ಜಾರಿ ನಿರ್ದೇಶನಾಲಯದ ಕಸ್ಟಡಿಯಿಂದ ಮೊದಲನೇ ಸರ್ಕಾರಿ ಆದೇಶ ಹೊರಡಿಸಿದ ಅರವಿಂದ ಕೇಜ್ರಿವಾಲ್

ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಬಂಧಿತರಾಗಿರುವ ಅರವಿಂದ ಕೇಜ್ರಿವಾಲ್ ಅವರು ಜಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿರುವಾಗಲೇ ಸರ್ಕಾರಕ್ಕೆ ತಮ್ಮ ಮೊದಲ ಆದೇಶವನ್ನು ನೀಡಿದ್ದಾರೆ. ಈ ಆದೇಶವು ಜಲ ಸಚಿವಾಲಯಕ್ಕೆ ಸಂಬಂಧಿಸಿದೆ ಮತ್ತು ಸೂಚನೆಯ ಮೂಲಕ ನಿರ್ದೇಶನವನ್ನು ಕಳುಹಿಸಲಾಗಿದೆ. ದೆಹಲಿ ಸಚಿವರಾದ ಅತಿಶಿ ಇಂದು ಬೆಳಗ್ಗೆ 10 ಗಂಟೆಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅರವಿಂದ್ ಕೇಜ್ರಿವಾಲ್ ಹೊರಡಿಸಿದ ಆದೇಶದ ಬಗ್ಗೆ … Continued

ದೆಹಲಿ ಅಬಕಾರಿ ನೀತಿ ಹಗರಣ: ದೆಹಲಿ ಸಿಎಂ ಅರವಿಂದ ಕೇಜ್ರಿವಾಲಗೆ ಮಾರ್ಚ್‌ 28ರವರೆಗೆ ಇ.ಡಿ. ಕಸ್ಟಡಿಗೆ ನೀಡಿದ ಕೋರ್ಟ್‌

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಆರೋಪಿಯಾಗಿರುವ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ದೆಹಲಿಯ ವಿಶೇಷ ನ್ಯಾಯಾಲಯವು ಮಾರ್ಚ್‌ 28ರ ವರೆಗೆ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಶುಕ್ರವಾರ ನೀಡಿದೆ. ಜಾರಿ ನಿರ್ದೇಶನಾಲಯ ಮತ್ತು ಕೇಜ್ರಿವಾಲ್‌ ಪರ ವಕೀಲರ ವಿಸ್ತೃತ ವಾದ ಆಲಿಸಿದ ರೋಸ್‌ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ಕಸ್ಟಡಿ ಆದೇಶ … Continued

ಇ.ಡಿ. ಬಂಧಿಸಿದ್ದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಅರವಿಂದ ಕೇಜ್ರಿವಾಲ್

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮುಂದೆ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆಯಲು ದೆಹಲಿ ಮುಖ್ಯಮಂತ್ರಿ (ಸಿಎಂ) ಅರವಿಂದ ಕೇಜ್ರಿವಾಲ್ ನಿರ್ಧರಿಸಿದ್ದಾರೆ. ಕೇಜ್ರಿವಾಲ್ ಅವರನ್ನು ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯಕ್ಕೆ ಇ.ಡಿ. ಹಾಜರುಪಡಿಸಿದಾಗ ಅವರ ರಿಮಾಂಡ್‌ಗೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ಮುಂದೆ ಪ್ರಕರಣವನ್ನು ವಾದಿಸುವುದಾಗಿ ಕೇಜ್ರಿವಾಲ್ ಪರ … Continued

ವೀಡಿಯೊ…| ‘ಒಂದು ಕಾಲದಲ್ಲಿ ಅರವಿಂದ ಕೇಜ್ರಿವಾಲ್ ನನ್ನೊಂದಿಗೆ ಸಾರಾಯಿ ವಿರುದ್ಧ ಧ್ವನಿ ಎತ್ತಿದ್ದರು, ಆದರೆ ಈಗ….’: ಕೇಜ್ರಿವಾಲ್ ಬಂಧನದ ಬಗ್ಗೆ ಅಣ್ಣಾ ಹಜಾರೆ

