ಯಕ್ಷಗಾನ ಭರತನ ನಾಟ್ಯಶಾಸ್ತ್ರದ ಜೀವಂತ ಪ್ರಯೋಗ ; ಶುದ್ಧ ಯಕ್ಷಗಾನವು ಭಾರತೀಯ ಸಾಂಸ್ಕೃತಿಕತೆಯ ಸಾರ ; ಅಶೋಕ ಹಾಸ್ಯಗಾರ

ಬೆಂಗಳೂರು : ಯಕ್ಷಗಾನವು ಭರತಮುನಿಯ ನಾಟ್ಯಶಾಸ್ತ್ರದ ಜೀವಂತ ಪ್ರಯೋಗವಾದುದರಿಂದ ಇದು ಭಾರತೀಯ ಸಾಂಸ್ಕೃತಿಕತೆಯ ಉನ್ನತ ಪ್ರದರ್ಶನವಾಗಿದೆ ಎಂದು ಸಂಶೋಧಕ ಹಾಗೂ ಹಿರಿಯ ಪತ್ರಕರ್ತ ಅಶೋಕ ಹಾಸ್ಯಗಾರ ಅಭಿಪ್ರಾಯಪಟ್ಟರು. ಅವರು ಇಲ್ಲಿಯ ಕೋರಮಂಗಲದ ಇಂಡಿಯನ್ ಹೆರಿಟೇಜ್ ಅಕಾಡೆಮಿಯು ಮೇ ೮, ೨೦೨೬ ರಂದು ಕಶ್ಯಪ ಸಭಾಂಗಣದಲ್ಲಿ ಏರ್ಪಡಿಸಿದ್ದ “ಭಾರತೀಯ ಸಾಂಸ್ಕೃತಿಕತೆ, ನಾಟ್ಯಶಾಸ್ತ್ರ ಮತ್ತು ಯಕ್ಷಗಾನ” ಎಂಬ ವಿಷಯದ … Continued

ಬೆಂಗಳೂರು : ಮೇ 8ರಂದು ಭಾರತೀಯ ಸಾಂಸ್ಕೃತಿಕತೆ, ನಾಟ್ಯಶಾಸ್ತ್ರ ಮತ್ತು ಯಕ್ಷಗಾನ ಕುರಿತು ಮಾತುಕತೆ-ಸಂವಾದ

ಬೆಂಗಳೂರು : ಅಜಿಂ ಪ್ರೇಮಜೀ ವಿಶ್ವ ವಿದ್ಯಾಲಯದಿಂದ ಭಾರತೀಯ ಸಾಂಸ್ಕೃತಿಕತೆ,  ನಾಟ್ಯಶಾಸ್ತ್ರ ಹಾಗೂ ಯಕ್ಷಗಾನ ಈ ಕರಾವಳಿ ಪರಂಪರೆಯ ದೃಶ್ಯ ಕಾವ್ಯದ ಕುರಿತು  ಮಾತು-ಸಂವಾದ ಕಾರ್ಯಕ್ರಮ ಬೆಂಗಳೂರಿನ ಕೋರಮಂಗಲದ ಇಂಡಿಯನ್‌ ಹೆರಿಟೇಜ್‌ ಅಕಾಡೆಮಿಯಲ್ಲಿ ಮೇ 8ರಂದು ಸಂಜೆ 6:30ರಿಂದ ನಡೆಯಲಿದೆ. ದಶಕರೂಪಕಗಳ ದಶಾವತಾರಗಳು-ಯಕ್ಷಗಾನ ಸಂಶೋಧನಾ ಕೃತಿಯ ಲೇಖಕ ಹಾಗೂ ಹಿರಿಯ ಪತ್ರಕರ್ತ ಅಶೋಕ ಹಾಸ್ಯಗಾರ ಅವರು  … Continued

ಯಕ್ಷಗಾನ ಅಕಾಡೆಮಿ ಪ್ರಶಸ್ತಿಗಳು ಪ್ರಕಟ ; ರೆಂಜಾಳ ರಾಮಕೃಷ್ಣ ರಾವ್ ಸೇರಿ ಐವರಿಗೆ ಗೌರವ ಪುರಸ್ಕಾರ, ಅಶೋಕ ಹಾಸ್ಯಗಾರರ ಕೃತಿಗೆ ಪುಸ್ತಕ ಬಹುಮಾನ

ಬೆಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿಯು 2025ನೇ ಸಾಲಿನ ಪ್ರತಿಷ್ಠಿತ ಗೌರವ ಪ್ರಶಸ್ತಿ, ಯಕ್ಷಸಿರಿ ವಾರ್ಷಿಕ ಪ್ರಶಸ್ತಿ, ಮತ್ತು ವಿವಿಧ ದತ್ತಿನಿಧಿ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಿದೆ. ಒಟ್ಟು 18 ಜನ ಹಿರಿಯ ಹಾಗೂ ಸಾಧಕ ಕಲಾವಿದರು ಈ ಸಾಲಿನ ಗೌರವಕ್ಕೆ ಪಾತ್ರರಾಗಿದ್ದಾರೆ. ಇದೇ ವೇಳೆ, 2024ನೇ ಸಾಲಿನ ಪುಸ್ತಕ ಬಹುಮಾನ ಪ್ರಶಸ್ತಿಗಳನ್ನೂ ಘೋಷಿಸಲಾಗಿದೆ. ಯಕ್ಷಗಾನ ಕ್ಷೇತ್ರದಲ್ಲಿನ … Continued

ಹಿರಿಯ ಪತ್ರಕರ್ತ ಅಶೋಕ ಹಾಸ್ಯಗಾರರಿಗೆ ಕಾಂತಾವರ ಕನ್ನಡ ಸಂಘದ ʼಯಕ್ಷಗಾನ ಸಾಹಿತ್ಯ ಸಂಶೋಧನಾ ಪ್ರಶಸ್ತಿʼ

ಉಡುಪಿ: ಕಾಂತಾವರ ಕನ್ನಡ ಸಂಘವು ಕೊಡಮಾಡುವ ಸಾಹಿತ್ಯ, ಸಂಶೋಧನೆ, ಪತ್ರಿಕೋದ್ಯಮ, ಶಿಕ್ಷಣ ಮತ್ತು ಯಕ್ಷಗಾನ ಕ್ಷೇತ್ರದಲ್ಲಿ ಸಾಧನೆ ಮಾಡಿದ ಏಳು ಜನ ಸಾಧಕರಿಗೆ ಸಂಘದ ಪ್ರತಿಷ್ಠಿತ ದತ್ತಿ ನಿಧಿ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಅಲ್ಲದೆ ಓರ್ವರಿಗೆ ವಾರ್ಷಿಕ ಗೌರ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಇದನ್ನು ಡಿಸೆಂಬರ್‌ 28ರಂದು ನಡೆಯುವ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಾಂತಾವರ ಕನ್ನಡ ಸಂಘದ … Continued

ಹಾಸ್ಯಗಾರರ ʼದಶರೂಪಗಳ ದಶಾವತಾರʼ ಕೃತಿ ಯಕ್ಷಗಾನಕ್ಕೊಂದು ಆಕರ ಗ್ರಂಥ

 ಶಿರಸಿ: ದಶರೂಪಗಳ ದಶಾವತಾರ ಕೃತಿಯನ್ನು ವಿಶ್ರಾಂತ ಸಂಪಾದಕ ಅಶೋಕ ಹಾಸ್ಯಗಾರ ಅವರು ಹತ್ತು ವರ್ಷಗಳ ಸತತ ಅಧ್ಯಯನ, ಪರಿಶ್ರಮದಿಂದ ರಚಿಸಿದ್ದಾರೆ. ಯಕ್ಷಗಾನಕ್ಕೆ ಇದೊಂದು ಆಕರ ಗ್ರಂಥ ವಾಗುವುದರಲ್ಲಿ ಸಂಶಯವಿಲ್ಲ. ಎಂದು ಖ್ಯಾತ ಪತ್ರಕರ್ತ, ಅಂಕಣಕಾರ ರಾಜು ಅಡ್ಕಳ್ಳಿ ಹೇಳಿದರು. ಅವರು ಬೆಂಗಳೂರಿನ ಆನಂದ ರಾವ್ ವೃತ್ತದ ಲೆಕ್ಕಾಧಿಕಾರಿಗಳ ಸಂಘದಲ್ಲಿ ವಿಶ್ವಾಭಿಗಮನಮ್ ಯಕ್ಷನೃತ್ಯ, ಸಾಹಿತಿ, ಪ್ರಸಂಗಕರ್ತ ದಿನೇಶ … Continued

