ಮಾರಕಾಸ್ತ್ರ ಹಿಡಿದು ರೀಲ್ಸ್‌ ; ಬಿಗ್‌ ಬಾಸ್‌ ಖ್ಯಾತಿಯ ಇಬ್ಬರ ಬಂಧನ

ಬೆಂಗಳೂರು : ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡದ ಸ್ಪರ್ಧಿಗಳಾಗಿದ್ದ ವಿನಯ್ ಗೌಡ ಮತ್ತು ರಜತ್ ಕಿಶನ್ ಅವರನ್ನು ಕರ್ನಾಟಕ ಪೊಲೀಸರು 1959 ರ ಶಸ್ತ್ರಾಸ್ತ್ರ ಕಾಯ್ದೆಯಡಿಯಲ್ಲಿ ಬಂಧಿಸಿದ್ದಾರೆ. ಇಬ್ಬರು ಮಾರಕಾಸ್ತ್ರಗಳನ್ನು ಹಿಡಿದಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಸಲ್ಲಿಸಿದ ದೂರಿನ ನಂತರ ಬಂಧನವಾಗಿದೆ. ವಿನಯ ಗೌಡ ಉದ್ದನೆಯ ಮಚ್ಚನ್ನು ಹಿಡಿದುಕೊಂಡು … Continued

ಪರಸ್ಪರರ ಕಚೇರಿ ಮೇಲೆ ಗುಂಡಿನ ದಾಳಿ, ಕಲ್ಲು ಎಸೆತ : ಹಿಂಸಾಚಾರಕ್ಕೆ ತಿರುಗಿದ ಬಿಜೆಪಿ ನಾಯಕ-ಶಾಸಕರ ನಡುವಿನ ರಾಜಕೀಯ ವೈಷಮ್ಯ; ಬಂಧನ

ಉತ್ತರಾಖಂಡದ ರೂರ್ಕಿಯಲ್ಲಿ ಬಿಜೆಪಿಯ ಮಾಜಿ ಶಾಸಕ ಕುನ್ವರ್ ಪ್ರಣವ ಸಿಂಗ್ ಚಾಂಪಿಯನ್ ಮತ್ತು ಪಕ್ಷೇತರ ಶಾಸಕ ಉಮೇಶಕುಮಾರ ನಡುವಿನ ವೈಷಮ್ಯ ಭಾನುವಾರ ಹಿಂಸಾಚಾರಕ್ಕೆ ತಿರುಗಿದ್ದು, ಪರಸ್ಪರರ ಕಚೇರಿಗೆ ಗುಂಡು ಹಾರಿಸಿ ಕಲ್ಲು ತೂರಾಟ ನಡೆಸಿದ್ದಾರೆ ಎಂದು ವರದಿಯಾಗಿದೆ. ಘಟನೆಯ ವೀಡಿಯೋದಲ್ಲಿ ಚಾಂಪಿಯನ್ ತನ್ನ ಬೆಂಬಲಿಗರೊಂದಿಗೆ ಉಮೇಶಕುಮಾರ ಅವರ ಕಚೇರಿಯ ಮೇಲೆ ಹಲವಾರು ಗುಂಡುಗಳನ್ನು ಹಾರಿಸುವುದನ್ನು ತೋರಿಸುತ್ತದೆ. … Continued

ಶಿವಕುಮಾರ ಸ್ವಾಮೀಜಿ ಪುತ್ಥಳಿಗೆ ಹಾನಿ ; ಆರೋಪಿ ಬಂಧಿಸಿದ ಪೊಲೀಸರು

ಬೆಂಗಳೂರು : ಸಿದ್ದಗಂಗಾ ಮಠದ ಡಾ. ಶಿವಕುಮಾರಸ್ವಾಮಿ ಪುತ್ಥಳಿ ವಿರೂಪಗೊಳಿಸಿದ್ದ ಆರೋಪಿಯನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ. ರಾಜ್ ಶಿವು ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಗಿರಿನಗರದ ಬಳಿಯ ವೀರಭದ್ರನಗರ ಬಸ್ ನಿಲ್ದಾಣದ ಬಳಿ ನ.30 ರಂದು ರಾತ್ರಿ ಪುತ್ಥಳಿಗೆ ಹಾನಿ ಮಾಡಿದ್ದ ಎಂದು ಹೇಳಲಾಗಿದೆ. ಶಿವಕುಮಾರ ಸ್ವಾಮೀಜಿ ಮೂರ್ತಿ ಒಡೆಯುವಂತೆ ಕನಸನಲ್ಲಿ ಬಂದು ಏಸು ಹೇಳಿದ್ದ. ಇದಕ್ಕೆ … Continued

