ವೀಡಿಯೊ…| ದೆಹಲಿ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ಮೇಲೆ ದ್ರವ ಎರಚಿದ ವ್ಯಕ್ತಿ…!

ನವದೆಹಲಿ: ದೆಹಲಿಯ ಗ್ರೇಟರ್ ಕೈಲಾಶ ಪ್ರದೇಶದಲ್ಲಿ ಶನಿವಾರ ಹೈ ಡ್ರಾಮಾ ನಡೆದಿದ್ದು, ಪ್ರಚಾರದ ವೇಳೆ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮೇಲೆ ವ್ಯಕ್ತಿಯೊಬ್ಬ ದ್ರವ ಎಸೆದಿದ್ದು, ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವೀಡಿಯೊದಲ್ಲಿ ವ್ಯಕ್ತಿಯೊಬ್ಬ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಕೇಜ್ರಿವಾಲ್‌ ಅವರನ್ನು ಹಿಡಿಯಲು ಪ್ರಯತ್ನಿಸುತ್ತಿರುವುದನ್ನು ತೋರಿಸಿದೆ. ಕೇಜ್ರಿವಾಲ್ ಅವರ ಮೇಲೆ ದ್ರವವನ್ನು ಎಸೆದ … Continued

ಆಮ್‌ ಆದ್ಮಿ ಪಕ್ಷಕ್ಕೆ ಆಘಾತ ; ದೆಹಲಿ ಸಚಿವ ಸ್ಥಾನಕ್ಕೆ, ಎಎಪಿಗೆ ರಾಜೀನಾಮೆ ನೀಡಿದ ಹಿರಿಯ ನಾಯಕ ಕೈಲಾಶ ಗೆಹ್ಲೋಟ್‌

ನವದೆಹಲಿ: ಆಮ್‌ ಆದ್ಮಿ ಪಕ್ಷಕ್ಕೆ ಭಾರಿ ಆಘಾತಕಾರಿ ಬೆಳವಣಿಗೆಯಲ್ಲಿ ಹಿರಿಯ ನಾಯಕ ಹಾಗೂ ದೆಹಲಿಯ ಸರ್ಕಾರದಲ್ಲಿ ಸಚಿವರಾಗಿದ್ದ ಕೈಲಾಶ ಗಹ್ಲೋಟ್ ಅವರು ಭಾನುವಾರ ಸಚಿವ ಸ್ಥಾನಕ್ಕೆ ಮತ್ತು ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ರಾಜೀನಾಮೆ ನೀಡಿದ್ದಾರೆ. “ಮುಜುಗರದ ಮತ್ತು ವಿಚಿತ್ರವಾದ ವಿವಾದಗಳು” ಮತ್ತು ನಾಗರಿಕರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಅರವಿಂದ ಕೇಜ್ರಿವಾಲ್ ಮತ್ತು ಅತಿಶಿ ಸರ್ಕಾರದ … Continued

ಯಮುನಾ ನದಿಯಲ್ಲಿ ಮುಳುಗಿ ಪ್ರತಿಭಟಿಸಿದ್ದ ದೆಹಲಿ ಬಿಜೆಪಿ ಅಧ್ಯಕ್ಷ ಈಗ ಆಸ್ಪತ್ರೆಗೆ ದಾಖಲು..!

ನವದೆಹಲಿ: ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಅವರು ಕಲುಷಿತ ಯಮುನಾ ನದಿಯಲ್ಲಿ ಮುಳುಗಿ ಪ್ರತಿಭಟಿಸಿದ್ದ ಕೆಲವೇ ದಿನಗಳಲ್ಲಿ ರಾಮಮನೋಹರ ಲೋಹಿಯಾ(ಆರ್‌ಎಂಎಲ್) ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಲುಷಿತಗೊಂಡಿರುವ ಯಮುನಾ ನದಿಯನ್ನು ಶುಚಿಗೊಳಿಸುವ ಭರವಸೆ ನೀಡಿ ಅಧಿಕಾರಕ್ಕೆ ಬಂದ ವೇಳೆ ಈವರೆಗೂ ಯಮುನಾ ನದಿಯನ್ನು ಶುಚಿಗೊಳಿಸದ ಆಪ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ವೀರೇಂದ್ರ ಸಚದೇವ … Continued