ನವದೆಹಲಿ : ದಶಕದ ಹಿಂದೆ ಭ್ರಷ್ಟಾಚಾರ ವಿರೋಧಿ ಹೋರಾಟದ ಮೂಲಕ ಗಮನ ಸೆಳೆದಿದ್ದ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರು, ತನ್ನೊಂದಿಗೆ ಸಾರಾಯಿ ವಿರುದ್ಧ ಹೋರಾಟ ನಡೆಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಅಬಕಾರಿ ನೀತಿ ರೂಪಿಸದಂತೆ ಎಚ್ಚರಿಸಿದ್ದೆ ಎಂದು ಹೇಳಿದ್ದಾರೆ. 2010ರ ಲೋಕಪಾಲ ಚಳವಳಿಯ ಮುಂಚೂಣಿ ನಾಯಕರಾಗಿದ್ದ ಅಣ್ಣಾ ಹಜಾರೆ ಜೊತೆ ಹೋರಾಟದಲ್ಲಿ … Continued

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಬಂಧನ: ಈವರೆಗೆ ಜೈಲಿಗೆ ಹೋಗಿದ್ದ ಮಾಜಿ ಸಿಎಂಗಳ ಪಟ್ಟಿ ಇಲ್ಲಿದೆ…

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ)ವು ಗುರುವಾರ ರಾತ್ರಿ ಬಂಧಿಸಿದೆ. 2024 ರ ಲೋಕಸಭೆ ಚುನಾವಣೆಗೆ ಕೆಲವು ದಿನಗಳ ಮೊದಲು ಅವರ ಬಂಧನವನ್ನು ವಿಪಕ್ಷಗಳ ಮೈತ್ರಿಕೂಟ ಇಂಡಿಯಾ (I.N.D.I.A) ಬ್ಲಾಕ್ ಸೇರಿದಂತೆ ವಿರೋಧ ಪಕ್ಷಗಳು ಖಂಡಿಸಿವೆ. ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಕಾನೂನು ಜಾರಿ ಸಂಸ್ಥೆಯಿಂದ … Continued

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಂಧನ

ನವದೆಹಲಿ : ಅಬಕಾರಿ ನೀತಿ ಹಗರಣದ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ತಂಡವು ಗುರುವಾರ (ಮಾರ್ಚ್ 21) ರಾತ್ರಿ 9 ಗಂಟೆ ವೇಳೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwa ಆ) ಅವರನ್ನು ಬಂಧಿಸಿದೆ. ಅವರ ಬಂಧನಕ್ಕೆ ತಡೆ ನೀಡಲು ದೆಹಲಿ ಹೈಕೋರ್ಟ್​ ನಿರಾಕರಿಸಿದ ನಂತರ ಗುರುವಾರ ಸಂಜೆ ವೇಳೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ … Continued

ದೆಹಲಿ ಮದ್ಯ ನೀತಿ ಹಗರಣ : ಮಧ್ಯಂತರ ರಕ್ಷಣೆಗೆ ದೆಹಲಿ ಹೈಕೋರ್ಟ್ ನಿರಾಕರಿಸಿದ ನಂತರ ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ ಇ.ಡಿ. ತಂಡ

ನವದೆಹಲಿ : ಜಾರಿ ನಿರ್ದೇಶನಾಲಯದ (ಇಡಿ) ತಂಡ ಗುರುವಾರ ಸಂಜೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನಿವಾಸವನ್ನು ತಲುಪಿದೆ. ಅಬಕಾರಿ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್ ವಿರುದ್ಧ ಸರ್ಚ್ ವಾರೆಂಟ್ ಇದೆ ಎಂದು ಇ.ಡಿ. ತಂಡವು ಕೇಜ್ರಿವಾಲ್ ಅವರ ನಿವಾಸದಲ್ಲಿ ಸಿಬ್ಬಂದಿಗೆ ಮಾಹಿತಿ ನೀಡಿದೆ. ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ನೀಡಿದ … Continued

