ಕುಮಟಾ: ಬೇಟೆಯಾಡಿದ ಮುಳ್ಳುಹಂದಿ ಬೈಕಿನಲ್ಲಿ ಸಾಗಾಟ, ಇಬ್ಬರ ಬಂಧನ

ಹೊನ್ನಾವರ: ಮುಳ್ಳುಹಂದಿ ಬೇಟೆಯಾಡಿ ಅದನ್ನು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಅರಣ್ಯಾಧಿಕಾರಿಗಳ ತಂಡವು ಕಾರ್ಯಾಚರಣೆ ನಡೆಸಿ ಬಂಧಿಸಿದೆ. ಮುಳ್ಳು ಹಂದಿಯ ಮೃತದೇಹವನ್ನು ವಶಪಡಿಸಿಕೊಂಡಿದ್ದಾರೆ. ಓರ್ವ ಆರೋಪಿ ನಾಪತ್ತೆಯಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ. ದೀವಳ್ಳಿಯ ಸಂಜಯ ದಿನ್ನಿ ನೊರೊನಾ (25) ಹಾಗೂ ಪ್ರಕಾಶ ಫ್ರಾನ್ಸಿಸ್ (39) ಎಂಬವರು ಬಂಧಿತ ಆರೋಪಿಗಳು. ಮುಳ್ಳುಹಂದಿ ಬೇಟೆಯಾಡಿ ಬೈಕಿನಲ್ಲಿ ಸಾಗಿಸುತ್ತಿರುವಾಗ ತಾಲೂಕಿನ ಕತಗಾಲ … Continued

ಚೆಕ್ ಬೌನ್ಸ್ ಪ್ರಕರಣ ; ನಟ ನೀನಾಸಂ ಅಶ್ವತ್ಥ ಬಂಧನ-ಬಿಡುಗಡೆ

ಚೆಕ್​ ಬೌನ್ಸ್​ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟ ನೀನಾಸಂ ಅಶ್ವತ್ಥ ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಹಾಸನದ ಬಡಾವಣೆ ಠಾಣೆ ಪೊಲೀಸರು ನೀನಾಸಂ ಅಶ್ವತ್ಥ ಅವರನ್ನು ಬಂಧಿಸಿ ಕೋರ್ಟ್‌ ಮುಂದೆ ಹಾಜರುಪಡಿಸಿದರು. ಅವರು ನ್ಯಾಯಾಧೀಸರ ಎದುರು ತಪ್ಪೊಪ್ಪಿಕೊಂಡರು ಹಾಗೂ ಚೆಕ್‌ನ ಶೇ. 25ರಷ್ಟು ಹಣವನ್ನು ಪಾವತಿ ಮಾಡಿದರು. ನಂತರ ನ್ಯಾಯಾಲಯ ನೀನಾಸಂ ಅಶ್ವತ್ಥ​ ಅವರಿಗೆ ಜಾಮೀನು … Continued

ಭೂತ ಓಡಿಸುತ್ತೇನೆಂದು ಬಾಲಕಿಗೆ ಥಳಿಸಿ ಧೂಪದ ಕಡ್ಡಿಯಿಂದ ದೇಹ ಸುಟ್ಟ ಮಂತ್ರವಾದಿ ಬಂಧನ: ಬಾಲಕಿ ಆಸ್ಪತ್ರೆಗೆ ದಾಖಲು

ರಾಂಚಿ: ದುಷ್ಟಶಕ್ತಿಗಳನ್ನು ಓಡಸಿಲು 14 ವರ್ಷದ ಬಾಲಕಿಯನ್ನು ಥಳಿಸಿ, ಆಕೆಯ ದೇಹದ ಭಾಗಗಳನ್ನು ಅಗರಬತ್ತಿಗಳಿಂದ ಸುಟ್ಟ ಆರೋಪದ ಮೇಲೆ ಜಾರ್ಖಂಡ್‌ನ ಛತ್ರಾ ಜಿಲ್ಲೆಯಲ್ಲಿ ಮಂತ್ರವಾದಿಯೋರ್ವನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಕಳೆದ ವಾರ ಹೋಳಿ ಆಡಿದ್ದ ಬಾಲಕಿ ನಂತರ ಬಾಲಕಿ ಅಸ್ವಸ್ಥಳಾಗಿದ್ದಳು. ಮಾಂತ್ರಿಕ ಮೌಲಾನಾ ಎಂ.ಡಿ ವಾಹಿದ್ ಎಂಬಾತ ಅವಳ ಮೈಯಲ್ಲಿ ಭೂತ ಹೊಕ್ಕಿದ್ದು. … Continued