ಅಶೋಕ ಹಾಸ್ಯಗಾರ, ಬನಾರಿ, ಸಾಮಗ, ಸಿದ್ದಕಟ್ಟೆಗೆ ‘ಯಕ್ಷ ಮಂಗಳ ಪ್ರಶಸ್ತಿ’ ಪ್ರದಾನ

ಮಂಗಳೂರು : ಉಳ್ಳಾಲ ಯಕ್ಷಗಾನ ಕಲೆಗೆ ವಿಶೇಷ ಉತ್ತೇಜನವಿದೆ. ಯಕ್ಷಗಾನ ಸುಯೋಗವೆಂದರೆ ಎಂಜಿನಿಯರ್, ಡಾಕ್ಟರ್, ಶಿಕ್ಷಕರು ಮೊದಲಾದ ವಿವಿಧ ಕ್ಷೇತ್ರಗಳ ಆಸಕ್ತರ ಮೂಲಕ ಸಮೃದ್ಧವಾಗಿ ಬೆಳೆಯುತ್ತಿದೆ. ವಿದ್ಯಾವಂತರು ಸೃಜನಶೀಲತೆಗೆ ಒತ್ತು ಕೊಡುವಂತೆ ಪರಂಪರೆಯನ್ನೂ ಉಳಿಸಿಕೊಳ್ಳಬೇಕು ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹೇಳಿದ್ದಾರೆ. ಮಂಗಳೂರು ವಿಶ್ವ ವಿದ್ಯಾಲಯದ ಡಾ.ಯು.ಆರ್ ರಾವ್ … Continued

ಮಂಗಳೂರು ವಿವಿ ‘ಯಕ್ಷಮಂಗಳ ಕೃತಿ ಪ್ರಶಸ್ತಿʼಗೆ ಅಶೋಕ ಹಾಸ್ಯಗಾರರ ‘ದಶರೂಪಕಗಳ ದಶಾವತಾರ’ ಸಂಶೋಧನಾ ಪುಸ್ತಕ ಆಯ್ಕೆ

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಪಿ.ಸತೀಶ​​​​ ಪೈ ಯಕ್ಷಗಾನ ಅಧ್ಯಯನ ಕೇಂದ್ರದಿಂದ ಕೊಡಮಾಡುವ 2024ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿಗೆ ಯಕ್ಷಗಾನ ಹಿರಿಯ ಅರ್ಥದಾರಿ, ವಿದ್ವಾಂಸ ಡಾ.ರಮಾನಂದ ಬನಾರಿ, ಹಿರಿಯ ಯಕ್ಷಗಾನ ಕಲಾವಿದ ಪ್ರೊ.ಎಂ.ಎಲ್.ಸಾಮಗ ಹಾಗೂ ತೆಂಕುತಿಟ್ಟು ಯಕ್ಷಗಾನದ ಹಿರಿಯ ವೇಷಧಾರಿ ಸದಾಶಿವ ಶೆಟ್ಟಿಗಾರ ಸಿದ್ಧಕಟ್ಟೆ ಆಯ್ಕೆಯಾಗಿದ್ದಾರೆ. ಯಕ್ಷಮಂಗಳ ಕೃತಿ ಪ್ರಶಸ್ತಿಗೆ ಲೇಖಕ, … Continued

ಯಕ್ಷಗಾನ ಶಾಸ್ತ್ರೀಯ ಕಲೆ ಎಂದು ಪರಿಗಣಿತವಾಗುವ ನಿಟ್ಟಿನಲ್ಲಿ ನಮ್ಮ ಪ್ರಯತ್ನವಾಗಬೇಕಿದೆ ; ವಿಮರ್ಶಕ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ

