ವಿಡಿಯೋ | ಪೊಲೀಸರಿಂದ ತಪ್ಪಿಸಿಕೊಳ್ಳಲು ನೀರಿಗೆ ಧುಮುಕಿ ಪಾರಾಗಲು ಯತ್ನಿಸಿದ ಭೂಪ; ಆದ್ರೆ ಹೆಡೆಮುರಿ ಕಟ್ಟಿದ ಮೊಸಳೆ !

ಅಮೆರಿಕದ ಲೂಸಿಯಾನದಲ್ಲಿ ನಡೆದ ಪೊಲೀಸರು ವ್ಯಕ್ತಿಯೊಬ್ಬನನ್ನು ಬೆನ್ನಟ್ಟಿದ ಸಾಧಾರಣ  ಘಟನೆಯು ಪ್ರಕೃತಿಯ ಅನಿರೀಕ್ಷಿತ ಟ್ವಿಸ್ಟ್‌ನಿಂದಾಗಿ ಭಾರಿ ಸುದ್ದಿಯಾಗಿದೆ. ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದ ಆರೋಪಿಯೊಬ್ಬ ಪೊಲೀಸರಿಂದ ತಪ್ಪಿಸಿಕೊಳ್ಳಲು ಜೌಗು ಪ್ರದೇಶಕ್ಕೆ (ಸ್ವಾಂಪ್) ಧುಮುಕಿದಾಗ, ಅಲ್ಲಿನ ಮೊಸಳೆಯೊಂದು ಆತನ ಮೇಲೆ ದಾಳಿ ಮಾಡಿದ ವಿಲಕ್ಷಣ ಘಟನೆ ನಡೆದಿದೆ. ಕಳೆದ ಭಾನುವಾರ ಲೂಸಿಯಾನದ ಇಂಟರ್‌ಸ್ಟೇಟ್-10 ಹೆದ್ದಾರಿಯಲ್ಲಿ ಟೊಯೋಟಾ ಕಾರೊಂದನ್ನು … Continued

ತ್ವಿಶಾ ಶರ್ಮಾ ಸಾವು : ಅತ್ತೆ-ನಿವೃತ್ತ ನ್ಯಾಯಾಧೀಶೆ ಗಿರಿಬಾಲಾ ಸಿಂಗ್‌ ಬಂಧಿಸಿದ ಸಿಬಿಐ

ಭೋಪಾಲ್‌ : ತ್ವಿಶಾ ಶರ್ಮಾ ಸಾವಿನ ಪ್ರಕರಣದಲ್ಲಿ ತನಿಖೆ ಚುರುಕುಗೊಳಿಸಿರುವ ಸಿಬಿಐ (CBI) ಅಧಿಕಾರಿಗಳು,ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ತ್ವಿಶಾ ಅತ್ತೆ ಗಿರಿಬಾಲಾ ಸಿಂಗ್ ಅವರನ್ನು ಭೋಪಾಲ್‌ನಲ್ಲಿ ಗುರುವಾರ ಬಂಧಿಸಿದ್ದಾರೆ. ಈ ತಿಂಗಳ ಆರಂಭದಲ್ಲಿ ಟ್ವಿಶಾ ಶರ್ಮಾ ಅವರು ತಮ್ಮ ಗಂಡನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಗಿರಿಬಾಲಾ ಸಿಂಗ್ ಅವರಿಗೆ ಮೇ 15 ರಂದು ಭೋಪಾಲ್‌ನ 10ನೇ … Continued

ಟ್ವಿಶಾ ಶರ್ಮಾ ಸಾವಿನ ಪ್ರಕರಣ: 10 ದಿನಗಳಿಂದ ತಲೆಮರೆಸಿಕೊಂಡಿದ್ದ ಪತಿ ಕೊನೆಗೂ ಅರೆಸ್ಟ್

 ಭೋಪಾಲ್: ತನ್ನ ಪತ್ನಿ ಟ್ವಿಶಾ ಶರ್ಮಾ ಸಾವಿಗೀಡಾದ ನಂತರ ಕಳೆದ 10 ದಿನಗಳಿಂದ ಪೊಲೀಸರ ಕಣ್ಣು ತಪ್ಪಿಸಿ ಓಡಾಡುತ್ತಿದ್ದ ಪತಿ ಸಮರ್ಥ ಸಿಂಗ್‌ನನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ವೃತ್ತಿಯಿಂದ ವಕೀಲನಾಗಿರುವ ಸಮರ್ಥ ಸಿಂಗ್, ಮಧ್ಯಪ್ರದೇಶ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ತನ್ನ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹಿಂಪಡೆದ ಕೆಲವೇ ಗಂಟೆಗಳಲ್ಲಿ ಜಬಲಪುರ ನ್ಯಾಯಾಲಯಕ್ಕೆ ಶರಣಾಗಲು ಬಂದಿದ್ದ. ಆದರೆ, ಭೋಪಾಲ … Continued