ಇವಿಎಂ ಧ್ವಂಸ : ಬಿಜೆಪಿ ಅಭ್ಯರ್ಥಿ ಪ್ರಶಾಂತ ಜಗದೇವ ಬಂಧನ

ಭುವನೇಶ್ವರ : ಒಡಿಶಾದ ಖುರ್ದಾದಲ್ಲಿ ಇವಿಎಂ ಧ್ವಂಸಗೊಳಿಸಿದ ಆರೋಪದ ಮೇರೆಗೆ ಬಿಜೆಪಿ ಅಭ್ಯರ್ಥಿಯನ್ನು ಬಂಧಿಸಲಾಗಿದೆ. ಖುರ್ದಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಚಿಲಿಕಾದ ಬಿಜೆಪಿ ಶಾಸಕ ಪ್ರಶಾಂತ ಜಗದೇವ ಅವರನ್ನು ಶನಿವಾರ ಇವಿಎಂಗೆ ಹಾನಿಗೊಳಿಸಿದ ಆರೋಪದ ಮೇಲೆ ಬಂಧಿಸಲಾಗಿದೆ. ಬೇಗನಿಯಾ ವಿಧಾನಸಭಾ ಕ್ಷೇತ್ರದ ಬೋಲಗಾಡ್ ಬ್ಲಾಕ್‍ನ ಕೌನ್ರಿಪಟ್ನಾದ ಮತಗಟ್ಟೆಗೆ ಮತ ಚಲಾಯಿಸಲು ಪ್ರಶಾಂತ ಜಗದೇವ ಅವರು ಪತ್ನಿಯೊಂದಿಗೆ … Continued

ಬಿಗ್ ಬಾಸ್ ಒಟಿಟಿ ಖ್ಯಾತಿಯ ಸೋನು ಶ್ರೀನಿವಾಸ ಗೌಡ ಅರೆಸ್ಟ್

ಬೆಂಗಳೂರು: ಬಿಗ್ ಬಾಸ್‌’ ಒಟಿಟಿ ಕನ್ನಡ ಸೀಸನ್ 1 ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿದ್ದ ಸೋನು ಶ್ರೀನಿವಾಸ ಗೌಡ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಆರೋಪ ಮೇಲೆ ಬ್ಯಾಡರಹಳ್ಳಿ ಪೊಲೀಸರು ಸೋನು ಶ್ರೀನಿವಾಸ್ ಗೌಡ ಅವರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಈ ವಿಚಾರವಾಗಿ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ಕಲ್ಯಾಣ ಇಲಾಖೆಯಿಂದ … Continued

ರಾಮಮಂದಿರ ಸ್ಫೋಟಿಸುವುದಾಗಿ ಬೆದರಿಕೆ : ವ್ಯಕ್ತಿ ಬಂಧನ

ಅರರಿಯಾ : ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಸಹಾಯಕನಂತೆ ಪೋಸು ನೀಡಿ, ಜನವರಿ 22 ರಂದು (ಸೋಮವಾರ) ಅಯೋಧ್ಯೆಯ ರಾಮಮಂದಿರವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ 21 ವರ್ಷದ ವ್ಯಕ್ತಿಯನ್ನು ಬಿಹಾರದ ಅರರಿಯಾ ಜಿಲ್ಲೆಯಲ್ಲಿ ಬಂಧಿಸಲಾಗಿದೆ. . ಆರೋಪಿ ಇಂತೇಖಾಬ್ ಆಲಂ ಎಂಬಾತನನ್ನು ಶನಿವಾರ ತಡರಾತ್ರಿ ಬಲುವಾ ಕಲಿಯಗಂಜ್‌ನಲ್ಲಿರುವ ಆತನ ಮನೆಯಿಂದ ಬಂಧಿಸಲಾಗಿದ್ದು, ಆತ ಮಾನಸಿಕವಾಗಿ ಅಸ್ವಸ್ಥನಂತೆ … Continued

ಐಸಿಸ್ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದ ಆರೋಪದಲ್ಲಿ ಅಲಿಗಢ ಮುಸ್ಲಿಂ ವಿಶ್ವವಿದ್ಯಾನಿಲಯದೊಂದಿಗೆ ನಂಟು ಹೊಂದಿರುವ 4 ಮಂದಿ ಬಂಧನ

