ಐಪಿಎಸ್ ಅಧಿಕಾರಿ ಬಂಧಿಸಿದ ಸಿಬಿಐ ; ₹ 5 ಕೋಟಿ ನಗದು, 1.5 ಕೆಜಿ ಚಿನ್ನಾಭರಣಗಳು, ಐಷಾರಾಮಿ ವಾಹನಗಳು ವಶ..!

ನವದೆಹಲಿ: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್‌ನ ರೋಪರ್‌ ವಿಭಾಗದ (Ropar Range) ಡಿಐಜಿ ಆಗಿ ನಿಯೋಜಿಸಲಾಗಿದ್ದ ಹಿರಿಯ ಐಪಿಎಸ್ ಅಧಿಕಾರಿಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಬಂಧಿಸಿದೆ. ಆರಂಭದಲ್ಲಿ ₹ 8 ಲಕ್ಷ ಲಂಚದ ಬೇಡಿಕೆಯೊಂದಿಗೆ ಪ್ರಾರಂಭವಾದ ಈ ಪ್ರಕರಣದಲ್ಲಿ, ₹ 5 ಕೋಟಿಗೂ ಹೆಚ್ಚು ನಗದು, ಐಷಾರಾಮಿ ವಾಹನಗಳು, ಆಭರಣ ಮತ್ತು ಅತ್ಯಾಧುನಿಕ ಕೈಗಡಿಯಾರಗಳು … Continued

ಅರಿವಳಿಕೆ ಔಷಧಿ ನೀಡಿ ವೈದ್ಯೆ ಪತ್ನಿಯ ಕೊಲೆ ಆರೋಪ ; 6 ತಿಂಗಳ ಬಳಿಕ ವೈದ್ಯ ಪತಿಯ ಬಂಧನ

ಬೆಂಗಳೂರು: ಆರು ತಿಂಗಳ ಹಿಂದೆ ತಮ್ಮ ವೈದ್ಯೆ ನಿಗೂಢವಾಗಿ ಸಾವಿಗೀಡಾದ ಪ್ರಕರಣದ ರಹಸ್ಯ ಬಯಲಾಗಿದ್ದು, ಕೊಲೆ ಆರೋಪದ ಮೇಲೆ ಪೊಲೀಸರು ಆಕೆಯ ವೈದ್ಯ ಪತಿಯನ್ನು ಬಂಧಿಸಿದ್ದಾರೆ. ಪೂರ್ವ ಬೆಂಗಳೂರಿನ ಮುನ್ನೇಕೊಳಲು ಪ್ರದೇಶದಲ್ಲಿ ವಾಸವಾಗಿದ್ದ ಜನರಲ್‌ ಶಸ್ತ್ರಚಿಕಿತ್ಸಕ ಡಾ. ಮಹೇಂದ್ರ ರೆಡ್ಡಿ ಅವರು, ಏಪ್ರಿಲ್ 21 ರಂದು ತಮ್ಮ ಮನೆಯಲ್ಲಿಯೇ ಪತ್ನಿ ಡಾ. ಕೃತಿಕಾ ರೆಡ್ಡಿ ಅವರಿಗೆ … Continued

ಅತ್ಯಂತ ರಹಸ್ಯ ದಾಖಲೆ ಸಂಗ್ರಹಿಸಿ ಇಟ್ಟುಕೊಂಡ ಆರೋಪದ ಮೇಲೆ ಅಮೆರಿಕದಲ್ಲಿ ಭಾರತೀಯ ಮೂಲದ ರಕ್ಷಣಾ ತಜ್ಞನ ಬಂಧನ

ವಾಷಿಂಗ್ಟನ್: ಭಾರತೀಯ ಮೂಲದ ಪ್ರಖ್ಯಾತ ವಿದೇಶಾಂಗ ನೀತಿ ವಿದ್ವಾಂಸ ಮತ್ತು ರಕ್ಷಣಾ ತಂತ್ರಜ್ಞ, ಆಶ್ಲೇ ಜೆ. ಟೆಲ್ಲಿಸ್ (Ashley J Tellis) ಅವರನ್ನು ವರ್ಗೀಕೃತ ರಾಷ್ಟ್ರೀಯ ರಕ್ಷಣಾ ಮಾಹಿತಿಯನ್ನು ಕಾನೂನುಬಾಹಿರವಾಗಿ ಇಟ್ಟುಕೊಂಡ ಆರೋಪದ ಮೇಲೆ ಬಂಧಿಸಿ, ದೋಷಾರೋಪ ಹೊರಿಸಲಾಗಿದೆ ಎಂದು ಅಮೆರಿಕ ಅಟಾರ್ನಿ ಕಚೇರಿ ಫಾರ್ ದಿ ಈಸ್ಟರ್ನ್ ಡಿಸ್ಟ್ರಿಕ್ಟ್ ಆಫ್ ವರ್ಜೀನಿಯಾ ತಿಳಿಸಿದೆ. ಅಮೆರಿಕದ … Continued