ಪ್ರಧಾನಿ ಮೋದಿ ಪದವಿ ವಿವಾದ ; ಸುಪ್ರೀಂ ಕೋರ್ಟಿನಲ್ಲಿ ಅರವಿಂದ ಕೇಜ್ರಿವಾಲಗೆ ಹಿನ್ನಡೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಶೈಕ್ಷಣಿಕ ಅರ್ಹತೆ ಕುರಿತು ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಗುಜರಾತ್ ವಿಶ್ವವಿದ್ಯಾಲಯವು ದಾಖಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ದೆಹಲಿ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರಿಗೆ ಗುಜರಾತ್‌ನ ವಿಚಾರಣಾ ನ್ಯಾಯಾಲಯವು ಹೊರಡಿಸಿದ ಸಮನ್ಸ್ ಅನ್ನು … Continued

ಲೆಫ್ಟಿನೆಂಟ್ ಗವರ್ನರ್ ಆದೇಶದ ಮೇರೆಗೆ ಅತಿಶಿಗೆ ಸೇರಿದ ವಸ್ತುಗಳನ್ನು ಸಿಎಂ ನಿವಾಸದಿಂದ ಹೊರಹಾಕಲಾಗಿದೆ: ಎಎಪಿ ಆರೋಪ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅತಿಶಿ ಅವರು ತಮ್ಮ ಅಧಿಕೃತ ನಿವಾಸಕ್ಕೆ ತೆರಳಿದ ಎರಡು ದಿನಗಳ ನಂತರ ಅವರನ್ನು ಹೊರಹಾಕಲಾಗಿದೆ ಎಂದು ಆಮ್ ಆದ್ಮಿ ಪಕ್ಷ ಬುಧವಾರ ಆರೋಪಿಸಿದೆ. ಇದು ಎಎಪಿ ಮತ್ತು ಕೇಂದ್ರದ ನಡುವೆ ಹೊಸ ಸಂಘರ್ಷಕ್ಕೆ ಕಾರಣವಾಗಿದೆ. “ದೇಶದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಮುಖ್ಯಮಂತ್ರಿ ನಿವಾಸವನ್ನು ತೆರವು ಮಾಡಲಾಗಿದೆ. ಬಿಜೆಪಿಯ ಆಜ್ಞೆಯ ಮೇರೆಗೆ ಲೆಫ್ಟಿನೆಂಟ್ … Continued

ಉಗ್ರ ಅಫ್ಜಲ್ ಗುರು ಪರ ನಿಂತ ಕುಟುಂಬದ ಅತಿಶಿಗೆ ದೆಹಲಿ ಸಿಎಂ ಪಟ್ಟ ; ಮಲಿವಾಲ್ ಆರೋಪ : ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದ ಎಎಪಿ

ನವದೆಹಲಿ: ದೆಹಲಿಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅರವಿಂದ​ ಕೇಜ್ರಿವಾಲ್​ ಮುಖ್ಯಮಂತ್ರಿ ಕುರ್ಚಿಯನ್ನು ಆಪ್​ ನಾಯಕಿ ಅತಿಶಿ ಅವರಿಗೆ ಬಿಟ್ಟುಕೊಟ್ಟಿದ್ದಾರೆ. ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಮರ್ಲೆನಾ ಸಿಂಗ್ (43) ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಮಂಗಳವಾರ ಬೆಳಿಗ್ಗೆ ಅರವಿಂದ ಕೇಜ್ರಿವಾಲ್ ಅವರ ದೆಹಲಿ ನಿವಾಸದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ. ನೂತನ … Continued

ದೆಹಲಿ ನೂತನ ಸಿಎಂ ಅತಿಶಿ ‘ಮರ್ಲೆನಾ’ ಸಿಂಗ್‌ ಯಾರು..? ಮಧ್ಯದ ಹೆಸರು ʼಮರ್ಲೆನಾʼ ಕೈಬಿಡಲು ಕಾರಣವೇನು..?