ಮೀನುಗಾರನ ತಲೆಕೆಳಗಾಗಿ ನೇತು ಹಾಕಿ ಹಲ್ಲೆ : 6 ಜನರ ಬಂಧನ

ಮಂಗಳೂರು: ಮಂಗಳೂರಿನ ಮೀನುಗಾರಿಕಾ ಬಂದರಿನಲ್ಲಿ ಆಂಧ್ರಪ್ರದೇಶ ಮೂಲದ ಮೀನುಗಾರಿಕಾ ಕಾರ್ಮಿಕರು ವ್ಯಕ್ತಿಯೊಬ್ಬನನ್ನು ಉಲ್ಟಾ ನೇತು ಹಾಕಿ ಅಮಾನವೀಯವಾಗಿ ವರ್ತಿಸಿದ ಘಟನೆ ಸಂಬಂಧ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಮೊಬೈಲ್ ಕದ್ದ ಆರೋಪದಲ್ಲಿ ವೈಲ ಶೀನುನನ್ನು ಮೀನುಗಾರಿಕ ಬೋಟ್‍ನಲ್ಲಿಯೇ ಉಲ್ಟಾ ನೇತು ಹಾಕಿ ಆಂಧ್ರಪ್ರದೇಶ ಮೂಲದ ಆರು ಜನ ಮೀನುಗಾರಿಕಾ ಕಾರ್ಮಿಕರು ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ … Continued

ಕುಸ್ತಿಪಟು ಕೊಲೆ ಪ್ರಕರಣ: ಮತ್ತೆ ನಾಲ್ಕು ದಿನ ಸುಶೀಲ್ ಕುಮಾರ್ ಪೊಲೀಸ್ ಕಸ್ಟಡಿ ವಿಸ್ತರಣೆ

ನವ ದೆಹಲಿ: ಕೊಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಒಲಿಂಪಿಕ್ಸ್ ಪದಕ ವಿಜೇತ ಸುಶೀಲ್ ಕುಮಾರ್ ಅವರಿಗೆ ಶನಿವಾರ ನ್ಯಾಯಾಲಯವು ಕುಮಾರ್ ಅವರನ್ನು ಮತ್ತೆ 4 ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ. ದಿಲ್ಲಿಯ ಛತ್ರಾಸಲ್ ಕ್ರೀಡಾಂಗಣದಲ್ಲಿ 23 ವರ್ಷದ ಕುಸ್ತಿಪಟು ಸಾಗರ ರಾಣಾ ಕೊಲೆಯ ಪ್ರಕರಣದಲ್ಲಿ ಕಳೆದ ವಾರ ದಿಲ್ಲಿ ಪೊಲೀಸರು ಸುಶೀಲಕುಮಾರ್ ನನ್ನು ಸಹ ಆರೋಪಿ ಅಜಯ್ … Continued

ಕೆಲಸಕ್ಕೆ ಹೋಗುತ್ತಿದ್ದ ಯುವತಿಗೆ ಗುಪ್ತಾಂಗ ಪ್ರದರ್ಶನ: ಯುವಕನ ಬಂಧನ

ಮಂಗಳೂರು: ಕೆಲಸಕ್ಕೆ ತೆರಳುತ್ತಿದ್ದ ಯುವತಿಗೆ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಯುವಕ ಮೊಬೈಲ್ ನಲ್ಲಿ ಮಾತನಾಡುವ ಸೋಗಿನಲ್ಲಿ ತನ್ನ ಗುಪ್ತಾಂಗ ಪ್ರದರ್ಶಿಸಿರುವ ಘಟನೆ ಮಂಗಳೂರಿನ ತೊಕ್ಕೊಟ್ಟುವಿನಲ್ಲಿ ನಡೆದಿದೆ. ಘಟನೆ ನಡೆದ ಒಂದು ಗಂಟೆಯೊಳಗೆ ಆರೋಪಿಯನ್ನು ಬಂಧಿಸುವಲ್ಲಿ ಪೋಲೀಸರು ಯಶಸ್ವಿಯಾಗಿದ್ದಾರೆ. ಮಾಸ್ಕ್ ಹಾಗೂ ಟೋಪಿ ಧರಿಸಿದ್ದ ಮೊಬೈಲ್‌ನಲ್ಲಿ ಮಾತನಾಡುತ್ತ ಕೆಲಸಕ್ಕೆ ಹೋಗುತ್ತಿದ್ದ ಯುವತಿಗೆ ತನ್ನ ಗುಂಪ್ತಾಂಗ ತೋರಿಸಿ ಚೇಷ್ಟೆ … Continued

ಅಂಬಾನಿ ನಿವಾಸದ ಬಳಿ ಸ್ಫೋಟಕ ತುಂಬಿದ್ದ ವಾಹನ ಪತ್ತೆ ಪ್ರಕರಣ: ಪೊಲೀಸ್‌ ಅಧಿಕಾರಿ ರಿಯಾಜ್‌ ಬಂಧಿಸಿದ ಎನ್‌ಐಎ