ಸಿರಪ್ ಸೇವಿಸಿ 20ಕ್ಕೂ ಹೆಚ್ಚು ಮಕ್ಕಳ ಸಾವಿನ ಪ್ರಕರಣ : ಫಾರ್ಮಾ ಕಂಪನಿಯ ಮಾಲೀಕರ ಬಂಧನ

ಚೆನ್ನೈ/ಭೋಪಾಲ: ಹಲವಾರು ರಾಜ್ಯಗಳಲ್ಲಿ ಮಕ್ಕಳ ಸಾವಿಗೆ ಕಾರಣವಾದ ಕಲಬೆರಕೆ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ತಯಾರಿಸಿದ ತಮಿಳುನಾಡು ಮೂಲದ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಮಾಲೀಕರನ್ನು ಬಂಧಿಸಲಾಗಿದೆ. ಶ್ರೀಸನ್ ಫಾರ್ಮಾಸ್ಯುಟಿಕಲ್ಸ್ ವಿರುದ್ಧ ಈ ಹಿಂದೆ ಪ್ರಕರಣ ದಾಖಲಾಗಿತ್ತು. ಭಾರತದ ಅತ್ಯಂತ ಭಯಾನಕ ಔಷಧ ಹಗರಣಗಳಲ್ಲಿ ಒಂದಾದ ಪ್ರಕರಣದ ಹಿಂದಿನ ಸತ್ಯವನ್ನು ಬಹಿರಂಗಪಡಿಸಲು ತನಿಖೆ ಮುಂದುವರೆದಿರುವ ಕಾರಣ, ಕಂಪನಿಯ ಮಾಲೀಕ ರಂಗನಾಥನ್ … Continued

ಕರೂರು ಕಾಲ್ತುಳಿತ ದುರಂತ: ಟಿವಿಕೆ ನಾಯಕನ ಬಂಧನ

ಚೆನ್ನೈ : ತಮಿಳುನಾಡಿನ ಕರೂರಿನಲ್ಲಿ ನಟ ಹಾಗೂ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ದಳಪತಿ ವಿಜಯ ಅವರ ರ‍್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 41 ಜನರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ನಾಯಕರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳಗ ವೆಟ್ರಿ ಕಳಗಂ (ಟಿವಿಕೆ) ಕರೂರು ಪಶ್ಚಿಮ ಜಿಲ್ಲಾ ಕಾರ್ಯದರ್ಶಿ ಮತಿಯಜಗನ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.ಈ ಹಿಂದೆ ಅವರ … Continued

ರಾಜ್ಯ ಸ್ಥಾನಮಾನಕ್ಕೆ ಒತ್ತಾಯಿಸಿ ಲಡಾಖಿನಲ್ಲಿ ಹಿಂಸಾತ್ಮಕ ಪ್ರತಿಭಟನೆಗಳ ನಂತರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಬಂಧನ

ನವದೆಹಲಿ: ಲಡಾಖ್‌ನ ಲೇಹ್‌ನಲ್ಲಿ ರಾಜ್ಯಸ್ಥಾನ ಮಾನಕ್ಕೆ ಆಗ್ರಹಿಸಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ನಾಲ್ವರು ಸಾವಿಗೀಡಾಗಿ, 70 ಕ್ಕೂ ಹೆಚ್ಚು ಜನರು ಗಾಯಗೊಂಡ ಎರಡು ದಿನಗಳ ನಂತರ, ಹವಾಮಾನ ಕಾರ್ಯಕರ್ತರಾದ ಸೋನಮ್ ವಾಂಗ್‌ಚುಕ್ ಅವರನ್ನು ಶುಕ್ರವಾರ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಲಾಗಿದೆ. ಲಡಾಖ್‌ಗೆ ರಾಜ್ಯ ಸ್ಥಾನಮಾನ ಕೋರುತ್ತಿರುವ ಪ್ರತಿಭಟನಾಕಾರರನ್ನು ಪ್ರಚೋದಿಸಿದ ಆರೋಪದ ಮೇಲೆ … Continued