ನವದೆಹಲಿ: ದೆಹಲಿ ರಾಜಕೀಯದ ಮಹತ್ವದ ಬೆಳವಣಿಗೆಯಲ್ಲಿ, ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಅತಿಶಿ ಅವರು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಾಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಪಕ್ಷದ ಶಾಸಕರೊಂದಿಗಿನ ಸಭೆಯಲ್ಲಿ ತಮ್ಮ ಉತ್ತರಾಧಿಕಾರಿಯಾಗಿ ಅತಿಶಿ ಮರ್ಲೆನಾ ಸಿಂಗ್ ಅವರ ಹೆಸರನ್ನು ಪ್ರಸ್ತಾಪಿಸಿದ ನಂತರ ಮಂಗಳವಾರ ಸರ್ವಾನುಮತದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. 43 … Continued

ಎಎಪಿ ನಾಯಕಿ ಅತಿಶಿ ದೆಹಲಿಯ ನೂತನ ಮುಖ್ಯಮಂತ್ರಿ

ನವದೆಹಲಿ: ಎಎಪಿ ಪಕ್ಷದ ಶಾಸಕಾಂಗ ಸಭೆಯಲ್ಲಿ ಅರವಿಂದ ಕೇಜ್ರಿವಾಲ್ ಅವರು ದೆಹಲಿಯ ನೂತನ ಮುಖ್ಯಮಂತ್ರಿ ಹುದ್ದೆಗೆ ಸಚಿವೆ ಆತಿಶಿ ಹೆಸರನ್ನು ಪ್ರಸ್ತಾಪಿಸಿದ್ದು, ಪಕ್ಷವು ಸರ್ವಾನುಮತದಿಂದ ಒಪ್ಪಿಗೆ ನೀಡಿದೆ. ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ ಅವರು ಜಾಮೀನು ಪಡೆದು ಹೊರಬಂದ ಬಳಿಕ ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು. ದೆಹಲಿ ಜನತೆ ತಮ್ಮನ್ನು … Continued

ದೆಹಲಿ ಸಿಎಂ ಸ್ಥಾನಕ್ಕೆ ಮಂಗಳವಾರ ಅರವಿಂದ ಕೇಜ್ರಿವಾಲ್ ರಾಜೀನಾಮೆ ಸಾಧ್ಯತೆ ; ಮುಂದಿನ ಸಿಎಂ ಆಯ್ಕೆಗಾಗಿ ಸರಣಿ ಸಭೆ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಮಂಗಳವಾರ (ಸೆಪ್ಟೆಂಬರ್ 17) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ಶಾಸಕ ಸೌರಭ ಭಾರದ್ವಾಜ ಹೇಳಿದ್ದಾರೆ. ಮಂಗಳವಾರ ಸಂಜೆ 4:30ಕ್ಕೆ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರನ್ನು ಕೇಜ್ರಿವಾಲ್ ಭೇಟಿ ಮಾಡಲಿದ್ದು, ಈ ವೇಳೆ ಅವರು ರಾಜೀನಾಮೆ ಸಲ್ಲಿಸಲಿದ್ದಾರೆ. … Continued

ಅರವಿಂದ ಕೇಜ್ರಿವಾಲ್‌ ಬದಲಿಗೆ ಯಾರಾಗ್ತಾರೆ ದೆಹಲಿ ಸಿಎಂ…?

ನವದೆಹಲಿ: ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಎರಡು ದಿನದಲ್ಲಿ ರಾಜೀನಾಮೆ ನೀಡುವುದಾಗಿ ಅರವಿಂದ ಕೇಜ್ರಿವಾಲ್ ಘೋಷಿಸಿದ್ದು, ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಜನರ ತೀರ್ಪಿನ ನಂತರವೇ ಮತ್ತೆ ಮುಖ್ಯಮಂತ್ರಿಯಾಗುತ್ತೇನೆ ಎಂದು ಹೇಳಿದ್ದಾರೆ. ಈಗ ಆಮ್ ಆದ್ಮಿ ಪಕ್ಷದಲ್ಲಿ (ಎಎಪಿ) ಮುಖ್ಯಮಂತ್ರಿ ಹುದ್ದೆ ಯಾರಿಗೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ದೆಹಲಿಯಲ್ಲಿ ಮುಂದಿನ ವರ್ಷ ಫೆಬ್ರವರಿಯಲ್ಲಿ ವಿಧಾನಸಭೆ ಚುನಾವಣೆ … Continued