ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಎಂಬುದು ಕಪೋಲಕಲ್ಪಿತ: ಬಿಜೆಪಿ‌ ರಾಜ್ಯ ಉಸ್ತುವಾರಿ ಅರುಣ ಸಿಂಗ್

ಬೆಂಗಳೂರು: ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಎಂಬುದು ಕಪೋಲಕಲ್ಪಿತ. ಬೊಮ್ಮಾಯಿ ಅವರೇ ಮುಖ್ಯಮಂತ್ರಿ ಆಗಿ ಮುಂದುವರೆಯಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ ಸಿಂಗ್ ಹೇಳಿದ್ದಾರೆ. ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಮನ್ ಮ್ಯಾನ್ ಮುಖ್ಯಮಂತ್ರಿ. ಒಳ್ಳೆಯ ಆಡಳಿತ ಕೊಡುತ್ತಿದ್ದಾರೆ. ಹೀಗಾಗಿ ಕಾಲ್ಪನಿಕ ಪ್ರಶ್ನೆಗಳಿಗೆ … Continued

ಕರ್ನಾಟಕದಲ್ಲಿ ಸಿಎಂ ಬದಲಾವಣೆ ಇಲ್ಲ, ಬೊಮ್ಮಾಯಿ ಉತ್ತಮ ಆಡಳಿತ ನಡೆಸುತ್ತಿದ್ದಾರೆ: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌

ಹುಬ್ಬಳ್ಳಿ: ಕೊರೋನಾ ನಿಯಮಾವಳಿ ಹಿನ್ನೆಲೆ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಆಗಮಿಸಬೇಕಾಗಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರ ಪ್ರವಾಸ ರದ್ದಾಗಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ ಸಿಂಗ್ ಹೇಳಿದರು. ನಗರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜಾರಿಯಲ್ಲಿರುವ ಕೊರೋನಾ ನಿಯಮ ಇರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಜಿ.ಪಿ ನಡ್ಡಾ ನೇತೃತ್ವದಲ್ಲಿ … Continued

ಬಿಜೆಪಿ ಪಕ್ಷ ಸಂಘಟನೆಗೆ ಬಿಎಸ್‌ ವೈ ಮಾರ್ಗದರ್ಶನ ಪಡೆಯುತ್ತೇವೆ ಎಂದ ಉಸ್ತುವಾರಿ ಅರುಣ್‌ ಸಿಂಗ್‌

ಬೆಂಗಳೂರು: ನೂತನ ಮುಖ್ಯಮಂತ್ರಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸಿದ್ದು, ಹೊಸ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಿದೆ. ಇಂದು (ಮಂಗಳವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ವರ್ಷಗಳ ಕಾಲ ಬಿ.ಎಸ್. ಯಡಿಯೂರಪ್ಪ ಉತ್ತಮ ಆಡಳಿತ ನಡೆಸಿದ್ದಾರೆ. ಮುಂದಿನ ದಿನಗಳಲ್ಲಿ ಯಡಿಯೂರಪ್ಪನವರ ಮಾರ್ಗದರ್ಶನ, ಸಹಕಾರದಿಂದ ರಾಜ್ಯದಲ್ಲಿ ಪಕ್ಷ ಸಂಘಟನೆ … Continued

ಪಕ್ಷ ವಿರೋಧಿ ಹೇಳಿಕೆ ನೀಡಿದರೆ ಕ್ರಮ; ಬಿಜೆಪಿ ಶಾಸಕರು, ನಾಯಕರಿಗೆ ಅರುಣ್ ​ಸಿಂಗ್​ ಖಡಕ್‌ ಎಚ್ಚರಿಕೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನಾಯಕತ್ವದ ವಿರುದ್ಧ ಪಕ್ಷದ ನಾಯಕರು ಪರ ಹಾಗೂ ವಿರೋಧ ಹೇಳಿಕೆ ನೀಡಿದರೆ ಅವರ ವಿರುದ್ಧ ಶಿಸ್ತು ಕ್ರಮ ಜರಗಿಸಬೇಕಾಗುತ್ತದೆ ಎಂದು ರಾಜ್ಯ ಉಸ್ತುವಾರಿ ಅರುಣ್​ ಸಿಂಗ್​ ಎಚ್ಚರಿಕೆ ನೀಡಿದ್ದಾರೆ. ರಾಜ್ಯದಲ್ಲಿ ಉದ್ಭವಿಸಿದ್ದ ನಾಯಕಟ್ಟಿನ ಬಿಕ್ಕಟ್ಟು ನಿವಾರಣೆಗೆ ಬಂದಿದ್ದ ಅವರು, ಇಂದು (ಗುರುವಾರ) ಹಲವರು ಶಾಸಕರ ಅಭಿಪ್ರಾಯ ಸಂಗ್ರಹಿಸಿದರು. ನಂತರ ಮಾತನಾಡಿದ … Continued

ಬಿಜೆಪಿ ಸರ್ಕಾರ ಫೀಲ್ಡಿನಲ್ಲಿದೆ, ಕಾಂಗ್ರೆಸ್‌ ಆರೋಪ ಮಾಡ್ತಿದೆ, ಜೆಡಿಎಸ್‌ ಕ್ವಾರಂಟೈನ್‌ನಲ್ಲಿದೆ