ಪಹಲ್ಗಾಮ್‌ ಭಯೋತ್ಪಾದಕ ದಾಳಿ : ಉಗ್ರರಿಗೆ ಸಹಾಯ ಮಾಡಿದ್ದ ವ್ಯಕ್ತಿಯ ಬಂಧನ

ಶ್ರೀನಗರ : ಏಪ್ರಿಲ್ 22 ರ ಪಹಲ್ಗಾಮ್ ದಾಳಿಗೆ ಸಂಬಂಧಿಸಿದಂತೆ ಭಯೋತ್ಪಾದಕರಿಗೆ ಸಹಾಯ ಮಾಡಿದ್ದ ವ್ಯಕ್ತಿಯನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ. ಜುಲೈನಲ್ಲಿ ಪಹಲ್ಗಾಮ್ ಬಳಿಯ ಜನಪ್ರಿಯ ಪ್ರವಾಸಿ ತಾಣವಾದ ಬೈಸರನ್ ಕಣಿವೆಯಲ್ಲಿ 26 ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿ ಹತ್ಯೆ ಮಾಡಿದ್ದರು. ಭದ್ರತಾ ಪಡೆಗಳು ಆಪರೇಷನ್ ಮಹಾದೇವ ಸಮಯದಲ್ಲಿ ಪಹಲ್ಗಾಮ್‌ ದಾಳಿಯ … Continued

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ : ಯೋಗ ಶಿಕ್ಷಕನ ಬಂಧನ

ಬೆಂಗಳೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿಯಲ್ಲಿ ಯೋಗ ಶಿಕ್ಷಕನನ್ನು ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ ಎಂದು ತಿಳುದಬಂದಿದೆ. ಹದಿನೇಳು ವರ್ಷದ ಬಾಲಕಿ ದೂರಿನ ಮೇಲೆ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಯೋಗ ಶಿಕ್ಷಕ ನಿರಂಜನಾ ಮೂರ್ತಿಯನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ. ಆರೋಪಿ ಯೋಗ ಶಿಕ್ಷಕ ನಿರಂಜನಾ ಮೂರ್ತಿ ರಾಜರಾಜೇಶ್ವರಿ ನಗರದಲ್ಲಿ … Continued

ಮುಡಾ ಪ್ರಕರಣ: ಮಾಜಿ ಆಯುಕ್ತ ದಿನೇಶಕುಮಾರ ಇ.ಡಿ. ವಶಕ್ಕೆ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (Muda) ಹಗರಣ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ವಿಚಾರಣೆ ಆಗಮಿಸಿದ್ದ ಮುಡಾ ಮಾಜಿ ಆಯುಕ್ತ ಜಿ.ಟಿ ದಿನೇಶಕುಮಾರ ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಮುಡಾ ಹಗರಣ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಇಡಿ ಜಿ.ಟಿ ದಿನೇಶಕುಮಾರ ಅವರಿಗೆ ನೋಟಿಸ್ ನೀಡಿತ್ತು. ಮಂಗಳವಾರ ದಿನೇಶಕುಮಾರ … Continued

ಅಧಿಕಾರಿ ಮನೆ ಮೇಲೆ ದಾಳಿ: 2 ಕೋಟಿ ಮೌಲ್ಯದ ಆಭರಣಗಳು, ನಗದು ಜಪ್ತಿ…!

ಗುವಾಹತಿ: ಅಸ್ಸಾಂ ನಾಗರಿಕ ಸೇವಾ (ACS) ಅಧಿಕಾರಿ ನೂಪುರ್ ಬೋರಾ ಅವರ ನಿವಾಸಗಳಲ್ಲಿ ಸುಮಾರು 2 ಕೋಟಿ ರೂಪಾಯಿ ನಗದು ಮತ್ತು ಆಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ನಂತರ ಅವರನ್ನು ಬಂಧಿಸಲಾಗಿದೆ ಮುಖ್ಯಮಂತ್ರಿಯವರ ವಿಶೇಷ ಜಾಗೃತ ದಳ ನಡೆಸಿದ ದಾಳಿಯ ಸಮಯದಲ್ಲಿ, ಅಧಿಕಾರಿಗಳು ನೂಪುರ್ ಬೋರಾ ಗುವಾಹತಿ ನಿವಾಸದಿಂದ 92 ಲಕ್ಷ ರೂಪಾಯಿ ನಗದು ಮತ್ತು ಸುಮಾರು … Continued