ಹೆದ್ದಾರಿಯಲ್ಲಿ ಸಿಸಿಟಿವಿ ಇಟ್ಟು ಸೇನೆಯ ರಹಸ್ಯ ಮಾಹಿತಿ ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ವ್ಯಕ್ತಿಯ ಬಂಧನ

ನವದೆಹಲಿ: ಪಂಜಾಬ್‌ನ ಪಠಾಣ್‌ಕೋಟ್‌ನಲ್ಲಿ ಸಕ್ರಿಯವಾಗಿದ್ದ ಶಂಕಿತ ಬೇಹುಗಾರಿಕಾ ( espionage) ಜಾಲವನ್ನು ಭೇದಿಸುವಲ್ಲಿ ಪಂಜಾಬ್ ಪೊಲೀಸರು ಯಶಸ್ವಿಯಾಗಿದ್ದಾರೆ. ಭಾರತೀಯ ಸೇನೆ ಮತ್ತು ಅರೆಸೇನಾ ಪಡೆಗಳ ಚಲನವಲನದ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನದ ಹ್ಯಾಂಡ್ಲರ್‌ಗಳಿಗೆ (ನಿರ್ವಹಣಾಕಾರರು) ರವಾನಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಬಂಧಿತನನ್ನು ಚಕ್ ಧರಿವಾಲ್ ಗ್ರಾಮದ ನಿವಾಸಿ ಬಲ್ಜಿತ್ ಸಿಂಗ್ ಅಲಿಯಾಸ್ ಬಿಟ್ಟು ಎಂದು ಗುರುತಿಸಲಾಗಿದೆ. ಈತ ಸೇನೆ … Continued

ಸುವೇಂದು ಅಧಿಕಾರಿ ಪಿಎ ಹತ್ಯೆ ಪ್ರಕರಣ: ಪ್ರಮುಖ ಶೂಟರ್‌ನನ್ನು ಬಂಧಿಸಿದ ಸಿಬಿಐ

ಮುಜಾಫರ್‌ನಗರ/ಕೋಲ್ಕತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿಯವರ ಆಪ್ತ ಸಹಾಯಕ (PA) ಚಂದ್ರನಾಥ ರಥ್ ಅವರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಉತ್ತರ ಪ್ರದೇಶದ ಮುಜಾಫರ್‌ ನಗರದಲ್ಲಿ ಮುಖ್ಯ ಶೂಟರನನ್ನು ಕೇಂದ್ರ ತನಿಖಾ ದಳ (CBI) ಬಂಧಿಸಿದೆ ಎಂದು ಸೋಮವಾರ ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರ ಪ್ರದೇಶ ಪೊಲೀಸರ ಸಹಯೋಗದೊಂದಿಗೆ ಸಿಬಿಐ ಈ ಕಾರ್ಯಾಚರಣೆ ನಡೆಸಿದ್ದು, ಆರೋಪಿ … Continued

ಪೋಕ್ಸೋ ಪ್ರಕರಣ : ಪೊಲೀಸರ ಮುಂದೆ ಶರಣಾದ ಕೇಂದ್ರ ಸಚಿವ ಬಂಡಿ ಸಂಜಯ ಪುತ್ರ

 ಕೇಂದ್ರ ಸಚಿವ ಬಂಡಿ ಸಂಜಯಕುಮಾರ ಪುತ್ರ ಭಗೀರಥ  ಸಾಯಿ ಶನಿವಾರ ಪೊಲೀಸರ ಮುಂದೆ ಶರಣಾಗಿದ್ದಾನೆ. ಪೋಕ್ಸೋ ಪ್ರಕರಣದ ಆರೋಪಿಯಾಗಿರುವ ಬಂಡಿ ಭಗೀರಥನಿಗೆ ಮಧ್ಯಂತರ ಪರಿಹಾರ ನೀಡಲು ತೆಲಂಗಾಣ ಹೈಕೋರ್ಟ್ ನಿರಾಕರಿಸಿದ ನಂತರ, ಅವರ ತಂದೆ ಹಾಗೂ ಕೇಂದ್ರಸಚುವ ಬಂಡಿ ಸಂಜಯಕುಮಾರ ಶನಿವಾರ ತಮ್ಮ ಮಗನಿಗೆ ಪೊಲೀಸರ ಮುಂದೆ ಹಾಜರಾಗಿ ತನಿಖೆಗೆ ಸಹಕರಿಸುವಂತೆ ಸೂಚಿಸಿದ್ದರು. ಅದರ ನಂತರ … Continued

2000 ರೂ. ಬಾಡಿಗೆ ಕಟ್ಟಲು ಸಾಧ್ಯವಾಗದೆ ಮನೆ ಮಾಲೀಕನಿಗೆ ಹೆಂಡತಿ, ಮಗಳ ಮೇಲೆ ಅತ್ಯಾಚಾರ ನಡೆಸಲು ಅವಕಾಶ ನೀಡಿದ ವ್ಯಕ್ತಿ…!