ಬೆಂಗಳೂರು: ನಾನು ಮೂರು ದಿನಗಳ ರಾಜ್ಯ ಪ್ರವಾಸಕ್ಕೆ ಬಂದಿದ್ದೇನೆ. ಈ ಸಂಧರ್ಭದಲ್ಲಿ ಪಕ್ಷ ಸಂಘಟನೆ, ರಾಜ್ಯದಲ್ಲಿ ಕೊವಿಡ್ ನಿರ್ವಹಣೆ ವಿಚಾರದ ಬಗ್ಗೆ ಚರ್ಚಿಸುತ್ತೇನೆ. ಕೊವಿಡ್ ವಿಚಾರದ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಸಂಪುಟದ ಸಚಿವರ ಜೊತೆ ಚರ್ಚಿಸಲಾಗುತ್ತದೆ ಎಂದು ಬಿಜೆಪಿಯ ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಗೆ ಆಗಮಿಸಿದ ಸಂದರ್ಭದಲ್ಲಿ … Continued

ರಾಜ್ಯದಲ್ಲಿ ಸಿಎಂ ಬಿಎಸ್‌ವೈ ಬದಲಾವಣೆ ಇಲ್ಲ: ಬಿಜೆಪಿ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟನೆ

ಬೆಂಗಳೂರು: ಕರ್ನಾಟಕದ ಬಿಜೆಪಿ ಸರ್ಕಾರದಲ್ಲಿ ಭುಗಿಲೆದ್ದಿರುವ ನಾಯಕತ್ವ ಬದಲಾವಣೆ ಕುರಿತಾದ ವಿವಾದಕ್ಕೆ ಬಿಜೆಪಿ ದೆಹಲಿ ಹೈಕಮಾಂಡ್‌ ತೆರೆ ಎಳೆದಿದ್ದು, ಬಿಜೆಪಿಯ ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿಯ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಟಿವಿ-9 ವರದಿ ಮಾಡಿದೆ. ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಎಂಬುದು ಊಹಅಪೋಹ ಎಂದು ಹೇಳಿರುವ ಅರುಣ್ … Continued

ಅರುಣ್‌ ಸಿಂಗ್‌ಜಿ ಭ್ರಷ್ಟಾಚಾರದಲ್ಲಿ ತೊಡಗಿರುವವರನ್ನು ಮೊದಲು ಬಿಜೆಪಿಯಿಂದ ಉಚ್ಚಾಟಿಸಿ,ನಂತರ ನನ್ನ ಬಗ್ಗೆ ಯೋಚಿಸಿ;ಯತ್ನಾಳ

ಹುಬ್ಬಳ್ಳಿ: ಭ್ರಷ್ಟಾಚಾರದಲ್ಲಿ ತೊಡಗಿರುವವರನ್ನು ಮೊದಲು ಬಿಜೆಪಿಯಲ್ಲಿ ಉಚ್ಚಾಟಿಸಲಿ, ಆಮೇಲೆ ನನ್ನ ಬಗ್ಗೆ ಏನು ಎಂಬ ನಿರ್ಧಾರ ಕೈಗೊಳ್ಳಲಿ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ಶನಿವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ತನ್ನನ್ನು ಉಚ್ಚಾಟನೆ ಮಾಡುವುದಾಗಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್ ಹೇಳಿಕೆಗೆ ಪ್ರತಕ್ರಿಯೆ ನೀಡಿದ ಅವರು, ಮುಖ್ಯಮಂತ್ರಿ ಕುಟುಂಬದ ಭ್ರಷ್ಟಾಚಾರ, … Continued

ಯತ್ನಾಳ ಕುರಿತ ಗೊಂದಲ ಬಗೆಹರಿಸದ ಅರುಣ ಸಿಂಗ್‌ ಹೇಳಿಕೆ

ಬೆಳಗಾವಿ :ಶಾಸಕ ಬಸನಗೌಡ ಪಾಟೀಲ ಯತ್ನಾಳರನ್ನು ಪಕ್ಷದಿಂದ ಹೊರ ಹಾಕಿದರೆ ಅವರು ಸ್ವತಂತ್ರರಾಗುತ್ತಾರೆ. ಕೆಲವು ವಿಷಯಗಳನ್ನು ಮಾಧ್ಯಮದವರ ಮುಂದೆ ಹೇಳಲು ಆಗುವುದಿಲ್ಲ ಎಂದು ಬಿಜೆಪಿ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಶಾಸಕಬಸನಗೌಡ ಪಾಟೀಲ ಯತ್ನಾಳ ಬಿಜೆಪಿಯಲ್ಲಿ ಜೀರೋ. ಅವರ ಹೆಸರು ಇಲ್ಲಿ ಪ್ರಸ್ತಾಪ ಬೇಡ ಎಂದು ಪಕ್ಷ ವಿರೋಧಿ … Continued

ಸಿಡಿ ಪ್ರಕರಣ ಬಯಲಾದ 24 ತಾಸಿನೊಳಗೆ ನೈತಿಕವಾಗಿ ರಾಜೀನಾಮೆ ಪಡೆಯುವುದು ಬಿಜೆಪಿ ಮಾತ್ರ

ಬೆಂಗಳೂರು: ಸಿಡಿ ಪ್ರಕರಣ ಬಯಲಾದ 24 ಗಂಟೆಯೊಳಗೆ ಬಿಜೆಪಿಯಲ್ಲಿ ಮಾತ್ರ ನೈತಿಕವಾಗಿ ರಾಜೀನಾಮೆ ಪಡೆಯಲಾಗುತ್ತದೆ. ಆರೋಪ ಬಂದಾಗ ನೈತಿಕವಾಗಿ ಸ್ವತಃ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಇದು ಬಿಜೆಪಿಯಲ್ಲಿ ಮಾತ್ರ ಸಾಧ್ಯ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ಮೂರು ಕ್ಷೇತ್ರಗಳಿಗೆ ಉಪಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಅರುಣ್ ಸಿಂಗ್ … Continued