ವೀಡಿಯೊ..| ಆರ್ಟಿಕಲ್ 370 ಬ್ಯಾನರ್ ಪ್ರದರ್ಶನ ; ಜಮ್ಮು-ಕಾಶ್ಮೀರ ವಿಧಾನಸಭೆಯಲ್ಲಿ ಗದ್ದಲ-ತಳ್ಳಾಟ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ಗುರುವಾರ ಸದನ ಪುನರಾರಂಭವಾಗುತ್ತಿದ್ದಂತೆ ಹೈಡ್ರಾಮಾ ನಡೆಯಿತು. ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ಮರುಸ್ಥಾಪಿಸಬೇಕು ಎಂಬ ನಿರ್ಣಯದ ಕುರಿತಾಗಿ ಕಲಾಪದಲ್ಲಿ ಗದ್ದಲ ನಡೆಯಿತು. ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಮರು ಸ್ಥಾಪಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುವ ಗೊತ್ತುವಳಿಯನ್ನು ಭಾರಿ ಗದ್ದಲದ ನಡುವೆ ಜಮ್ಮು … Continued

ಲೋಕಸಭೆ ಚುನಾವಣೆ 2024: 1996ರ ನಂತರ ಶ್ರೀನಗರದಲ್ಲಿ ಅತಿ ಹೆಚ್ಚು ಮತದಾನ…!

ಶ್ರೀನಗರ : 2024 ರ ಲೋಕಸಭೆ ಚುನಾವಣೆಯ ನಾಲ್ಕನೇ ಹಂತವು ಶ್ರೀನಗರ ಸಂಸದೀಯ ಕ್ಷೇತ್ರದಲ್ಲಿ ರಾತ್ರಿ 8 ಗಂಟೆಯವರೆಗೆ ನಡೆದಿದ್ದು, ಅಭೂತಪೂರ್ವ 37.99%ರಷ್ಟು ಮತದಾನವಾಗಿದೆ, ಇದು ಕಳೆದ ಐದು ಚುನಾವಣೆಗಳಲ್ಲಿ ಅತ್ಯಧಿಕ ಮತದಾನವಾಗಿದೆ. ಕಾಶ್ಮೀರದ ಮೂರು ಸಂಸದೀಯ ಕ್ಷೇತ್ರಗಳಲ್ಲಿ ಒಂದಾದ ಶ್ರೀನಗರವು ಸೋಮವಾರ ದೇಶಾದ್ಯಂತ ಲೋಕಸಭೆ ಚುನಾವಣೆಯ 4 ನೇ ಹಂತದ ಮತದಾನದಲ್ಲಿ 96 ಸ್ಥಾನಗಳಲ್ಲಿ … Continued

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು: ಕೇಂದ್ರ ಸರ್ಕಾರದ ಆದೇಶ ಎತ್ತಿ ಹಿಡಿದ ಸುಪ್ರೀಂಕೋರ್ಟ್ ಸಂವಿಧಾನ ಪೀಠ

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿದೆ. ‘ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಲು ರಾಷ್ಟ್ರಪತಿಯವರು ಸಾಂವಿಧಾನಿಕ ಆದೇಶ ಹೊರಡಿಸುವ ಅಧಿಕಾರ ಹೊಂದಿದ್ದಾರೆ’ ಎಂದು ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ ನೇತೃತ್ವದ ಪೀಠ ಹೇಳಿದೆ. ಆರ್ಟಿಕಲ್ 370 … Continued

ಸಂವಿಧಾನದ 370ನೇ ವಿಧಿ ರದ್ದತಿ: ಡಿಸೆಂಬರ್‌ 11ಕ್ಕೆ ಸುಪ್ರೀಂ ಕೋರ್ಟ್‌ ತೀರ್ಪು ಪ್ರಕಟ

  ನವದೆಹಲಿ : ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿ ರದ್ದುಪಡಿಸಿ 2019ರಲ್ಲಿ ಕೇಂದ್ರ ಸರ್ಕಾರ ತೆಗೆದುಕೊಂಡಿದ್ದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳಿಗೆ ಸಂಬಂಧಿಸಿದ ತೀರ್ಪನ್ನು ಸುಪ್ರೀಂ ಕೋರ್ಟ್‌ ಡಿಸೆಂಬರ್‌ 11ರಂದು ಪ್ರಕಟಿಸಲಿದೆ. ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ, ನ್ಯಾಯಮೂರ್ತಿಗಳಾದ ಸಂಜಯ ಕಿಶನ್‌ ಕೌಲ್‌, ಸಂಜೀವ ಖನ್ನಾ, ಬಿ.ಆರ್‌. … Continued