೇ ಒಂದು ಸುಳಿವಿನಿಂದ 22 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾಂಟೆಡ್ ಸಿಮಿ ಉಗ್ರನ ಬಂಧಿಸಿದ ಪೊಲೀಸರು…!

ನವದೆಹಲಿ: 22 ವರ್ಷಗಳಿಂದ ತಲೆಮರೆಸಿಕೊಂಡಿದ್ದ ನಿಷೇಧಿತ ಸ್ಟುಡೆಂಟ್ಸ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾ (ಸಿಮಿ) ಸಂಘಟನೆಗೆ ಸೇರಿದ್ದ ಹನೀಫ್ ಶೇಖ್ (47) ಎಂಬ ಉಗ್ರನನ್ನು ದೆಹಲಿ ಪೊಲೀಸರ ವಿಶೇಷ ಘಟಕ ಫೆ 22ರಂದು ಬಂಧಿಸಿದೆ. 22 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆತನನ್ನು ಕೇವಲ ಒಂದೇ ಒಂದು ಸುಳಿವಿನ ಸಹಾಯದಿಂದ ಪೊಲೀಸರು ಬಂಧಿಸಿದ್ದಾರೆ. ಅತ್ಯಂತ ನಟೋರಿಯಸ್ ಮತ್ತು ವಾಂಟೆಡ್ … Continued

ನಟಿ-ಮಾಜಿ ಸಂಸದೆ ಜಯಪ್ರದಾ ಬಂಧನಕ್ಕೆ ರಾಂಪುರ ನ್ಯಾಯಾಲಯ ಆದೇಶ

ನವದೆಹಲಿ: ಉತ್ತರ ಪ್ರದೇಶದ ರಾಂಪುರದಲ್ಲಿರುವ ಸಂಸದ/ಶಾಸಕರ ನ್ಯಾಯಾಲಯವು ರಾಜ್ಯಸಭಾ ಮಾಜಿ ಸಂಸದೆ ಮತ್ತು ನಟಿ ಜಯಪ್ರದಾ ಅವರು ಅನೇಕ ಬಾರಿ ನ್ಯಾಯಾಲಯಕ್ಕೆ ಹಾಜರಾಗದ ನಂತರ ಅವರ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ. ಜಯಪ್ರದಾ ವಿರುದ್ಧ ಹೊರಡಿಸಲಾದ ಏಳನೇ ವಾರಂಟ್ ಇದಾಗಿದ್ದು, ಆಕೆಯನ್ನು ಬಂಧಿಸುವಂತೆ ರಾಂಪುರ ಪೊಲೀಸ್ ವರಿಷ್ಠಾಧಿಕಾರಿಗೆ ನ್ಯಾಯಾಲಯ ಸೂಚಿಸಿದೆ. 2019ರ ಲೋಕಸಭಾ ಚುನಾವಣೆ … Continued

ದೆಹಲಿ ರೈಲು ನಿಲ್ದಾಣದಲ್ಲಿ ಲಷ್ಕರ್ ಭಯೋತ್ಪಾದಕನ ಬಂಧನ, ಈತ ನಿವೃತ್ತ ಸೇನಾ ಯೋಧ : ಪೊಲೀಸರು

ನವದೆಹಲಿ: ದೆಹಲಿ ಪೊಲೀಸರು ನಿವೃತ್ತ ಸೇನಾ ಯೋಧ ಮತ್ತು ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ (ಎಲ್‌ಇಟಿ) ಸದಸ್ಯ ರಿಯಾಜ್ ಅಹ್ಮದ್‌ನನ್ನು ನವದೆಹಲಿ ರೈಲ್ವೆ ನಿಲ್ದಾಣದಿಂದ ಬಂಧಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಕುಪ್ವಾರಾ ಜಿಲ್ಲೆಯಲ್ಲಿ ಎಲ್‌ಇಟಿ ಮಾಡ್ಯೂಲ್ ಅನ್ನು ಭೇದಿಸಿದ ಕೆಲವು ದಿನಗಳ ನಂತರ ಈ ಬಂಧನವು ನಡೆದಿದೆ. ಭಾನುವಾರ, ಫೆಬ್ರವರಿ 4 ರಂದು ಈತನನ್ನು … Continued

ಪೊಲೀಸರ ಮೇಲೆ ಹಲ್ಲೆ ಪ್ರಕರಣ : ಯಲ್ಲಾಪುರ ಮಾಜಿ ಶಾಸಕರ ಪುತ್ರನ ಬಂಧನ

ಕಾರವಾರ : ಪೊಲೀಸರ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆಯ ಮಾಜಿ ಶಾಸಕರೊಬ್ಬರ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಕ್ಷೇತ್ರದ ಮಾಜಿ ಶಾಸಕ ವಿ.ಎಸ್. ಪಾಟೀಲ ಅವರ ಪುತ್ರ ಬಾಪು ಗೌಡ ಪಾಟೀಲನನ್ನು ಮುಂಡಗೋಡ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ 2011 ರಲ್ಲಿ ಮುಂಡಗೋಡ ಮುಂಡಗೋಡ … Continued