ಶಿರಸಿ : ನೂರಾರು ವರ್ಷಗಳಿಂದ ಜನರೇ ಬೆಳೆಸಿಕೊಂಡು ಬರುತ್ತಿರುವ ಕಲೆ ದೇಶದಲ್ಲಿ ಯಾವುದಾದರೂ ಇದ್ದರೆ ಅದು ಯಕ್ಷಗಾನ ಕಲೆ ಎಂದು ಖ್ಯಾತ ವಿಮರ್ಶಕ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ ಅಭಿಪ್ರಾಯಪಟ್ಟರು. ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ನೆಮ್ಮದಿ ರಂಗಧಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಶೋಕ ಹಾಸ್ಯಗಾರ ಅವರು ಬರೆದ ಯಕ್ಷಗಾನ ಸಂಶೋಧನಾ ಗ್ರಂಥ ದಶರೂಪಕಗಳ ದಶಾವತಾರ ಕೃತಿಯನ್ನು ಬಿಡುಗಡೆಗೊಳಿಸಿ … Continued

ಯಕ್ಷಗಾನದ ಪುನರ್‌ ವ್ಯಾಖ್ಯಾನ ಆಗಬೇಕು ; ಯಕ್ಷಗಾನ ಶಾಸ್ತ್ರೀಯ ಕಲೆ ಹೇಗೆ-ಯಾಕೆ ಎಂಬುದು ನನ್ನ ʼದಶರೂಪಕಗಳ ದಶಾವತಾರʼ ಪುಸ್ತಕದಲ್ಲಿದೆ : ಸಂದರ್ಶನದಲ್ಲಿ ಅಶೋಕ ಹಾಸ್ಯಗಾರ

ರಘುಪತಿ ಯಾಜಿ ಯಕ್ಷಗಾನದ ಪುನರ್‌ವ್ಯಾಖ್ಯಾನವಾಗಬೇಕು. ಯಕ್ಷಗಾನ ಜನಪದ ಕಲೆ ಅಲ್ಲ, ಅದು ಶಾಸ್ತ್ರೀಯ ಕಲೆ ಎಂದು ಈಗ ಅನೇಕ ವಿದ್ವಾಂಸರು ಹೇಳುತ್ತಿದ್ದಾರೆ. ಯಕ್ಷಗಾನ  ಜನಪದ ಅಲ್ಲ ಎಂದರೆ ಅದು ಹೇಗೆ ಮತ್ತು ಯಾಕೆ..? ಅದು ಶಾಸ್ತ್ರೀಯ ಎಂದಾದರೆ ಅದು ಹೇಗೆ ಮತ್ತು ಯಾಕೆ ಎಂಬುದರ ಕುರಿತು ಯಕ್ಷಗಾನ ಬಯಲಾಟದ ಪುನರ್‌ವ್ಯಾಖ್ಯಾನ ಆಗಬೇಕು. ಯಕ್ಷಗಾನ ಬಯಲಾಟವು ಶಾಸ್ತ್ರೀಯ … Continued

ಶಿರಸಿ | ಜನವರಿ 21ರಂದು ‘ದಶರೂಪಕಗಳ ದಶಾವತಾರ’ ಯಕ್ಷಗಾನ ಸಂಶೋಧನಾ ಗ್ರಂಥ ಬಿಡುಗಡೆ

ಶಿರಸಿ : ಭರತನ ನಾಟ್ಯಶಾಸ್ತ್ರದ ಬೆಳಕಿನಲ್ಲಿ ಯಕ್ಷಗಾನದ ಪುನರ್ವ್ಯಾಖ್ಯಾನದ ಅವಶ್ಯಕತೆಯ ಹಿನ್ನೆಲೆಯಲ್ಲಿ ಹನ್ನೆರಡು ವರ್ಷಗಳಿಂದ ಅಧ್ಯಯನ ನಡೆಸಿದ ನಿವೃತ್ತ ಸಂಪಾದಕರು ಹಾಗೂ ಸಾಹಿತಿ ಅಶೋಕ ಹಾಸ್ಯಗಾರ ಅವರ ‘ದಶರೂಪಕಗಳ ದಶಾವತಾರ’ ಎಂಬ ಸಂಶೋಧನಾ ಗ್ರಂಥದ ಲೋಕಾರ್ಪಣೆ ಸಮಾರಂಭ ಜನವರಿ 21ರ ಮಂಗಳವಾರ ಸಂಜೆ 4 ಗಂಟೆಗೆ ನಗರದ ರಂಗಧಾಮ(ನೆಮ್ಮದಿ ಆವರಣ)ದಲ್ಲಿ ನಡೆಯಲಿದೆ. ಹೆಸರಾಂತ ವಿಮರ್ಶಕರು, ಮೀಮಾಂಸಕಾರರಾಗಿರುವ … Continued