ಮೊರ್ಬಿ : ಮನೆಯ ಬಾಡಿಗೆ ಹಣವನ್ನು ಪಾವತಿಸಲು ಸಾಧ್ಯವಾಗದ ಕಾರಣಕ್ಕೆ ತನ್ನದೇ ಪತ್ನಿ ಮತ್ತು ಅಪ್ರಾಪ್ತ ಮಗಳ ಮೇಲೆ ಪದೇ ಪದೇ ಅತ್ಯಾಚಾರ ನಡೆಸಲು ಮನೆ ಮಾಲೀಕನಿಗೆ ಅವಕಾಶ ನೀಡಿದ ವ್ಯಕ್ತಿಯನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ಮನೆ ಮಾಲೀಕನನ್ನೂ ಬಂಧಿಸಲಾಗಿದೆ. ಈ ಘಟನೆ ಗುಜರಾತ್‌ನ ಮೊರ್ಬಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಪೊಲೀಸರು ನೀಡಿರುವ ಮಾಹಿತಿಯ … Continued

ತಮಿಳುನಾಡು ಚುನಾವಣೆ | ವಿದೇಶಿ ಪ್ರಜೆಗಳಿಂದ ಅಕ್ರಮ ಮತದಾನದ ಆರೋಪ; 10 ಜನರ ಬಂಧನ: ತನಿಖೆಗೆ ಚುನಾವಣಾ ಆಯೋಗ ಆದೇಶ

ಚೆನ್ನೈ: ಕಳೆದ ಏಪ್ರಿಲ್ 23 ರಂದು ನಡೆದ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ವಿದೇಶಿ ಪ್ರಜೆಗಳು “ಮೋಸದಿಂದ” ಮತದಾನ ಮಾಡಿದ್ದಾರೆ ಎಂಬ ಗಂಭೀರ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸುವಂತೆ ಭಾರತೀಯ ಚುನಾವಣಾ ಆಯೋಗ (EC) ಆದೇಶಿಸಿದೆ ಎಂದು ಶನಿವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವಿಮಾನ ಹತ್ತಲು ಯತ್ನಿಸುತ್ತಿದ್ದ ಹತ್ತು ಮಂದಿ ವಿದೇಶಿ ಪ್ರಜೆಗಳನ್ನು ಇತ್ತೀಚೆಗೆ ಪೊಲೀಸರು ಬಂಧಿಸಿದ್ದರು. … Continued

ನೀಟ್‌ ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ : ‘ಕಿಂಗ್‌ಪಿನ್’ ಬಂಧಿಸಿದ ಸಿಬಿಐ

ನವದೆಹಲಿ: ದೇಶಾದ್ಯಂತ ಸಂಚಲನ ಮೂಡಿಸಿರುವ ನೀಟ್‌ ಯುಜಿ (NEET UG) 2026 ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಸೂತ್ರಧಾರಿಯನ್ನು (Kingpin) ಕೇಂದ್ರ ತನಿಖಾ ದಳ (CBI) ಬಂಧಿಸಿದೆ. ಹಲವು ವರ್ಷಗಳಿಂದ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಪರವಾಗಿ ಪರೀಕ್ಷಾ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದ ರಸಾಯನಶಾಸ್ತ್ರ ಉಪನ್ಯಾಸಕ ಪಿ. ವಿ. ಕುಲಕರ್ಣಿ ಈ ಹಗರಣದ ಮುಖ್ಯ ಆರೋಪಿ … Continued

ಸೋನಾ ಪಪ್ಪು ಸುಲಿಗೆ ಪ್ರಕರಣ: ಕೋಲ್ಕತ್ತಾ ಡಿಸಿಪಿ ಶಾಂತನು ಸಿನ್ಹಾ ಬಿಸ್ವಾಸ್ ಬಂಧಿಸಿದ ಇ.ಡಿ.

ನವದೆಹಲಿ: ಸುಲಿಗೆ, ಹಣ ವರ್ಗಾವಣೆ ಮತ್ತು ಭೂಕಬಳಿಕೆ ಆರೋಪಗಳನ್ನು ಎದುರಿಸುತ್ತಿರುವ ಹೈಪ್ರೊಫೈಲ್ ಸೋನಾ ಪಪ್ಪು ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಗುರುವಾರ ಕೋಲ್ಕತ್ತಾ ಉಪ ಪೊಲೀಸ್ ಆಯುಕ್ತ (DCP) ಶಾಂತನು ಸಿನ್ಹಾ ಬಿಸ್ವಾಸ್ ಅವರನ್ನು ಬಂಧಿಸಿದೆ ಎಂದು ಮೂಲಗಳು ತಿಳಿಸಿವೆ. ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯವು ಈ ಹಿಂದೆ ಹಲವು ಬಾರಿ ಸಮನ್ಸ್ ಜಾರಿ … Continued