ಮುಂಬೈ: ಮುಕೇಶ್ ಅಂಬಾನಿ ನಿವಾಸದ ಬಳಿ ಸ್ಫೋಟಕ ತುಂಬಿದ ವಾಹನ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಪೊಲೀಸ್‌ ಅಧಿಕಾರಿ ರಿಯಾಜ್‌ ಖಾಜಿ ಅವರನ್ನು ರಾಷ್ಟ್ರೀಯ ತನಿಖಾ ತಂಡ (ಎನ್‌ಐಎ) ಭಾನುವಾರ ಬಂಧಿಸಿದೆ. ಅಮಾನತುಗೊಂಡ ಪೊಲೀಸ್ ಅಧಿಕಾರಿ ಸಚಿನ್‌ ವಾಜೆ ಅವರಿಗೆ ರಿಯಾಜ್‌ ಸಹಕಾರ ನೀಡಿದ್ದರುಎಂಬ ಕಾರಣಕ್ಕೆ ಬಂಧಿಸಲಾಗಿದೆ ಎಂದು ಎನ್‌ಐಎ ಹೇಳಿದೆ. ಉದ್ಯಮಿ ಮುಕೇಶ್ ಅಂಬಾನಿ … Continued

ತಕ್ಷಣವೇ ಜಾರಕಿಹೊಳಿ ಬಂಧಿಸಿ, ಇಲ್ಲದಿದ್ರೆ ಹೈಕೋರ್ಟಿಗೆ ಹೋಗ್ತೀವಿ..

  ಬೆಂಗಳೂರು: ಸಿಡಿ ಯುವತಿ ಹೇಳಿಕೆ ಆಧರಿಸಿ ನಾನು ದೂರು ನೀಡಿದ್ದೇನೆ.  ರಮೇಶ್ ಜಾರಕಿಹೊಳಿ ಮಾಧ್ಯಮಗಳ ಮೂಲಕ ಬೆದರಿಕೆ ಹಾಕುತ್ತಿದ್ದಾರೆ. ಎಫ್‌ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಬಂಧಿಸಬೇಕು. ಬಂಧಿಸದಿದ್ದರೆ, ಹೈಕೋರ್ಟ್ ಮೊರೆ ಹೋಗುತ್ತೇವೆ ಎಂದು ಸಂತ್ರಸ್ತೆ ಪರ ವಕೀಲ ಜಗದೀಶ್ ಆಗ್ರಹಿಸಿದ್ದಾರೆ. ಮಾಧ್ಯಮಗಳ ಮೂಲಕ ಜಾರಕಿಹೊಳಿ ಹೆದರಿಸುತ್ತಿದ್ದಾರೆ. ರಮೇಶ್ ಜಾರಕಿಹೊಳಿ ಸಾಕ್ಷ್ಯ ನಾಶ ಮಾಡುವ … Continued

೪ ಕೋಟಿ ಮೌಲ್ಯದ ಡ್ರಗ್ಸ್‌ ವಶ

ಬೆಂಗಳೂರು: ನಗರದ ಪೂರ್ವ ವಿಭಾಗದ ಪೊಲೀಸರು ೪ ಕೋಟಿ ಮೌಲ್ಯದ ಡ್ರಗ್ಸ್‌ ವಶಪಡಿಸಿಕೊಂಡಿದ್ದಾರೆ. ಡ್ರಗ್ಸ್ ಸರಬರಾಜು ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆಗಳನ್ನು ಬಂಧಿಸಲಾಗಿದ್ದು, ಮನೆ ಮಾಲೀಕರ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ೭ವಿದೇಶಿ ಪ್ರಜೆಗಳಿಂದ ೪೨.೫ ಕೆಜಿ ಗಾಂಜಾ, ೨೦೦ ಗ್ರಾಂ … Continued

ಚಿಕ್ಕಬಳ್ಳಾಪುರ ಜಿಲೆಟಿನ್‌ ಸ್ಫೋಟ: ಬಿಜೆಪಿ ಮುಖಂಡನ ಬಂಧನ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ಹಿರೇನಾಗವೇಲಿ ಬಳಿ ಸಂಭವಿಸಿದ ಜಿಲೆಟಿನ್ ಸ್ಫೋಟ ದುರಂತಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಬಿಜೆಪಿ ಮುಖಂಡ ಗುಡಿಬಂಡೆ ನಾಗರಾಜ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಕ್ವಾರಿಯ ಮಾಲೀಕರಲ್ಲೊಬ್ಬನಾದ ಗುಡಿಬಂಡೆ ನಾಗರಾಜ್‌ನನ್ನು ಪೊಲೀಸರು ಬಂಧಿಸಿದ್ದು, ನಾಗರಾಜ್ ಜೊತೆ ಬಾಂಬ್ ಸ್ಫೋಟಕಕಾರ ತಮಿಳುನಾಡು ಮೂಲದ ಗಣೇಶ್ ಎಂಬಾತನನ್ನೂ ಬಂಧಿಸಲಾಗಿದೆ. ಒಟ್ಟು ಈವರೆಗೆ 8 ಆರೋಪಿಗಳನ್ನು ಬಂಧಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು … Continued