ಇ.ಡಿ.ಸಮನ್ಸ್‌ಗೆ ಡೋಂಟ್‌ ಕೇರ್‌ : ಕೇಜ್ರಿವಾಲ್‌ಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್ ಜಾರಿ

ನವದೆಹಲಿ : ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಪದೇಪದೇ ಸಮನ್ಸ್ ನೀಡಿದರೂ ಸ್ಪಂದಿಸದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಈಗ ಸ್ವತಃ ದೆಹಲಿ ನ್ಯಾಯಾಲಯದಿಂದಲೇ ಸಮನ್ಸ್ ಜಾರಿ ಮಾಡಲಾಗಿದೆ. ಮಾರ್ಚ್ 16ಕ್ಕೆ ನ್ಯಾಯಾಲಯಕ್ಕೆ ಹಾಜರಾಗಬೇಕೆಂದು ಕೋರ್ಟ್ ಸೂಚಿಸಿದೆ. ತಾನು 8 ಬಾರಿ ಸಮನ್ಸ್ ನೀಡಿದರೂ ಕೇಜ್ರಿವಾಲ್ ಸ್ಪಂದಿಸುತ್ತಿಲ್ಲ ಎಂದು ಜಾರಿ ನಿರ್ದೇಶನಾಲಯವು … Continued

‘ತಪ್ಪು ಮಾಡಿದ್ದೇನೆ….’: ವೀಡಿಯೊ ರಿಟ್ವೀಟ್ ಮಾಡಿದ್ದಕ್ಕೆ ಸುಪ್ರೀಂ ಕೋರ್ಟಿನಲ್ಲಿ ಅರವಿಂದ ಕೇಜ್ರಿವಾಲ್ ತಪ್ಪೊಪ್ಪಿಗೆ

ನವದೆಹಲಿ: ಯೂ ಟ್ಯೂಬರ್ ಧ್ರುವ ರಾಥಿ ಅವರು ಪೋಸ್ಟ್ ಮಾಡಿದ ಮಾನಹಾನಿಕರ ವೀಡಿಯೊವನ್ನು ಮರುಟ್ವೀಟ್ ಮಾಡುವ ಮೂಲಕ ತಪ್ಪು ಮಾಡಿದ್ದೇನೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ. “ನಾನು ರಿಟ್ವೀಟ್ ಮಾಡುವ ಮೂಲಕ ತಪ್ಪು ಮಾಡಿದ್ದೇನೆ ಎಂದು ನಾನು ಹೇಳಬಲ್ಲೆ” ಎಂದು ಅವರು ಹೇಳಿದರು. ಕೇಜ್ರಿವಾಲ್ ಪರ ಹಿರಿಯ ವಕೀಲ … Continued

ಪ್ರಧಾನಿ ಮೋದಿ ಪದವಿ ವಿವಾದ: ಮಾನನಷ್ಟ ಮೊಕದ್ದಮೆಯಲ್ಲಿ ಸಮನ್ಸ್‌ ಪ್ರಶ್ನಿಸಿ ಕೇಜ್ರಿವಾಲ್, ಸಂಜಯ ಸಿಂಗ್‌ ಸಲ್ಲಿಸಿದ್ದ ಅರ್ಜಿ ತಿರಸ್ಕಾರ

ಗಾಂಧಿನಗರ: ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿಯ ಬಗ್ಗೆ ನೀಡಿದ ಹೇಳಿಕೆಗಳಿಗೆ ಸಂಬಂಧಿಸಿದಂತೆ ಗುಜರಾತ್ ವಿಶ್ವವಿದ್ಯಾಲಯ ದಾಖಲಿಸಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದ ಸಂಜಯ ಸಿಂಗ್ ಅವರ ವಿರುದ್ಧ ಹೊರಡಿಸಲಾದ ಸಮನ್ಸ್ ರದ್ದುಗೊಳಿಸಲು ಗುಜರಾತ್ ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ. ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ … Continued