ನವದೆಹಲಿ: ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳವು ಉತ್ತರ ಪ್ರದೇಶದ ವಿವಿಧ ಭಾಗಗಳಿಂದ ಆರು ಶಂಕಿತ ಐಸಿಸ್ ಕಾರ್ಯಕರ್ತರನ್ನು ಬಂಧಿಸಿದೆ. ಆರು ಮಂದಿಯಲ್ಲಿ ನಾಲ್ವರನ್ನು ರಕೀಬ್ ಇನಾಮ್, ನಾವೇದ್ ಸಿದ್ದಿಕಿ, ಮೊಹಮ್ಮದ್ ನೋಮನ್ ಮತ್ತು ಮೊಹಮ್ಮದ್ ನಾಜಿಮ್ ಎಂದು ಗುರುತಿಸಲಾಗಿದೆ. ಎಲ್ಲಾ ಬಂಧಿತ ಆರೋಪಿಗಳು ಅಲಿಗಢ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಂಘಟನೆ(SAMU)ಯೊಂದಿಗೆ ಸಂಬಂಧ ಹೊಂದಿದ್ದಾರೆ ಮತ್ತು ಅಲಿಗಢ … Continued

ಕೆಇಎ ಪರೀಕ್ಷೆ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ಆರ್.ಡಿ ಪಾಟೀಲ ಬಂಧನ

ಕಲಬರುಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪರೀಕ್ಷಾ ಹಗರಣ (KEA exam scam)ದ ಪ್ರಮುಖ ಆರೋಪಿ ಆರ್.ಡಿ. ಪಾಟೀಲ (Rudra gowda Patil) ನನ್ನು ಪೊಲೀಸರು ಬಂಧಿಸಿದ್ದಾರೆ. ಕಲಬುರಗಿ ಜಿಲ್ಲಾ ವಿಶೇಷ ಪೊಲೀಸ್ ತಂಡದವರು ಕಾರ್ಯಾಚರಣೆ ನಡೆಸಿ, ಅಫಜಲಪುರ-ಮಹಾರಾಷ್ಟ್ರ ಗಡಿ ಭಾಗದಲ್ಲಿ ಆರ್.ಡಿ. ಪಾಟೀಲನನ್ನು ಬಂಧಿಸಿದ್ದಾರೆ. ಆತನನ್ನು ಕಲಬುರ್ಗಿಗೆ ಕರೆ ತಂದಿದೆ ಎನ್ನಲಾಗಿದೆ. ಪ್ರಕರಣ ಸಂಬಂಧ ಕಳೆದ … Continued

ಎನ್‌ಐಎ ದಾಳಿಯಲ್ಲಿ ಮೋಸ್ಟ್ ವಾಂಟೆಡ್ ಶಂಕಿತ ಐಸಿಸ್ ಭಯೋತ್ಪಾದಕ ದೆಹಲಿಯಲ್ಲಿ ಬಂಧನ

ನವದೆಹಲಿ: ಶಂಕಿತ ಇಸ್ಲಾಮಿಕ್ ಸ್ಟೇಟ್ (ಐಸಿಸ್) ಭಯೋತ್ಪಾದಕ ಮತ್ತು ಇತರ ಇಬ್ಬರು ಭಯೋತ್ಪಾದಕ ಶಂಕಿತರನ್ನು ದೆಹಲಿ ಪೊಲೀಸ್ ವಿಶೇಷ ದಳ ಸೋಮವಾರ ಬಂಧಿಸಿದೆ. ಐಸಿಸ್ ಭಯೋತ್ಪಾದಕ ಮೊಹಮ್ಮದ್ ಶಹನವಾಜ್ ಅಲಿಯಾಸ್ ಶಫಿ ಉಜ್ಜಮಾ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಮೋಸ್ಟ್ ವಾಂಟೆಡ್ ಲಿಸ್ಟ್‌ನಲ್ಲಿದ್ದು, ಆತನ ತಲೆಗೆ 3 ಲಕ್ಷ ರೂ.ಘೋಷಿಸಲಾಗಿತ್ತು. ದೆಹಲಿಯಲ್ಲಿ ಐಸಿಸ್ ಮಾಡ್ಯೂಲ್‌ನ ಸುಳಿವು … Continued

ವಂಚನೆ ಪ್ರಕರಣ : ಮತ್ತೋರ್ವ ಆರೋಪಿ ಅಭಿನವ ಹಾಲಶ್ರೀ ಸ್ವಾಮೀಜಿ ಬಂಧನ

ಬೆಂಗಳೂರು : ಎಂಎಲ್​ಎ ಟಿಕೆಟ್​ ಕೊಡಿಸುವುದಾಗಿ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ 3ನೇ ಆರೋಪಿ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಚೈತ್ರಾ ಕುಂದಾಪುರ ಬಂಧನವಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಪ್ರಕರಣದ ಮೂರನೇ ಆರೋಪಿ ವಿಜಯನಗರ ಜಿಲ್ಲೆಯ ಅಭಿನವ ಹಾಲಶ್ರೀಯನ್ನು ಇಂದು ಒಡಿಶಾದ ಕಟಕ್​ನಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು … Continued